ಸುದ್ದಿ ಜಗತ್ತು, ನೇರ, ವಾಸ್ತವ ಜನ ಮನ ದ್ವನಿ...
YouTube Channel: @ShivamoggaMedia24x7
Welcome to Shivamogga Media 24x7 News, your trusted source for the latest updates, breaking news, and authentic stories. Bringing you truthful, live, and impactful journalism that resonates with the voice of the people. 🌍📰
Stay informed about current affairs, political insights, cultural stories, and much more with our engaging and factual reporting. We are dedicated to keeping you connected with the pulse of reality.
Subscribe to our channel and join us in exploring the world of news as it unfolds. Don’t forget to like, share, and comment to let your voice be heard!
📌 Slogan: ಸುದ್ದಿ ಜಗತ್ತು, ನೇರ, ವಾಸ್ತವ ಜನ ಮನ ದ್ವನಿ...
Stay updated. Stay aware. Stay with Shivamogga Media 24x7 News. 🎥✅
Shivamogga Media 24x7
ಒಂದು ಮಗುವಿನ ಜೀವನದಲ್ಲಿ ಶಿಕ್ಷಣದ ಮೂಲಕ ಶಾಶ್ವತ ಬದಲಾವಣೆ ತರುವುದು ನಮ್ಮ ಉದ್ದೇಶವಾಗಿದೆ, ಸಮಾಜದ ಸಹಕಾರದೊಂದಿಗೆ ಇನ್ನಷ್ಟು ಸರ್ಕಾರಿ ಶಾಲೆಗಳಿಗೆ ತಲುಪುವ ಸಂಕಲ್ಪದೊಂದಿಗೆ ಯುವ ಬೆಂಗಳೂರು ಟ್ರಸ್ಟ .ಸಂಸ್ಥಾಪಕರು ಅಧ್ಯಕ್ಷರು -ಟ್ರಸ್ಟಿಗಳು ಆದ ಶ್ರೀಯುತ ಜಿ. ಕಿರಣ್ ಸಾಗರ್ ರವರ ಮನದಾಳದ ಆಶಯದಂತೆ 2008ರಲ್ಲಿ ಸ್ಥಾಪಿತವಾದ ಈ ಸಂಸ್ಥೆ ಶ್ವೇತ ಎಸ್ ರಾವ್ ಕಾರ್ಯದರ್ಶಿ ಟ್ರಸ್ಟಿ, ಪಿ ವಿ ಸುನಿಲ್ ಉಪಾಧ್ಯಕ್ಷರು ಟ್ರಸ್ಟಿ .ಇವರ ಒಳಗೊಂಡತಂಡ 356ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ನಿರಂತರವಾಗಿ ಶೈಕ್ಷಣಿಕ ಬೆಂಬಲ ನೀಡುತ್ತಿದೆ .ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿರುವ ಅಂತರ ಮತ್ತು ಅಸಮಾನತೆಯನ್ನು ಕಡಿಮೆ ಮಾಡುವ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಾ ಸರ್ಕಾರಿ ಶಾಲಾ ಮಕ್ಕಳನ್ನು future ready ನಾಗರಿಕರನ್ನಾಗಿ ರೂಪಿಸುವ ದೇಹದೊಂದಿಗೆ ಹತ್ತು ಹಲವಾರು ಚಟುವಟಿಕೆ ಹಮ್ಮಿಕೊಂಡಿದೆ .ಶಿಕ್ಷಣ, ಆರೋಗ್ಯ, ಕೌಶಲ ಅಭಿವೃದ್ಧಿ, ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ . ಸರ್ಕಾರಿ ಶಾಲೆಗಳ ಶೈಕ್ಷಣಿಕ ಬಲವರ್ಧನೆಗಾಗಿ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಶಿವಮೊಗ್ಗ ಜಿಲ್ಲೆಯ 17 ಶಾಲೆಗಳಿಗೆ ಶಾಲಾ ಬ್ಯಾಗ್, ನೋಟ್ ಪುಸ್ತಕಗಳು, ಕಲಿಕಾ ಕಿಟ್, ಸ್ವೆಟರ್ಸ, ಟಿವಿ, ಸ್ಮಾರ್ಟ್ ಕ್ಲಾಸ್ ಗಳನ್ನು ನೀಡುತ್ತಾ ಬಂದಿದೆ. ದಿನಾಂಕ : 08 ಜುಲೈ
2026ರ ಬುಧವಾರದಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗುತ್ಯಪ್ಪ ಕಾಲೋನಿ ಶಿವಮೊಗ್ಗ ಇಲ್ಲಿ ಯುವ ಬೆಂಗಳೂರು ಟ್ರಸ್ಟ್ ನೀಡಿರುವ ಬ್ಯಾಗ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕಿನ ಕ್ರಿಯಾಶೀಲ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ರಮೇಶ್ ರವರು ಬ್ಯಾಗ್, ನೋಟ್ ಪುಸ್ತಕ , ಕಲಿಕಾ ಕಿಟ್ ಮಕ್ಕಳಿಗೆ ವಿತರಿಸಿ ಅದರ ಸದುಪಯೋಗದ ಬಗ್ಗೆ ತಿಳಿಸಿದರು. ಯುವ ಬೆಂಗಳೂರು ಟ್ರಸ್ಟ್ ಹಾಗೂ ಕ್ರಿಯಾಶೀಲ ತಾರೆಯರು ಶಿವಮೊಗ್ಗ ತಂಡಕ್ಕೆ ಇಲಾಖೆ ಪರವಾಗಿ ಅಭಿನಂದನೆ ಸಲ್ಲಿಸಿದರು. ಶ್ರೀಯುತ ಡಾ. ತಾನಾಜಿ ಸಮಾಜಮುಖಿ ಚಿಂತನೆಗಳ ಬಗ್ಗೆ ಪೋಷಕರಿಗೆ ತಿಳಿಸಿದರು. ಗಾಡಿಕೊಪ್ಪ ಕ್ಲಸ್ಟರ್ ನ ಸಿ.ಆರ್.ಪಿ ಮಂಜುನಾಥ್ ಹಾಗೂ ನಿವೃತ್ತ ಪ್ರಾಂಶುಪಾಲರಾದ ಶ್ರೀಯುತಭುಜಂಗಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕ್ರಿಯಾಶೀಲ ತಾರೆಯರು ಶಿವಮೊಗ್ಗ ಇದರ ಅಧ್ಯಕ್ಷರಾದ ಶ್ರೀಮತಿ ಫೌಜಿಯಾ ಸರವತ್, ಮುಖ್ಯ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲುಹಳ್ಳ ಇವರು ಕಾರ್ಯಕ್ರಮ ಕುರಿತು ಪ್ರಾಸ್ತಾವಿಕ ನುಡಿ ಮಾತನಾಡಿದರು. ಯುವ ಬೆಂಗಳೂರು ಟ್ರಸ್ಟ್ ಹಾಗೂ ಕ್ರಿಯಾಶೀಲ ತಾರೆಯರ ಸಹಯೋಗದೊಂದಿಗೆ ಕಳೆದ ನಾಲ್ಕು ವರ್ಷದ ಕಾರ್ಯ ಚಟುವಟಿಕೆ, ಅದರ ಔಚಿತ್ಯದ ಬಗ್ಗೆ ಮಾತನಾಡಿದರು. ಈ ಶೈಕ್ಷಣಿಕ ವರ್ಷದಲ್ಲೂ ಸಹ ಯುವ ಬೆಂಗಳೂರು ಟ್ರಸ್ಟ್ ಅವರು ನೀಡಿರುವಂತಹ ಪರಿಕರಗಳನ್ನು ವಿವರಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ರುಕ್ಮಿಣಿ ಮಕ್ಕಳ ಕಲಿಕೆಗೆ ವಿವಿಧ ಟ್ರಸ್ಟ್ ಗಳ ಸಹಕಾರ ಹಾಗೂ ಕ್ರಿಯಾಶೀಲ ತಾರೆಯರು ತಂಡದ ಕೆಲಸವನ್ನು ಶ್ಲಾಘಿಸಿದರು. ಕ್ರಿಯಾಶೀಲಾ ತಾರೆಯರು ಶಿವಮೊಗ್ಗ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಸಹ ಶಿಕ್ಷಕಿ ಶ್ರೀಮತಿ ಭಾಗಿರಥಿ ಕಾರ್ಯಕ್ರಮ ಆಯೋಜಿಸಿ ನಿರೂಪಿಸಿ, ವಂದಿಸಿದರು.
5 days ago | [YT] | 7
View 0 replies
Shivamogga Media 24x7
ಶಿವಮೊಗ್ಗದಲ್ಲಿ ಕುಡಿಯುವ ನೀರಿನ ತುರ್ತು ಸರಬರಾಜಿಗೆ ಬಲ್ಕಿಶ್ ಬಾನು ಆಗ್ರಹಕ್ಕೆ ಸ್ಪಂದಿಸಿದ ಜಿಲ್ಲಾಡಳಿತ.....
ಶಿವಮೊಗ್ಗ : ಪಂಪ ಹೌಸ್ ನಲ್ಲಿನ ತಾಂತ್ರಿಕ ತೊಂದರೆಯಿಂದಾಗಿ ಶಿವಮೊಗ್ಗ ನಗರದಲ್ಲಿ ಅನೇಕ ವಾರ್ಡ್ ಗ ಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು, ಕುಡಿಯುವ ನೀರಿಗಾಗಿ ಜನರು ಪರಿತಪಿಸುವ ಹಂತಕ್ಕೆ ತಲುಪಿದ್ದಾರೆ ಎಂದು ಶಿವಮೊಗ್ಗ ನಗರದ ಸಾರ್ವಜನಿಕರು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಇವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ
ಹಿನ್ನಲೆಯಲ್ಲಿ ವಿಧಾನ ಪರಿಷತ್ ಶಾಸಕರು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕುಡಿಯುವ ನೀರಿನ ಸರಬರಾಜುಗಾಗಿ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಕುಡಿಯುವ ನೀರಿಗೆ ಸಮಸ್ಯೆ ಇರುವ ಕಡೆ, ಖಾಸಗಿ ಟ್ಯಾಂಕರ್ ಗಳ ಮೂಲಕ ಕೂಡಲೇ ನೀರಿನ ಸರಬರಾಜು ವ್ಯವಸ್ಥೆ ಮಾಡಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಇದೇ ಸಂದರ್ಭದಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಬಿ ಎಲ್ ಒ ಗಳು ಮನೆ ಮನೆಗೆ ಭೇಟಿ ನೀಡಿ ಅನುಮಾನ ವಿತರಿಸಲು ಕಟ್ಟುನಿಟ್ಟಾಗಿ ಸೂಚಿಸಬೇಕೆಂಬ ವಿಧಾನ ಪರಿಷತ್ ಶಾಸಕರ ಒತ್ತಾಯಕ್ಕೆ ಉತ್ತರವಾಗಿ ಜಿಲ್ಲಾಧಿಕಾರಿಗಳು ಅದನ್ನು ಕಟ್ಟುನಿಟ್ಟಿನ ಸೂಚನೆ ನೀಡುವುದಾಗಿ ತಿಳಿಸಿದರು.
5 days ago | [YT] | 2
View 0 replies
Shivamogga Media 24x7
*ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕರಾದ ಚಾಲುಕ್ಯ ಸೂರಿ (ಸುರೇಶ್ )ನಿಧನ*
1 week ago | [YT] | 5
View 0 replies
Shivamogga Media 24x7
" ಪೋಲಿಯೋ ಮುಕ್ತ ಭಾರತವನ್ನು ಖಚಿತಪಡಿಸಿಕೊಳ್ಳುವುದು ಅಗತ್ಯ ಉಪ ನಿರ್ದೇಶಕರು ಎನ್ ಸಿ ಡಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ. ರಘು ನಂದನ್.
ಪೋಲಿಯೋ ಹನಿಗಳು ಸಂಪೂರ್ಣವಾಗಿ ಸುರಕ್ಷಿತ, ಉಚಿತ ಮತ್ತು ಹೆಚ್ಚು ಪರಿಣಾಮಕಾರಿ,ಹೆಚ್ಚುವರಿ ಪ್ರಮಾಣಗಳು ಸಮುದಾಯದ ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಮತ್ತು ನೆರೆಯ ದೇಶಗಳಿಂದ ವೈರಸ್ ಅನ್ನು ಮರು-ಆಮದು ತಡೆಯಲು ಅಗತ್ಯವಾದ ವರ್ಧಕವಾಗಿ ಕಾರ್ಯನಿರ್ವಹಿಸುತ್ತವೆ. ಎಂದು ಡಾ. ರಘು ನಂದನ್ , ಉಪ ನಿರ್ದೇಶಕರು ಎನ್ ಸಿ ಡಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿಗಳು ಹೇಳಿದರು
ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಆವರಣದಲ್ಲಿ ಜಿಲ್ಲಾ ಆಡಳಿತ, ಜಿ. ಪo. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಶಿವಮೊಗ್ಗ ನಗರದ ಎಲ್ಲಾ ರೋಟರಿ ಕ್ಲಬ್ ಗಳು ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕೆಯ ಚಾಲನಾ ಕಾರ್ಯಕ್ರಮ 2026 ರಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾ ಮಾತನಾಡಿದ ಅವರು ದೇಶಾದ್ಯಂತ ಈ ಅಭಿಯಾನವು, ಪೋಲಿಯೊ ಮುಕ್ತ ಭಾರತವನ್ನು ಖಚಿತಪಡಿಸಿಕೊಳ್ಳಲು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿ ಮಗುವೂ ಜೀವ ಉಳಿಸುವ ಮೌಖಿಕ ಪೋಲಿಯೋ ಲಸಿಕೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲಾ ಪೋಷಕರಲ್ಲಿ ಮನವಿ ಮಾಡಿದರು
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಟರಾಜ್ ಕೆ ಎಸ್, ಮಾತನಾಡಿ ಮಕ್ಕಳಿಗೆ ಹಿಂದಿನ ಡ್ರೈವ್ಗಳಲ್ಲಿ ಲಸಿಕೆ ಹಾಕಿದ್ದರೂ ಅಥವಾ ಪ್ರಸ್ತುತ ಸ್ವಲ್ಪ ಅಸ್ವಸ್ಥರಾಗಿದ್ದರೂ ಸಹ ಹನಿಗಳನ್ನು ನೀಡಬೇಕು.ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ, ಹೆಚ್ಚು ಪರಿಣಾಮಕಾರಿಯಾಗಿದೆ ಮತ್ತು ಎಲ್ಲಾ ಸರ್ಕಾರಿ ಬೂತ್ಗಳಲ್ಲಿ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತದೆ ಇದು ಪ್ರತಿ ಮಗುವಿಗೆ ಆರೋಗ್ಯಕರ ಮತ್ತು ಪೋಲಿಯೊ ಮುಕ್ತ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದರು
ಮೆಗ್ಗಾನ್ ಬೋಧನಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸೆಕರು ಡಾ. ಗೀತಾ, ಅವರು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಕೇಂದ್ರಗಳು ಶಾಲೆಗಳು ಮತ್ತು ಇತರ ಪ್ರಮುಖ ಕೇಂದ್ರಗಳಲ್ಲಿ ಪೋಲಿಯೊ ಹನಿಗಳನ್ನು ನೀಡಲಾಗುವುದು. ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಶಿಕ್ಷಕರು ಮತ್ತು ರೋಟರಿ ಸ್ವಯಂಸೇವಕರು ಈ ಕಾರ್ಯಕ್ಕಾಗಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ರೊಟೇರಿಯನ್ ಜಿ ವಿಜಯ್ ಕುಮಾರ್ ಮಾತನಾಡುತ್ತ ಅಭಿಯಾನವು ೦ ರಿಂದ ೫ ವರ್ಷ ವಯಸ್ಸಿನ ಮಕ್ಕಳನ್ನು ಗುರಿಯಾಗಿರಿಸಿಕೊಂಡಿದೆ. ಸ್ಥಳೀಯ ರೋಟರಿ ಸ್ವಯಂಸೇವಕರು ಗೊತ್ತುಪಡಿಸಿದ ಸ್ಥಳಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಸಹಾಯ ಮಾಡುತ್ತಿದ್ದಾರೆ... ಎಂದರು
ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪೋಷಕರ ಮಕ್ಕಳಿಗೆ ಪೋಲಿಯೋ ಲಸಿಕೆಗಳನ್ನು ನೀಡಲಾಯಿತು
ಸಭೆಯಲ್ಲಿ ಡಾ. ಮಲ್ಲಪ್ಪ ಓ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳು, ಡಾ. ರಾಮಚಂದ್ರ, ಚರ್ಮರೋಗ ತಜ್ಞರು, ಡಾ ಚಂದ್ರಶೇಖರ್ ತಾಲೂಕ ಆರೋಗ್ಯ ಅಧಿಕಾರಿಗಳು, ಹರ್ಷಭಾಸ್ಕರ್ ಕಾಮತ ,ಅಧ್ಯಕ್ಷರು ರೋಟರಿ ಕ್ಲಬ್ ಮಿಡ್ ಟೌನ್ , ವಿಶ್ವಾಸ್ , ಶಿವಮೊಗ್ಗ ರೋಟರಿ ಕ್ಲಬ್ , ಆರ್ ಮನೋಹರ ಲೆಕ್ಕಪರಿಶೋಧಕರು, ನಿಯೋಜಿತ ಕಾರ್ಯದರ್ಶಿ ರೋಟರಿ ಕ್ಲಬ್ ,ಶಿವಮೊಗ್ಗ ಈಸ್ಟ್ ಡಿಎಚ್ಒ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಇವರುಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು
2 weeks ago | [YT] | 5
View 0 replies
Shivamogga Media 24x7
ಎಸ್ ಐ ಆರ್ ಕುರಿತು ಮೈಸೂರಿನಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.
ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ವೆಂಕಟೇಶ್, ತನ್ವೀರ್ ಸೇಠ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
2 weeks ago | [YT] | 9
View 0 replies
Shivamogga Media 24x7
ನಮ್ಮೂರ ಬಳಗದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ - ಕೆಂಪೇಗೌಡರ ದೂರದೃಷ್ಟಿಯ ಮತ್ತು ಜಾತ್ಯತೀತ ಆಡಳಿತದ ವೈಭವ ನಮಗೆಲ್ಲ ಸದಾ ಪ್ರೇರಣೆ - ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್*
*ರಾಜ್ಯದ ರಾಜಧಾನಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವವನ್ನು ನಮ್ಮೂರ ಬಳಗದ ವತಿಯಿಂದ ಅಲ್ಲಮಪ್ರಭು ಮೈದಾನ, ಫ್ರೀಡಂ ಪಾರ್ಕ್ ನಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ , ಸಿಹಿ ವಿತರಿಸಿ ಆಚರಿಸಲಾಯಿತು*
*ಕಾರ್ಯಕ್ರಮವನ್ನು ಉದ್ದೇಶಿಸಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಮ್. ಶ್ರೀಕಾಂತ್ ರವರು ಮಾತನಾಡಿ ವಿಜಯನಗರ ಸಾಮ್ರಾಜ್ಯದ ಧೀಮಂತ ನಾಯಕ, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಎಲ್ಲಾ ಜಾತಿ, ಧರ್ಮ, ಮತ, ಪಂಥ, ಭಾಷೆಯ ಜನರಿಗೆ ಆಶ್ರಯ ನೀಡಿ, ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿರುವ ಬೆಂಗಳೂರು ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಫಲ. ಕೆಂಪೇಗೌಡರ ಜನಪರವಾದ ಜಾತ್ಯತೀತ ಆಡಳಿತ ನಮಗೆ ಮಾದರಿ. ಇವರ ದೂರದೃಷ್ಟಿಯ ಮತ್ತು ಸಮುದಾಯ ಕೇಂದ್ರಿತ ಆಡಳಿತದ ವೈಭವ ಇಂದಿನ ಪೀಳಿಗೆಗೆ ಪ್ರೇರಣೆಯಾಗಿದೆ. ಭವ್ಯ ಪರಂಪರೆಯ ಗೌರವ ಹಾಗೂ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಮೂಡಿಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು*
*ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ .ರಂಗನಾಥ್, ಗೌರವ ಸಂಚಾಲಕರಾದ ಹೆಚ್ ಪಾಲಾಕ್ಷಿ ,ಸಿ ರವಿ ,ಜಿ.ಡಿ ಮಂಜುನಾಥ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಸಿಟಿ ಬ್ಯಾಂಕ್ ನಿರ್ದೇಶಕ ಬಿ ಲೋಕೇಶ್, ಸಂಚಾಲಕರಾದ ಹೆಚ್.ಪಿ ಗಿರೀಶ್, , ಚಂದ್ರು ಗೆಡ್ಡೆ, ಗುರುಪ್ರಸಾದ್, ಎಸ್ ಬಸವರಾಜ್, ವಿನಯ್, ಸುಬ್ರಮಣಿ,ಕುಮಾರ್, ಕೇಬಲ್ ಲೋಕೇಶ್, ಕೆ ಎಲ್ ಪವನ್, ರಾಜೇಶ್ ಮಂದಾರ, ಮಿಥುನ್, ಪುಷ್ಪಕ್ ಕುಮಾರ್ ,ಶಿವಮೊಗ್ಗ ವಿರೂಪಾಕ್ಷ, ಭವಾನಿ ರಾವ್, ಹಾಗೂ ಇತರರು ಇದ್ದರು*
2 weeks ago | [YT] | 2
View 0 replies
Shivamogga Media 24x7
ಜೂನ್ 28, 2926 ರಂದು ಮೆಡೈ – ದ ಸ್ಟೇಜ್ ನಲ್ಲಿ “ನೃತ್ಯ ಸಮ್ಮಿಲನ” – ಶಾಸ್ತ್ರೀಯ ನೃತ್ಯದ ವೈಭವ ಮತ್ತು ಉದಯೋನ್ಮುಖ ಪ್ರತಿಭೆಗಳ ಸಂಭ್ರಮ
ಬೆಂಗಳೂರು, ಜೂನ್ 2026: ನಟನಂ ಇನ್ಸ್ಟಿಟ್ಯೂಟ್ ಆಫ್ ಡ್ಯಾನ್ಸ್, ಖ್ಯಾತ ಭರತನಾಟ್ಯ ಗುರು ಡಾ. ರಕ್ಷಾ ಕಾರ್ತಿಕ್ ಅವರ ಶಿಷ್ಯೆಯರಾದ ಪ್ರತಿಭಾವಂತ ಯುವ ನೃತ್ಯ ಕಲಾವಿದೆಯರಾದ ಕು. ಮಾನಸ ರಂಗ ಹಾಗೂ ಕು. ದಿವ್ಯ ವಿಜಯಲಕ್ಷ್ಮಿ ಧರ್ಮರಾಜನ್ ಅವರ ಭರತನಾಟ್ಯ ನೃತ್ಯ ಪ್ರದರ್ಶನ “ನೃತ್ಯ ಸಮ್ಮಿಲನ”ವನ್ನು ಆಯೋಜಿಸಿದೆ.
ಈ ಕಾರ್ಯಕ್ರಮವು ಜೂನ್ 28, 2026ರಂದು ಬೆಳಿಗ್ಗೆ 10:00 ಗಂಟೆಯಿಂದ, ಮೆಡೈ – ದ ಸ್ಟೇಜ್, ರಿಚ್ಮಂಡ್ ಟೌನ್ , ಬೆಂಗಳೂರು ಇಲ್ಲಿ ನಡೆಯಲಿದ್ದು, ಭಾರತೀಯ ಶಾಸ್ತ್ರೀಯ ನೃತ್ಯದ ಶಾಶ್ವತ ಪರಂಪರೆಯ ಅದ್ಭುತ ಅನುಭವವನ್ನು ಪ್ರೇಕ್ಷಕರಿಗೆ ನೀಡಲು ಸಜ್ಜಾಗಿದ್ದಾರೆ . ಭಾವಪೂರ್ಣ ಅಭಿನಯ ಹಾಗೂ ಮನೋಹರ ನೃತ್ಯ ಸಂಯೋಜನೆಯ ಮೂಲಕ ಯುವ ಕಲಾವಿದರು ತಮ್ಮ ಗುರುಗಳ ಮಾರ್ಗದರ್ಶನದಲ್ಲಿ ಬೆಳೆಸಿಕೊಂಡಿರುವ ಶಿಸ್ತು, ಸಮರ್ಪಣೆ ಮತ್ತು ಕಲಾತ್ಮಕ ಪ್ರೌಢಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಈ ವಿಶೇಷ ಕಾರ್ಯಕ್ರಮಕ್ಕೆ ಪ್ರಸಿದ್ಧ ನಟ, ಭರತನಾಟ್ಯ ಕಲಾವಿದ ಹಾಗೂ ನೃತ್ಯ ವಿಷಯದ ಪಿಎಚ್ಡಿ ಸಂಶೋಧಕರಾದ ವಿದ್ವಾನ್ ಭಾರದ್ವಾಜ್ ದಯಾನಿಧಿ ಮತ್ತು ಸುದೀಂದ್ರ ನೃತ್ಯ ಕಲಾನಿಕೇತನದ ಕಲಾ ನಿರ್ದೇಶಕರಾದ ವಿದ್ವಾನ್ ಗುರುರಾಜ್ ವಶಿಷ್ಠ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಅವರ ಉಪಸ್ಥಿತಿ ಯುವ ಕಲಾವಿದರು ಮತ್ತು ನೃತ್ಯಾಭಿಮಾನಿಗಳಿಗೆ ಸ್ಫೂರ್ತಿದಾಯಕವಾಗಲಿದೆ.
ಕಾರ್ಯಕ್ರಮದಲ್ಲಿ ವಿದೂಷಿ ಡಾ. ರಕ್ಷಾ ಕಾರ್ತಿಕ್ (ನಟ್ಟುವಾಂಗಂ), ವಿದ್ವಾನ್ ಶ್ರೀ ಬಾಲಸುಬ್ರಹ್ಮಣ್ಯ ಶರ್ಮ (ಗಾಯನ), ವಿದ್ವಾನ್ ಗೋಪಾಲ್ ವೆಂಕಟರಮಣ (ವೀಣೆ), ವಿದ್ವಾನ್ ಭವಾನಿ ಶಂಕರ್ (ಮೃದಂಗ), ವಿದ್ವಾನ್ ಪ್ರಸನ್ನ ಕುಮಾರ್ (ಲಯ ಸಹಕಾರ) ಹಾಗೂ ವಿದ್ವಾನ್ ದೀಪಕ್ ಹೆಬ್ಬಾರ್ (ಕೊಳಲು) ಅವರನ್ನೊಳಗೊಂಡ ನಿಪುಣ ಕಲಾವಿದರ ತಂಡ ಸಹಕಾರ ನೀಡಲಿದೆ.
“ನೃತ್ಯ ಸಮ್ಮಿಲನ” ಕೇವಲ ಒಂದು ನೃತ್ಯ ಕಾರ್ಯಕ್ರಮವಲ್ಲ; ಇದು ಭಾರತದ ಸಮೃದ್ಧ ಸಾಂಸ್ಕೃತಿಕ ಪರಂಪರೆ, ಗುರು-ಶಿಷ್ಯ ಸಂಪ್ರದಾಯ ಮತ್ತು ಮುಂದಿನ ತಲೆಮಾರಿನ ಶಾಸ್ತ್ರೀಯ ನೃತ್ಯ ಕಲಾವಿದರ ಉದಯವನ್ನು ಸಂಭ್ರಮಿಸುವ ಒಂದು ವಿಶೇಷ ಉತ್ಸವವಾಗಿದೆ. ಕಲಾಭಿಮಾನಿಗಳು, ಸಾಂಸ್ಕೃತಿಕ ಆಸಕ್ತರು ಹಾಗೂ ಸಾರ್ವಜನಿಕರು ಈ ಪ್ರತಿಭೆ, ಪರಂಪರೆ ಮತ್ತು ಕಲಾತ್ಮಕ ಶ್ರೇಷ್ಠತೆಯ ಸಂಗಮವನ್ನು ಸಾಕ್ಷಿಯಾಗಲು ಆತ್ಮೀಯವಾಗಿ ಆಹ್ವಾನಿತರಾಗಿದ್ದಾರೆ.
ಸ್ಥಳ: ಮೆಡೈ – ದ ಸ್ಟೇಜ್, ಮ್ಯೂಸಿಯಂ ರಸ್ತೆ (ಸೇಂಟ್ ಪ್ಯಾಟ್ರಿಕ್ ಚರ್ಚ್ ಎದುರು), ಶಾಂತಲಾ ನಗರ, ರಿಚ್ಮಂಡ್ ಟೌನ್, ಬೆಂಗಳೂರು – 560025.
ದಿನಾಂಕ: 28 ಜೂನ್ 2026
ಸಮಯ: ಬೆಳಿಗ್ಗೆ 10:00 ಗಂಟೆಯಿಂದ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9886107701.
2 weeks ago | [YT] | 1
View 0 replies
Shivamogga Media 24x7
ರೈತರು ಬರ ಎದುರಿಸಲು ಅಧಿಕಾರಿಗಳು ನೆರವಾಗಿ : ಸಾಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗ : ಜೂನ್ 25 : ಕಳೆದ ಏಪ್ರಿಲ್ ಮತ್ತು ಮೇ ಮಾಹೆಯಲ್ಲಿ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಬಿದ್ದ ಭಾರೀ ಮಳೆಯಿಂದಾಗಿ ರೈತರು ತೋಟಗಳಲ್ಲಿ ಬೆಳೆದ ಅಡಿಕೆ ಮರಗಳು ಪ್ರಕೃತಿ ವಿಕೋಪದಿಂದಾಗಿ ಅವಸಾನಗೊಂಡಿದ್ದು, ಈ ಸಂಬಂಧ ಬಾಧಿತ ರೈತರಿಗೆ ಪರಿಹಾರ ಕ್ರಮವಾಗಿ ಸರ್ಕಾರಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಸಲ್ಲಿಸಲಾಗಿದ್ದ ಪ್ರಸ್ತಾವನೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಮಾಲೋಚನೆ ನಡೆಸಿ, ಸಂತ್ರಸ್ಥ ರೈತರಿಗೆ ಪರಿಹಾರದ ಮೊತ್ತ ದೊರಕಿಸಿಕೊಡಲು ಜಿಲ್ಲಾಧಿಕಾರಿಗಳು ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಸಾಂಸದ ಬಿ.ವೈ.ರಾಘವೇಂದ್ರ ಅವರು ಸೂಚಿಸಿದರು.
ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ಸಾಭ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬೆಳೆಹಾನಿ ಕುರಿತು ಜಿಲ್ಲಾಡಳಿತ ಈಗಾಗಲೇ ಬಾಧಿತ ರೈತರಿಂದ ಮಾಹಿತಿ ಸಂಗ್ರಹಿಸಿ, ಸರ್ಕಾರಕ್ಕೆ ನಿಯಮನಾನುಸಾರ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಶೇ33ಕ್ಕಿಂತ ಮೇಲ್ಪಟ್ಟು ಹಾನಿಗೊಳಗಾದ ತೋಟಗಾರಿಕೆ ಬೆಳೆಗೆ ಪ್ರತಿ ಹೆಕ್ಟೇರ್ ಬೆಳೆಗೆ 22,000/-ಗಳನ್ನು ಬಿಡುಗಡೆಗೊಳಿಸುವಂತೆಯೂ ಕೋರಿಕೆ ಸಲ್ಲಿಸಲಾಗಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಗಿದ ಎಂದರು.
ಕಳೆದ ಏಪ್ರಿಲ್ ಮಾಹೆಯಲ್ಲಿ ಬಿದ್ದ ಮಳೆಯಿಂದಾಗಿ ಹಾನಿಗೊಳಗಾದ ಒಟ್ಟು 592ಮನೆಗಳ ಪೈಕಿ 66ಮನೆಗಳು ಸಂಪೂರ್ಣ ನಾಶಗೊಂಡಿವೆ. 526ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಮೇ ಮಾಹೆಯಲ್ಲಿ 220ಮನೆಗಳು ಹಾನಿಗೊಳಗಾಗಿದ್ದು, 1ಮನೆ ಪೂರ್ಣಪ್ರಮಾಣದಲ್ಲಿ ಹಾಗೂ 219ಮನೆಗಳು ಭಾಗಶಃ ಹಾನಿಗೊಳಗಾಗಿದೆ. ಏಪ್ರಿಲ್ ಮಾಹೆಯಲ್ಲಿ 514ಹೆ. ಮತ್ತು ಮೇ ಮಾಹೆಯಲ್ಲಿ 460ಹೆಕ್ಟೇರ್ ಬೆಳೆನಾಶವಾಗಿದ್ದು, ಈ ಸಂಬಂಧ ಸಂತ್ರಸ್ಥ ಕುಟುಂಬಗಳಿಂದ ಮಾಹಿತಿ ಪಡೆದು, ಪರಿಹಾರ ಕ್ರಮಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದ ಅವರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಇದ್ದಾಗ್ಯೂ ಸಂತ್ರಸ್ಥರಿಗೆ ಪರಿಹಾರ ಧನ ದೊರಕಿಸಿಕೊಡದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಮಳೆಯಿಂದ ಹಾನಿಗೊಳಗಾಗಿರುವ ಅಧಿಕೃತ ಮನೆಗಳಿಗೆ ಪರಿಹಾರ ದೊರೆಯಲಿದೆ. ಅನಧಿಕೃತ ಮನೆಗಳಿಗೆ ಪರಿಹಾರಧನ ನೀಡಲು ಅವಕಾಶ ಇಲ್ಲವಾಗಿದ್ದು, ಸಂಬಂಧಿತ ಇಲಾಖಾ ಸಚಿವರ ಗಮನಸೆಳೆದು, ಸಂತ್ರಸ್ಥ ಕುಟುಂಬದವರೆಲ್ಲರಿಗೂ ಪರಿಹಾರ ಧನ ದೊರಕಿಸಿಕೊಡಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.
ಕಳೆದ ಸಾಲಿನಲ್ಲಿ 17446 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ಬೆಳೆಗೆ ಜಿಲ್ಲೆಯ ರೈತರು ಬೆಳೆವಿಮೆಗಾಗಿ ಒಟ್ಟು 3.08ಕೋಟಿ ಮೊತ್ತವನ್ನು ಪಾವತಿಸಿದ್ದರು. ಆದರೆ, ಸರಿಯಾದ ಕ್ರಮದಲ್ಲಿ ಬೆಳೆಕಟಾವು ಮಾನದಂಡಗಳನ್ನು ಅನುಸರಿಸದಿರುವುದರಿಂದ ಸರಿಯಾಗಿ ಮೌಲ್ಯಮಾಪನ ನಡೆಯದೇ ಬಾದಿತ ರೈತರಿಗೆ ಸರಿಯಾದ ಮೊತ್ತ ಪಾವತಿಯಾಗಿರುವುದಿಲ್ಲ. ಅಂತಹ ಸಂತ್ರಸ್ಥ ರೈತರಿಗೆ ಸರಿಯಾದ ವಿಮಾ ಪರಿಹಾರ ಮೊತ್ತವನ್ನು ದೊರಕಿಸಿಕೊಡಲು ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರತಿ ಪಂಚಾಯಿತಿಗೆ 4ಕಡೆ ಬೆಳೆಕಟಾವು ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಇದು ಸರಿಯಲ್ಲ. ಕನಿಷ್ಟ 10ಕಡೆಗಳಲ್ಲಾದರೂ ಬೆಳೆ ಕಟಾವು ಪ್ರಯೋಗಗಳು ನಡೆಯುವಂತಾಗಬೇಕು. ಅದಕ್ಕಾಗಿ ಸಂಬಂಧಿತ ಇಲಾಖಾ ಅಧಿಕಾರಿಗಳು ಮಾರ್ಪಡಿಸಿದ ಸೂಚನೆಗಳೊಂದಿಗೆ ಬೆಳೆಕಟಾವು ಪ್ರಯೋಗಗಳು ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡುವಂತೆ ಅವರು ಸೂಚಿಸಿದ ಅವರು, ಈ ವಿಷಯದಲ್ಲಿ ಕೃಷಿ ತಜ್ಞರ ಸಲಹೆ ಪಡೆದು ಹಲವು ಮಹತ್ವದ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದರು.
ಬೆಳೆ ವಿಮಾ ಮೊತ್ತ ಪಾವತಿಸಲು ಮೆಕ್ಕೆಜೋಳ ಬೆಳೆಗಾರರಿಗೆ ಜುಲೈ 31 ಹಾಗೂ ಭತ್ತ ಮತ್ತು ರಾಗಿ ಬೆಳೆಗಾರರಿಗೆ ಆಗಸ್ಟ್ 14ಕೊನೆಯ ದಿನವಾಗಿದೆ. ತೀವ್ರ ತರಹದ ಮಳೆಯ ಕೊರತೆಯಿಂದಾಗಿ ಈವರೆಗೆ ನಿರೀಕ್ಷಿತ ಪ್ರಮಾಣದ ಬಿತ್ತನೆ ಕಾರ್ಯ ನಡೆಯದಿರುವುದು, ರೈತರು ಚಿಂತಾಕ್ರಾಂತರಾಗಿರುವುದು ಆತಂಕವನ್ನುಂಟು ಮಾಡಿದೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ರೈತರಿಗೆ ಭರವಸೆ ನೀಡುವ, ಅವರು ಮುಂದಿನ ದಿನಗಳಲ್ಲಿ ಬರಬಹುದಾದ ಮಳೆಯ ಅಂದಾಜಿನಂತೆ ಬಿತ್ತನೆ ಮಾಡುವ ಹಾಗೂ ಮಾಡದಿರುವ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಹಾಗೂ ಬೆಳೆವಿಮಾ ಮೊತ್ತ ಪಾವತಿಸಲು ಪ್ರೇರೇಪಿಸುವಂತೆ ಅವರು ಸಲಹೆ ನೀಡಿದರು.
ಕಳೆದ ವರ್ಷದ ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಶೇ.60ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ ಬಿತ್ತನೆ ಕಾರ್ಯ ಆರಂಭವಾಗದಿರುವುದು ಆತಂಕಕಾರಿ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಮಳೆಮಾಪನ ಕೇಂದ್ರಗಳು ಹಾಗೂ ಕೆಲವು ಕಡೆಗಳಲ್ಲಿ ಕೇಂದ್ರಗಳ ನೆರೆಯ ಮಳೆಮಾಪನ ಕೇಂದ್ರಗಳು ಹಾಳಾಗಿದ್ದು, ಸಂತ್ರಸ್ಥ ರೈತರಿಗೆ ಬೆಳೆವಿಮಾ ಪರಿಹಾರ ಮೊತ್ತ ಕೊಡುವಲ್ಲಿ ತೀವ್ರತರಹದ ಅನ್ಯಾಯವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಸಂಬಂಧಿಸಿದ ಇಲಾಖೆಗಳು ಹಾಗೂ ವಿಮಾ ಕಂಪನಿಗಳು ನಿರ್ವಾಹಕರು ರೈತರಿಗೆ ಪರಿಹಾರಧನ ಕೊಡಿಸುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿರುವ 280 ಮಳೆಮಾಪನ ಕೇಂದ್ರಗಳಲ್ಲಿ 72ಕೇಂದ್ರಗಳು ಮಾತ್ರ ಕ್ರಿಯಾಶೀಲವಾಗಿದ್ದು, ಉಳಿದ ಕೇಂದ್ರಗಳು ದುರಸ್ತಿಯಲ್ಲಿರುವುದನ್ನು ಅಧಿಕಾರಿಗಳಿಂದ ತಿಳಿದಿದ್ದು, ಮಳೆ ಮಾಪನ ಕೇಂದ್ರಗಳ ಮೇಲ್ವಿಚಾರಕ್ಕೆ ವಿಚಾರಿಸಲಾಗಿ ಇನ್ನೂ ಒಂದು ವಾರದೊಳಗಾಗಿ ಸುಮಾರು 220ಕೇಂದ್ರಗಳು ಚಾಲ್ತಿಯಲ್ಲಿರುವಂತೆ ಹಾಗೂ ದುರಸ್ತಿ ಮಾಡಿದ ಕೇಂದ್ರಗಳಿಗೆ ಸಿಮ್ ಅಳವಡಿಸಿ, ಕ್ರಿಯಾಶೀಲವಾಗಿರುವಂತೆ ಗಮನಹರಿಸಲಾಗುವುದು ಎಂದು ತಿಳಿಸಿರುವುದಾಗಿ ಅವರು ಹೇಳಿದರು. ಮಳೆಮಾಪನ ಕೇಂದ್ರಗಳ ಅಸಮರ್ಪಕ ದುರಸ್ತಿಯಿಂದಾಗಿ ದಾಖಲೆಗಳ ಸಮರ್ಪಕ ನಿರ್ವಹಣೆ ಆಗದೆ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದರು.
ಹಿಂದಿನ ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಬಿದ್ದ ಉತ್ತಮ ಮಳೆಯಿಂದಾಗಿ ಏತ ನೀರಾವರಿ ಸೌಲಭ್ಯವನ್ನು ಬಳಸಿಕೊಂಡಿರಲಿಲ್ಲ. ಆದರೆ, ಪ್ರಸಕ್ತ ಸಾಲಿನ ಮಳೆ ಕೊರತೆಯಿಂದಾಗಿ ಕೆರೆಕಟ್ಟೆ ಕಾಲುವೆಗಳನ್ನು ತುಂಬಿಸಿಕೊಳ್ಳುವುದು, ಏತನೀರಾವರಿ ಸೌಲಭ್ಯ ಬಳಸಿಕೊಳ್ಳುವುದು ಅನಿವಾರ್ಯವಾಗಲಿದೆ. ಅದಕ್ಕಾಗಿ ಸಣ್ಣ ಮತ್ತು ಭಾರೀ ನೀರಾವರಿ ಇಲಾಖೆ ಸನ್ನದ್ಧವಾಗಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಭಾರೀ ನೀರಾವರಿ ಇಲಾಖೆಯ ವ್ಯಾಪ್ತಿಗೊಳಪಡುವ ಏತ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮೆಸ್ಕಾಂಗೆ ಒಟ್ಟು 32ಕೋಟಿ ರೂ.ಗಳ ವಿದ್ಯುತ್ ಶುಲ್ಕ ಪಾವತಿಸುವುದು ಬಾಕಿ ಇದೆ. ಮುಂದಿನ ದಿನಗಳಲ್ಲಿ ಸೋಲಾರ್ ನಿಂದ ಏತ ನೀರಾವರಿ ಯೋಜನೆಯನ್ನು ಬಳಸಿಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಸರ್ಕಾರಕ್ಕೆ ಸಲಹೆ ನೀಡಲಾಗುವುದು ಎಂದರು.
ಜಿಲ್ಲೆಯಲ್ಲಿ ಮುಂಗಾರು ಬೆಳೆಗೆ ಅಗತ್ಯವಾಗಿರುವ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಲಾಗಿದೆ. ವನವಾಸಿಗಳು ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ರಸಗೊಬ್ಬರದ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಪ್ರಸ್ತುತ ಸಂದರ್ಭದಲ್ಲಿ ರೈತರು ಸಂಭವನೀಯ ಸಮಸ್ಯೆಯಿಂದ ಪಾರಾಗಲು ಅಧಿಕಾರಿಗಳು ರೈತರಿಗೆ, ರೈತರ ಸಮಸ್ಯೆಗಳಿಗೆ ಮಾನವೀಯ ನೆಲೆಯಲ್ಲಿ ಸ್ಪಂದಿಸುವಂತೆ ಅವರು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ಸೇರಿದಂತೆ ಕೃಷಿ, ತೋಟಗಾರಿಕೆ, ವಿಮೆ, ಕಂದಾಯ, ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
2 weeks ago | [YT] | 5
View 0 replies
Shivamogga Media 24x7
*ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ*
*******************************
*ಬೆಂಗಳೂರು,ಜೂ.25(ಕರ್ನಾಟಕ ವಾರ್ತೆ):*
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ,ಎಡಿಜಿಪಿ ಹೇಮಂತ್ ಎಂ ನಿಂಬಾಳ್ಕರ್ ಅವರು ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ನೂತನ ಆಯುಕ್ತರಿಗೆ ಶುಭಕೋರಿದರು.
ಎಂ.ಎನ್.ಅನುಚೇತ್ ಅವರಿಗೆ ವಾರ್ತಾ ಇಲಾಖೆಯ ಜೊತೆಗೆ ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಬಾರದಲ್ಲೂ ಇವರನ್ನು ಇರಿಸಿ ಸರ್ಕಾರ ಆದೇಶಿಸಿದೆ.
ಎಂ.ಎನ್. ಅನುಚೇತ್ ಅವರು ಮೂಲತಃ ಕೋಲಾರ ಜಿಲ್ಲೆಯವರಾಗಿದ್ದಾರೆ. ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಿಂದ 2006ರಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಮುಗಿಸಿರುವ ಇವರು ತಾಂತ್ರಿಕ ಹಿನ್ನೆಲೆಯನ್ನು ಹೊಂದಿದ್ದಾರೆ. ಆ ಬಳಿಕ ನಾಗರಿಕ ಸೇವೆಗೆ ಸೇರುವ ಆಕಾಂಕ್ಷೆಯೊಂದಿಗೆ ಶ್ರಮಿಸಿ, 2008ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಯಶಸ್ಸು ಸಾಧಿಸಿದರು. ತರುವಾಯ 2009ರ ಬ್ಯಾಚ್ ನ ಕರ್ನಾಟಕ ವೃಂದದ ಐಪಿಎಸ್ ಅಧಿಕಾರಿಯಾಗಿ ಇವರು ಆಯ್ಕೆಯಾದರು.
ವಾರ್ತಾ ಇಲಾಖೆಯ ಕಾರ್ಯವೈಖರಿಗೆ ಹೊಸ ವೇಗ ನೀಡಬಲ್ಲ ಸಾಮರ್ಥ್ಯ ಹೊಂದಿರುವ ಅನುಚೇತ್ ಅವರು, ಪೊಲೀಸ್ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ ಹಾಗೂ ಸಮರ್ಥ ಆಡಳಿತಕ್ಕಾಗಿ ಹೆಸರಾಗಿದ್ದಾರೆ. ಈ ಹಿಂದೆ ಇವರು ಕೈಗೊಂಡ ಅತ್ಯುತ್ತಮ ತನಿಖಾ ಕಾರ್ಯಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಇವರಿಗೆ ಪ್ರತಿಷ್ಠಿತ "ಕೇಂದ್ರ ಗೃಹ ಸಚಿವರ ತನಿಖೆಗಾಗಿನ ಅತ್ಯುತ್ತಮ ಪದಕ ನೀಡಿ ಗೌರವಿಸಿದೆ.
2011ರಲ್ಲಿ ಪುತ್ತೂರಿನ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ASP) ತಮ್ಮ ವೃತ್ತಿಜೀವನ ಆರಂಭಿಸಿದ ಇವರು, ಆ ಬಳಿಕ ಸಿಐಡಿ (CID) ವಿಭಾಗದ ಎಸ್ಪಿ ಆಗಿ, ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿ (DCP Central) ಆಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಇತ್ತೀಚೆಗೆ ಬೆಂಗಳೂರು ನಗರದ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಆಗಿ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸಿ, ನಗರದ ಸಂಚಾರ ನಿಯಂತ್ರಣಕ್ಕೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಅಳವಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹುದ್ದೆಗೆ ಬರುವ ಮುನ್ನ ಇವರು ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ (DIGP) ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ್,ಸಿದ್ದೇಶ್ವರಪ್ಪ ಜಿಬಿ, ಸಿ.ಆರ್.ನವೀನ್, ಉಪನಿರ್ದೇಶಕರಾದ ಬಿ.ಕೆ.ರಾಮಲಿಂಗಪ್ಪ, ಶಫಿ ಸಾದುದ್ಧಿನ್ ಸೇರಿದಂತೆ ಇತರರರು ಇದ್ದರು.
*******
2 weeks ago | [YT] | 5
View 0 replies
Shivamogga Media 24x7
ಸಂಸದ ಬಿ ವೈ ರಾಘವೇಂದ್ರ ರವರ ನೇತೃತ್ವದ ಶಿವಮೊಗ್ಗ ಜನಪ್ರತಿನಿಧಿಗಳು ಹಾಗೂ ವಕೀಲರ ನಿಯೋಗವು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಬುಧವಾರ ಅಭಿನಂದಿಸಿ, ಶಿವಮೊಗ್ಗ ದಲ್ಲಿ ಹೈಕೋರ್ಟ್ ನ್ಯಾಯ ಪೀಠ ಸ್ಥಾಪನೆಗೆ ಮನವಿ ಸಲ್ಲಿಸಲಾಯಿತು.. ಶಾಸಕರಾದ ಚನ್ನಬಸಪ್ಪ, ಬೇಳೂರು ಗೋಪಾಲಕೃಷ್ಣ, ಎಂಎಲ್ಸಿಗಳಾದ ಧನರಾಜ್ ಸರ್ಜಿ, ಅರುಣ್ ಶಂಕರ್ ಮೂರ್ತಿ, ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಸ್ವಾಮಿ, ಬಸಪ್ಪ ಗೌಡ ಮತ್ತಿತರರು ಜತೆಗಿದ್ದರು.
2 weeks ago | [YT] | 1
View 0 replies
Load more