ಉಳಿದ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿ
ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ - ಸಿದ್ದರಾಮಯ್ಯ ವಿಶ್ವಾಸ
ಬೆಂಗಳೂರು, ಸೆಪ್ಟೆಂಬರ್ 10 : ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅವರ ನೇತೃತ್ವದ ಸರ್ಕಾರವು ಇಂದಿಗೆ 100 ದಿನಗಳನ್ನು ಪೂರೈಸಿದೆ. ಅದರ ಜ್ಞಾಪಕಾರ್ಥವಾಗಿ ಸರ್ಕಾರ ಈ ಆಚರಣೆಯನ್ನು ಮಾಡುತ್ತಿದೆ. 100 ದಿನಗಳು, ಇದೊಂದು ಸಂಭ್ರಮಾಚರಣೆಯಲ್ಲ; ಈ 100 ದಿನಗಳಲ್ಲಿ ನಾವು ಸರಿಯಾದ ದಾರಿಯಲ್ಲಿ ನಡೆಯುತ್ತಿದೆಯೋ ಅಥವಾ ಇಲ್ಲವೋ ಎಂಬುದನ್ನು ಜನರ ಮುಂದಿಡುವಂತಹ ಒಂದು ಜವಾಬ್ದಾರಿಯಾಗಿದೆ. ಆ ಜವಾಬ್ದಾರಿಯನ್ನು ಈ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಆಯೋಜಿಸಿದ್ದ "ದೃಢ ಕರ್ನಾಟಕದ ಸಂಕಲ್ಪ - 100 ದಿನಗಳ ಯಶಸ್ವಿ ಪೂರೈಕೆ" ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿದ್ದೇವೆ. ಜನರು ಇಲ್ಲಿ ಮಾಲೀಕರು, ನಾವು ಜನರಿಗೆ ಏನು ವಾಗ್ದಾನಗಳನ್ನು ಕೊಟ್ಟಿದ್ದೇವೆ, ಆ ವಾಗ್ದಾನಗಳನ್ನು ಜಾರಿ ಮಾಡುತ್ತಿದ್ದೇವೆಯೋ? ಇಲ್ಲವೋ? ಎನ್ನುವುದು ಅದು ಬಹಳ ಮುಖ್ಯ. ಸಮಾಜದ ಅಸಮಾನತೆಯನ್ನು ಹೋಗಲಾಡಿಸಬೇಕು. ಸಮ ಸಮಾಜವನ್ನು ನಿರ್ಮಾಣ ಮಾಡಬೇಕು. ನಾವು ಸಮ ಸಮಾಜ ನಿರ್ಮಾಣ ಮಾಡದೆ ಹೋದರೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆಯುತ್ತಿದ್ದೇವೆ ಎಂಬ ಭಾವನೆಯನ್ನು ವ್ಯಕ್ತವಾಗುತ್ತದೆ ಎಂದರು.
ಸಮಾಜದಲ್ಲಿ ಇರುವ ಅಸಮಾನತೆ, ಬಡತನ, ನಿರುದ್ಯೋಗ, ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಹೆಚ್ಚು ಮಾಡುವಂತಹ ಪ್ರಯತ್ನವನ್ನು ಮಾಡಬೇಕು. ನಾವು ಅಧಿಕಾರಕ್ಕೆ ಬಂದು ಸೆಪ್ಟೆಂಬರ್ 14ಕ್ಕೆ 3 ವರ್ಷ 4 ತಿಂಗಳು ಪೂರೈಸುತ್ತದೆ. ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಇಂದಿಗೆ 100 ದಿನಗಳು ಆಗುತ್ತದೆ. 100 ದಿನದಲ್ಲಿ ಏನು ಮಾಡಿದ್ದೇನೆ ಎಂಬ ಕೈಪಿಡಿ ಇಂದು ಬಿಡುಗಡೆಯಾಗಿದೆ. ಮುಖ್ಯವಾದಂತಹ ಇಲಾಖೆಗಳಲ್ಲಿ ಮಾಡಿರುವಂತಹ ಸಾಧನೆಗಳಳನ್ನು ಒಳಗೊಂಡಿರುವಂತಹ ಕೈಪಿಡಿಯನ್ನು ಜನರ ಮುಂದಿಟ್ಟಿದ್ದಾರೆ ಎಂದರು.
ಯಾವುದೇ ಸರ್ಕಾರ ಜನರಿಗೆ ಉತ್ತರದಾಯಿಯಾಗಿ ನಡೆದುಕೊಳ್ಳಬೇಕು. ಅದು ಸರ್ಕಾರದ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಮೂಲ ಆಶಯ. ನಾವು 2023ರ ಮೇ 20ರಂದು ಅಧಿಕಾರಕ್ಕೆ ಬಂದೆವು. ಅದಕ್ಕಿಂತ ಮುಂಚೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ ಶಿವಕುಮಾರ್ ಹಾಗೂ ನಾವೆಲ್ಲರೂ ಜನತೆಯ ಮುಂದೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದೆವು. ಈ ವೇಳೆ ವಿರೋಧ ಪಕ್ಷದವರು ಟೀಕೆ ಮಾಡಿದ್ದರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ, ಒಂದು ವೇಳೆ ಜಾರಿ ಮಾಡಿದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗುತ್ತದೆ ಎಂದಿದ್ದರು. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣ ಇರುವುದಿಲ್ಲ ಎಂದು ಬಹಳ ಟೀಕೆಗಳನ್ನು ಮಾಡಿದ್ದರು. ಪ್ರಧಾನ ಮಂತ್ರಿ ಆದಿಯಾಗಿ ಎಲ್ಲರೂ ಕೂಡ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದರು.
ನಾನು ಮುಖ್ಯಮಂತ್ರಿಯಾಗಿ, ಡಿ.ಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ 3 ವರ್ಷಕ್ಕೂ ಹೆಚ್ಚು ಕಾಲ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೆವು. ಅಧಿಕಾರಕ್ಕೆ ಬಂದ ಮೊದಲನೇ ವರ್ಷದಲ್ಲಿಯೇ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೆವು. ಪ್ರತಿವರ್ಷ ಸುಮಾರು 52 ಸಾವಿರ ಕೋಟಿ ರೂ. ಖರ್ಚಾಗುತ್ತದೆ. ಅಷ್ಟೊಂದು ಹಣವನ್ನು ಭರಿಸಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದರು. 52 ಸಾವಿರ ಕೋಟಿ ರೂ. ಹಣವನ್ನು ಸರ್ಕಾರವೇ ಭರಿಸಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಜನರಿಗೆ ತಲುಪಿಸುವಂತ ಕೆಲಸವನ್ನು ಮಾಡಿತ್ತು ಎಂದು ತಿಳಿಸಿದರು.
ಸರ್ಕಾರ ಸಮಾಜದಲ್ಲಿ ಇರುವಂತಹ ಎಲ್ಲ ಜಾತಿಯ ಬಡವರನ್ನು ಗುರುತಿಸಿ 5 ಗ್ಯಾರಂಟಿ ಯೋಜನೆಗಳನ್ನು ಅವರಿಗೆ ತಲುಪಿಸುವ ಕೆಲಸವನ್ನು ಮಾಡಿದೆ. ಅದರ ಜೊತೆಗೆ ನಮ್ಮ ಪ್ರಣಾಳಿಕೆ ಮೂಲಕ ಇನ್ನೂ ಬೇರೆ ವಾಗ್ದಾನಗಳನ್ನು ಮಾಡಿದ್ದೆವು. ಅವುಗಳನ್ನು ಕೂಡ ಪೂರೈಸುವ ಕೆಲಸವನ್ನು ಮಾಡಲಾಯಿತು. ಅಭಿವೃದ್ಧಿ ಕೆಲಸಗಳಿಗೆ ಕೂಡ ಹಣವನ್ನು ಒದಗಿಸುವ ಕೆಲಸವನ್ನು ಮಾಡಿದ್ದೇವೆ. ಅಭಿವೃದ್ಧಿ ಕೆಲಸಗಳು ಯಾವುದೂ ಕುಂಠಿತವಾಗಿಲ್ಲ. ಕಾಂಗ್ರೆಸ್ ಪಕ್ಷ ಮಾತ್ರ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಬಜೆಟ್ ಅನ್ನು ರೂಪಿಸುತ್ತದೆ. ಉಳಿದ ಎಲ್ಲ ರಾಜಕೀಯ ಪಕ್ಷಗಳು ಪ್ರಣಾಳಿಕೆಯನ್ನು ಹೊರಡಿಸುತ್ತವೆ. ಆದರೆ ಅವುಗಳನ್ನು ಕಣ್ಣೆತ್ತಿಯೂ ನೋಡುವುದಿಲ್ಲ ಎಂದು ಟೀಕಿಸಿದರು.
ಪ್ರಣಾಳಿಕೆಯಲ್ಲಿ ಇರುವ ಭರವಸೆಗಳನ್ನು ಒಂದೇ ವರ್ಷದಲ್ಲಿ ಜಾರಿ ಮಾಡಬೇಕು ಎಂದೇನಿಲ್ಲ. 5 ವರ್ಷಗಳು ಅವಕಾಶವಿದೆ. ಆ 5 ವರ್ಷಗಳಲ್ಲಿ ಎಲ್ಲ ಭರವಸೆಗಳನ್ನು ಈಡೇರಿಸುವಂತಹ ಕೆಲಸವನ್ನು ಮಾಡಬೇಕು. ಉದಾಹರಣೆಗೆ 2013ರಲ್ಲಿ ನಾವು ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ, ಪ್ರಣಾಳಿಕೆಯ ಮೂಲಕ ಜನರಿಗೆ 165 ವಾಗ್ದಾನಗಳನ್ನು ಕೊಟ್ಟಿದ್ದೇವು. ಅವುಗಳ ಪೈಕಿ 158ಕ್ಕೂ ಹೆಚ್ಚು ವಾಗ್ದಾನಗಳನ್ನು ಜಾರಿ ಮಾಡಿದ್ದೇವೆ. ಯಾವುದಾದರೂ ಪಕ್ಷ ಅಥವಾ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಿದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಬಿಜೆಪಿಯವರು, ಜೆಡಿಎಸ್ನವರು ಸೇರಿದಂತೆ ಬೇರೆ ಯಾವ ಪಕ್ಷದವರೂ ಕೂಡ ಇದನ್ನು ಮಾಡಿಲ್ಲ. ನಾವು ಎಲ್ಲ ಭರವಸೆಗಳನ್ನು ಈಡೇರಿಸುವ ಜೊತೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಕೃಷಿಭಾಗ್ಯ, ಶೂ ಭಾಗ್ಯ, ಪಂಚ ಗ್ಯಾರಂಟಿ ಯೋಜನೆಗಳು ಹೀಗೆ ಅನೇಕ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆಎಂದು ನುಡಿದರು.
ಎಷ್ಟೇ ಟೀಕೆಗಳು ಬಂದರೂ, ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಬೇಕು. ಯಾಕೆಂದರೆ ಗ್ಯಾರಂಟಿ ಯೋಜನೆಗಳು ಅಸಮಾನತೆಯನ್ನು ತೊಲಗಿಸುವಂತಹ ಕಾರ್ಯಕ್ರಮಗಳಾಗಿವೆ. ಹೀಗಾಗಿ ಅವುಗಳು ಮುಂದುವರಿಬೇಕು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು 'ಎಲ್ಲಿಯವರೆಗೆ ಈ ದೇಶದಲ್ಲಿ ಅಸಮಾನತೆ ಹೋಗುವುದಿಲ್ಲವೋ ಅಲ್ಲಿಯವರೆಗೆ ಸಮ ಸಮಾಜವನ್ನು ನಿರ್ಮಾಣವನ್ನು ಮಾಡಲು ಸಾಧ್ಯವಿಲ್ಲ' ಎಂದಿದ್ದರು. ಸ್ವಾತಂತ್ರ್ಯ ಬಂದು ಇನ್ನೇನೂ 80 ವರ್ಷಗಳಾಗಲಿವೆ, ಸಂವಿಧಾನ ಬಂದು 76 ವರ್ಷಗಳಾಗಿ ಹೋಗಿದೆ. ಸಂವಿಧಾನದ ಆಶಯಗಳನ್ನು ಪೂರೈಸುವಂತದ್ದು ಯಾವುದೇ ಚುನಾಯಿತ ಸರ್ಕಾರದ ಕರ್ತವ್ಯವಾಗಿದೆ. ಇದನ್ನು ನಾವು ಅರ್ಥಮಾಡಿಕೊಳ್ಳಬೇಕಾಗುತ್ತದೆ ಎನ್ನುವ ಎಚ್ಚರಿಕೆಯ ನುಡಿಗಳನ್ನಾಡಿದರು.
ಎಲ್ಲ ಜನರಿಗೆ ಕೂಡ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಶಕ್ತಿಯನ್ನು ತುಂಬಬೇಕು. ಬಹುಶಃ ಕಾಂಗ್ರೆಸ್ ಪಕ್ಷದ ಧ್ಯೇಯ, ಸಿದ್ಧಾಂತ ಕಟ್ಟಕಡೆಯ ಜನರಿಗೂ ನ್ಯಾಯವನ್ನು ಒದಗಿಸಿಕೊಡುವಂತದ್ದಾಗಿದೆ. ಎಲ್ಲರಿಗೂ ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣ ಮಾಡುವಂತದ್ದು ಸರ್ಕಾರದ ಕರ್ತವ್ಯ. ಸಂವಿಧಾನದ ಕರ್ತೃಗಳು ಈ ಕನಸನ್ನು ಕಂಡಿದ್ದರು, ಆ ಕನಸನ್ನು ನನಸಾಗಿ ಮಾಡುವಂತಹದ್ದು ನಮ್ಮ ಕರ್ತವ್ಯವಾಗಿದೆ ಎಂದರು.
ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಅನೇಕ ಹೊಸ ಚಿಂತನೆಗಳು ಹಾಗೂ ಹೊಸ ಕಾರ್ಯಕ್ರಮಗಳನ್ನು ಜನರಿಗೆ ನೀಡುವ ಕೆಲಸ ಮಾಡುತ್ತಿದೆ. ಈ ಸರ್ಕಾರ ಸರಿಯಾದ ದಾರಿಯಲ್ಲಿ ನಡೆಯುತ್ತಿದೆ ಎಂದು ನನಗೆ ಅನಿಸುತ್ತಿದೆ ಎಂದ ಅವರು ಅದಕ್ಕಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಹಾಗೂ ಅವರ ಸಂಪುಟದ ಎಲ್ಲ ಸಚಿವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಇನ್ನೂ ಒಂದೂವರೆ ವರ್ಷಕ್ಕೂ ಹೆಚ್ಚು ಕಾಲಾವಕಾಶವಿದೆ. ಉಳಿದಿರುವ ಅವಧಿಯಲ್ಲಿ ಸರ್ಕಾರ ಜನರಿಗೆ ನೀಡಿರುವ ಎಲ್ಲಾ ಭರವಸೆಗಳು ಹಾಗೂ ವಾಗ್ದಾನಗಳನ್ನು ಈಡೇರಿಸುವ ಕೆಲಸ ಮಾಡಲಿ ಎಂದು ಆಶಿಸುತ್ತೇನೆ. ಕಾಂಗ್ರೆಸ್ನ ಇತಿಹಾಸವೇ ಬಡವರಿಗೆ ಶಕ್ತಿ ನೀಡುವಂತಹದ್ದು. ಸಮಾಜದಲ್ಲಿನ ದೌರ್ಜನ್ಯ ಮತ್ತು ಶೋಷಣೆಯನ್ನು ನಿಲ್ಲಿಸುವುದು, ಎಲ್ಲರಿಗೂ ಸಮಾನ ಅವಕಾಶಗಳನ್ನು ಒದಗಿಸುವುದು ಕಾಂಗ್ರೆಸ್ನ ಮೂಲ ಆಶಯವಾಗಿದೆ ಎಂದು ಪಕ್ಷದ ಧ್ಯೇಯೋದ್ದೇಶಗಳನ್ನು ಸ್ಮರಿಸಿದರು.
ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಈ ರಾಜ್ಯದ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದಾರೆ. ಹಾಗಾಗಿ ವಿರೋಧ ಪಕ್ಷಗಳು ಮಾಡುವ ಟೀಕೆಗಳಿಗೆ ಯಾವುದೇ ಕಾರಣಕ್ಕೂ ತಲೆಕೆಡಿಸಿಕೊಳ್ಳಬೇಡಿ ಎಂದು ಸಿದ್ದರಾಮಯ್ಯ ಅವರು ಸಿಎಂಗೆ ವಿಶ್ವಾಸ ತುಂಬಿದರು.
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಮಾಡಿರುವ ಭ್ರಷ್ಟಾಚಾರ ನಮ್ಮ ಕಣ್ಣ ಮುಂದೆಯೇ ಇದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವುದು ವಿಪರ್ಯಾಸ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಅವರ ಸರ್ಕಾರದಲ್ಲಿ ವಿಜಯೇಂದ್ರ ಅವರು ತಾವೇ ಮುಖ್ಯಮಂತ್ರಿ ಎಂಬಂತೆ ವರ್ತಿಸುತ್ತಿದ್ದರು. ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಅಂಥವರು ಇಂದು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವುದನ್ನು ನೋಡಿದಾಗ ನಗಬೇಕೋ, ಅಳಬೇಕೋ ಗೊತ್ತಾಗುವುದಿಲ್ಲ ಎಂದು ಇತಿಹಾಸವನ್ನು ನೆನಪಿಸಿದರು.
ಹತ್ತು ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ನಡೆಯಿತು. ಈ ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇತ್ತು. ಆದರೆ ಅದರ ಬಗ್ಗೆ ಸಮರ್ಪಕವಾಗಿ ಚರ್ಚೆ ಮಾಡಲಿಲ್ಲ. ನಾಗೇಂದ್ರ ಅವರ ರಾಜೀನಾಮೆಗೆ ಪಾದಯಾತ್ರೆ ಮಾಡಿದರು. ಆದರೆ ರಾಜ್ಯ ಎದುರಿಸುತ್ತಿದ್ದ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿಲ್ಲ. ಈಗ ಮತ್ತೆ ಪಾದಯಾತ್ರೆ ಮಾಡುತ್ತಿದ್ದಾರೆ. ಇದು ರಾಜಕೀಯ ಗಿಮಿಕ್ ಅಷ್ಟೇ. ಯಾವ ಸಮಸ್ಯೆಗಾಗಿ ಈ ಪಾದಯಾತ್ರೆ? ಕೇವಲ ರಾಜಕೀಯ ಕಾರಣಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಸರ್ಕಾರವಾಗಲಿ, ಮುಖ್ಯಮಂತ್ರಿಗಳಾಗಲಿ ಇದಕ್ಕೆ ಸೊಪ್ಪು ಹಾಕುವ ಅಗತ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.
ಈ ಹಿಂದೆ ನಾನು, ಪರಮೇಶ್ವರ್ ಅವರು ಅನೇಕ ಬಾರಿ ಪಾದಯಾತ್ರೆ ಮಾಡಿದ್ದೇವೆ. ಕೂಡಲ ಸಂಗಮದವರೆಗೂ ಪಾದಯಾತ್ರೆ ಮಾಡಿದ್ದೇವೆ. ನಮ್ಮ ಪಾದಯಾತ್ರೆಗಳು ಜನರ ಸಮಸ್ಯೆಗಳಿಗಾಗಿ, ಜನರ ಹಿತಕ್ಕಾಗಿ ನಡೆದವು. ಆದರೆ ಬಿಜೆಪಿಯವರು ಇಂದು ಯಾವುದೇ ಜನಪರ ವಿಚಾರವಿಲ್ಲದೆ ಕೇವಲ ರಾಜಕೀಯಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಯಾವುದೇ ಜನಪರ ಕೆಲಸ ಮಾಡಲಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿದ್ದರು. ಈಗ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಉದ್ದೇಶದಿಂದ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿಯ ನಾಲ್ಕು ವರ್ಷಗಳ ಆಡಳಿತದಲ್ಲಿ ಇಬ್ಬರು ಮುಖ್ಯಮಂತ್ರಿಗಳು ಬದಲಾದರು. ಹಿಂದುಳಿದ ಜಾತಿಗಳಿಗಾಗಿ ಕೇವಲ ಐದು ಹಾಸ್ಟೆಲ್ಗಳನ್ನು ನಿರ್ಮಿಸಿದರು. ನಾವು ಅಧಿಕಾರದಲ್ಲಿದ್ದಾಗ 500ಕ್ಕೂ ಹೆಚ್ಚು ಹಾಸ್ಟೆಲ್ಗಳನ್ನು ನಿರ್ಮಿಸಿದ್ದೇವೆ. ಬಡವರಿಗೆ, ರೈತರಿಗೆ, ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ, ಮಹಿಳೆಯರಿಗೆ ಅವರು ಏನು ಮಾಡಲಿಲ್ಲ. ಇದೇ ನೋಡಿ ಅವರ ಇತಿಹಾಸ. ಈಗಾಗಲೇ ರಾಜ್ಯದ ಬರಗಾಲದ ವಿಚಾರವಾಗಿ ಪರಮೇಶ್ವರ್ ಅವರು ಮಾತನಾಡಿದ್ದಾರೆ. ಈ ಹಿಂದೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. ಕೇಂದ್ರದ ತಂಡ ಬಂದು ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿಲ್ಲ. ಕೊನೆಗೆ ನಾವು ಸುಪ್ರೀಂ ಕೋರ್ಟ್ನ ಮೆಟ್ಟಿಲೇರಬೇಕಾಯಿತು. ಅದರ ನಂತರ ಸುಮಾರು ಮೂರೂವರೆ ಸಾವಿರ ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿತ್ತು ಎಂದು ಕೇಂದ್ರದ ನಿರ್ಲಕ್ಷ್ಯ ಧೋರಣೆಯ ಬಗ್ಗೆ ಆಕ್ರೋಶ ಹೊರಹಾಕಿದರು.
ಈಗಲೂ ನಾವು 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದೇವೆ. ಕೇಂದ್ರಕ್ಕೆ ಮನವಿ ಸಲ್ಲಿಸಬೇಕು. ಕೇಂದ್ರದ ತಂಡ ಬಂದು ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ನೀಡಬೇಕು. ಆದರೆ ಕೇಂದ್ರದ ತಂಡ ಬಂದು ವರದಿ ನೀಡಿದ ನಂತರವೂ ಕೇಂದ್ರ ಸರ್ಕಾರ ಅನುದಾನ ನೀಡುತ್ತದೆ ಎಂಬ ನಂಬಿಕೆ ನಮಗಿಲ್ಲ. ಕೊಟ್ಟರೂ ಕೂಡ 2000ನೇ ಇಸವಿಯಲ್ಲಿ ರೂಪಿಸಿದ ನಿಯಮಾವಳಿಗಳ ಪ್ರಕಾರವೇ ಅನುದಾನ ನೀಡಲಾಗುತ್ತದೆ. ಆ ನಿಯಮಾವಳಿಗಳನ್ನು ಬದಲಾಯಿಸಬೇಕು, ಇಲ್ಲವಾದರೆ ರಾಜ್ಯಕ್ಕೆ ಸಿಗುವ ಅನುದಾನ ಬಹಳ ಕಡಿಮೆಯಾಗುತ್ತದೆ ಎಂದು ನಾನು ಅನೇಕ ಬಾರಿ ಪ್ರಧಾನಮಂತ್ರಿಗಳಿಗೆ ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದೇನೆ. ಆದರೆ ಈವರೆಗೂ ಆ ನಿಯಮಾವಳಿಗಳನ್ನು ಬದಲಾವಣೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಹೀಗಾಗಿ ಕೇಂದ್ರ ಸರ್ಕಾರ ನಿಮ್ಮ ನೆರವಿಗೆ ಧಾವಿಸುತ್ತದೆ ಎಂಬ ನಂಬಿಕೆಯ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಬೇಡಿ. ಕೇಂದ್ರದ ನೆರವಿಗಾಗಿ ಕಾಯುತ್ತಾ ಕುಳಿತುಕೊಳ್ಳಬೇಡಿ. ನೀವು ಈಗಾಗಲೇ ಯಾವ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೀರೋ, ಇನ್ನೂ ಯಾವುದಾದರೂ ತಾಲೂಕುಗಳನ್ನು ಘೋಷಣೆ ಮಾಡಬೇಕಿದ್ದರೆ ಅದನ್ನೂ ಮಾಡಿ. ಸೆಪ್ಟೆಂಬರ್ ತಿಂಗಳು ಮುಗಿದ ನಂತರ ಮಳೆ ಬರುವ ಸಾಧ್ಯತೆ ಕಡಿಮೆ. ನಮ್ಮ ಕೆರೆ-ಕಟ್ಟೆಗಳು ತುಂಬುವುದಿಲ್ಲ. ಆದ್ದರಿಂದ ಈ ವಿಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಈಗಾಗಲೇ ನೀವು ರೂಪಿಸಿರುವ ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತನ್ನಿ. ಹಳೆಯ ಕಾರ್ಯಕ್ರಮಗಳನ್ನೂ ಸಮರ್ಪಕವಾಗಿ ಜಾರಿಗೆ ತನ್ನಿ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿ ಎನ್ನುವ ಕಿವಿಮಾತು ಹೇಳಿದರು.
ನನಗೆ ಸಂಪೂರ್ಣ ವಿಶ್ವಾಸವಿದೆ. ನಿಮ್ಮ ಸರ್ಕಾರ ಜನಪರ ಸರ್ಕಾರ ಎಂಬ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಜನರಲ್ಲಿ ಈ ಭಾವನೆ ಮೂಡಿಸುವ ಕೆಲಸವನ್ನು ನೀವು ಮಾಡಬೇಕು. ಈ ನಾಡನ್ನು ದೃಢ ಕರ್ನಾಟಕವನ್ನಾಗಿ ಮಾಡುವ ಸಂಕಲ್ಪದೊಂದಿಗೆ ನೀವು ಹೊರಟಿದ್ದೀರಿ. ಅದರ ಕೈಪಿಡಿಯನ್ನೂ ಬಿಡುಗಡೆ ಮಾಡಲಾಗಿದೆ. ಯಾರು ಏನೇ ಮಾಡಿದರೂ, ಜನರ ಮುಂದೆ ಹೋಗುವಂತಹ ಕೆಲಸವನ್ನು ಮಾಡಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಮ್ಮ ಮಾಲೀಕರು. ಅವರ ಮುಂದೆ ಸರ್ಕಾರದ ಕೆಲಸಗಳನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡಿ. ‘ಪ್ರಜಾ ಸೇವೆ’ ಎಂಬ ಹೊಸ ಕಾರ್ಯಕ್ರಮ ತುಂಬಾ ಒಳ್ಳೆಯ ಕಾರ್ಯಕ್ರಮ. ಅದನ್ನು ಕಾಟಾಚಾರಕ್ಕೆ ಮಾಡಬೇಡಿ. ಪರಿಣಾಮಕಾರಿಯಾಗಿ ಮುಂದುವರಿಸಿ. ಪ್ರತಿಯೊಬ್ಬ ಸಚಿವರೂ ತಮ್ಮ ತಮ್ಮ ಜಿಲ್ಲೆಗಳಲ್ಲಿ ಜನಸಂದರ್ಶನ ನಡೆಸುವ ಕೆಲಸ ಮಾಡಬೇಕು. ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಒದಗಿಸುವ ಮೂಲಕ ನಿಜವಾದ ಪ್ರಜಾ ಸೇವೆ ಮಾಡಬೇಕು ಎಂದು ತಿಳಿಸಿದರು.
ಜನ್ಮದಿನ ವಿಶೇಷ |
ಅಂಬೇಡ್ಕರ್ ವಿಚಾರಧಾರೆಯ ಪರಿಚಾರಕ ಎಂ.ಪಿ. ಗಿರೀಶ್
ಸಮಾಜ ಬದಲಾಗಬೇಕು, ಜನರು ಬದಲಾಗಬೇಕು ಎಂದು ಬಯಸುವ ’ನಾನು’ ಮೊದಲು ಆ ಹಾದಿಯನ್ನು ತುಳಿಯಬೇಕು. ವ್ಯಕ್ತಿ ಬದಲಾವಣೆಯೇ ಸಮಾಜ ಬದಲಾವಣೆಗೆ ಮುನ್ನುಡಿ. ಆ ನಂತರ ಸಾಮುದಾಯಿಕ ಹೊಣೆಗಾರಿಕೆ ಮತ್ತು ಪಾಲ್ಗೊಳ್ಳುವಿಕೆ ತನ್ನಿಂದ ತಾನೇ ಆಗುತ್ತದೆ ಎಂದು ನಂಬಿದ್ದಾರೆ ಎಂ.ಪಿ. ಗಿರೀಶ್.
’ಜೀವನವು ಸುಧೀರ್ಘವಾಗಿರುವುದಕ್ಕಿಂತ ಶ್ರೇಷ್ಠವಾಗಿರಬೇಕು’
– ಡಾ.ಬಿ.ಆರ್.ಅಂಬೇಡ್ಕರ್
ಹೌದು, ಬಾಬಾ ಸಾಹೇಬರ ಈ ಉಕ್ತಿ ಬಹಳ ಶ್ರೇಷ್ಠವಾದುದು. ಜೀವ ಜಗತ್ತಿಗೆ ಪ್ರವೇಶಿಸುವ ಯಾವುದೇ ಜೀವಿಗೆ ಅದರದ್ದೇ ಕಾರ್ಯಣಕಾರಣ ಇದ್ದೇ ಇರುತ್ತದೆ. ಅದಿಲ್ಲದೇ ಒಂದು ವಸ್ತುವಿನ ಸೃಷ್ಟಿ ಸಾಧ್ಯವೇ ಇಲ್ಲ. ಮನುಷ್ಯ ಕೂಡ ಇದರ ಒಂದು ಭಾಗ. ನಾವು ಹುಟ್ಟಿದ ಮೇಲೆ ಜೀವನದ ಸಾರ್ಥಕ್ಯವನ್ನು ಕಂಡುಕೊಳ್ಳಲೇಬೇಕು. ಆದರೆ ಬದುಕು ಸಾರ್ಥಕ ಎನಿಸಿಕೊಳ್ಳುವುದು ಹೇಗೆ?
ಕೊಟ್ಟ ಹಣ ಕ್ಷಣಿಕ.. ಕೊಡಿಸಿದ ಆಭರಣ ಅವಸರಕ್ಕೆ ಸೀಮಿತ.. ಕೂಡಿಸಿ ಕೊಟ್ಟ ಆಸ್ತಿ ತನ್ನವರಿಗೆ ಸೀಮಿತ.. ಇದೆಲ್ಲವನ್ನೂ ಬಿಟ್ಟು ಸಮಾಜವನ್ನು ವಿಶಾಲ ದೃಷ್ಟಿಯಲ್ಲಿ ಪರಿವರ್ತಿಸುವ ಸಂಕಲ್ಪ ಪ್ರತಿಯೊಬ್ಬರಿಂದಲೂ ಆಗಬೇಕು. ಅದನ್ನು ಬಾಬಾ ಸಾಹೇಬರು ಒಂದು ಸಾಲಿನಲ್ಲಿ ಹೀಗೆ ವಿವರಿಸಿದ್ದಾರೆ… ’ಶಿಕ್ಷಣವು ಸಿಂಹಿಣಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು…’
ಶಿಕ್ಷಣ ಎಂದರೆ ನಾಲ್ಕು ಗೋಡೆಗಳ ಮಧ್ಯೆ ಗುರು ಕಲಿಸಿದ್ದು ಮಾತ್ರವಲ್ಲ. ಬುದ್ಧ, ಬಸವಣ್ಣ, ಅಂಬೇಡ್ಕರ್ ಮೊದಲಾದ ಚಿಂತಕರ ಬದುಕನ್ನು ಅರಿತು ಸಮಾಜಕ್ಕೆ ಅರ್ಪಿಸುವುದು. ಈ ಮಹನೀಯರ ವಿಚಾರಧಾರೆಗಳನ್ನು ಹಂಚುವುದೂ ಒಂದು ಸಾಮಾಜಿಕ ಜವಾಬ್ದಾರಿ.
ಬಹುತೇಕರು ಇಂತಹ ವೈಚಾರಿಕ ಹಾದಿ ತುಳಿಯುವುದು ಅಪರೂಪ. ಆದರೆ, ಬೆಂಗಳೂರಿನಂತಹ ಮಾಯಾನಗರಿಯ ಮಡಿಲಲ್ಲೇ ಇರುವ ದೇವನಹಳ್ಳಿ ತಾಲೂಕಿನ ಮಲ್ಲಾಪುರದ ಎಂ.ಪಿ. ಗಿರೀಶ್ ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಹರಡುವುದೇ ನನ್ನ ಜೀವನದ ಸಂಕಲ್ಪ ಎಂದು ಬದುಕುತ್ತಿದ್ದಾರೆ. 2022ರಿಂದ ಈ ನಿಟ್ಟಿನಲ್ಲಿ ಅವರು ಕೈಗೊಂಡಿರುವ ಕಾರ್ಯಗಳು ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿವೆ.
’ಹುಟ್ಟು ಮತ್ತು ಸಾವಿನ ನಡುವಿನ ಅಂತರವೇ ಜೀವನ. ಈ ಅಂತರವನ್ನು ನೀವು ಎಷ್ಟು ವರ್ಷ ಬದುಕಿದ್ದೀರಿ ಎಂಬುದರಿಂದ ಅಳೆಯಲಾಗುವುದಿಲ್ಲ, ಬದಲಿಗೆ ಎಷ್ಟು ಜನರ ಹೃದಯದಲ್ಲಿ ಬದುಕಿದ್ದೀರಿ ಎಂಬುದರಿಂದ ಅಳೆಯಲಾಗುತ್ತದೆ’ ಹೀಗೆ ಬದುಕಿ ತೋರಿಸುತ್ತಿದ್ದಾರೆ ಎಂ.ಪಿ.ಗಿರೀಶ್.
ಗಿರೀಶ್ ಅವರಿಗೆ ಈಗ 37 ವರ್ಷ (ಸೆಪ್ಟೆಂಬರ್ 6). ತಮ್ಮ ಜನ್ಮ ದಿನವನ್ನೇ ಇವರು ಅಂಬೇಡ್ಕರ್ ವಿಚಾರ ಪ್ರಚಾರದ ಕರ್ಮದಿನವನ್ನಾಗಿ (ಕರ್ತವ್ಯದಿನ) ಪರಿವರ್ತಿಸಿಕೊಂಡಿದ್ದಾರೆ. 30 ವರ್ಷದವರೆಗೂ ಹುಟ್ಟುಹಬ್ಬವನ್ನೇ ಆಚರಿಸಿಕೊಳ್ಳದ ಅವರು ತಮ್ಮ ಅಪಾರ ಸ್ನೇಹ ವಲಯದ ಒತ್ತಾಯಕ್ಕೆ ಮಣಿದು 2022ರಲ್ಲಿ ಮೊದಲಬಾರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಅಂದು ಸುಮಾರು 5,೦೦೦ಕ್ಕೂ ಅಧಿಕ ಮಂದಿಗೆ ಊಟಹಾಕಿಸಿದ್ದರು. ಆದರೆ, ಆ ದಿನ ಗಿರೀಶ್ ಅವರ ಬದುಕಲ್ಲಿ ಸಾರ್ಥಕ ಬದಲಾವಣೆಗೆ ಆದಿ ಮೊದಲಾಯಿತು. ಅವತ್ತು ಅಂಬೇಡ್ಕರ್ ಅವರ ಬದುಕು, ಹೋರಾಟ, ವಿಚಾರಧಾರೆ ಮತ್ತು ತತ್ವಗಳನ್ನು ಇಡೀ ಸಮಾಜಕ್ಕೆ ತಲುಪಿಸಬೇಕು ಎನ್ನುವ ಮನೋಸಂಕಲ್ಪ ಅವರಿಗಾಗಿತ್ತು. ನನ್ನ ಜನ್ಮದಿನ ಅಂಬೇಡ್ಕರ್ ವಿಚಾರ ಹರಿವಿನ ಸಂಕಲ್ಪ ದಿನ ಆಗಬೇಕು ಎಂದು ಅವರು ಅಂದು ತೊಟ್ಟ ಸಂಕಲ್ಪ ಅನೂಚಾನವಾಗಿ ನಡೆದುಕೊಂಡು ಬರುತ್ತಿದೆ.
ಇದನ್ನೇ ಅಣ್ಣ ಬಸವಣ್ಣ,
’ಮತ್ತೊಂದ ಕಾಣದೆ, ಮತ್ತೊಂದ ಕೇಳದೆ,
ನಿಮ್ಮ ಶರಣರ ಪಾದವಲ್ಲದೆ
ಅನ್ಯವಿಷಯಕ್ಕೆಳಸದಂತೆ ಇರಿಸಯ್ಯಾ,
ಕೂಡಲಸಂಗಮದೇವಾ’ ಎಂದಿದ್ದು.
’ಹುಟ್ಟು ಮತ್ತು ಸಾವಿನ ಮಧ್ಯೆ ಇರುವ ಈ ಜೀವನದ ನಿಜವಾದ ಉದ್ದೇಶ ಜ್ಞಾನವನ್ನು ಪಡೆಯುವುದು ಮತ್ತು ಸ್ವಾರ್ಥವನ್ನು ಬಿಟ್ಟು ಇತರರಿಗಾಗಿ ಬದುಕುವುದು’ ಎಂಬ ಮಾತಿನಂತೆ ಗಿರೀಶ್ ಅವರು ಹೆಜ್ಜೆ ಹಾಕುತ್ತಿದ್ದಾರೆ.
2023ರಲ್ಲಿ ಮೊದಲ ಬಾರಿಗೆ 186 ಜನರನ್ನು ವಿಮಾನದಲ್ಲಿ ಮುಂಬೈಗೆ ಕರೆದೊಯ್ದಿದ್ದರು. ಡಾ. ಬಿ.ಆರ್.ಅಂಬೇಡ್ಕರ್ ಅವರ ಸಮಾಧಿ, ನಿವಾಸ, ಸ್ಮಾರಕ ಹೀಗೆ ಬದುಕು ಮತ್ತು ಹೋರಾಟದ ಐತಿಹ್ಯ ಸಾರುವ ಎಲ್ಲ ಸ್ಥಳಗಳ ಪರಿಚಯ ಮಾಡಿಸಿದ್ದರು. ಅಷ್ಟಕ್ಕೆ ನಿಲ್ಲಲಿಲ್ಲ ಅವರ ಈ ಯಾನ. ಪ್ರತಿವರ್ಷ ನೂರಾರು ಜನರನ್ನು ಮುಂಬೈಗೆ ಕರೆದೊಯ್ದು ಅಂಬೇಡ್ಕರ್ ಜೀವನ ದರ್ಶನ ಮಾಡಿಸುವ ಕೆಲಸ ನಿರಂತರವಾಗಿ ಸಾಗಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರು ಅಂಬೇಡ್ಕರ್ ಅವರನ್ನು ಅರಿತುಕೊಳ್ಳಲು ದೊಡ್ಡ ವೇದಿಕೆಯನ್ನೇ ಕಲ್ಪಿಸಿದ್ದಾರೆ ಗಿರೀಶ್.
ಎಲ್ಲ ಸಮುದಾಯವನ್ನೂ ಒಳಗೊಂಡು ಪ್ರವಾಸಕ್ಕೆ ಕೊಂಡೊಯ್ಯುವ ಮೂಲಕ ಅಂಬೇಡ್ಕರ್ ಅವರು ಯಾರೊಬ್ಬರ ವಿರೋಧಿಯಲ್ಲ. ಸರ್ವ ಸಮುದಾಯದ ಹಿತೈಷಿ ಎಂದು ನಿರೂಪಿಸುವ ಪರಿವರ್ತನೆಯ ಕೆಲಸ ಇವರಿಂದ ಆಗಿದೆ. ಅಷ್ಟೇ ಅಲ್ಲ, ವೀರಬ್ರಹ್ಮೇಂದ್ರ ಸ್ವಾಮಿಗಳ ಸಮಾಧಿ ಸೇರಿ ಹಲವು ಮಹನೀಯರ ಸ್ಮಾರಕಗಳಿಗೂ ಜನರನ್ನು ಕೊಂಡೊಯ್ದು ಸಮಸಮಾಜದ ಕಲ್ಪನೆಗೆ ಸಂಕಲ್ಪವಾಗಿ ನಿಂತಿದ್ದಾರೆ ಗಿರೀಶ್.
ಅಂಬೇಡ್ಕರ್ ಅವರ ಬಗ್ಗೆ ಕೆಲ ಸಮುದಾಯಗಳಲ್ಲಿ ಹರಡಿದ್ದ ತಪ್ಪು ಕಲ್ಪನೆಯನ್ನು ನಿವಾರಣೆ ಮಾಡುತ್ತಿದ್ದೇನೆ ಎಂದು ಗಿರೀಶ್ ಹೆಮ್ಮೆ ಪಡುತ್ತಾರೆ. ಆ ಮೂಲಕ ಅಸ್ಪೃಷ್ಯತೆ ಮತ್ತು ಜಾತಿ ಆಧಾರಿತ ತಾರತಮ್ಯವನ್ನು ಅಂಬೇಡ್ಕರ್ ವಿರೋಧಿಸಿದ್ದರು ಎನ್ನುವುದನ್ನು ಮನವರಿಕೆ ಮಾಡಿಕೊಡುತ್ತಿದ್ದಾರೆ.
ಅಂಬೇಡ್ಕರ್ ಅವರ ಸಮಾಧಿ ಸ್ಥಳದಲ್ಲೇ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ವರ್ಷವೂ ಅಲ್ಲಿಯೇ ಜನ್ಮದಿನದ ಸಾರ್ಥಕ್ಯ ಸಾಧ್ಯವಾಗಿದೆ.
ಈ ವರ್ಷ ಸರ್ಕಾರಿ ಶಾಲೆ ಮಕ್ಕಳು, ಅನಾಥಾಶ್ರಮದ ಮಕ್ಕಳು, ಉದ್ಯಮಿಗಳು, ಅರ್ಚಕರು, ಸಮಾಜಸೇವಕರು ಹೀಗೆ ನಾನಾ ಕ್ಷೇತ್ರಗಳ ಜನರನ್ನು ಮುಂಬೈಗೆ ಕರೆದೊಯ್ಯುವ ವಿಶಿಷ್ಟ ಪ್ರಯತ್ನವನ್ನು ಗಿರೀಶ್ ಅವರು ಮಾಡಿದ್ದಾರೆ. ಇದೆಲ್ಲದರ ಹಿಂದೆ ಅವರಿಗೆ ಪ್ರಚಾರ ಗಿಟ್ಟಿಸಿಕೊಳ್ಳುವ ಹಂಬಲವಿಲ್ಲ. ವೈಭವೀಕರಿಸಿಕೊಳ್ಳುವ ಆಸೆಯೂ ಇಲ್ಲ. ನಿಸ್ವಾರ್ಥವಾಗಿ ಸಮುದಾಯದ ಒಳಿತಿನ ಚಿಂತನೆ ನಡೆದಿದೆ.
ಅಂಬೇಡ್ಕರ್ ಅವರನ್ನು ಜನ್ಮಜಯಂತಿಗಳಿಗೆ ಮಾತ್ರ ಸೀಮಿತಗೊಳಿಸದೆ ಸಮಾಜ ಪರಿವರ್ತನೆಯ ನಿತ್ಯ ಸಂದೇಶವಾಗಿಸಬೇಕು ಎನ್ನುವ ಕಾಳಜಿ ಗಿರೀಶ್ ಅವರದ್ದು. ಬಸವಣ್ಣ, ವೀರಬ್ರಹ್ಮೇಂದ್ರರು ಹೀಗೆ ಅನೇಕ ಸಮಾಜ ಸುಧಾರಕರ ಮೌಲ್ಯಗಳನ್ನೂ ಪ್ರಚಾರ ಮಾಡುವ ಮೂಲಕ, ತಾನೂ ಸೇರಿದಂತೆ ಜನರು ಅಳವಡಿಸಿಕೊಂಡಾಗ ತಾರತಮ್ಯ ರಹಿತ ಸಮಾಜ ನಿರ್ಮಾಣ ಸಾಧ್ಯ ಎನ್ನುವುದು ಗಿರೀಶ್ ಅವರ ನಂಬಿಕೆ. ತಮ್ಮ ಸ್ನೇಹ ಬಳಗದ ಮೂಲಕ ಇದನ್ನೊಂದು ಕಾಯಕಯಾತ್ರೆಯನ್ನಾಗಿ ಅವರು ಪರಿವರ್ತಿಸಿದ್ದಾರೆ.
ಇದಿಷ್ಟೇ ಅಲ್ಲ, ಅವರು ತಮ್ಮ ಆಸುಪಾಸು ಪ್ರದೇಶಗಳಲ್ಲಿ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ಕೈಜೋಡಿಸುವ ಮೂಲಕ ಸಮಾಜದಲ್ಲಿ ಅಂಬೇಡ್ಕರ್ ಅವರ ಚಿಂತನೆಗಳನ್ನು ಹರಡುವ ಕೆಲಸವನ್ನು ಅನೂಚಾನವಾಗಿ ನಡೆಸಿಕೊಂಡು ಬರುತ್ತಿದ್ದಾರೆ.
’ಟೀಂ ಎಂಪಿಜಿಎಸ್ ವತಿಯಿಂದ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ, ಹಲವರು ಸಂಘಟಿಸುವ ಕಾರ್ಯಕ್ರಮಗಳಿಗೆ ನೆರವಾಗಿದ್ದಾರೆ.
ಇದೇ ಸೆಪ್ಟಂಬರ್ 6ರಂದು ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ನಲ್ಲೂರಿನಲ್ಲಿ ’ಗಂಗಮ್ಮ ತಾಯಿ ದೇವರ ಹರಕೆಯ ಔತಣಕೂಟ’ವನ್ನೂ ಏರ್ಪಡಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸಂಜೆ ನಾಲ್ಕು ಗಂಟೆವರೆಗೂ ಸಹಸ್ರಾರು ಜನರಿಗೆ ಮಾಂಸಾಹಾರ ಮತ್ತು ಸಸ್ಯಾಹಾರ ಊಟದ ವ್ಯವಸ್ಥೆಯನ್ನೂ ಮಾಡಿದ್ದಾರೆ. ಇಲ್ಲೂ ಅಂಬೇಡ್ಕರ್ ಅವರೂ ಸೇರಿದಂತೆ ಸಮಾಜಸುಧಾರಕರ ಜೀವನ ಮೌಲ್ಯದ ಪ್ರಚಾರ ಮಾಡುವ ಪ್ರಯತ್ನ ಗಿರೀಶ್ ಅವರಿಂದ ಆಗುತ್ತಿದೆ.
ಹೀಗೆ ವೈಚಾರಿಕ ಪ್ರಚಾರ ಕ್ರಾಂತಿಯ ಕೆಲಸದಲ್ಲಿ ಎಲೆಮರೆ ಕಾಯಿಯಂತೆ ಸಾಗುತ್ತಿರುವ ಎಂ.ಪಿ. ಗಿರೀಶ್ ಅವರದ್ದು ದೇವನಹಳ್ಳಿ ತಾಲೂಕು. 1990ರಲ್ಲಿ ಜನಿಸಿದ ಅವರು ಮಲ್ಲಾಪುರದಲ್ಲಿ ಪ್ರಾಥಮಿಕ ಓದನ್ನು ಮುಗಿಸಿ ದೇವನಹಳ್ಳಿಯಲ್ಲಿ ಡಿಗ್ರಿ ಶಿಕ್ಷಣ ಪಡೆದರು. ಕಲಾ ವಿಭಾಗದಲ್ಲಿ ಪದವೀಧರರಾದ ನಂತರ ಉದ್ಯಮ ಮತ್ತು ಸಮಾಜಸೇವೆಯಲ್ಲಿ ತೊಡಗಿಸಿಕೊಂಡರು.
ವೃತ್ತಿ ಬದುಕಿನಾಚೆಗೆ ಸಮಾಜಕ್ಕೆ ನಾನು ಏನನ್ನಾದರೂ ನೀಡಬೇಕು ಎನ್ನುವ ಹಂಬಲ ಅವರನ್ನು ಸಮಸಮಾಜ ಕಟ್ಟುವ ಆಶಯದ ಹಾದಿಗೆ ತಂದು ನಿಲ್ಲಿಸಿದೆ. ಸಾಹಿತ್ಯದ ಓದು, ಸಾಮಾಜಿಕ ಚಟುವಟಿಕೆಗಳ ಆಸಕ್ತಿ ಇವರಲ್ಲಿ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿದೆ. ಸಾಮಾಜಿಕ ಅರಿವು ಸಮಾಜದಲ್ಲಿ ಆರೋಗ್ಯಕರ ವಾತಾವರಣ ತರಬಲ್ಲದು ಎನ್ನುವ ಅಚಲ ನಂಬಿಕೆ ಇಟ್ಟು ಸಾಗುತ್ತಿದ್ದಾರೆ.
ಸಮಾಜ ಬದಲಾಗಬೇಕು, ಜನರು ಬದಲಾಗಬೇಕು ಎಂದು ಬಯಸುವ ’ನಾನು’ ಮೊದಲು ಆ ಹಾದಿಯನ್ನು ತುಳಿಯಬೇಕು. ವ್ಯಕ್ತಿ ಬದಲಾವಣೆಯೇ ಸಮಾಜ ಬದಲಾವಣೆಗೆ ಮುನ್ನುಡಿ. ಆ ನಂತರ ಸಾಮುದಾಯಿಕ ಹೊಣೆಗಾರಿಕೆ ಮತ್ತು ಪಾಲ್ಗೊಳ್ಳುವಿಕೆ ತನ್ನಿಂದ ತಾನೇ ಆಗುತ್ತದೆ ಎಂದು ನಂಬಿದ್ದಾರೆ ಎಂ.ಪಿ. ಗಿರೀಶ್.
ಎಐ ಜಗತ್ತಿನ ತಾಂತ್ರಿಕತೆಯ ತುದಿಬೆರಳಿನ ತಾಳಕ್ಕೆ ಕುಣಿಯುವ ಯುವ ಮನಸ್ಸುಗಳು ವೈಚಾರಿಕ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್, ಬಸವಣ್ಣ ಅವರಂತಹ ಸುಧಾರಕರ ವಿಚಾರಗಳನ್ನು ಹರಡುವ ನದಿಗಳಾಗಬೇಕು ಎನ್ನುವ ಗಿರೀಶ್ ಅವರ ಸಂಕಲ್ಪ ಈಗಿನ ತಲೆಮಾರಿಗೆ ಅನುಕರಣೀಯ.ಅವರ ಈ ಸಮಾಜ ಪರಿವರ್ತನೆಯ ಪಯಣ ಯಶಸ್ವಿಯಾಗಿ ಸಾಗಲಿ.
- ಅಭಿಮನ್ಯು
ಅಂತಾರಾಷ್ಟ್ರೀಯ ದೇಹಧಾರ್ಢ್ಯ ಪಟು ಜಿಮ್ ರವಿ ಅವರ ಜೀವನ ಆಧರಿಸಿ ಬರೆದಿರುವ "ರವಿ ನೀನು ಆಗಸದಲ್ಲಿ" ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.
ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಸಚಿವರಾದ ನರೇಂದ್ರಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ. ರೇವಣ್ಣ, ಹಿರಿಯ ಸಾಹಿತಿಗಳಾದ ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್ ಮತ್ತಿತರರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.
ಸಿಎಂ ಡಿ ಕೆ ಶಿವಕುಮಾರ್ ಅವರು ನಿಕಪೂರ್ವ ಮಖ್ಯಮಂತ್ರಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಸಚಿವ ಹೆಚ್.ಸಿ ಬಾಲಕೃಷ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ ಎಸ್ ಪೊನ್ನಣ್ಣ ಶಾಸಕರುಗಳಾದ ಶರತ್ ಬಚ್ಚೇಗೌಡ, ಬೇಳೂರು ಗೋಪಾಲಕೃಷ್ಣ, ಡಾ.ರಂಗನಾಥ್, ಶಿವರಾಂ ಹೆಬ್ಬಾರ್, ಎನ್ ಶ್ರೀನಿವಾಸ್, ಎಸ್ ಟಿ ಸೋಮಶೇಖರ್, ಬಿ ಶಿವಣ್ಣ, ಎಸ್ ಆರ್ ಶ್ರೀನಿವಾಸ್, ರಮೇಶ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ವಿನಯ್ ಕಾರ್ತಿಕ್, ಎಸ್ ರವಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
• ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ • ಅದ್ದೂರಿ ಸಮಾರಂಭದಲ್ಲಿ ಚಿತ್ರ ನಟ ಡಾರ್ಲಿಂಗ್ ಕೃಷ್ಣ, ನಟಿ ಐಂದ್ರಿತಾ ರೈ ಉದ್ಘಾಟನೆ
• ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆಯಾದ ಕೆಎಸ್ಪಿಎಲ್
ಬೆಂಗಳೂರು: ನಗರದ ಗಾಯತ್ರಿ ವಿಹಾರದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ʼಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ʼಗೆ ಖ್ಯಾತ ಚಿತ್ರ ನಟ ಡಾರ್ಲಿಂಗ್ ಕೃಷ್ಣ ಮತ್ತು ನಟಿ ಐಂದ್ರಿತಾ ರೈ ಮತ್ತು ದಿಗ್ಗಜರು ಚಾಲನೆ ನೀಡಿದರು. ಡಾರ್ಲಿಂಗ್ ಕೃಷ್ಣ ಮಾತನಾಡಿ, ʼಕ್ರಿಕೆಟ್ ಎಲ್ಲರ ಅಚ್ಚುಮೆಚ್ಚಿನ ಆಟ. ಉತ್ತಮ ಪ್ರತಿಭೆಗಳನ್ನು ಹುಡುಕಿ ಜಗತ್ತಿಗೆ ತೋರಿಸುವ ಕಾರ್ಯವನ್ನು ಕೆಎಸ್ಪಿಎಲ್ ತಂಡ ಕೈಗೊಂಡಿರುವುದು ಶ್ಲಾಘನೀಯʼ ಎಂದರು. ʼನಾನು ಮ್ಯಾಚ್ ಆಡಿದ್ದೆ ಸಾಫ್ಟ್ ಬಾಲ್ ಸಾಫ್ಟ್ ಆಗಿ ಇರುತ್ತೇ ಅಂದುಕೊಂಡಿದ್ದೆ. ಆದರೆ, ಹೇಳುವುದಕ್ಕೆ ಮಾತ್ರ ಸಾಫ್ಟ್ ಬಾಲ್ ಅದು ಕೂಡ ತುಂಬಾ ಸಿಕ್ಕಾಪಟ್ಟೆ ಹಾರ್ಡ್ ಆಗಿರುತ್ತೆ ಅಂತ ಆಡಿದ ಮೇಲೆ ಅನುಭವವಾಯಿತು, ಲೇದರ್ ಬಾಲ್ ನ ಆಟಕ್ಕೂ ಸಾಫ್ಟ್ ಬಾಲ್ ಆಟಕ್ಕೂ ಬಹಳ ವ್ಯತ್ಯಾಸ ಇರುತ್ತದೆʼ ಎಂದು ತಮ್ಮ ಅನಿಸಿಕೆ ಹಂಚಿಕೊಂಡರು. ನಟಿ ಐಂದ್ರೀತಾ ರೈ ಮಾತನಾಡಿ, ʼಕ್ರಿಕೆಟ್ಗೆ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಪ್ರತಿಭಾವಂತರಿದ್ದಾರೆ. ಅಂತಹ ಪ್ರತಿಭೆಗಳನ್ನು ಗುರುತಿಸಿ ಅವಕಾಶ ಕಲ್ಪಿಸುವುದು ಮುಖ್ಯ. ಅಂತಹ ಅವಕಾಶ ಒದಗಿಸಿರುವ ಕೆಎಸ್ಪಿಎಲ್ ತಂಡದ ಕಾರ್ಯ ಶ್ಲಾಘನೀಯ ಎಂದರು. ಸಮಾರಂಭದಲ್ಲಿ ಲೀಗ್ ಪಂದ್ಯದಲ್ಲಿ ಆಡಲಿರುವ 32 ತಂಡಗಳು ಭಾಗವಹಿಸಿದ್ದವು. ಒಟ್ಟು 63 ಪಂದ್ಯಗಳು ನಡೆಯಲಿವೆ. ಕೆಎಸ್ಪಿಎಲ್ ಕ್ರಿಕೆಟ್ ಫೌಂಡೇಷನ್ನ ಡಾ.ಗಂಗಾಧರ್ ರಾಜು ಮಾತನಾಡಿ, ಸಂಸ್ಥೆಯು ಪ್ರಾರಂಭದ ದಿನಗಳಲ್ಲಿ ಎದುರಿಸಿದ ಕಷ್ಟಗಳು ಮತ್ತು ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸೃಷ್ಟಿಸಲು ಪಟ್ಟ ಶ್ರಮವನ್ನು ವಿವರಿಸಿದರು. ʼಗ್ರಾಮೀಣ ಭಾಗದ ಕ್ರೀಡಾಪಟುಗಳು ನಮ್ಮ ಆಸ್ತಿ. ಅವರ ಬೆಳವಣಿಗೆಯೇ ನಮ್ಮ ಧ್ಯೇಯ. ಗ್ರಾಮೀಣ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದ ಪಂದ್ಯಗಳಿಗೆ ಆಯ್ಕೆಯಾಗಬೇಕು ಎನ್ನುವುದು ನಮ್ಮ ಸಂಸ್ಥೆಯ ಮೂಲ ಉದ್ದೇಶʼ ಎಂದು ತಿಳಿಸಿದರು. ಈಗ ರಾಜ್ಯದ ಎಲ್ಲ ಜಿಲ್ಲೆಗಳಿಂದ ಕ್ರಿಡಾಪಟುಗಳನ್ನು ಆಯ್ಕೆ ಮಾಡಿದಂತೆಯೇ, ರಾಷ್ಟ್ರಮಟ್ಟದಲ್ಲೂ ಐಎಸ್ಪಿಎಲ್ ಪಂದ್ಯಾವಳಿ ಆಯೋಜಿಸುವ ಬಗ್ಗೆಯೂ ಅವರು ತಮ್ಮ ಪರಿಕಲ್ಪನೆಯನ್ನು ಸಮಾರಂಭದಲ್ಲಿ ಹಂಚಿಕೊಂಡರು.
ಸಮಾರಂಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಕರ್ನಾಟಕ ಸಾಫ್ಟ್ ಪ್ರಿಮಿಯರ್ ಲೀಗ್ ಅಧ್ಯಕ್ಷ ಸಿದ್ದರಾಮ್ ದೇಸಾಯಿ, ಸಾಫ್ಟ್ ಬಾಲ್ ಕ್ರಿಕೆಟ್ ಫೌಂಡೇಷನ್ ಮುಖ್ಯಸ್ಥ ಡಾ. ಗಂಗಾಧರ್ ರಾಜು, ಖ್ಯಾತ ನಿರ್ದೇಶಕ ಎಸ್.ನಾರಾಯಣ್, ಖ್ಯಾತ ನಟ ರವಿಚೇತನ್ ಉಪಸ್ಥಿತರಿದ್ದರು. @siddaramaiah_express @rahulgandhi @mallikarjunkharge8172
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಉತ್ತರಾಖಂಡ ಪೊಲೀಸರು FIR ದಾಖಲು ಮಾಡಿರುವುದನ್ನು ಖಂಡಿಸಿ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು....
ರಾಹುಲ್ ಗಾಂಧಿಯವರು ಯಾವ ತಪ್ಪು ಮಾಡದಿದ್ದರೂ ಕೇಸು ದಾಖಲು ಮಾಡಲಾಗಿದೆ. ಇದು ಘನ ಘೋರ ಅನ್ಯಾಯ.
ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಭಾಷಣ ಮಾಡಿದ ಜಾಗವನ್ನು ಶುದ್ಧೀಕರಣ ಮಾಡಲಾಗಿದೆ.
ಇದನ್ನು ಪ್ರಶ್ನೆ ಮಾಡಿದ್ದೇ ಅಪರಾಧ ಎಂಬಂತೆ ರಾಹುಲ್ ಗಾಂಧಿಯವರ ಮೇಲೆ ಕೇಸು ದಾಖಲು ಮಾಡಲಾಗಿದೆ.
ಬಾಷಣ ಮಾಡಿದ ಜಾಗದ ಶುದ್ಧೀಕರಣ ಸಂವಿಧಾನ ವಿರೋಧಿ ಕೆಲಸ. ಅಸ್ಪೃಶ್ಯತೆಗೆ ಅವಕಾಶ ಇಲ್ಲ ಎಂದು ಸಂವಿಧಾನ ಹೇಳಿದೆ. ಹೀಗಾಗಿ ಇದು ಸಂವಿಧಾನಕ್ಕೆ ಮಾಡಿದ ಅಪಚಾರ.
ಇದು ಖರ್ಗೆ ಅವರಿಗೆ ಮಾಡಿದ ಅಪಮಾನ ಅಲ್ಲ. ಎಫ್ ಐ ಆರ್ ದಾಖಲಿಸುವ ಮೂಲಕ ರಾಹುಲ್ ಗಾಂಧಿಯವರನ್ನೂ ಅವಮಾನಿಸುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ.
ಅವರೇನು ತಪ್ಪು ಮಾಡಿದ್ದಾರೆ. ಶುದ್ಧೀಕರಣ ಕೆಲಸ ಪ್ರಶ್ನಿಸಿದ್ದಾರೆ ಅಷ್ಟೇ. ಇಷ್ಟಕ್ಜೇ ದಲಿತರ ಮೇಲಿನ ದೌರ್ಜನ್ಯ ಕೇಸು ದಾಖಲಿಸಲಾಗಿದೆ. ಇದು ಅತ್ಯಂತ ಖೇದಕರ.
ಸಂವಿಧಾನದ ಪ್ರಕಾರ ಯಾರು ಅಸ್ಪೃಶ್ಯತೆ ಆಚರಣೆ ಮಾಡಿದ್ಸಾರೆ. ಅವರ ಮೇಲೆ ಕೇಸು ಹಾಕಬೇಕು. ಆದರೆ ದುರುದ್ದೇಶಪೂರ್ವಕವಾಗಿ ರಾಹುಲ್ ಗಾಂಧಿಯವರ ವಿರುದ್ಧ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.
ಏನಾದರೂ ಮಾಡಿ ರಾಹುಲ್ ಅವರ ಬಾಯಿ ಮುಚ್ಚಿಸಬೇಕು ಎಂದು ಬಿಜೆಪಿ ತೀರ್ಮಾನಿಸಿದಂತಿದೆ. ಈ ಹಿಂದೆ ಲೋಕಸಭೆಯಲ್ಲಿ ಕೇಂದ್ರ ಸರ್ಕಾರವನ್ನ ಟೀಕೆ ಮಾಡಿದಾಗಲೂ ರಾಹುಲ್ ಗಾಂಧಿಯವರ ಮೇಲೆ ಕೇಸು ದಾಖಲಾಗಿಸಲಾಗಿತ್ತು. ಅವರ ಸದಸ್ಯತ್ವವನ್ನೂ ರದ್ದು ಮಾಡಿದ್ದರು. ಕೊನೆಗೆ ಕಾನೂನಿನ ಮೊರೆ ಹೋದಾಗ ನ್ಯಾಯಾಲಯ ಕೇಸು ರದ್ದು ಮಾಡಿತು.
ರಾಹುಲ್ ಗಾಂಧಿಯವರು ಸಂವಿಧಾನದ ಪರ. ಅಸ್ಪೃಶ್ಯತೆ ವಿರುದ್ಧ. ಆದರೆ ಮನುವಾದಿಗಳಾದ ಬಿಜೆಪಿಯವರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ.
ಬಿಜೆಪಿಯವರಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ರಾಹುಲ್ ಗಾಂಧಿಯವರ ವಿರುದ್ಧ ಕೇಸು ದಾಖಲು ಮಾಡಿರುವುದು ಘೋರ ಅಪರಾದ. ಇದನ್ನು ಸಹಿಸಲು ಆಗದು. ಇದರ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ ಆಗಬೇಕು.
ಸಿಎಂ ಡಿ ಕೆ ಶಿವಕುಮಾರ್ ಅವರು ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕದಾಂಪೂರ ಗ್ರಾಮದಲ್ಲಿ ರೈತರ ಜಮೀನಿಗೆ ಮಂಗಳವಾರ ಭೇಟಿ ನೀಡಿ ಸ್ಥಳೀಯ ರೈತರೊಂದಿಗೆ ಚರ್ಚೆ ನಡೆಸಿದರು.
ಈ ಬಾರಿ ಬರ ಪರಿಸ್ಥಿತಿಯಿಂದ ಬೆಳೆಗಳು ಹಾಳಾಗಿವೆ. ಗದಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರದಿಂದ ತತ್ತರಿಸಿವೆ. ಹೀಗಾಗಿ ಬಾಕಿ ಇರುವ ಜಿಲ್ಲೆಯ ಆರು ತಾಲ್ಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಂತೆ ರೈತರು ಮನವಿ ಮಾಡಿದರು.
ರೈತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, "ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಮತ್ತಷ್ಟು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇವೆ. ಪರಿಸ್ಥಿತಿ ಅಧ್ಯಯನ ಬಳಿಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ, ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ಬರ ತಾಲ್ಲೂಕು ಘೋಷಣೆ ಮಾಡಲಾಗುವುದು" ಎಂದು ಭರವಸೆ ನೀಡಿದರು.
ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ : ಸಿದ್ದರಾಮಯ್ಯ
ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಶೂದ್ರ ಸೇವಾ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಭಾಷಣ.
ಜಾತಿ ವ್ಯವಸ್ಥೆ ಮೂಲಕ ಯಾರನ್ನೂ ಕೀಳಾಗಿ ಕಾಣಬಾರದು.
ಚತುವರ್ಣ ವ್ಯವಸ್ಥೆಯನ್ನು ಮನುವಾದಿಗಳು ಈ ದೇಶದಲ್ಲಿ ಉದ್ದೇಶಪೂರ್ವಕಾಗಿ ಸೃಷ್ಟಿ ಮಾಡಿದರು.
ಜಾತಿ ವ್ಯವಸ್ಥೆ ಹೋಗಬೇಕಾದರೆ ಸಮಾನತೆಯ ಸಮಾಜ ನಿರ್ಮಾಣ ಆಗಬೇಕು. ಶೂದ್ರ ವರ್ಗ ಅನೇಕ ವರ್ಷಗಳ ಕಾಲ ಅಕ್ಷರ ಸಂಸ್ಕೃತಿ, ಅವಕಾಶಗಳಿಂದ ದೂರ ಇತ್ತು.
ಶೂದ್ರ ವರ್ಗದವರು ಮೇಲ್ವರ್ಗದವರ ಜೊತೆ ಸ್ಪರ್ಧೆ ಮಾಡುವುದು ಅಸಾಧ್ಯ. ಅಕ್ಷರ ವಂಚಿತರಿಗೆ ಅಕ್ಷರ ಕಲಿತವರಿಂದ ಸೋಲಾಗುವುದು ಸಾಮಾನ್ಯ.
ನಮ್ಮಲ್ಲಿನ ಭಿನ್ನಾಭಿಪ್ರಾಯಗಳ ಪರಿಣಾಮ ಬ್ರಿಟಿಷರು ನಮ್ಮನ್ನು ಆಳಿದರು. ಹೀಗಾಗಿ ಭಿನ್ನಾಭಿಪ್ರಾಯ ಮರೆತು ಎಲ್ಲ ವರ್ಗಗಳು ಒಂದಾಗಬೇಕು.
ಅಸಮಾನತೆ ತೊಲಗಿ ಸಮ ಸಮಾಜ ನಿರ್ಮಾಣ ಆಗಬೇಕು ಎಂಬುದು ಸಂವಿಧಾನದ ಆಶಯ. ಬುದ್ಧ, ಬಸವ, ಅಂಬೇಡ್ಕರ್ ಅವರು ಹೇಳಿದ್ದೂ ಇದನ್ನೇ.
ಪಟ್ಟಭದ್ರ ಹಿತಾಸಕ್ತಿಗಳು ನಮ್ಮನ್ನು ಒಂದಾಗಲು ಬಿಡುವುದಿಲ್ಲ. ಜಾತಿ ಹೋಗಬೇಕಾದರೆ ವಿದ್ಯಾವಂತರು ವೈಜ್ಞಾನಿಕವಾಗಿ ಆಲೋಚನೆ ಮಾಡುವುದನ್ನು ಕಲಿಯಬೇಕು.
ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಮೌಢ್ಯ ಪ್ರತಿಬಂಧಕ ಕಾಯಿದೆ ಜಾರಿಗೆ ಬಂತು. ಆದರೆ, ಸಮರ್ಪಕವಾಗಿ ಜಾರಿಗೆ ಬಂದಿಲ್ಲ. ಇದಕ್ಕೆ ವಿದ್ಯಾವಂತರೂ ಕಾರಣ. ವಿದ್ಯಾವಂತರಲ್ಲಿ ಬಹುಪಾಲು ಈಗಲೂ ಮೌಢ್ಯ, ಕಂದಾಚಾರಗಳನ್ನ ಪಾಲನೆ ಮಾಡುತ್ತಾರೆ.
ಇಂದಿನ ಪೀಳಿಗೆ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸಿಕೊಳ್ಳದಿದ್ದರೆ ಸಮಾನತೆಯ ಸಮಾಜ ನಿರ್ಮಾಣ ಅಸಾಧ್ಯ. ಜಾತಿ ವ್ಯವಸ್ಥೆಯೂ ಹೋಗದು.
ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಅಸಮಾನತೆ ನಿವಾರಣೆಗೆ ಸಹಾಯಕ. ವ್ಯವಸ್ಥೆ ಬದಲಾವಣೆಗೆ ಎಲ್ಲರ ಪ್ರಯತ್ನ ಅಗತ್ಯ. ಇದಕ್ಕೆ ಸಮಯವೂ ಬೇಕು. ಸರಿಯಾದ ಮಾರ್ಗದಲ್ಲಿ ಹೋದಾಗ ಪ್ರಯತ್ನಕ್ಕೆ ಯಶ ಸಿಗುತ್ತದೆ.
ಸಂಘದ ಅಧ್ಯಕ್ಷ, ಶೂದ್ರ ಪತ್ರಿಕೆ ಸಂಪಾದಕ ರಾಮೇಗೌಡ, ಸಂಚಾಲಕ ಮುರಳೀದರ ಹಾಲಪ್ಪ ಉಪಸ್ಥಿತರಿದ್ದರು.
gadinudi kannada
ಜನರೇ ಮಾಲೀಕರು, ಸರ್ಕಾರಗಳು ಜನರಿಗೆ ಉತ್ತರದಾಯಿಯಾಗಿರಬೇಕು
ಉಳಿದ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿ
ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ - ಸಿದ್ದರಾಮಯ್ಯ ವಿಶ್ವಾಸ
ಬೆಂಗಳೂರು, ಸೆಪ್ಟೆಂಬರ್ 10 :
ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅವರ ನೇತೃತ್ವದ ಸರ್ಕಾರವು ಇಂದಿಗೆ 100 ದಿನಗಳನ್ನು ಪೂರೈಸಿದೆ. ಅದರ ಜ್ಞಾಪಕಾರ್ಥವಾಗಿ ಸರ್ಕಾರ ಈ ಆಚರಣೆಯನ್ನು ಮಾಡುತ್ತಿದೆ. 100 ದಿನಗಳು, ಇದೊಂದು ಸಂಭ್ರಮಾಚರಣೆಯಲ್ಲ; ಈ 100 ದಿನಗಳಲ್ಲಿ ನಾವು ಸರಿಯಾದ ದಾರಿಯಲ್ಲಿ ನಡೆಯುತ್ತಿದೆಯೋ ಅಥವಾ ಇಲ್ಲವೋ ಎಂಬುದನ್ನು ಜನರ ಮುಂದಿಡುವಂತಹ ಒಂದು ಜವಾಬ್ದಾರಿಯಾಗಿದೆ. ಆ ಜವಾಬ್ದಾರಿಯನ್ನು ಈ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಆಯೋಜಿಸಿದ್ದ "ದೃಢ ಕರ್ನಾಟಕದ ಸಂಕಲ್ಪ - 100 ದಿನಗಳ ಯಶಸ್ವಿ ಪೂರೈಕೆ" ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿದ್ದೇವೆ. ಜನರು ಇಲ್ಲಿ ಮಾಲೀಕರು, ನಾವು ಜನರಿಗೆ ಏನು ವಾಗ್ದಾನಗಳನ್ನು ಕೊಟ್ಟಿದ್ದೇವೆ, ಆ ವಾಗ್ದಾನಗಳನ್ನು ಜಾರಿ ಮಾಡುತ್ತಿದ್ದೇವೆಯೋ? ಇಲ್ಲವೋ? ಎನ್ನುವುದು ಅದು ಬಹಳ ಮುಖ್ಯ. ಸಮಾಜದ ಅಸಮಾನತೆಯನ್ನು ಹೋಗಲಾಡಿಸಬೇಕು. ಸಮ ಸಮಾಜವನ್ನು ನಿರ್ಮಾಣ ಮಾಡಬೇಕು. ನಾವು ಸಮ ಸಮಾಜ ನಿರ್ಮಾಣ ಮಾಡದೆ ಹೋದರೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆಯುತ್ತಿದ್ದೇವೆ ಎಂಬ ಭಾವನೆಯನ್ನು ವ್ಯಕ್ತವಾಗುತ್ತದೆ ಎಂದರು.
ಸಮಾಜದಲ್ಲಿ ಇರುವ ಅಸಮಾನತೆ, ಬಡತನ, ನಿರುದ್ಯೋಗ, ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಹೆಚ್ಚು ಮಾಡುವಂತಹ ಪ್ರಯತ್ನವನ್ನು ಮಾಡಬೇಕು. ನಾವು ಅಧಿಕಾರಕ್ಕೆ ಬಂದು ಸೆಪ್ಟೆಂಬರ್ 14ಕ್ಕೆ 3 ವರ್ಷ 4 ತಿಂಗಳು ಪೂರೈಸುತ್ತದೆ. ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಇಂದಿಗೆ 100 ದಿನಗಳು ಆಗುತ್ತದೆ. 100 ದಿನದಲ್ಲಿ ಏನು ಮಾಡಿದ್ದೇನೆ ಎಂಬ ಕೈಪಿಡಿ ಇಂದು ಬಿಡುಗಡೆಯಾಗಿದೆ. ಮುಖ್ಯವಾದಂತಹ ಇಲಾಖೆಗಳಲ್ಲಿ ಮಾಡಿರುವಂತಹ ಸಾಧನೆಗಳಳನ್ನು ಒಳಗೊಂಡಿರುವಂತಹ ಕೈಪಿಡಿಯನ್ನು ಜನರ ಮುಂದಿಟ್ಟಿದ್ದಾರೆ ಎಂದರು.
ಯಾವುದೇ ಸರ್ಕಾರ ಜನರಿಗೆ ಉತ್ತರದಾಯಿಯಾಗಿ ನಡೆದುಕೊಳ್ಳಬೇಕು. ಅದು ಸರ್ಕಾರದ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಮೂಲ ಆಶಯ. ನಾವು 2023ರ ಮೇ 20ರಂದು ಅಧಿಕಾರಕ್ಕೆ ಬಂದೆವು. ಅದಕ್ಕಿಂತ ಮುಂಚೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ ಶಿವಕುಮಾರ್ ಹಾಗೂ ನಾವೆಲ್ಲರೂ ಜನತೆಯ ಮುಂದೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದೆವು. ಈ ವೇಳೆ ವಿರೋಧ ಪಕ್ಷದವರು ಟೀಕೆ ಮಾಡಿದ್ದರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ, ಒಂದು ವೇಳೆ ಜಾರಿ ಮಾಡಿದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗುತ್ತದೆ ಎಂದಿದ್ದರು. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣ ಇರುವುದಿಲ್ಲ ಎಂದು ಬಹಳ ಟೀಕೆಗಳನ್ನು ಮಾಡಿದ್ದರು. ಪ್ರಧಾನ ಮಂತ್ರಿ ಆದಿಯಾಗಿ ಎಲ್ಲರೂ ಕೂಡ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದರು.
ನಾನು ಮುಖ್ಯಮಂತ್ರಿಯಾಗಿ, ಡಿ.ಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ 3 ವರ್ಷಕ್ಕೂ ಹೆಚ್ಚು ಕಾಲ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೆವು. ಅಧಿಕಾರಕ್ಕೆ ಬಂದ ಮೊದಲನೇ ವರ್ಷದಲ್ಲಿಯೇ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೆವು. ಪ್ರತಿವರ್ಷ ಸುಮಾರು 52 ಸಾವಿರ ಕೋಟಿ ರೂ. ಖರ್ಚಾಗುತ್ತದೆ. ಅಷ್ಟೊಂದು ಹಣವನ್ನು ಭರಿಸಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದರು. 52 ಸಾವಿರ ಕೋಟಿ ರೂ. ಹಣವನ್ನು ಸರ್ಕಾರವೇ ಭರಿಸಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಜನರಿಗೆ ತಲುಪಿಸುವಂತ ಕೆಲಸವನ್ನು ಮಾಡಿತ್ತು ಎಂದು ತಿಳಿಸಿದರು.
ಸರ್ಕಾರ ಸಮಾಜದಲ್ಲಿ ಇರುವಂತಹ ಎಲ್ಲ ಜಾತಿಯ ಬಡವರನ್ನು ಗುರುತಿಸಿ 5 ಗ್ಯಾರಂಟಿ ಯೋಜನೆಗಳನ್ನು ಅವರಿಗೆ ತಲುಪಿಸುವ ಕೆಲಸವನ್ನು ಮಾಡಿದೆ. ಅದರ ಜೊತೆಗೆ ನಮ್ಮ ಪ್ರಣಾಳಿಕೆ ಮೂಲಕ ಇನ್ನೂ ಬೇರೆ ವಾಗ್ದಾನಗಳನ್ನು ಮಾಡಿದ್ದೆವು. ಅವುಗಳನ್ನು ಕೂಡ ಪೂರೈಸುವ ಕೆಲಸವನ್ನು ಮಾಡಲಾಯಿತು. ಅಭಿವೃದ್ಧಿ ಕೆಲಸಗಳಿಗೆ ಕೂಡ ಹಣವನ್ನು ಒದಗಿಸುವ ಕೆಲಸವನ್ನು ಮಾಡಿದ್ದೇವೆ. ಅಭಿವೃದ್ಧಿ ಕೆಲಸಗಳು ಯಾವುದೂ ಕುಂಠಿತವಾಗಿಲ್ಲ. ಕಾಂಗ್ರೆಸ್ ಪಕ್ಷ ಮಾತ್ರ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಬಜೆಟ್ ಅನ್ನು ರೂಪಿಸುತ್ತದೆ. ಉಳಿದ ಎಲ್ಲ ರಾಜಕೀಯ ಪಕ್ಷಗಳು ಪ್ರಣಾಳಿಕೆಯನ್ನು ಹೊರಡಿಸುತ್ತವೆ. ಆದರೆ ಅವುಗಳನ್ನು ಕಣ್ಣೆತ್ತಿಯೂ ನೋಡುವುದಿಲ್ಲ ಎಂದು ಟೀಕಿಸಿದರು.
ಪ್ರಣಾಳಿಕೆಯಲ್ಲಿ ಇರುವ ಭರವಸೆಗಳನ್ನು ಒಂದೇ ವರ್ಷದಲ್ಲಿ ಜಾರಿ ಮಾಡಬೇಕು ಎಂದೇನಿಲ್ಲ. 5 ವರ್ಷಗಳು ಅವಕಾಶವಿದೆ. ಆ 5 ವರ್ಷಗಳಲ್ಲಿ ಎಲ್ಲ ಭರವಸೆಗಳನ್ನು ಈಡೇರಿಸುವಂತಹ ಕೆಲಸವನ್ನು ಮಾಡಬೇಕು. ಉದಾಹರಣೆಗೆ 2013ರಲ್ಲಿ ನಾವು ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ, ಪ್ರಣಾಳಿಕೆಯ ಮೂಲಕ ಜನರಿಗೆ 165 ವಾಗ್ದಾನಗಳನ್ನು ಕೊಟ್ಟಿದ್ದೇವು. ಅವುಗಳ ಪೈಕಿ 158ಕ್ಕೂ ಹೆಚ್ಚು ವಾಗ್ದಾನಗಳನ್ನು ಜಾರಿ ಮಾಡಿದ್ದೇವೆ. ಯಾವುದಾದರೂ ಪಕ್ಷ ಅಥವಾ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಿದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಬಿಜೆಪಿಯವರು, ಜೆಡಿಎಸ್ನವರು ಸೇರಿದಂತೆ ಬೇರೆ ಯಾವ ಪಕ್ಷದವರೂ ಕೂಡ ಇದನ್ನು ಮಾಡಿಲ್ಲ. ನಾವು ಎಲ್ಲ ಭರವಸೆಗಳನ್ನು ಈಡೇರಿಸುವ ಜೊತೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಕೃಷಿಭಾಗ್ಯ, ಶೂ ಭಾಗ್ಯ, ಪಂಚ ಗ್ಯಾರಂಟಿ ಯೋಜನೆಗಳು ಹೀಗೆ ಅನೇಕ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆಎಂದು ನುಡಿದರು.
ಎಷ್ಟೇ ಟೀಕೆಗಳು ಬಂದರೂ, ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಬೇಕು. ಯಾಕೆಂದರೆ ಗ್ಯಾರಂಟಿ ಯೋಜನೆಗಳು ಅಸಮಾನತೆಯನ್ನು ತೊಲಗಿಸುವಂತಹ ಕಾರ್ಯಕ್ರಮಗಳಾಗಿವೆ. ಹೀಗಾಗಿ ಅವುಗಳು ಮುಂದುವರಿಬೇಕು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು 'ಎಲ್ಲಿಯವರೆಗೆ ಈ ದೇಶದಲ್ಲಿ ಅಸಮಾನತೆ ಹೋಗುವುದಿಲ್ಲವೋ ಅಲ್ಲಿಯವರೆಗೆ ಸಮ ಸಮಾಜವನ್ನು ನಿರ್ಮಾಣವನ್ನು ಮಾಡಲು ಸಾಧ್ಯವಿಲ್ಲ' ಎಂದಿದ್ದರು. ಸ್ವಾತಂತ್ರ್ಯ ಬಂದು ಇನ್ನೇನೂ 80 ವರ್ಷಗಳಾಗಲಿವೆ, ಸಂವಿಧಾನ ಬಂದು 76 ವರ್ಷಗಳಾಗಿ ಹೋಗಿದೆ. ಸಂವಿಧಾನದ ಆಶಯಗಳನ್ನು ಪೂರೈಸುವಂತದ್ದು ಯಾವುದೇ ಚುನಾಯಿತ ಸರ್ಕಾರದ ಕರ್ತವ್ಯವಾಗಿದೆ. ಇದನ್ನು ನಾವು ಅರ್ಥಮಾಡಿಕೊಳ್ಳಬೇಕಾಗುತ್ತದೆ ಎನ್ನುವ ಎಚ್ಚರಿಕೆಯ ನುಡಿಗಳನ್ನಾಡಿದರು.
ಎಲ್ಲ ಜನರಿಗೆ ಕೂಡ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಶಕ್ತಿಯನ್ನು ತುಂಬಬೇಕು. ಬಹುಶಃ ಕಾಂಗ್ರೆಸ್ ಪಕ್ಷದ ಧ್ಯೇಯ, ಸಿದ್ಧಾಂತ ಕಟ್ಟಕಡೆಯ ಜನರಿಗೂ ನ್ಯಾಯವನ್ನು ಒದಗಿಸಿಕೊಡುವಂತದ್ದಾಗಿದೆ. ಎಲ್ಲರಿಗೂ ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣ ಮಾಡುವಂತದ್ದು ಸರ್ಕಾರದ ಕರ್ತವ್ಯ. ಸಂವಿಧಾನದ ಕರ್ತೃಗಳು ಈ ಕನಸನ್ನು ಕಂಡಿದ್ದರು, ಆ ಕನಸನ್ನು ನನಸಾಗಿ ಮಾಡುವಂತಹದ್ದು ನಮ್ಮ ಕರ್ತವ್ಯವಾಗಿದೆ ಎಂದರು.
ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಅನೇಕ ಹೊಸ ಚಿಂತನೆಗಳು ಹಾಗೂ ಹೊಸ ಕಾರ್ಯಕ್ರಮಗಳನ್ನು ಜನರಿಗೆ ನೀಡುವ ಕೆಲಸ ಮಾಡುತ್ತಿದೆ. ಈ ಸರ್ಕಾರ ಸರಿಯಾದ ದಾರಿಯಲ್ಲಿ ನಡೆಯುತ್ತಿದೆ ಎಂದು ನನಗೆ ಅನಿಸುತ್ತಿದೆ ಎಂದ ಅವರು ಅದಕ್ಕಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಹಾಗೂ ಅವರ ಸಂಪುಟದ ಎಲ್ಲ ಸಚಿವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಇನ್ನೂ ಒಂದೂವರೆ ವರ್ಷಕ್ಕೂ ಹೆಚ್ಚು ಕಾಲಾವಕಾಶವಿದೆ. ಉಳಿದಿರುವ ಅವಧಿಯಲ್ಲಿ ಸರ್ಕಾರ ಜನರಿಗೆ ನೀಡಿರುವ ಎಲ್ಲಾ ಭರವಸೆಗಳು ಹಾಗೂ ವಾಗ್ದಾನಗಳನ್ನು ಈಡೇರಿಸುವ ಕೆಲಸ ಮಾಡಲಿ ಎಂದು ಆಶಿಸುತ್ತೇನೆ. ಕಾಂಗ್ರೆಸ್ನ ಇತಿಹಾಸವೇ ಬಡವರಿಗೆ ಶಕ್ತಿ ನೀಡುವಂತಹದ್ದು. ಸಮಾಜದಲ್ಲಿನ ದೌರ್ಜನ್ಯ ಮತ್ತು ಶೋಷಣೆಯನ್ನು ನಿಲ್ಲಿಸುವುದು, ಎಲ್ಲರಿಗೂ ಸಮಾನ ಅವಕಾಶಗಳನ್ನು ಒದಗಿಸುವುದು ಕಾಂಗ್ರೆಸ್ನ ಮೂಲ ಆಶಯವಾಗಿದೆ ಎಂದು ಪಕ್ಷದ ಧ್ಯೇಯೋದ್ದೇಶಗಳನ್ನು ಸ್ಮರಿಸಿದರು.
ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಈ ರಾಜ್ಯದ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದಾರೆ. ಹಾಗಾಗಿ ವಿರೋಧ ಪಕ್ಷಗಳು ಮಾಡುವ ಟೀಕೆಗಳಿಗೆ ಯಾವುದೇ ಕಾರಣಕ್ಕೂ ತಲೆಕೆಡಿಸಿಕೊಳ್ಳಬೇಡಿ ಎಂದು ಸಿದ್ದರಾಮಯ್ಯ ಅವರು ಸಿಎಂಗೆ ವಿಶ್ವಾಸ ತುಂಬಿದರು.
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಮಾಡಿರುವ ಭ್ರಷ್ಟಾಚಾರ ನಮ್ಮ ಕಣ್ಣ ಮುಂದೆಯೇ ಇದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವುದು ವಿಪರ್ಯಾಸ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಅವರ ಸರ್ಕಾರದಲ್ಲಿ ವಿಜಯೇಂದ್ರ ಅವರು ತಾವೇ ಮುಖ್ಯಮಂತ್ರಿ ಎಂಬಂತೆ ವರ್ತಿಸುತ್ತಿದ್ದರು. ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಅಂಥವರು ಇಂದು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವುದನ್ನು ನೋಡಿದಾಗ ನಗಬೇಕೋ, ಅಳಬೇಕೋ ಗೊತ್ತಾಗುವುದಿಲ್ಲ ಎಂದು ಇತಿಹಾಸವನ್ನು ನೆನಪಿಸಿದರು.
ಹತ್ತು ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ನಡೆಯಿತು. ಈ ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇತ್ತು. ಆದರೆ ಅದರ ಬಗ್ಗೆ ಸಮರ್ಪಕವಾಗಿ ಚರ್ಚೆ ಮಾಡಲಿಲ್ಲ. ನಾಗೇಂದ್ರ ಅವರ ರಾಜೀನಾಮೆಗೆ ಪಾದಯಾತ್ರೆ ಮಾಡಿದರು. ಆದರೆ ರಾಜ್ಯ ಎದುರಿಸುತ್ತಿದ್ದ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿಲ್ಲ. ಈಗ ಮತ್ತೆ ಪಾದಯಾತ್ರೆ ಮಾಡುತ್ತಿದ್ದಾರೆ. ಇದು ರಾಜಕೀಯ ಗಿಮಿಕ್ ಅಷ್ಟೇ. ಯಾವ ಸಮಸ್ಯೆಗಾಗಿ ಈ ಪಾದಯಾತ್ರೆ? ಕೇವಲ ರಾಜಕೀಯ ಕಾರಣಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಸರ್ಕಾರವಾಗಲಿ, ಮುಖ್ಯಮಂತ್ರಿಗಳಾಗಲಿ ಇದಕ್ಕೆ ಸೊಪ್ಪು ಹಾಕುವ ಅಗತ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.
ಈ ಹಿಂದೆ ನಾನು, ಪರಮೇಶ್ವರ್ ಅವರು ಅನೇಕ ಬಾರಿ ಪಾದಯಾತ್ರೆ ಮಾಡಿದ್ದೇವೆ. ಕೂಡಲ ಸಂಗಮದವರೆಗೂ ಪಾದಯಾತ್ರೆ ಮಾಡಿದ್ದೇವೆ. ನಮ್ಮ ಪಾದಯಾತ್ರೆಗಳು ಜನರ ಸಮಸ್ಯೆಗಳಿಗಾಗಿ, ಜನರ ಹಿತಕ್ಕಾಗಿ ನಡೆದವು. ಆದರೆ ಬಿಜೆಪಿಯವರು ಇಂದು ಯಾವುದೇ ಜನಪರ ವಿಚಾರವಿಲ್ಲದೆ ಕೇವಲ ರಾಜಕೀಯಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಯಾವುದೇ ಜನಪರ ಕೆಲಸ ಮಾಡಲಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿದ್ದರು. ಈಗ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಉದ್ದೇಶದಿಂದ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿಯ ನಾಲ್ಕು ವರ್ಷಗಳ ಆಡಳಿತದಲ್ಲಿ ಇಬ್ಬರು ಮುಖ್ಯಮಂತ್ರಿಗಳು ಬದಲಾದರು. ಹಿಂದುಳಿದ ಜಾತಿಗಳಿಗಾಗಿ ಕೇವಲ ಐದು ಹಾಸ್ಟೆಲ್ಗಳನ್ನು ನಿರ್ಮಿಸಿದರು. ನಾವು ಅಧಿಕಾರದಲ್ಲಿದ್ದಾಗ 500ಕ್ಕೂ ಹೆಚ್ಚು ಹಾಸ್ಟೆಲ್ಗಳನ್ನು ನಿರ್ಮಿಸಿದ್ದೇವೆ. ಬಡವರಿಗೆ, ರೈತರಿಗೆ, ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ, ಮಹಿಳೆಯರಿಗೆ ಅವರು ಏನು ಮಾಡಲಿಲ್ಲ. ಇದೇ ನೋಡಿ ಅವರ ಇತಿಹಾಸ.
ಈಗಾಗಲೇ ರಾಜ್ಯದ ಬರಗಾಲದ ವಿಚಾರವಾಗಿ ಪರಮೇಶ್ವರ್ ಅವರು ಮಾತನಾಡಿದ್ದಾರೆ. ಈ ಹಿಂದೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. ಕೇಂದ್ರದ ತಂಡ ಬಂದು ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿಲ್ಲ. ಕೊನೆಗೆ ನಾವು ಸುಪ್ರೀಂ ಕೋರ್ಟ್ನ ಮೆಟ್ಟಿಲೇರಬೇಕಾಯಿತು. ಅದರ ನಂತರ ಸುಮಾರು ಮೂರೂವರೆ ಸಾವಿರ ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿತ್ತು ಎಂದು ಕೇಂದ್ರದ ನಿರ್ಲಕ್ಷ್ಯ ಧೋರಣೆಯ ಬಗ್ಗೆ ಆಕ್ರೋಶ ಹೊರಹಾಕಿದರು.
ಈಗಲೂ ನಾವು 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದೇವೆ. ಕೇಂದ್ರಕ್ಕೆ ಮನವಿ ಸಲ್ಲಿಸಬೇಕು. ಕೇಂದ್ರದ ತಂಡ ಬಂದು ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ನೀಡಬೇಕು. ಆದರೆ ಕೇಂದ್ರದ ತಂಡ ಬಂದು ವರದಿ ನೀಡಿದ ನಂತರವೂ ಕೇಂದ್ರ ಸರ್ಕಾರ ಅನುದಾನ ನೀಡುತ್ತದೆ ಎಂಬ ನಂಬಿಕೆ ನಮಗಿಲ್ಲ. ಕೊಟ್ಟರೂ ಕೂಡ 2000ನೇ ಇಸವಿಯಲ್ಲಿ ರೂಪಿಸಿದ ನಿಯಮಾವಳಿಗಳ ಪ್ರಕಾರವೇ ಅನುದಾನ ನೀಡಲಾಗುತ್ತದೆ. ಆ ನಿಯಮಾವಳಿಗಳನ್ನು ಬದಲಾಯಿಸಬೇಕು, ಇಲ್ಲವಾದರೆ ರಾಜ್ಯಕ್ಕೆ ಸಿಗುವ ಅನುದಾನ ಬಹಳ ಕಡಿಮೆಯಾಗುತ್ತದೆ ಎಂದು ನಾನು ಅನೇಕ ಬಾರಿ ಪ್ರಧಾನಮಂತ್ರಿಗಳಿಗೆ ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದೇನೆ. ಆದರೆ ಈವರೆಗೂ ಆ ನಿಯಮಾವಳಿಗಳನ್ನು ಬದಲಾವಣೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಹೀಗಾಗಿ ಕೇಂದ್ರ ಸರ್ಕಾರ ನಿಮ್ಮ ನೆರವಿಗೆ ಧಾವಿಸುತ್ತದೆ ಎಂಬ ನಂಬಿಕೆಯ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಬೇಡಿ. ಕೇಂದ್ರದ ನೆರವಿಗಾಗಿ ಕಾಯುತ್ತಾ ಕುಳಿತುಕೊಳ್ಳಬೇಡಿ. ನೀವು ಈಗಾಗಲೇ ಯಾವ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೀರೋ, ಇನ್ನೂ ಯಾವುದಾದರೂ ತಾಲೂಕುಗಳನ್ನು ಘೋಷಣೆ ಮಾಡಬೇಕಿದ್ದರೆ ಅದನ್ನೂ ಮಾಡಿ. ಸೆಪ್ಟೆಂಬರ್ ತಿಂಗಳು ಮುಗಿದ ನಂತರ ಮಳೆ ಬರುವ ಸಾಧ್ಯತೆ ಕಡಿಮೆ. ನಮ್ಮ ಕೆರೆ-ಕಟ್ಟೆಗಳು ತುಂಬುವುದಿಲ್ಲ. ಆದ್ದರಿಂದ ಈ ವಿಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಈಗಾಗಲೇ ನೀವು ರೂಪಿಸಿರುವ ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತನ್ನಿ. ಹಳೆಯ ಕಾರ್ಯಕ್ರಮಗಳನ್ನೂ ಸಮರ್ಪಕವಾಗಿ ಜಾರಿಗೆ ತನ್ನಿ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿ ಎನ್ನುವ ಕಿವಿಮಾತು ಹೇಳಿದರು.
ನನಗೆ ಸಂಪೂರ್ಣ ವಿಶ್ವಾಸವಿದೆ. ನಿಮ್ಮ ಸರ್ಕಾರ ಜನಪರ ಸರ್ಕಾರ ಎಂಬ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಜನರಲ್ಲಿ ಈ ಭಾವನೆ ಮೂಡಿಸುವ ಕೆಲಸವನ್ನು ನೀವು ಮಾಡಬೇಕು. ಈ ನಾಡನ್ನು ದೃಢ ಕರ್ನಾಟಕವನ್ನಾಗಿ ಮಾಡುವ ಸಂಕಲ್ಪದೊಂದಿಗೆ ನೀವು ಹೊರಟಿದ್ದೀರಿ. ಅದರ ಕೈಪಿಡಿಯನ್ನೂ ಬಿಡುಗಡೆ ಮಾಡಲಾಗಿದೆ. ಯಾರು ಏನೇ ಮಾಡಿದರೂ, ಜನರ ಮುಂದೆ ಹೋಗುವಂತಹ ಕೆಲಸವನ್ನು ಮಾಡಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಮ್ಮ ಮಾಲೀಕರು. ಅವರ ಮುಂದೆ ಸರ್ಕಾರದ ಕೆಲಸಗಳನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡಿ. ‘ಪ್ರಜಾ ಸೇವೆ’ ಎಂಬ ಹೊಸ ಕಾರ್ಯಕ್ರಮ ತುಂಬಾ ಒಳ್ಳೆಯ ಕಾರ್ಯಕ್ರಮ. ಅದನ್ನು ಕಾಟಾಚಾರಕ್ಕೆ ಮಾಡಬೇಡಿ. ಪರಿಣಾಮಕಾರಿಯಾಗಿ ಮುಂದುವರಿಸಿ. ಪ್ರತಿಯೊಬ್ಬ ಸಚಿವರೂ ತಮ್ಮ ತಮ್ಮ ಜಿಲ್ಲೆಗಳಲ್ಲಿ ಜನಸಂದರ್ಶನ ನಡೆಸುವ ಕೆಲಸ ಮಾಡಬೇಕು. ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಒದಗಿಸುವ ಮೂಲಕ ನಿಜವಾದ ಪ್ರಜಾ ಸೇವೆ ಮಾಡಬೇಕು ಎಂದು ತಿಳಿಸಿದರು.
ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಕಾರ್ಮಿಕರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಇದನ್ನು ಸರ್ಕಾರ ಮಾಡುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
@siddaramaiah_express
@siddaramaiahmediaofficial
@mallikarjunkharge8172
@rahulgandhi
@DKShivakumarOfficial
6 days ago | [YT] | 548
View 13 replies
gadinudi kannada
ಜನ್ಮದಿನ ವಿಶೇಷ |
ಅಂಬೇಡ್ಕರ್ ವಿಚಾರಧಾರೆಯ ಪರಿಚಾರಕ ಎಂ.ಪಿ. ಗಿರೀಶ್
ಸಮಾಜ ಬದಲಾಗಬೇಕು, ಜನರು ಬದಲಾಗಬೇಕು ಎಂದು ಬಯಸುವ ’ನಾನು’ ಮೊದಲು ಆ ಹಾದಿಯನ್ನು ತುಳಿಯಬೇಕು. ವ್ಯಕ್ತಿ ಬದಲಾವಣೆಯೇ ಸಮಾಜ ಬದಲಾವಣೆಗೆ ಮುನ್ನುಡಿ. ಆ ನಂತರ ಸಾಮುದಾಯಿಕ ಹೊಣೆಗಾರಿಕೆ ಮತ್ತು ಪಾಲ್ಗೊಳ್ಳುವಿಕೆ ತನ್ನಿಂದ ತಾನೇ ಆಗುತ್ತದೆ ಎಂದು ನಂಬಿದ್ದಾರೆ ಎಂ.ಪಿ. ಗಿರೀಶ್.
’ಜೀವನವು ಸುಧೀರ್ಘವಾಗಿರುವುದಕ್ಕಿಂತ ಶ್ರೇಷ್ಠವಾಗಿರಬೇಕು’
– ಡಾ.ಬಿ.ಆರ್.ಅಂಬೇಡ್ಕರ್
ಹೌದು, ಬಾಬಾ ಸಾಹೇಬರ ಈ ಉಕ್ತಿ ಬಹಳ ಶ್ರೇಷ್ಠವಾದುದು. ಜೀವ ಜಗತ್ತಿಗೆ ಪ್ರವೇಶಿಸುವ ಯಾವುದೇ ಜೀವಿಗೆ ಅದರದ್ದೇ ಕಾರ್ಯಣಕಾರಣ ಇದ್ದೇ ಇರುತ್ತದೆ. ಅದಿಲ್ಲದೇ ಒಂದು ವಸ್ತುವಿನ ಸೃಷ್ಟಿ ಸಾಧ್ಯವೇ ಇಲ್ಲ. ಮನುಷ್ಯ ಕೂಡ ಇದರ ಒಂದು ಭಾಗ. ನಾವು ಹುಟ್ಟಿದ ಮೇಲೆ ಜೀವನದ ಸಾರ್ಥಕ್ಯವನ್ನು ಕಂಡುಕೊಳ್ಳಲೇಬೇಕು. ಆದರೆ ಬದುಕು ಸಾರ್ಥಕ ಎನಿಸಿಕೊಳ್ಳುವುದು ಹೇಗೆ?
ಕೊಟ್ಟ ಹಣ ಕ್ಷಣಿಕ.. ಕೊಡಿಸಿದ ಆಭರಣ ಅವಸರಕ್ಕೆ ಸೀಮಿತ.. ಕೂಡಿಸಿ ಕೊಟ್ಟ ಆಸ್ತಿ ತನ್ನವರಿಗೆ ಸೀಮಿತ.. ಇದೆಲ್ಲವನ್ನೂ ಬಿಟ್ಟು ಸಮಾಜವನ್ನು ವಿಶಾಲ ದೃಷ್ಟಿಯಲ್ಲಿ ಪರಿವರ್ತಿಸುವ ಸಂಕಲ್ಪ ಪ್ರತಿಯೊಬ್ಬರಿಂದಲೂ ಆಗಬೇಕು. ಅದನ್ನು ಬಾಬಾ ಸಾಹೇಬರು ಒಂದು ಸಾಲಿನಲ್ಲಿ ಹೀಗೆ ವಿವರಿಸಿದ್ದಾರೆ… ’ಶಿಕ್ಷಣವು ಸಿಂಹಿಣಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು…’
ಶಿಕ್ಷಣ ಎಂದರೆ ನಾಲ್ಕು ಗೋಡೆಗಳ ಮಧ್ಯೆ ಗುರು ಕಲಿಸಿದ್ದು ಮಾತ್ರವಲ್ಲ. ಬುದ್ಧ, ಬಸವಣ್ಣ, ಅಂಬೇಡ್ಕರ್ ಮೊದಲಾದ ಚಿಂತಕರ ಬದುಕನ್ನು ಅರಿತು ಸಮಾಜಕ್ಕೆ ಅರ್ಪಿಸುವುದು. ಈ ಮಹನೀಯರ ವಿಚಾರಧಾರೆಗಳನ್ನು ಹಂಚುವುದೂ ಒಂದು ಸಾಮಾಜಿಕ ಜವಾಬ್ದಾರಿ.
ಬಹುತೇಕರು ಇಂತಹ ವೈಚಾರಿಕ ಹಾದಿ ತುಳಿಯುವುದು ಅಪರೂಪ. ಆದರೆ, ಬೆಂಗಳೂರಿನಂತಹ ಮಾಯಾನಗರಿಯ ಮಡಿಲಲ್ಲೇ ಇರುವ ದೇವನಹಳ್ಳಿ ತಾಲೂಕಿನ ಮಲ್ಲಾಪುರದ ಎಂ.ಪಿ. ಗಿರೀಶ್ ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಹರಡುವುದೇ ನನ್ನ ಜೀವನದ ಸಂಕಲ್ಪ ಎಂದು ಬದುಕುತ್ತಿದ್ದಾರೆ. 2022ರಿಂದ ಈ ನಿಟ್ಟಿನಲ್ಲಿ ಅವರು ಕೈಗೊಂಡಿರುವ ಕಾರ್ಯಗಳು ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿವೆ.
’ಹುಟ್ಟು ಮತ್ತು ಸಾವಿನ ನಡುವಿನ ಅಂತರವೇ ಜೀವನ. ಈ ಅಂತರವನ್ನು ನೀವು ಎಷ್ಟು ವರ್ಷ ಬದುಕಿದ್ದೀರಿ ಎಂಬುದರಿಂದ ಅಳೆಯಲಾಗುವುದಿಲ್ಲ, ಬದಲಿಗೆ ಎಷ್ಟು ಜನರ ಹೃದಯದಲ್ಲಿ ಬದುಕಿದ್ದೀರಿ ಎಂಬುದರಿಂದ ಅಳೆಯಲಾಗುತ್ತದೆ’ ಹೀಗೆ ಬದುಕಿ ತೋರಿಸುತ್ತಿದ್ದಾರೆ ಎಂ.ಪಿ.ಗಿರೀಶ್.
ಗಿರೀಶ್ ಅವರಿಗೆ ಈಗ 37 ವರ್ಷ (ಸೆಪ್ಟೆಂಬರ್ 6). ತಮ್ಮ ಜನ್ಮ ದಿನವನ್ನೇ ಇವರು ಅಂಬೇಡ್ಕರ್ ವಿಚಾರ ಪ್ರಚಾರದ ಕರ್ಮದಿನವನ್ನಾಗಿ (ಕರ್ತವ್ಯದಿನ) ಪರಿವರ್ತಿಸಿಕೊಂಡಿದ್ದಾರೆ. 30 ವರ್ಷದವರೆಗೂ ಹುಟ್ಟುಹಬ್ಬವನ್ನೇ ಆಚರಿಸಿಕೊಳ್ಳದ ಅವರು ತಮ್ಮ ಅಪಾರ ಸ್ನೇಹ ವಲಯದ ಒತ್ತಾಯಕ್ಕೆ ಮಣಿದು 2022ರಲ್ಲಿ ಮೊದಲಬಾರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಅಂದು ಸುಮಾರು 5,೦೦೦ಕ್ಕೂ ಅಧಿಕ ಮಂದಿಗೆ ಊಟಹಾಕಿಸಿದ್ದರು. ಆದರೆ, ಆ ದಿನ ಗಿರೀಶ್ ಅವರ ಬದುಕಲ್ಲಿ ಸಾರ್ಥಕ ಬದಲಾವಣೆಗೆ ಆದಿ ಮೊದಲಾಯಿತು. ಅವತ್ತು ಅಂಬೇಡ್ಕರ್ ಅವರ ಬದುಕು, ಹೋರಾಟ, ವಿಚಾರಧಾರೆ ಮತ್ತು ತತ್ವಗಳನ್ನು ಇಡೀ ಸಮಾಜಕ್ಕೆ ತಲುಪಿಸಬೇಕು ಎನ್ನುವ ಮನೋಸಂಕಲ್ಪ ಅವರಿಗಾಗಿತ್ತು. ನನ್ನ ಜನ್ಮದಿನ ಅಂಬೇಡ್ಕರ್ ವಿಚಾರ ಹರಿವಿನ ಸಂಕಲ್ಪ ದಿನ ಆಗಬೇಕು ಎಂದು ಅವರು ಅಂದು ತೊಟ್ಟ ಸಂಕಲ್ಪ ಅನೂಚಾನವಾಗಿ ನಡೆದುಕೊಂಡು ಬರುತ್ತಿದೆ.
ಇದನ್ನೇ ಅಣ್ಣ ಬಸವಣ್ಣ,
’ಮತ್ತೊಂದ ಕಾಣದೆ, ಮತ್ತೊಂದ ಕೇಳದೆ,
ನಿಮ್ಮ ಶರಣರ ಪಾದವಲ್ಲದೆ
ಅನ್ಯವಿಷಯಕ್ಕೆಳಸದಂತೆ ಇರಿಸಯ್ಯಾ,
ಕೂಡಲಸಂಗಮದೇವಾ’ ಎಂದಿದ್ದು.
’ಹುಟ್ಟು ಮತ್ತು ಸಾವಿನ ಮಧ್ಯೆ ಇರುವ ಈ ಜೀವನದ ನಿಜವಾದ ಉದ್ದೇಶ ಜ್ಞಾನವನ್ನು ಪಡೆಯುವುದು ಮತ್ತು ಸ್ವಾರ್ಥವನ್ನು ಬಿಟ್ಟು ಇತರರಿಗಾಗಿ ಬದುಕುವುದು’ ಎಂಬ ಮಾತಿನಂತೆ ಗಿರೀಶ್ ಅವರು ಹೆಜ್ಜೆ ಹಾಕುತ್ತಿದ್ದಾರೆ.
2023ರಲ್ಲಿ ಮೊದಲ ಬಾರಿಗೆ 186 ಜನರನ್ನು ವಿಮಾನದಲ್ಲಿ ಮುಂಬೈಗೆ ಕರೆದೊಯ್ದಿದ್ದರು. ಡಾ. ಬಿ.ಆರ್.ಅಂಬೇಡ್ಕರ್ ಅವರ ಸಮಾಧಿ, ನಿವಾಸ, ಸ್ಮಾರಕ ಹೀಗೆ ಬದುಕು ಮತ್ತು ಹೋರಾಟದ ಐತಿಹ್ಯ ಸಾರುವ ಎಲ್ಲ ಸ್ಥಳಗಳ ಪರಿಚಯ ಮಾಡಿಸಿದ್ದರು. ಅಷ್ಟಕ್ಕೆ ನಿಲ್ಲಲಿಲ್ಲ ಅವರ ಈ ಯಾನ. ಪ್ರತಿವರ್ಷ ನೂರಾರು ಜನರನ್ನು ಮುಂಬೈಗೆ ಕರೆದೊಯ್ದು ಅಂಬೇಡ್ಕರ್ ಜೀವನ ದರ್ಶನ ಮಾಡಿಸುವ ಕೆಲಸ ನಿರಂತರವಾಗಿ ಸಾಗಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರು ಅಂಬೇಡ್ಕರ್ ಅವರನ್ನು ಅರಿತುಕೊಳ್ಳಲು ದೊಡ್ಡ ವೇದಿಕೆಯನ್ನೇ ಕಲ್ಪಿಸಿದ್ದಾರೆ ಗಿರೀಶ್.
ಎಲ್ಲ ಸಮುದಾಯವನ್ನೂ ಒಳಗೊಂಡು ಪ್ರವಾಸಕ್ಕೆ ಕೊಂಡೊಯ್ಯುವ ಮೂಲಕ ಅಂಬೇಡ್ಕರ್ ಅವರು ಯಾರೊಬ್ಬರ ವಿರೋಧಿಯಲ್ಲ. ಸರ್ವ ಸಮುದಾಯದ ಹಿತೈಷಿ ಎಂದು ನಿರೂಪಿಸುವ ಪರಿವರ್ತನೆಯ ಕೆಲಸ ಇವರಿಂದ ಆಗಿದೆ. ಅಷ್ಟೇ ಅಲ್ಲ, ವೀರಬ್ರಹ್ಮೇಂದ್ರ ಸ್ವಾಮಿಗಳ ಸಮಾಧಿ ಸೇರಿ ಹಲವು ಮಹನೀಯರ ಸ್ಮಾರಕಗಳಿಗೂ ಜನರನ್ನು ಕೊಂಡೊಯ್ದು ಸಮಸಮಾಜದ ಕಲ್ಪನೆಗೆ ಸಂಕಲ್ಪವಾಗಿ ನಿಂತಿದ್ದಾರೆ ಗಿರೀಶ್.
ಅಂಬೇಡ್ಕರ್ ಅವರ ಬಗ್ಗೆ ಕೆಲ ಸಮುದಾಯಗಳಲ್ಲಿ ಹರಡಿದ್ದ ತಪ್ಪು ಕಲ್ಪನೆಯನ್ನು ನಿವಾರಣೆ ಮಾಡುತ್ತಿದ್ದೇನೆ ಎಂದು ಗಿರೀಶ್ ಹೆಮ್ಮೆ ಪಡುತ್ತಾರೆ. ಆ ಮೂಲಕ ಅಸ್ಪೃಷ್ಯತೆ ಮತ್ತು ಜಾತಿ ಆಧಾರಿತ ತಾರತಮ್ಯವನ್ನು ಅಂಬೇಡ್ಕರ್ ವಿರೋಧಿಸಿದ್ದರು ಎನ್ನುವುದನ್ನು ಮನವರಿಕೆ ಮಾಡಿಕೊಡುತ್ತಿದ್ದಾರೆ.
ಅಂಬೇಡ್ಕರ್ ಅವರ ಸಮಾಧಿ ಸ್ಥಳದಲ್ಲೇ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ವರ್ಷವೂ ಅಲ್ಲಿಯೇ ಜನ್ಮದಿನದ ಸಾರ್ಥಕ್ಯ ಸಾಧ್ಯವಾಗಿದೆ.
ಈ ವರ್ಷ ಸರ್ಕಾರಿ ಶಾಲೆ ಮಕ್ಕಳು, ಅನಾಥಾಶ್ರಮದ ಮಕ್ಕಳು, ಉದ್ಯಮಿಗಳು, ಅರ್ಚಕರು, ಸಮಾಜಸೇವಕರು ಹೀಗೆ ನಾನಾ ಕ್ಷೇತ್ರಗಳ ಜನರನ್ನು ಮುಂಬೈಗೆ ಕರೆದೊಯ್ಯುವ ವಿಶಿಷ್ಟ ಪ್ರಯತ್ನವನ್ನು ಗಿರೀಶ್ ಅವರು ಮಾಡಿದ್ದಾರೆ. ಇದೆಲ್ಲದರ ಹಿಂದೆ ಅವರಿಗೆ ಪ್ರಚಾರ ಗಿಟ್ಟಿಸಿಕೊಳ್ಳುವ ಹಂಬಲವಿಲ್ಲ. ವೈಭವೀಕರಿಸಿಕೊಳ್ಳುವ ಆಸೆಯೂ ಇಲ್ಲ. ನಿಸ್ವಾರ್ಥವಾಗಿ ಸಮುದಾಯದ ಒಳಿತಿನ ಚಿಂತನೆ ನಡೆದಿದೆ.
ಅಂಬೇಡ್ಕರ್ ಅವರನ್ನು ಜನ್ಮಜಯಂತಿಗಳಿಗೆ ಮಾತ್ರ ಸೀಮಿತಗೊಳಿಸದೆ ಸಮಾಜ ಪರಿವರ್ತನೆಯ ನಿತ್ಯ ಸಂದೇಶವಾಗಿಸಬೇಕು ಎನ್ನುವ ಕಾಳಜಿ ಗಿರೀಶ್ ಅವರದ್ದು. ಬಸವಣ್ಣ, ವೀರಬ್ರಹ್ಮೇಂದ್ರರು ಹೀಗೆ ಅನೇಕ ಸಮಾಜ ಸುಧಾರಕರ ಮೌಲ್ಯಗಳನ್ನೂ ಪ್ರಚಾರ ಮಾಡುವ ಮೂಲಕ, ತಾನೂ ಸೇರಿದಂತೆ ಜನರು ಅಳವಡಿಸಿಕೊಂಡಾಗ ತಾರತಮ್ಯ ರಹಿತ ಸಮಾಜ ನಿರ್ಮಾಣ ಸಾಧ್ಯ ಎನ್ನುವುದು ಗಿರೀಶ್ ಅವರ ನಂಬಿಕೆ. ತಮ್ಮ ಸ್ನೇಹ ಬಳಗದ ಮೂಲಕ ಇದನ್ನೊಂದು ಕಾಯಕಯಾತ್ರೆಯನ್ನಾಗಿ ಅವರು ಪರಿವರ್ತಿಸಿದ್ದಾರೆ.
ಇದಿಷ್ಟೇ ಅಲ್ಲ, ಅವರು ತಮ್ಮ ಆಸುಪಾಸು ಪ್ರದೇಶಗಳಲ್ಲಿ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ಕೈಜೋಡಿಸುವ ಮೂಲಕ ಸಮಾಜದಲ್ಲಿ ಅಂಬೇಡ್ಕರ್ ಅವರ ಚಿಂತನೆಗಳನ್ನು ಹರಡುವ ಕೆಲಸವನ್ನು ಅನೂಚಾನವಾಗಿ ನಡೆಸಿಕೊಂಡು ಬರುತ್ತಿದ್ದಾರೆ.
’ಟೀಂ ಎಂಪಿಜಿಎಸ್ ವತಿಯಿಂದ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ, ಹಲವರು ಸಂಘಟಿಸುವ ಕಾರ್ಯಕ್ರಮಗಳಿಗೆ ನೆರವಾಗಿದ್ದಾರೆ.
ಇದೇ ಸೆಪ್ಟಂಬರ್ 6ರಂದು ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ನಲ್ಲೂರಿನಲ್ಲಿ ’ಗಂಗಮ್ಮ ತಾಯಿ ದೇವರ ಹರಕೆಯ ಔತಣಕೂಟ’ವನ್ನೂ ಏರ್ಪಡಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸಂಜೆ ನಾಲ್ಕು ಗಂಟೆವರೆಗೂ ಸಹಸ್ರಾರು ಜನರಿಗೆ ಮಾಂಸಾಹಾರ ಮತ್ತು ಸಸ್ಯಾಹಾರ ಊಟದ ವ್ಯವಸ್ಥೆಯನ್ನೂ ಮಾಡಿದ್ದಾರೆ. ಇಲ್ಲೂ ಅಂಬೇಡ್ಕರ್ ಅವರೂ ಸೇರಿದಂತೆ ಸಮಾಜಸುಧಾರಕರ ಜೀವನ ಮೌಲ್ಯದ ಪ್ರಚಾರ ಮಾಡುವ ಪ್ರಯತ್ನ ಗಿರೀಶ್ ಅವರಿಂದ ಆಗುತ್ತಿದೆ.
ಹೀಗೆ ವೈಚಾರಿಕ ಪ್ರಚಾರ ಕ್ರಾಂತಿಯ ಕೆಲಸದಲ್ಲಿ ಎಲೆಮರೆ ಕಾಯಿಯಂತೆ ಸಾಗುತ್ತಿರುವ ಎಂ.ಪಿ. ಗಿರೀಶ್ ಅವರದ್ದು ದೇವನಹಳ್ಳಿ ತಾಲೂಕು. 1990ರಲ್ಲಿ ಜನಿಸಿದ ಅವರು ಮಲ್ಲಾಪುರದಲ್ಲಿ ಪ್ರಾಥಮಿಕ ಓದನ್ನು ಮುಗಿಸಿ ದೇವನಹಳ್ಳಿಯಲ್ಲಿ ಡಿಗ್ರಿ ಶಿಕ್ಷಣ ಪಡೆದರು. ಕಲಾ ವಿಭಾಗದಲ್ಲಿ ಪದವೀಧರರಾದ ನಂತರ ಉದ್ಯಮ ಮತ್ತು ಸಮಾಜಸೇವೆಯಲ್ಲಿ ತೊಡಗಿಸಿಕೊಂಡರು.
ವೃತ್ತಿ ಬದುಕಿನಾಚೆಗೆ ಸಮಾಜಕ್ಕೆ ನಾನು ಏನನ್ನಾದರೂ ನೀಡಬೇಕು ಎನ್ನುವ ಹಂಬಲ ಅವರನ್ನು ಸಮಸಮಾಜ ಕಟ್ಟುವ ಆಶಯದ ಹಾದಿಗೆ ತಂದು ನಿಲ್ಲಿಸಿದೆ. ಸಾಹಿತ್ಯದ ಓದು, ಸಾಮಾಜಿಕ ಚಟುವಟಿಕೆಗಳ ಆಸಕ್ತಿ ಇವರಲ್ಲಿ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿದೆ. ಸಾಮಾಜಿಕ ಅರಿವು ಸಮಾಜದಲ್ಲಿ ಆರೋಗ್ಯಕರ ವಾತಾವರಣ ತರಬಲ್ಲದು ಎನ್ನುವ ಅಚಲ ನಂಬಿಕೆ ಇಟ್ಟು ಸಾಗುತ್ತಿದ್ದಾರೆ.
ಸಮಾಜ ಬದಲಾಗಬೇಕು, ಜನರು ಬದಲಾಗಬೇಕು ಎಂದು ಬಯಸುವ ’ನಾನು’ ಮೊದಲು ಆ ಹಾದಿಯನ್ನು ತುಳಿಯಬೇಕು. ವ್ಯಕ್ತಿ ಬದಲಾವಣೆಯೇ ಸಮಾಜ ಬದಲಾವಣೆಗೆ ಮುನ್ನುಡಿ. ಆ ನಂತರ ಸಾಮುದಾಯಿಕ ಹೊಣೆಗಾರಿಕೆ ಮತ್ತು ಪಾಲ್ಗೊಳ್ಳುವಿಕೆ ತನ್ನಿಂದ ತಾನೇ ಆಗುತ್ತದೆ ಎಂದು ನಂಬಿದ್ದಾರೆ ಎಂ.ಪಿ. ಗಿರೀಶ್.
ಎಐ ಜಗತ್ತಿನ ತಾಂತ್ರಿಕತೆಯ ತುದಿಬೆರಳಿನ ತಾಳಕ್ಕೆ ಕುಣಿಯುವ ಯುವ ಮನಸ್ಸುಗಳು ವೈಚಾರಿಕ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್, ಬಸವಣ್ಣ ಅವರಂತಹ ಸುಧಾರಕರ ವಿಚಾರಗಳನ್ನು ಹರಡುವ ನದಿಗಳಾಗಬೇಕು ಎನ್ನುವ ಗಿರೀಶ್ ಅವರ ಸಂಕಲ್ಪ ಈಗಿನ ತಲೆಮಾರಿಗೆ ಅನುಕರಣೀಯ.ಅವರ ಈ ಸಮಾಜ ಪರಿವರ್ತನೆಯ ಪಯಣ ಯಶಸ್ವಿಯಾಗಿ ಸಾಗಲಿ.
- ಅಭಿಮನ್ಯು
@siddaramaiah_express
@mallikarjunkharge8172
@siddaramaiahmediaofficial
@pressclubofbangalore
@Devanahalli
@girishmpgirish9015
1 week ago | [YT] | 105
View 1 reply
gadinudi kannada
ಅಂತಾರಾಷ್ಟ್ರೀಯ ದೇಹಧಾರ್ಢ್ಯ ಪಟು ಜಿಮ್ ರವಿ ಅವರ ಜೀವನ ಆಧರಿಸಿ ಬರೆದಿರುವ "ರವಿ ನೀನು ಆಗಸದಲ್ಲಿ" ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.
ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಸಚಿವರಾದ ನರೇಂದ್ರಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ. ರೇವಣ್ಣ, ಹಿರಿಯ ಸಾಹಿತಿಗಳಾದ ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್ ಮತ್ತಿತರರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.
@siddaramaiah_express
@rahulgandhi
@priyankagandhi
@mallikarjunkharge8172
1 week ago | [YT] | 847
View 8 replies
gadinudi kannada
ಸಿಎಂ ಡಿ ಕೆ ಶಿವಕುಮಾರ್ ಅವರು ನಿಕಪೂರ್ವ ಮಖ್ಯಮಂತ್ರಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಸಚಿವ ಹೆಚ್.ಸಿ ಬಾಲಕೃಷ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ ಎಸ್ ಪೊನ್ನಣ್ಣ ಶಾಸಕರುಗಳಾದ ಶರತ್ ಬಚ್ಚೇಗೌಡ, ಬೇಳೂರು ಗೋಪಾಲಕೃಷ್ಣ, ಡಾ.ರಂಗನಾಥ್, ಶಿವರಾಂ ಹೆಬ್ಬಾರ್, ಎನ್ ಶ್ರೀನಿವಾಸ್, ಎಸ್ ಟಿ ಸೋಮಶೇಖರ್, ಬಿ ಶಿವಣ್ಣ, ಎಸ್ ಆರ್ ಶ್ರೀನಿವಾಸ್, ರಮೇಶ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ವಿನಯ್ ಕಾರ್ತಿಕ್, ಎಸ್ ರವಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
@siddaramaiah_express
@rahulgandhi
@mallikarjunkharge8172
@priyankagandhi
@DKShivakumarOfficial
1 week ago | [YT] | 445
View 3 replies
gadinudi kannada
• ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ
• ಅದ್ದೂರಿ ಸಮಾರಂಭದಲ್ಲಿ ಚಿತ್ರ ನಟ ಡಾರ್ಲಿಂಗ್ ಕೃಷ್ಣ, ನಟಿ ಐಂದ್ರಿತಾ ರೈ ಉದ್ಘಾಟನೆ
• ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆಯಾದ ಕೆಎಸ್ಪಿಎಲ್
ಬೆಂಗಳೂರು:
ನಗರದ ಗಾಯತ್ರಿ ವಿಹಾರದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ʼಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ʼಗೆ ಖ್ಯಾತ ಚಿತ್ರ ನಟ ಡಾರ್ಲಿಂಗ್ ಕೃಷ್ಣ ಮತ್ತು ನಟಿ ಐಂದ್ರಿತಾ ರೈ ಮತ್ತು ದಿಗ್ಗಜರು ಚಾಲನೆ ನೀಡಿದರು.
ಡಾರ್ಲಿಂಗ್ ಕೃಷ್ಣ ಮಾತನಾಡಿ, ʼಕ್ರಿಕೆಟ್ ಎಲ್ಲರ ಅಚ್ಚುಮೆಚ್ಚಿನ ಆಟ. ಉತ್ತಮ ಪ್ರತಿಭೆಗಳನ್ನು ಹುಡುಕಿ ಜಗತ್ತಿಗೆ ತೋರಿಸುವ ಕಾರ್ಯವನ್ನು ಕೆಎಸ್ಪಿಎಲ್ ತಂಡ ಕೈಗೊಂಡಿರುವುದು ಶ್ಲಾಘನೀಯʼ ಎಂದರು.
ʼನಾನು ಮ್ಯಾಚ್ ಆಡಿದ್ದೆ ಸಾಫ್ಟ್ ಬಾಲ್ ಸಾಫ್ಟ್ ಆಗಿ ಇರುತ್ತೇ ಅಂದುಕೊಂಡಿದ್ದೆ. ಆದರೆ, ಹೇಳುವುದಕ್ಕೆ ಮಾತ್ರ ಸಾಫ್ಟ್ ಬಾಲ್ ಅದು ಕೂಡ ತುಂಬಾ ಸಿಕ್ಕಾಪಟ್ಟೆ ಹಾರ್ಡ್ ಆಗಿರುತ್ತೆ ಅಂತ ಆಡಿದ ಮೇಲೆ ಅನುಭವವಾಯಿತು, ಲೇದರ್ ಬಾಲ್ ನ ಆಟಕ್ಕೂ ಸಾಫ್ಟ್ ಬಾಲ್ ಆಟಕ್ಕೂ ಬಹಳ ವ್ಯತ್ಯಾಸ ಇರುತ್ತದೆʼ ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.
ನಟಿ ಐಂದ್ರೀತಾ ರೈ ಮಾತನಾಡಿ, ʼಕ್ರಿಕೆಟ್ಗೆ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಪ್ರತಿಭಾವಂತರಿದ್ದಾರೆ. ಅಂತಹ ಪ್ರತಿಭೆಗಳನ್ನು ಗುರುತಿಸಿ ಅವಕಾಶ ಕಲ್ಪಿಸುವುದು ಮುಖ್ಯ. ಅಂತಹ ಅವಕಾಶ ಒದಗಿಸಿರುವ ಕೆಎಸ್ಪಿಎಲ್ ತಂಡದ ಕಾರ್ಯ ಶ್ಲಾಘನೀಯ ಎಂದರು.
ಸಮಾರಂಭದಲ್ಲಿ ಲೀಗ್ ಪಂದ್ಯದಲ್ಲಿ ಆಡಲಿರುವ 32 ತಂಡಗಳು ಭಾಗವಹಿಸಿದ್ದವು. ಒಟ್ಟು 63 ಪಂದ್ಯಗಳು ನಡೆಯಲಿವೆ.
ಕೆಎಸ್ಪಿಎಲ್ ಕ್ರಿಕೆಟ್ ಫೌಂಡೇಷನ್ನ ಡಾ.ಗಂಗಾಧರ್ ರಾಜು ಮಾತನಾಡಿ, ಸಂಸ್ಥೆಯು ಪ್ರಾರಂಭದ ದಿನಗಳಲ್ಲಿ ಎದುರಿಸಿದ ಕಷ್ಟಗಳು ಮತ್ತು ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸೃಷ್ಟಿಸಲು ಪಟ್ಟ ಶ್ರಮವನ್ನು ವಿವರಿಸಿದರು.
ʼಗ್ರಾಮೀಣ ಭಾಗದ ಕ್ರೀಡಾಪಟುಗಳು ನಮ್ಮ ಆಸ್ತಿ. ಅವರ ಬೆಳವಣಿಗೆಯೇ ನಮ್ಮ ಧ್ಯೇಯ. ಗ್ರಾಮೀಣ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದ ಪಂದ್ಯಗಳಿಗೆ ಆಯ್ಕೆಯಾಗಬೇಕು ಎನ್ನುವುದು ನಮ್ಮ ಸಂಸ್ಥೆಯ ಮೂಲ ಉದ್ದೇಶʼ ಎಂದು ತಿಳಿಸಿದರು.
ಈಗ ರಾಜ್ಯದ ಎಲ್ಲ ಜಿಲ್ಲೆಗಳಿಂದ ಕ್ರಿಡಾಪಟುಗಳನ್ನು ಆಯ್ಕೆ ಮಾಡಿದಂತೆಯೇ, ರಾಷ್ಟ್ರಮಟ್ಟದಲ್ಲೂ ಐಎಸ್ಪಿಎಲ್ ಪಂದ್ಯಾವಳಿ ಆಯೋಜಿಸುವ ಬಗ್ಗೆಯೂ ಅವರು ತಮ್ಮ ಪರಿಕಲ್ಪನೆಯನ್ನು ಸಮಾರಂಭದಲ್ಲಿ ಹಂಚಿಕೊಂಡರು.
ಸಮಾರಂಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಕರ್ನಾಟಕ ಸಾಫ್ಟ್ ಪ್ರಿಮಿಯರ್ ಲೀಗ್ ಅಧ್ಯಕ್ಷ ಸಿದ್ದರಾಮ್ ದೇಸಾಯಿ, ಸಾಫ್ಟ್ ಬಾಲ್ ಕ್ರಿಕೆಟ್ ಫೌಂಡೇಷನ್ ಮುಖ್ಯಸ್ಥ ಡಾ. ಗಂಗಾಧರ್ ರಾಜು, ಖ್ಯಾತ ನಿರ್ದೇಶಕ ಎಸ್.ನಾರಾಯಣ್, ಖ್ಯಾತ ನಟ ರವಿಚೇತನ್ ಉಪಸ್ಥಿತರಿದ್ದರು.
@siddaramaiah_express
@rahulgandhi
@mallikarjunkharge8172
1 week ago | [YT] | 60
View 0 replies
gadinudi kannada
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಉತ್ತರಾಖಂಡ ಪೊಲೀಸರು FIR ದಾಖಲು ಮಾಡಿರುವುದನ್ನು ಖಂಡಿಸಿ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು....
ರಾಹುಲ್ ಗಾಂಧಿಯವರು ಯಾವ ತಪ್ಪು ಮಾಡದಿದ್ದರೂ ಕೇಸು ದಾಖಲು ಮಾಡಲಾಗಿದೆ. ಇದು ಘನ ಘೋರ ಅನ್ಯಾಯ.
ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಭಾಷಣ ಮಾಡಿದ ಜಾಗವನ್ನು ಶುದ್ಧೀಕರಣ ಮಾಡಲಾಗಿದೆ.
ಇದನ್ನು ಪ್ರಶ್ನೆ ಮಾಡಿದ್ದೇ ಅಪರಾಧ ಎಂಬಂತೆ ರಾಹುಲ್ ಗಾಂಧಿಯವರ ಮೇಲೆ ಕೇಸು ದಾಖಲು ಮಾಡಲಾಗಿದೆ.
ಬಾಷಣ ಮಾಡಿದ ಜಾಗದ ಶುದ್ಧೀಕರಣ ಸಂವಿಧಾನ ವಿರೋಧಿ ಕೆಲಸ. ಅಸ್ಪೃಶ್ಯತೆಗೆ ಅವಕಾಶ ಇಲ್ಲ ಎಂದು ಸಂವಿಧಾನ ಹೇಳಿದೆ. ಹೀಗಾಗಿ ಇದು ಸಂವಿಧಾನಕ್ಕೆ ಮಾಡಿದ ಅಪಚಾರ.
ಇದು ಖರ್ಗೆ ಅವರಿಗೆ ಮಾಡಿದ ಅಪಮಾನ ಅಲ್ಲ. ಎಫ್ ಐ ಆರ್ ದಾಖಲಿಸುವ ಮೂಲಕ ರಾಹುಲ್ ಗಾಂಧಿಯವರನ್ನೂ ಅವಮಾನಿಸುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ.
ಅವರೇನು ತಪ್ಪು ಮಾಡಿದ್ದಾರೆ. ಶುದ್ಧೀಕರಣ ಕೆಲಸ ಪ್ರಶ್ನಿಸಿದ್ದಾರೆ ಅಷ್ಟೇ. ಇಷ್ಟಕ್ಜೇ ದಲಿತರ ಮೇಲಿನ ದೌರ್ಜನ್ಯ ಕೇಸು ದಾಖಲಿಸಲಾಗಿದೆ. ಇದು ಅತ್ಯಂತ ಖೇದಕರ.
ಸಂವಿಧಾನದ ಪ್ರಕಾರ ಯಾರು ಅಸ್ಪೃಶ್ಯತೆ ಆಚರಣೆ ಮಾಡಿದ್ಸಾರೆ. ಅವರ ಮೇಲೆ ಕೇಸು ಹಾಕಬೇಕು. ಆದರೆ ದುರುದ್ದೇಶಪೂರ್ವಕವಾಗಿ ರಾಹುಲ್ ಗಾಂಧಿಯವರ ವಿರುದ್ಧ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.
ಏನಾದರೂ ಮಾಡಿ ರಾಹುಲ್ ಅವರ ಬಾಯಿ ಮುಚ್ಚಿಸಬೇಕು ಎಂದು ಬಿಜೆಪಿ ತೀರ್ಮಾನಿಸಿದಂತಿದೆ. ಈ ಹಿಂದೆ ಲೋಕಸಭೆಯಲ್ಲಿ ಕೇಂದ್ರ ಸರ್ಕಾರವನ್ನ ಟೀಕೆ ಮಾಡಿದಾಗಲೂ ರಾಹುಲ್ ಗಾಂಧಿಯವರ ಮೇಲೆ ಕೇಸು ದಾಖಲಾಗಿಸಲಾಗಿತ್ತು. ಅವರ ಸದಸ್ಯತ್ವವನ್ನೂ ರದ್ದು ಮಾಡಿದ್ದರು. ಕೊನೆಗೆ ಕಾನೂನಿನ ಮೊರೆ ಹೋದಾಗ ನ್ಯಾಯಾಲಯ ಕೇಸು ರದ್ದು ಮಾಡಿತು.
ರಾಹುಲ್ ಗಾಂಧಿಯವರು ಸಂವಿಧಾನದ ಪರ. ಅಸ್ಪೃಶ್ಯತೆ ವಿರುದ್ಧ. ಆದರೆ ಮನುವಾದಿಗಳಾದ ಬಿಜೆಪಿಯವರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ.
ಬಿಜೆಪಿಯವರಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ರಾಹುಲ್ ಗಾಂಧಿಯವರ ವಿರುದ್ಧ ಕೇಸು ದಾಖಲು ಮಾಡಿರುವುದು ಘೋರ ಅಪರಾದ. ಇದನ್ನು ಸಹಿಸಲು ಆಗದು. ಇದರ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ ಆಗಬೇಕು.
ಅಧಿಕಾರದಲ್ಲಿರಲು ಬಿಜೆಪಿಯವರು ನಾಲಾಯಕ್. ನಾವೆಲ್ಲ ರಾಹುಲ್ ಅವರ ಜೊತೆಗೆ ಇರುತ್ತೇವೆ. ಅವರ ಕೈ ಬಲಪಡಿಸುತ್ತೇವೆ.
@siddaramaiah_express
@siddaramaiahmediaofficial
@rahulgandhi
2 weeks ago | [YT] | 728
View 17 replies
gadinudi kannada
ನಿಕಟಪೂರ್ವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರಿಗೆ ತೊಡರುಬಳ್ಳಿ ಕೃತಿ ನೀಡಿದ ಡಾ.ಎಂ ಎಸ್ ಮಣಿ
@siddaramaiah_express
@priyankagandhi
@siddaramaiahmediaofficial
@rahulgandhi
2 weeks ago | [YT] | 745
View 6 replies
gadinudi kannada
ಸಿಎಂ ಡಿ ಕೆ ಶಿವಕುಮಾರ್ ಅವರು ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕದಾಂಪೂರ ಗ್ರಾಮದಲ್ಲಿ ರೈತರ ಜಮೀನಿಗೆ ಮಂಗಳವಾರ ಭೇಟಿ ನೀಡಿ ಸ್ಥಳೀಯ ರೈತರೊಂದಿಗೆ ಚರ್ಚೆ ನಡೆಸಿದರು.
ಈ ಬಾರಿ ಬರ ಪರಿಸ್ಥಿತಿಯಿಂದ ಬೆಳೆಗಳು ಹಾಳಾಗಿವೆ. ಗದಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರದಿಂದ ತತ್ತರಿಸಿವೆ. ಹೀಗಾಗಿ ಬಾಕಿ ಇರುವ ಜಿಲ್ಲೆಯ ಆರು ತಾಲ್ಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಂತೆ ರೈತರು ಮನವಿ ಮಾಡಿದರು.
ರೈತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, "ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಮತ್ತಷ್ಟು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇವೆ. ಪರಿಸ್ಥಿತಿ ಅಧ್ಯಯನ ಬಳಿಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ, ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ಬರ ತಾಲ್ಲೂಕು ಘೋಷಣೆ ಮಾಡಲಾಗುವುದು" ಎಂದು ಭರವಸೆ ನೀಡಿದರು.
@DKShivakumarOfficial
@priyankagandhi
@CMKarnataka-p6i
2 weeks ago | [YT] | 124
View 2 replies
gadinudi kannada
ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ : ಸಿದ್ದರಾಮಯ್ಯ
ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಶೂದ್ರ ಸೇವಾ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಭಾಷಣ.
ಜಾತಿ ವ್ಯವಸ್ಥೆ ಮೂಲಕ ಯಾರನ್ನೂ ಕೀಳಾಗಿ ಕಾಣಬಾರದು.
ಚತುವರ್ಣ ವ್ಯವಸ್ಥೆಯನ್ನು ಮನುವಾದಿಗಳು ಈ ದೇಶದಲ್ಲಿ ಉದ್ದೇಶಪೂರ್ವಕಾಗಿ ಸೃಷ್ಟಿ ಮಾಡಿದರು.
ಜಾತಿ ವ್ಯವಸ್ಥೆ ಹೋಗಬೇಕಾದರೆ ಸಮಾನತೆಯ ಸಮಾಜ ನಿರ್ಮಾಣ ಆಗಬೇಕು. ಶೂದ್ರ ವರ್ಗ ಅನೇಕ ವರ್ಷಗಳ ಕಾಲ ಅಕ್ಷರ ಸಂಸ್ಕೃತಿ, ಅವಕಾಶಗಳಿಂದ ದೂರ ಇತ್ತು.
ಶೂದ್ರ ವರ್ಗದವರು ಮೇಲ್ವರ್ಗದವರ ಜೊತೆ ಸ್ಪರ್ಧೆ ಮಾಡುವುದು ಅಸಾಧ್ಯ. ಅಕ್ಷರ ವಂಚಿತರಿಗೆ ಅಕ್ಷರ ಕಲಿತವರಿಂದ ಸೋಲಾಗುವುದು ಸಾಮಾನ್ಯ.
ನಮ್ಮಲ್ಲಿನ ಭಿನ್ನಾಭಿಪ್ರಾಯಗಳ ಪರಿಣಾಮ ಬ್ರಿಟಿಷರು ನಮ್ಮನ್ನು ಆಳಿದರು. ಹೀಗಾಗಿ ಭಿನ್ನಾಭಿಪ್ರಾಯ ಮರೆತು ಎಲ್ಲ ವರ್ಗಗಳು ಒಂದಾಗಬೇಕು.
ಅಸಮಾನತೆ ತೊಲಗಿ ಸಮ ಸಮಾಜ ನಿರ್ಮಾಣ ಆಗಬೇಕು ಎಂಬುದು ಸಂವಿಧಾನದ ಆಶಯ. ಬುದ್ಧ, ಬಸವ, ಅಂಬೇಡ್ಕರ್ ಅವರು ಹೇಳಿದ್ದೂ ಇದನ್ನೇ.
ಪಟ್ಟಭದ್ರ ಹಿತಾಸಕ್ತಿಗಳು ನಮ್ಮನ್ನು ಒಂದಾಗಲು ಬಿಡುವುದಿಲ್ಲ. ಜಾತಿ ಹೋಗಬೇಕಾದರೆ ವಿದ್ಯಾವಂತರು ವೈಜ್ಞಾನಿಕವಾಗಿ ಆಲೋಚನೆ ಮಾಡುವುದನ್ನು ಕಲಿಯಬೇಕು.
ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಮೌಢ್ಯ ಪ್ರತಿಬಂಧಕ ಕಾಯಿದೆ ಜಾರಿಗೆ ಬಂತು. ಆದರೆ, ಸಮರ್ಪಕವಾಗಿ ಜಾರಿಗೆ ಬಂದಿಲ್ಲ. ಇದಕ್ಕೆ ವಿದ್ಯಾವಂತರೂ ಕಾರಣ. ವಿದ್ಯಾವಂತರಲ್ಲಿ ಬಹುಪಾಲು ಈಗಲೂ ಮೌಢ್ಯ, ಕಂದಾಚಾರಗಳನ್ನ ಪಾಲನೆ ಮಾಡುತ್ತಾರೆ.
ಇಂದಿನ ಪೀಳಿಗೆ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸಿಕೊಳ್ಳದಿದ್ದರೆ ಸಮಾನತೆಯ ಸಮಾಜ ನಿರ್ಮಾಣ ಅಸಾಧ್ಯ. ಜಾತಿ ವ್ಯವಸ್ಥೆಯೂ ಹೋಗದು.
ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಅಸಮಾನತೆ ನಿವಾರಣೆಗೆ ಸಹಾಯಕ. ವ್ಯವಸ್ಥೆ ಬದಲಾವಣೆಗೆ ಎಲ್ಲರ ಪ್ರಯತ್ನ ಅಗತ್ಯ. ಇದಕ್ಕೆ ಸಮಯವೂ ಬೇಕು. ಸರಿಯಾದ ಮಾರ್ಗದಲ್ಲಿ ಹೋದಾಗ ಪ್ರಯತ್ನಕ್ಕೆ ಯಶ ಸಿಗುತ್ತದೆ.
ಸಂಘದ ಅಧ್ಯಕ್ಷ, ಶೂದ್ರ ಪತ್ರಿಕೆ ಸಂಪಾದಕ ರಾಮೇಗೌಡ, ಸಂಚಾಲಕ ಮುರಳೀದರ ಹಾಲಪ್ಪ ಉಪಸ್ಥಿತರಿದ್ದರು.
@siddaramaiah_express
@siddaramaiahmediaofficial
@rahulgandhi
@mallikarjunkharge8172
3 weeks ago | [YT] | 349
View 5 replies
gadinudi kannada
ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಸಿ.ಟಿ. ರವಿ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
@siddaramaiah_express
@siddaramaiahmediaofficial
@rahulgandhi
3 weeks ago | [YT] | 704
View 2 replies
Load more