ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿಪಿ
ಮಾದರಿ ಪತ್ರಕರ್ತರನ್ನು ಸನ್ಮಾನಿಸುವುದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ 'ಜಾಗೃತ ಕಣ್ಣು'ಗಳಿಗೆ ಸಲ್ಲಿಸುವ ಗೌರವವಾಗಿದೆ : ಕೆವಿಪಿ*
ಬೆಂಗಳೂರು ಜ2:
ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಚೇರಿಯಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ಮಾಹಿತಿ ಆಯುಕ್ತರಾದ ಪತ್ರಕರ್ತರಿಗೆ ಸನ್ಮಾನಿಸಿ ಅಭಿನಂದನಾ ನುಡಿಗಳನ್ನು ಆಡಿದರು.
ಇಂದು ಇಲ್ಲಿ ಸನ್ಮಾನಿತರಾಗುತ್ತಿರುವ ಐದೂ ಮಂದಿ ಪತ್ರಕರ್ತರಿಗೆ ಮತ್ತು ಇವರನ್ನು ಸನ್ಮಾನಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಾನು ಮೊದಲಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕೃತಜ್ಞತೆ ಸಲ್ಲಿಸಿದರು.
ಇವರಲ್ಲಿ ಸಿದ್ದರಾಜು ಅವರು ಹಿರಿಯರಾಗಿ ನಮಗೆಲ್ಲಾ ಮಾದರಿ ಆಗಿದ್ದವರು. ಉಳಿದವರು ನನ್ನ ಸಮಕಾಲೀನರಾಗಿ ಮಾದರಿಗಳಾಗಿರುವವರು. ಹಿರಿಯ ಮತ್ತು ಮಾದರಿ ಪತ್ರಕರ್ತರನ್ನು ಸನ್ಮಾನಿಸುವುದು ಕೇವಲ ಒಂದು ಶಿಷ್ಟಾಚಾರವಲ್ಲ, ಅದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ 'ಜಾಗೃತ ಕಣ್ಣು'ಗಳಿಗೆ ಸಲ್ಲಿಸುವ ಗೌರವವಾಗಿದೆ.
ಇಲ್ಲಿ ಸನ್ಮಾನಿತರಾಗುತ್ತಿರುವ ಪತ್ರಕರ್ತ ಸ್ನೇಹಿತರು ದಶಕಗಳ ಕಾಲ ಸಮಾಜದ ಏರಿಳಿತಗಳನ್ನು ಹತ್ತಿರದಿಂದ ಕಂಡಿದ್ದಾರೆ. ಗೂಗಲ್, ಜಿ-ಮೇಲ್, ವಾಟ್ಸಾಪ್ ನಂತಹ ತಂತ್ರಜ್ಞಾನವಿಲ್ಲದ ಕಾಲದಿಂದ ಹಿಡಿದು ಅಪಾರ ತಂತ್ರಜ್ಞಾನದ ಹಾವಳಿಯ ಕಾಲಘಟ್ಟದ ಎರಡೂ ಸಂದರ್ಭಗಳ ಪತ್ರಿಕೋದ್ಯಮಕ್ಕೂ ಸಾಕ್ಷಿಯಾಗಿರುವವರು ಎಂದು ಮೆಚ್ಚುಗೆ ಸೂಚಿಸಿದರು.
ತಂತ್ರಜ್ಞಾನ ಇಲ್ಲದಿದ್ದಾಗ ಸತ್ಯವನ್ನು ಹುಡುಕಿ ಹೊರತಂದ ಇವರ ಕಾಳಜಿ, ಪರಿಶ್ರಮ, ವೃತ್ತಿಪರತೆಗೆ ಸನ್ಮಾನವು ಒಂದು ರೀತಿಯ ಮಾನ್ಯತೆ ತಂದು ಕೊಟ್ಟಿದೆ.
ತಂತ್ರಜ್ಞಾನ ಇಲ್ಲದಿದ್ದಾಗಲೂ ಸತ್ಯದ ತೇರು ಎಳೆದ ಪತ್ರಕರ್ತರು, ಈಗ ತಂತ್ರಜ್ಞಾನದ ಯುಗದಲ್ಲೂ ಸತ್ಯ ಕಾಣಲು ಸಾಧ್ಯವಾಗದ ಯುವ ಪೀಳಿಗೆಗೆ ಮಾದರಿ ಮತಗತು ಪ್ರೇರಣೆ ಆಗಿದ್ದಾರೆ ಎಂದರು.
ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ. ಹಿರಿಯರನ್ನು ಗೌರವಿಸುವುದರಿಂದ, ಉದಯೋನ್ಮುಖ ಪತ್ರಕರ್ತರಿಗೆ ಮೌಲ್ಯಾಧಾರಿತ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಮತ್ತು ಸ್ಫೂರ್ತಿ ಮೂಡುತ್ತದೆ. ಈ ಅರ್ಥಪೂರ್ಣ ಕೆಲಸವನ್ನು ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ ಎಂದರು.
ಸಾಮಾಜಿಕ ಜವಾಬ್ದಾರಿಯನ್ನು ಗುರುತಿಸುವುದೂ ಜವಾಬ್ದಾರಿಯುತ ಕೆಲಸ. ಸಾಮಾಜಿಕ ಕಾಳಜಿಗಳನ್ನು ಕಾಪಾಡಿಕೊಂಡಿರುವವರನ್ನು ಗುರುತಿಸುವುದು ಮತ್ತು ಸನ್ಮಾನಿಸುವುದರಿಂದ "ಸಮಾಜವು ಪ್ರಾಮಾಣಿಕ ಸೇವೆಯನ್ನು ಎಂದಿಗೂ ಮರೆಯುವುದಿಲ್ಲ" ಎಂಬ ಸಂದೇಶ ಕೊಟ್ಟಂತೆ ಆಗುತ್ತದೆ.
ಇದು ಸಮಾಜದಲ್ಲಿ ಸತ್ಯವಂತರ, ಸಾಮಾಜಿಕ ಕಾಳಜಿ ಇಟ್ಟುಕೊಂಡವರ ಪರವಾಗಿ ನಿಲ್ಲುವ ಧೈರ್ಯವನ್ನು ತುಂಬುತ್ತದೆ.
ಇತಿಹಾಸದ ಕೊಂಡಿಯಾಗಿ
ಹಿರಿಯ ಪತ್ರಕರ್ತರು ಒಂದು ಕಾಲಘಟ್ಟದ ಜೀವಂತ ಇತಿಹಾಸವಿದ್ದಂತೆ. ಅವರನ್ನು ಸನ್ಮಾನಿಸುವ ನೆಪದಲ್ಲಿ ಅವರ ಅನುಭವದ ನುಡಿಗಳನ್ನು ದಾಖಲಿಸುವ ಕೆಲಸವನ್ನೂ ಕಾರ್ಯನಿರತ ಪತ್ರಕರ್ತರ ಸಂಘ ಮಾಡಬೇಕು ಎಂದು ಕರೆ ನೀಡಿದರು.
ನಮ್ಮ ಹಿಂದಿನವರು ಮತ್ತು ಸಮಕಾಲೀನ ಮಾದರಿಗಳ ಮೂಲಕ ಇಂದಿನ ತಪ್ಪುಗಳನ್ನು ತಿದ್ದಿಕೊಳ್ಳಲು ಮತ್ತು ಭವಿಷ್ಯದ ದಾರಿಯನ್ನು ಕಂಡುಕೊಳ್ಳಲು ನಮಗೆ ಸಹಾಯ ಆಗುತ್ತದೆ.
ನನಗಿರುವ ಸಾಧ್ಯತೆಗಳಲ್ಲೇ ಹೆಚ್ಚೆಚ್ವು ವೃತ್ತಿಬಾಂದವರಿಗೆ ಅವಕಾಶಗಳನ್ನು ಒದಗಿಸಿಕೊಡುವ ಪ್ರಯತ್ನ ಮಾಡಿದ್ದೇನೆ. ಈ ಜವಾಬ್ದಾರಿಯನ್ನು ನನಗೆ ಅವಕಾಶ ಇರುವವರೆಗೂ ನಾನು ಮಾಡುತ್ತಲೇ ಇರುತ್ತೇನೆ. ಇನ್ನೂ ಅನೇಕ ಹಿರಿಯರಿಗೆ ಮತ್ತು ಅನೇಕ ಸಮಕಾಲೀನ ಅರ್ಹರಿಗೆ ಅವಕಾಶಗಳು ದೊರೆತಿಲ್ಲ ಎನ್ನುವ ಅರಿವು ನನಗೂ ಇದೆ. ಮುಂದಿನ ದಿನಗಳಲ್ಲಿ ಉಳಿದ ಅರ್ಹರಿಗೂ ಅವಕಾಶ ಒದಗಿಸಿಕೊಡಲು ಪ್ರಯತ್ನಿಸುತ್ತೇನೆ ಎಂದರು.
ವೃತ್ತಿಜೀವನದಿಂದ ನಿವೃತ್ತರಾದ ನಂತರ ಅಥವಾ ಇಳಿ ವಯಸ್ಸಿನಲ್ಲಿ ಅನೇಕ ಪತ್ರಕರ್ತರು ಆರ್ಥಿಕ ಅಥವಾ ಮಾನಸಿಕ ಏಕಾಂಗಿತನ ಅನುಭವಿಸುತ್ತಾರೆ ಎನ್ನುವುದು ನನಗೆ ಗೊತ್ತಿದೆ. ಇಂತಹ ಸಮಯದಲ್ಲಿ ಪತ್ರಕರ್ತರ ಸಂಘಗಳು, ಪ್ರೆಸ್ ಕ್ಲಬ್ ನಂತಹ ಸಂಸ್ಥೆಗಳು ಅವರನ್ನು ಗುರುತಿಸಿ ಸನ್ಮಾನಿಸಿದರೆ, ಅವರಿಗೆ ಆತ್ಮವಿಶ್ವಾಸ ಮತ್ತು ಗೌರವಯುತ ಬದುಕು ನಡೆಸಲು ನೆರವಾಗುತ್ತದೆ ಎಂದರು.
ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ. ಈ ಸ್ತಂಭವನ್ನು ಭದ್ರವಾಗಿ ಕಟ್ಟಿದವರನ್ನು ಸನ್ಮಾನಿಸುವುದು ಎಂದರೆ ನಾವು ನಮ್ಮ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿದಂತೆ ಎಂದು ಭಾವಿಸುತ್ತೇನೆ ಎಂದರು.
ಸಂಕ್ರಾಂತಿ ವೇಳೆಗೆ ಜಾಹಿರಾತು ನೀತಿ
ಸಂಕ್ರಾಂತಿ ವೇಳೆಗೆ ಸರ್ಕಾರದ ಹೊಸ ಜಾಹಿರಾತು ನೀತಿ ಜಾರಿಗೆ ಬರಲಿದೆ ಎಂದು ಕೆವಿಪಿ ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯೋತ್ಸವ ಪುರಸ್ಕೃತರಾದ ಸಿದ್ದರಾಜು, ಬಿ.ಎಂ.ಹನೀಫ್, ಶಾಂತಕುಮಾರ್ ಹಾಗೂ ಮಾಹಿತಿ ಆಯುಕ್ತರಾದ ಮಹೇಶ್ ವಾಳ್ವೇಕರ್, ವೆಂಕಟ್ ಸಿಂಗ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. KUWJ ಅಧ್ಯಕ್ಷರಾದ ಶಿವಾನಂದ ತಗಡೂರು, ಉಪಾಧ್ಯಕ್ಷರಾದ ಮದನ್ ಗೌಡರು, ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಸೇರಿ ಸಂಘದ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
#KitturRaniChannammaResidentialSainikSchoolforGirlsKittur#Kittur#Belagavi#Karnataka#Sangollirayanna#Bailahongal#India#residentialschools#Educationdepartment#MahanteshSKoujalagi#cmofkarnataka#uttarkarnatakarecipe#PrabhakarKV#media_advisor_to_cm#mandya#kuwj#pressclubofindia#karnataka#cmkarnataka#rdpr#rajbhavan#governor#vidhansoudha#trend#watch#siddaramaiah#news#socialwelfaredept#castecensus#education#revenue#kuwj#pressclubofbangalore#media#snijalingappa#chitradurga#bangalore#satishjarkiholi#byrathisuresh #rajkumarcollagerajkot #rkcrajkotofficial
ರಾಜ್ಯದ ಪ್ರತಿಷ್ಠಿತ ಸಂಸ್ಥೆ ಪ್ರೆಸ್ ಕ್ಲಬ್ ಪ್ರತೀ ವರ್ಷ ಕೊಡ ಮಾಡುವ ವರ್ಷದ ವ್ಯಕ್ತಿ ಮತ್ತು ವಾರ್ಷಿಕ ಪ್ರಶಸ್ತಿ ಹಾಗೂ ವಿಶೇಷ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ಮತ್ತು ಹೊಸ ವರ್ಷ ಆಗಮನದ ಸಂಭ್ರಮಕ್ಕೆ ಸಾಕ್ಷಿಯಾಯಿತು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ವಿಶೇಷ ಅತಿಥಿಗಳಾಗಿ ಆಗಮಿಸಿ ಪ್ರಶಸ್ತಿಗಳನ್ನು ವಿತರಿಸಿ, ಪುರಸ್ಕೃತರಿಗೆ ಶುಭ ಹಾರೈಸಿದರು.
ನಾನಾ ಮಾಧ್ಯಮ ಸಂಸ್ಥೆಗಳಲ್ಲಿ ವೃತ್ತಿ ನಿರ್ವಹಿಸುತ್ತಿರುವ ಹಿರಿಯ ಮತ್ತು ಕಿರಿಯ ಪತ್ರಕರ್ತರು ವಾರ್ಷಿಕ ಪ್ರಶಸ್ತಿಗಳನ್ನು ಸ್ವೀಕರಿಸಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಇಡೀ ಕಾರ್ಯಕ್ರಮದ ಕೇಂದ್ರಬಿಂದುವಾಗಿದ್ದು ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಸನ್ಮಾನಿಸಲ್ಪಟ್ಟರು.
ಇದೇ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಹೊರ ತಂದಿರುವ ಕ್ಯಾಲೆಂಡರ್ ಮತ್ತು ಡೈರಿಯನ್ನು ಬಸವರಾಜ ಹೊರಟ್ಟಿ ಮತ್ತು ಕೆ.ವಿ.ಪ್ರಭಾಕರ್ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಮಾಧ್ಯಮ ಸಂಯೋಜಕರುಗಳಾದ ಲಕ್ಷ್ಮೀನಾರಾಯಣ್ , ಶ್ರೀಧರ್ ಸೇರಿ ಹಲವು ಪ್ರಮುಖರು ಹಾಗೂ ಮಾಹಿತಿ ಆಯುಕ್ತರುಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆ.ವಿ.ಪ್ರಭಾಕರ್ ಅವರು ಪ್ರಶಸ್ತಿ ಪುರಸ್ಕೃತರೆಲ್ಲರಿಗೂ ಅಭಿನಂದಿಸಿ ಇವರ ಸಾಧನೆ ಉಳಿದವರಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.
*ಬೆಂಗಳೂರು : ಡಿಸೇಂಬರ್ - 28* *ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರು* ಇಂದು ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ *ಜನರಾಜ್ಯೋತ್ಸವ -2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ* ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು
gadinudi kannada
Well Played..,
Still Gud Bating..,
Gud Score..,
Waiting for
Another 100days..,
@siddaramaiah_express
@kittursainikschoolkittur7226
@DKShivakumarOfficial
@panchamasalilingayatpeetan9239
@kanakadasakirtanegalu162
1 day ago | [YT] | 421
View 3 replies
gadinudi kannada
ಕಡೆಗೂ..,
ಇವತ್ತಿಗೆ ದಾಖಲೆ ಬರೆದ
ಸಿದ್ದರಾಮಯ್ಯ
ರಾಜ್ಯದ ಅತಿ ಹೆಚ್ಚು ದಿನ ಆಡಳಿತ ನಡೆಸುತ್ತಿರುವ
ಮುಖ್ಯಮಂತ್ರಿ ಎಂಬ ದಾಖಲೆ ನಿರ್ಮಿಸಿದ
ಸಿ ಎಂ ಸಿದ್ದರಾಮಯ್ಯ
@siddaramaiah_express
@kittursainikschoolkittur7226
@DKShivakumarOfficial
@PrincipalKRCSSGKittur
@panchamasalilingayatpeetan9239
1 day ago | [YT] | 222
View 4 replies
gadinudi kannada
ಚಿತ್ರ ಸಂತೆಯಲ್ಲಿ ಸಿಎಂ ಚಿತ್ರ ಬಿಡಿಸಿದ ಬಾಲಕನೊಂದಿಗೆ ಸಿದ್ದರಾಮಯ್ಯ
@siddaramaiah_express
@panchamasalilingayatpeetan9239
@DKShivakumarOfficial
@kittursainikschoolkittur7226
@kanakadasakirtanegalu162
4 days ago | [YT] | 350
View 0 replies
gadinudi kannada
ಸ್ವಾಮಿಯೇ ಶರಣಂ ಅಯ್ಯಪ್ಪ
4 days ago | [YT] | 2
View 0 replies
gadinudi kannada
ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿಪಿ
ಮಾದರಿ ಪತ್ರಕರ್ತರನ್ನು ಸನ್ಮಾನಿಸುವುದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ 'ಜಾಗೃತ ಕಣ್ಣು'ಗಳಿಗೆ ಸಲ್ಲಿಸುವ ಗೌರವವಾಗಿದೆ : ಕೆವಿಪಿ*
ಬೆಂಗಳೂರು ಜ2:
ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಚೇರಿಯಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ಮಾಹಿತಿ ಆಯುಕ್ತರಾದ ಪತ್ರಕರ್ತರಿಗೆ ಸನ್ಮಾನಿಸಿ ಅಭಿನಂದನಾ ನುಡಿಗಳನ್ನು ಆಡಿದರು.
ಇಂದು ಇಲ್ಲಿ ಸನ್ಮಾನಿತರಾಗುತ್ತಿರುವ ಐದೂ ಮಂದಿ ಪತ್ರಕರ್ತರಿಗೆ ಮತ್ತು ಇವರನ್ನು ಸನ್ಮಾನಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಾನು ಮೊದಲಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕೃತಜ್ಞತೆ ಸಲ್ಲಿಸಿದರು.
ಇವರಲ್ಲಿ ಸಿದ್ದರಾಜು ಅವರು ಹಿರಿಯರಾಗಿ ನಮಗೆಲ್ಲಾ ಮಾದರಿ ಆಗಿದ್ದವರು. ಉಳಿದವರು ನನ್ನ ಸಮಕಾಲೀನರಾಗಿ ಮಾದರಿಗಳಾಗಿರುವವರು. ಹಿರಿಯ ಮತ್ತು ಮಾದರಿ ಪತ್ರಕರ್ತರನ್ನು ಸನ್ಮಾನಿಸುವುದು ಕೇವಲ ಒಂದು ಶಿಷ್ಟಾಚಾರವಲ್ಲ, ಅದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ 'ಜಾಗೃತ ಕಣ್ಣು'ಗಳಿಗೆ ಸಲ್ಲಿಸುವ ಗೌರವವಾಗಿದೆ.
ಇಲ್ಲಿ ಸನ್ಮಾನಿತರಾಗುತ್ತಿರುವ ಪತ್ರಕರ್ತ ಸ್ನೇಹಿತರು ದಶಕಗಳ ಕಾಲ ಸಮಾಜದ ಏರಿಳಿತಗಳನ್ನು ಹತ್ತಿರದಿಂದ ಕಂಡಿದ್ದಾರೆ. ಗೂಗಲ್, ಜಿ-ಮೇಲ್, ವಾಟ್ಸಾಪ್ ನಂತಹ ತಂತ್ರಜ್ಞಾನವಿಲ್ಲದ ಕಾಲದಿಂದ ಹಿಡಿದು ಅಪಾರ ತಂತ್ರಜ್ಞಾನದ ಹಾವಳಿಯ ಕಾಲಘಟ್ಟದ ಎರಡೂ ಸಂದರ್ಭಗಳ ಪತ್ರಿಕೋದ್ಯಮಕ್ಕೂ ಸಾಕ್ಷಿಯಾಗಿರುವವರು ಎಂದು ಮೆಚ್ಚುಗೆ ಸೂಚಿಸಿದರು.
ತಂತ್ರಜ್ಞಾನ ಇಲ್ಲದಿದ್ದಾಗ ಸತ್ಯವನ್ನು ಹುಡುಕಿ ಹೊರತಂದ ಇವರ ಕಾಳಜಿ, ಪರಿಶ್ರಮ, ವೃತ್ತಿಪರತೆಗೆ ಸನ್ಮಾನವು ಒಂದು ರೀತಿಯ ಮಾನ್ಯತೆ ತಂದು ಕೊಟ್ಟಿದೆ.
ತಂತ್ರಜ್ಞಾನ ಇಲ್ಲದಿದ್ದಾಗಲೂ ಸತ್ಯದ ತೇರು ಎಳೆದ ಪತ್ರಕರ್ತರು, ಈಗ ತಂತ್ರಜ್ಞಾನದ ಯುಗದಲ್ಲೂ ಸತ್ಯ ಕಾಣಲು ಸಾಧ್ಯವಾಗದ ಯುವ ಪೀಳಿಗೆಗೆ ಮಾದರಿ ಮತಗತು ಪ್ರೇರಣೆ ಆಗಿದ್ದಾರೆ ಎಂದರು.
ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ. ಹಿರಿಯರನ್ನು ಗೌರವಿಸುವುದರಿಂದ, ಉದಯೋನ್ಮುಖ ಪತ್ರಕರ್ತರಿಗೆ ಮೌಲ್ಯಾಧಾರಿತ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಮತ್ತು ಸ್ಫೂರ್ತಿ ಮೂಡುತ್ತದೆ. ಈ ಅರ್ಥಪೂರ್ಣ ಕೆಲಸವನ್ನು ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ ಎಂದರು.
ಸಾಮಾಜಿಕ ಜವಾಬ್ದಾರಿಯನ್ನು ಗುರುತಿಸುವುದೂ ಜವಾಬ್ದಾರಿಯುತ ಕೆಲಸ. ಸಾಮಾಜಿಕ ಕಾಳಜಿಗಳನ್ನು ಕಾಪಾಡಿಕೊಂಡಿರುವವರನ್ನು ಗುರುತಿಸುವುದು ಮತ್ತು ಸನ್ಮಾನಿಸುವುದರಿಂದ "ಸಮಾಜವು ಪ್ರಾಮಾಣಿಕ ಸೇವೆಯನ್ನು ಎಂದಿಗೂ ಮರೆಯುವುದಿಲ್ಲ" ಎಂಬ ಸಂದೇಶ ಕೊಟ್ಟಂತೆ ಆಗುತ್ತದೆ.
ಇದು ಸಮಾಜದಲ್ಲಿ ಸತ್ಯವಂತರ, ಸಾಮಾಜಿಕ ಕಾಳಜಿ ಇಟ್ಟುಕೊಂಡವರ ಪರವಾಗಿ ನಿಲ್ಲುವ ಧೈರ್ಯವನ್ನು ತುಂಬುತ್ತದೆ.
ಇತಿಹಾಸದ ಕೊಂಡಿಯಾಗಿ
ಹಿರಿಯ ಪತ್ರಕರ್ತರು ಒಂದು ಕಾಲಘಟ್ಟದ ಜೀವಂತ ಇತಿಹಾಸವಿದ್ದಂತೆ. ಅವರನ್ನು ಸನ್ಮಾನಿಸುವ ನೆಪದಲ್ಲಿ ಅವರ ಅನುಭವದ ನುಡಿಗಳನ್ನು ದಾಖಲಿಸುವ ಕೆಲಸವನ್ನೂ ಕಾರ್ಯನಿರತ ಪತ್ರಕರ್ತರ ಸಂಘ ಮಾಡಬೇಕು ಎಂದು ಕರೆ ನೀಡಿದರು.
ನಮ್ಮ ಹಿಂದಿನವರು ಮತ್ತು ಸಮಕಾಲೀನ ಮಾದರಿಗಳ ಮೂಲಕ ಇಂದಿನ ತಪ್ಪುಗಳನ್ನು ತಿದ್ದಿಕೊಳ್ಳಲು ಮತ್ತು ಭವಿಷ್ಯದ ದಾರಿಯನ್ನು ಕಂಡುಕೊಳ್ಳಲು ನಮಗೆ ಸಹಾಯ ಆಗುತ್ತದೆ.
ನನಗಿರುವ ಸಾಧ್ಯತೆಗಳಲ್ಲೇ ಹೆಚ್ಚೆಚ್ವು ವೃತ್ತಿಬಾಂದವರಿಗೆ ಅವಕಾಶಗಳನ್ನು ಒದಗಿಸಿಕೊಡುವ ಪ್ರಯತ್ನ ಮಾಡಿದ್ದೇನೆ. ಈ ಜವಾಬ್ದಾರಿಯನ್ನು ನನಗೆ ಅವಕಾಶ ಇರುವವರೆಗೂ ನಾನು ಮಾಡುತ್ತಲೇ ಇರುತ್ತೇನೆ. ಇನ್ನೂ ಅನೇಕ ಹಿರಿಯರಿಗೆ ಮತ್ತು ಅನೇಕ ಸಮಕಾಲೀನ ಅರ್ಹರಿಗೆ ಅವಕಾಶಗಳು ದೊರೆತಿಲ್ಲ ಎನ್ನುವ ಅರಿವು ನನಗೂ ಇದೆ. ಮುಂದಿನ ದಿನಗಳಲ್ಲಿ ಉಳಿದ ಅರ್ಹರಿಗೂ ಅವಕಾಶ ಒದಗಿಸಿಕೊಡಲು ಪ್ರಯತ್ನಿಸುತ್ತೇನೆ ಎಂದರು.
ವೃತ್ತಿಜೀವನದಿಂದ ನಿವೃತ್ತರಾದ ನಂತರ ಅಥವಾ ಇಳಿ ವಯಸ್ಸಿನಲ್ಲಿ ಅನೇಕ ಪತ್ರಕರ್ತರು ಆರ್ಥಿಕ ಅಥವಾ ಮಾನಸಿಕ ಏಕಾಂಗಿತನ ಅನುಭವಿಸುತ್ತಾರೆ ಎನ್ನುವುದು ನನಗೆ ಗೊತ್ತಿದೆ. ಇಂತಹ ಸಮಯದಲ್ಲಿ ಪತ್ರಕರ್ತರ ಸಂಘಗಳು, ಪ್ರೆಸ್ ಕ್ಲಬ್ ನಂತಹ ಸಂಸ್ಥೆಗಳು ಅವರನ್ನು ಗುರುತಿಸಿ ಸನ್ಮಾನಿಸಿದರೆ, ಅವರಿಗೆ ಆತ್ಮವಿಶ್ವಾಸ ಮತ್ತು ಗೌರವಯುತ ಬದುಕು ನಡೆಸಲು ನೆರವಾಗುತ್ತದೆ ಎಂದರು.
ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ. ಈ ಸ್ತಂಭವನ್ನು ಭದ್ರವಾಗಿ ಕಟ್ಟಿದವರನ್ನು ಸನ್ಮಾನಿಸುವುದು ಎಂದರೆ ನಾವು ನಮ್ಮ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿದಂತೆ ಎಂದು ಭಾವಿಸುತ್ತೇನೆ ಎಂದರು.
ಸಂಕ್ರಾಂತಿ ವೇಳೆಗೆ ಜಾಹಿರಾತು ನೀತಿ
ಸಂಕ್ರಾಂತಿ ವೇಳೆಗೆ ಸರ್ಕಾರದ ಹೊಸ ಜಾಹಿರಾತು ನೀತಿ ಜಾರಿಗೆ ಬರಲಿದೆ ಎಂದು ಕೆವಿಪಿ ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯೋತ್ಸವ ಪುರಸ್ಕೃತರಾದ ಸಿದ್ದರಾಜು, ಬಿ.ಎಂ.ಹನೀಫ್, ಶಾಂತಕುಮಾರ್ ಹಾಗೂ ಮಾಹಿತಿ ಆಯುಕ್ತರಾದ ಮಹೇಶ್ ವಾಳ್ವೇಕರ್, ವೆಂಕಟ್ ಸಿಂಗ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. KUWJ ಅಧ್ಯಕ್ಷರಾದ ಶಿವಾನಂದ ತಗಡೂರು, ಉಪಾಧ್ಯಕ್ಷರಾದ ಮದನ್ ಗೌಡರು, ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಸೇರಿ ಸಂಘದ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
#KitturRaniChannammaResidentialSainikSchoolforGirlsKittur #Kittur #Belagavi #Karnataka #Sangollirayanna #Bailahongal #India #residentialschools #Educationdepartment #MahanteshSKoujalagi #cmofkarnataka #uttarkarnatakarecipe #PrabhakarKV #media_advisor_to_cm #mandya #kuwj #pressclubofindia #karnataka #cmkarnataka #rdpr #rajbhavan #governor #vidhansoudha #trend #watch #siddaramaiah #news #socialwelfaredept #castecensus #education #revenue #kuwj #pressclubofbangalore #media #snijalingappa #chitradurga #bangalore #satishjarkiholi #byrathisuresh
#rajkumarcollagerajkot
#rkcrajkotofficial
6 days ago | [YT] | 13
View 0 replies
gadinudi kannada
ರಾಜ್ಯದ ಪ್ರತಿಷ್ಠಿತ ಸಂಸ್ಥೆ ಪ್ರೆಸ್ ಕ್ಲಬ್ ಪ್ರತೀ ವರ್ಷ ಕೊಡ ಮಾಡುವ ವರ್ಷದ ವ್ಯಕ್ತಿ ಮತ್ತು ವಾರ್ಷಿಕ ಪ್ರಶಸ್ತಿ ಹಾಗೂ ವಿಶೇಷ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ಮತ್ತು ಹೊಸ ವರ್ಷ ಆಗಮನದ ಸಂಭ್ರಮಕ್ಕೆ ಸಾಕ್ಷಿಯಾಯಿತು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ವಿಶೇಷ ಅತಿಥಿಗಳಾಗಿ ಆಗಮಿಸಿ ಪ್ರಶಸ್ತಿಗಳನ್ನು ವಿತರಿಸಿ, ಪುರಸ್ಕೃತರಿಗೆ ಶುಭ ಹಾರೈಸಿದರು.
ನಾನಾ ಮಾಧ್ಯಮ ಸಂಸ್ಥೆಗಳಲ್ಲಿ ವೃತ್ತಿ ನಿರ್ವಹಿಸುತ್ತಿರುವ ಹಿರಿಯ ಮತ್ತು ಕಿರಿಯ ಪತ್ರಕರ್ತರು ವಾರ್ಷಿಕ ಪ್ರಶಸ್ತಿಗಳನ್ನು ಸ್ವೀಕರಿಸಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಇಡೀ ಕಾರ್ಯಕ್ರಮದ ಕೇಂದ್ರಬಿಂದುವಾಗಿದ್ದು ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಸನ್ಮಾನಿಸಲ್ಪಟ್ಟರು.
ಇದೇ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಹೊರ ತಂದಿರುವ ಕ್ಯಾಲೆಂಡರ್ ಮತ್ತು ಡೈರಿಯನ್ನು ಬಸವರಾಜ ಹೊರಟ್ಟಿ ಮತ್ತು ಕೆ.ವಿ.ಪ್ರಭಾಕರ್ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಮಾಧ್ಯಮ ಸಂಯೋಜಕರುಗಳಾದ ಲಕ್ಷ್ಮೀನಾರಾಯಣ್ , ಶ್ರೀಧರ್ ಸೇರಿ ಹಲವು ಪ್ರಮುಖರು ಹಾಗೂ ಮಾಹಿತಿ ಆಯುಕ್ತರುಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆ.ವಿ.ಪ್ರಭಾಕರ್ ಅವರು ಪ್ರಶಸ್ತಿ ಪುರಸ್ಕೃತರೆಲ್ಲರಿಗೂ ಅಭಿನಂದಿಸಿ ಇವರ ಸಾಧನೆ ಉಳಿದವರಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.
@siddaramaiah_express
@DKShivakumarOfficial
@siddaramaiah_express
@panchamasalilingayatpeetan9239
@PrincipalKRCSSGKittur
1 week ago | [YT] | 28
View 0 replies
gadinudi kannada
*ಬೆಂಗಳೂರು : ಡಿಸೇಂಬರ್ - 28*
*ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರು* ಇಂದು ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ *ಜನರಾಜ್ಯೋತ್ಸವ -2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ* ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು
@siddaramaiah_express
@kittursainikschoolkittur7226
@kanakadasakirtanegalu162
@DKShivakumarOfficial
1 week ago | [YT] | 367
View 2 replies
gadinudi kannada
ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು, ಚಿಕ್ಕೋಡಿಯಲ್ಲಿ ನಡೆದ ಚಿಕ್ಕೋಡಿ ತಾಲೂಕು ಸಕಲ ಮರಾಠ ಸಮಾಜ ಮಹಾಮೇಳದಲ್ಲಿ ಭಾಗವಹಿಸಿ ಮಾತನಾಡಿದರು.
ಮಾಜಿ ಸಚಿವರಾದ ಶ್ರೀ ಶ್ರೀಮಂತ ಪಾಟೀಲ್, ಸಮಾಜದ ಹಲವಾರು ಮುಖಂಡರು ಈ ವೇಳೆ ಉಪಸ್ಥಿತರಿದ್ದರು.
@siddaramaiah_express
1 week ago | [YT] | 274
View 1 reply
gadinudi kannada
ಜೊಡೆತ್ತುಗಳ ಪಿಸುಮಾತು ಸಿಎಂ-ಡಿಸಿಎಂ
@siddaramaiah_express
@kittursainikschoolkittur7226
@DKShivakumarOfficial
@kanakadasakirtanegalu162
@siddaramaiahmediaofficial
1 week ago | [YT] | 184
View 4 replies
gadinudi kannada
ರಾಜ್ಯ ಸರ್ಕಾರಿ ನೌಕರ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು
@siddaramaiah_express
@kittursainikschoolkittur7226
@siddaramaiah_express
@DKShivakumarOfficial
@panchamasalilingayatpeetan9239
2 weeks ago | [YT] | 263
View 0 replies
Load more