Karnataka Ayuktha. Tv

ayuktha.tv news 01 channel


Karnataka Ayuktha. Tv

ದೇವೇಗೌಡ ಅವರ ಪತ್ರಿಕಾಗೋಷ್ಠಿ

4 weeks ago | [YT] | 2

Karnataka Ayuktha. Tv

ಪತ್ರಿಕಾ ದಿನಾಚರಣೆ ಪ್ರಯುಕ್ತ ಮಂತ್ರಿ ರಾಮಲಿಂಗ ರೆಡ್ಡಿ ಅವರನ್ನು ಆಹ್ವಾನಿಸಲು ಹೋದಾಗ ಬೆಂಗಳೂರ್ ನಗರ ಜಿಲ್ಲೆ ಅಧ್ಯಕ್ಷರಾದ ಸೋಮಶೇಖರ್ ಗಾಂಧಿ ಅವರಿಗೆ ಸಚಿವರು ಸನ್ಮಾನಿಸಿದ ಸಂದರ್ಭ

1 month ago | [YT] | 1

Karnataka Ayuktha. Tv

ಸಂಪುಟ ಸೇರ್ಪಡೆಗೆ ಮ್ಯಾನೇಜ್ಮೆಂಟ್, ಪೇಮೆಂಟ್ ಕೋಟಾ!!*

*ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ*

*ಸಚಿವ ಸ್ಥಾನ ಆಕಾಂಕ್ಷಿಗಳಿಂದ ಹಣ ವಸೂಲಿ*


*ಬೆಂಗಳೂರು 22 ಜೂನ್ 2026*

ಸಂಪುಟ ಸೇರ್ಪಡೆ ವಿಷಯದಲ್ಲಿ ಮ್ಯಾನೇಜ್ ಮೆಂಟ್ ಕೋಟಾ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.


ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು; ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಮಂತ್ರಿಯಾಗಲು ಮ್ಯಾನೇಜ್‌ಮೆಂಟ್ ಇಲ್ಲವೇ ಪೇಮೆಂಟ್ ಕೋಟಾದಲ್ಲಿ ಸಚಿವರಾಗಲು ದೊಡ್ಡ ಪ್ರಮಾಣದಲ್ಲಿ ಲಾಬಿ ನಡೆಯುತ್ತಿದೆ ಎಂದು ಆರೋಪಿಸಿದರು.


ಸಂಪುಟ ಆಕಾಂಕ್ಷಿಗಳಿಂದ ಸಿಎಂ ಡಿಕೆಶಿ ವಸೂಲಿ ಮಾಡುತ್ತಿದ್ದಾರೆ. ಹೈಕಮಾಂಡ್ ಗೆ ಕೊಡಬೇಕು ಎಂದು ಶಾಸಕರಿಂದ ಹಣ ಪೀಕುತ್ತಿರುವ ಮಾಹಿತಿ ಇದೆ. ಮ್ಯಾನೆಜ್‌ಮೆಂಟ್ ಕೋಟಾಕ್ಕೆ ಶೇಕಡ 5%, ಪೇಮೆಂಟ್ ಕೋಟಾಕ್ಕೆ 95% ಸೀಟುಗಳನ್ನು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.

ಇಂತಹ. ಪೇಮೆಂಟ್ ಸೀಟುಗಳನ್ನು ಪಡೆಯಲು ಯಾರು ಅರ್ಹರಿರುತ್ತಾರೋ ಅಂತಹವರು ಮಾತ್ರ ಮಂತ್ರಿಯಾಗಲು ಸಾಧ್ಯ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು. ಇದಕ್ಕೆ ಹಾಕಿ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ ಎಂದು ಅವರು ಹೇಳಿದರು.


ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯುವುದಕ್ಕೆ ಸರ್ಕಾರಿ ಮತ್ತು ಮ್ಯಾನೇಜ್ ಮೆಂಟ್ ಕೋಟಾ ಎಂದು ಇರುತ್ತದೆ. ಆ ಬಗ್ಗೆ ನಾನು ಕೇಳಿದ್ದೇನೆ. ಆದರೆ ಕರ್ನಾಟಕದಲ್ಲಿ ಸಂಪುಟ ಸೇರ್ಪಡೆಗೆ ಹೈಕಮಾಂಡ್ ಕೋಟಾ, ಮ್ಯಾನೇಜ್ಮೆಂಟ್ ಕೋಟಾ ಎಂದು ಶುರುವಾಗಿದೆ. ಮಂತ್ರಿ ಆಗಬೇಕಾದರೆ ಕಾಸು ಕೊಡಬೇಕು. ಎಗ್ಗಿಲ್ಲದೆ ವಸೂಲಿ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

*Ends*

1 month ago | [YT] | 3

Karnataka Ayuktha. Tv

ಕುಲಾಧಿಪತಿಗಳಾದ ಜೂನ್ 22 ಮತ್ತು 23 /2026 ರಂದು ಆದಿಚುಂಚನಗಿರಿ ವಿಶ್ವವಿದ್ಯಾಲಯದ ಆದಿಚುಂಚನಗಿರಿ ಇನ್ಸಿಟ್ಯೂಟ್ ಆಫ್ ಮಾಲಿಕ್ಯೂಲರ್ ಮೆಡಿಸಿನ್ ಕಾಲೇಜಿನಲ್ಲಿ ಎರಡು ದಿನದ ಅಂತರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದಿಚುಂಚನಗಿರಿ ವಿಶ್ವ ವಿದ್ಯಾಲಯದ ८. ३९ ३९३९ ಪರಮಪೂಜ್ಯ ಜಗದ್ಗುರು ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರು ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ನಮ್ಮ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹೋಟ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾನ್ಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣ್ ಪ್ರಕಾಶ್ ರುದ್ರಪ್ಪ ಪಾಟೀಲ್ ಹಾಗೂ శ్రీ ఎనా ಮಾನ್ಯ ಶಾಸಕರು ಹಾಗೂ ಮಾಜಿ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರೊ ಕೆ ಎನ್ ಗಣೇಶ್ ಎಸ್ ಇ ಆರ್ ಬಿ ನ್ಯಾಷನಲ್ ಸೈನ್ಸ್ ನ ಅಧ್ಯಕ್ಷರು ಹಾಗೂ ಐಐಎಸ್ ಇ ಆರ್ ತಿರುಪತಿಯ ನಿಕಟಪೂರ್ವ ನಿರ್ದೇಶಕರು ಉಪಸ್ಥಿತರಿರುತ್ತಾರೆ. ಮೈಸೂರು ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿ ವಿ ಯ ವಿಶ್ರಾಂತ ಕುಲಪತಿಗಳು ಹಾಗೂ ಎನ್ ಎ ಎಸ್ ಐ ಪೀಠದ ಗೌರವಾನ್ವಿತ ಪ್ರಾಧ್ಯಾಪಕರಾದ ಪ್ರೊ ಕೆ ಎಸ್ ರಂಗಪ್ಪ ಅವರು ಹಾಗೂ ಜಪಾನಿನ ಹಾಕ್ಕೊಡೋ ವಿ ವಿಯ ಹಿರಿಯ ಪ್ರಾಧ್ಯಾಪಕರಾದ ಪ್ರೊ ಶಿನ್ ಇಚಿರೊನಿಶಿಮುರ ಅವರು ಭಾಗವಹಿಸಲಿದ್ದಾರೆ. ಈ ಅಂತರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಜಪಾನ್ ಇತಿಯೋಫಿಯಾ ಸೇರಿದಂತೆ ವಿವಿಧ ದೇಶಗಳಿಂದ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲು 13ಜನ ಹಿರಿಯ ಸಂಶೋಧಕರು, ಪ್ರಾಧ್ಯಪಕರು ಆಗಮಿಸಲಿದ್ದಾರೆ.

ವಿಚಾರ ಸಂಕಿರಣದಲ್ಲಿ ವಿ ವಿ ಯ ಕುಲಪತಿಗಳಾದ ಕರ್ನಲ್ ಡಾ. ಎಸ್ ಎನ್ ಶ್ರೀಧರ ಹಾಗೂ ಕುಲಸಚಿವರಾದ ಡಾ. ಸಿ ಕೆ ಸುಬ್ಬರಾಯ. ವಿ ವಿಯ ಅಕಾಡೆಮಿಕ್ ಮುಖ್ಯಸ್ಥರಾದ ಡಾ. ಬಿ ರಮೇಶ್ ಅವರು ಹಾಗೂ ಆದಿಚುಂಚನಗಿರಿ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರಾದ ಡಾ. ಎಮ್ ಜಿ ಶಿವರಾಮು ಅವರು ಈ ಕಾರ್ಯಕ್ರಮ

1 month ago | [YT] | 4

Karnataka Ayuktha. Tv

Phoenix Mall of Asia, Bengaluru Launches Phoenix Shopping Festival 2026 with Actor Karan Kundrra

Bengaluru's most indulgent shopping celebration returns with End of Season Sale shopping, Flat 50% off, exciting gifts and rewards, and a chance to win a Mahindra XUV7X0



Bengaluru, 13th June 2026 - Phoenix Mall of Asia, Bengaluru, Bengaluru’s leading destination for luxury retail and experiences, today officially launched the much-anticipated Phoenix Shopping Festival 2026, marking the beginning of a two-month long celebration of shopping, entertainment and rewarding experiences. The festival was inaugurated by Bollywood Star Karan Kundrra, who joined shoppers and visitors at the mall for an evening of festivities, entertainment and celebrations.

Running through July, the Phoenix Shopping Festival 2026 offers shoppers two months of End of Season Sale shopping with flat 50% off across a wide spectrum of fashion, beauty, lifestyle, accessories and home categories. Combining iconic brands, grand rewards, live entertainment, culinary experiences and destination-led attractions, the festival brings together some of the most exciting retail and lifestyle experiences of the season. Further enhancing the shopping experience, the festival offers an exciting rewards programme featuring daily and weekly prizes, luxury giveaways and the grand bumper prize, a Mahindra XUV7X0.

The launch witnessed enthusiastic participation from shoppers, fans and visitors, setting the tone for what promises to be one of the city's most engaging retail celebrations. With an unmatched mix of international luxury labels, premium brands, dining destinations and entertainment experiences, Phoenix Mall of Asia continues to strengthen its position as one of Bengaluru's most sought-after lifestyle destinations.

Speaking on the occasion, Mr. Gajendra Singh Rathod, Director of Malls – South India, The Phoenix Mills Ltd. said, "Consumers today are looking for experiences that make every visit feel worthwhile. While value remains important, people are also seeking excitement, discovery and opportunities to engage with brands in meaningful ways. Shopping festivals bring these elements together, creating occasions that encourage exploration and strengthen the connection between consumers, brands and destinations. The Phoenix Shopping Festival reflects this shift by combining retail, entertainment and rewarding experiences within a single platform."

Commenting on the launch, Ritu Mehta, Centre Director – Phoenix Mall of Asia & Director Marketing (South), said, "Bengaluru continues to be one of India's most dynamic retail markets, with consumers actively seeking new brands, experiences and reasons to spend time together. We have seen growing participation in destination-led events that combine shopping with entertainment and social engagement. The Phoenix Shopping Festival has been curated around these evolving preferences, creating an experience that rewards shoppers while celebrating the vibrant retail ecosystem that Phoenix Mall of Asia brings together."

The launch sets the stage for a celebration that brings together shoppers, brands and experiences in one of the city's most dynamic retail environments.

About Phoenix Mall of Asia: Phoenix Mall of Asia, located in North Bengaluru, is the epitome of luxury shopping, dining, and entertainment. Renowned as India’s premier ultra-luxury retail destination, the mall offers an unparalleled experience in the city’s heart. It sets new standards in design and amenities, creating a sophisticated and immersive environment for visitors. The mall's grand entrance welcomes guests into a world of elegance and style, with popular zones like Luxe Atria and Eden, which are prime photo spots due to their stunning aesthetics. The Fanpark area is the hub of activities and events, enhancing the overall experience. Phoenix Mall of Asia boasts over 440 brands, including 150+ international luxury labels and 50+ debut brands like Golden Goose, Rolex, IWC, ZARA, YSL cosmetics, D&G cosmetics and many more making it a haven for discerning shoppers. The mall also features exceptional dining destinations with renowned chefs and diverse culinary offerings. Restaurants such as Ishaara, Dobaraa, EIGHT, Andreas, and Kylin Experience cater to every palate, while the nature-themed central atrium, Oasis, is surrounded by international cafes like Starbucks, Tim Hortons, Perch, Andreas Brasserie, and Magnolia Bakery. Foodthopia, a 38,000 sq. ft area dedicated to dining, offers a cosmopolitan experience with a variety of eateries, including game day restaurants, cafes, and fine dining options. Beyond shopping and dining, the mall provides a wide range of sports, entertainment, and leisure activities for all ages. The introduction of Bengaluru’s largest cinema, the PVR INOX 14-screen multiplex, adds a unique touch to the entertainment lineup. With a state-of-the-art infrastructure spanning over 13 acres and 1.25 million square feet of retail space, Phoenix Mall of Asia seamlessly blends luxury and leisure, ensuring every visit is a memorable experience.

1 month ago | [YT] | 2

Karnataka Ayuktha. Tv

ಫುಡ್ ಚೈನ್ ಕ್ಯಾಂಪೇನ್, ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗದಲ್ಲಿ ಹಾಗೂ ಗೌಶುಭಂ ಫೌಂಡೇಶನ್‌ನ ಆಶ್ರಯದಲ್ಲಿ.

1 month ago | [YT] | 2

Karnataka Ayuktha. Tv

ನನ್ನ ಮತ್ತು ಮೋದಿಯವರ ನಡುವಿನ ಬಾಂಧವ್ಯ ಒಂದು ರಾಜ್ಯಸಭೆ ಸ್ಥಾನವನ್ನು ಮೀರಿದ್ದು ಎಂದ ಹೆಚ್.ಡಿ.ದೇವೇಗೌಡರು*

*ರಾಜ್ಯಸಭೆ ಸ್ಥಾನದ ಬಗ್ಗೆ ನನಗೆ ವ್ಯಾಮೋಹವಿಲ್ಲ, ಅದರ ಬಗ್ಗೆ ನಾನು ಬೇಡಿಕೆ ಇಟ್ಟಿರಲಿಲ್ಲ*


*ಕಳೆದೆರಡು ದಿನಗಳಿಂದ ನಡೆಯುತ್ತಿರುವ ಅನಗತ್ಯ ಚರ್ಚೆಗೆ ತೆರೆ ಎಳೆದ ಮಾಜಿ ಪ್ರಧಾನಿಗಳು*

*ಸುಮ್ಮನೆ ಕೂರುವುದಿಲ್ಲ, ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದ ಗೌಡರು*


*ಬೆಂಗಳೂರು 10 ಜೂನ್ 2026*

ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಬಾಂಧವ್ಯವು ರಾಜ್ಯಸಭೆ ಸ್ಥಾನವನ್ನು ಮೀರಿದ್ದು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನೇರ ಮಾತುಗಳಲ್ಲಿ ಹೇಳಿದರು.


ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕಿಕ್ಕಿರಿದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಮಾಜಿ ಪ್ರಧಾನಿಗಳು.

ಎಪ್ಪತ್ತು ವರ್ಷಗಳ ಸುದೀರ್ಘ ರಾಜಕೀಯ ಜೀವನ ಸವೆಸಿರುವ ನನಗೆ ರಾಜ್ಯಸಭೆ ಸದಸ್ಯನಾಗಬೇಕು ಎಂಬ ವ್ಯಾಮೋಹವಿಲ್ಲ. ಸುದೀರ್ಘ ರಾಜಕೀಯ ಜೀವನದಲ್ಲಿ ಅಧಿಕಾರಕ್ಕಿಂತ ಜನಸೇವೆಯೇ ಮುಖ್ಯವಾಗಿತ್ತು ಎಂಬುದನ್ನು ಅತ್ಯಂತ ವಿನಯಪೂರ್ವಕವಾಗಿ ಹೇಳಲು ಬಯಸುತ್ತೇನೆ ಎಂದರು ಅವರು.

ಕಳೆದೆರಡು ದಿನಗಳಿಂದ ರಾಜ್ಯಸಭೆ ಸ್ಥಾನದ ವಿಚಾರದಲ್ಲಿ ತಮ್ಮ ಬಗ್ಗೆ ನಡೆಯುತ್ತಿರುವ ಚರ್ಚೆಗೆ ತೆರೆ ಎಳೆದ ಮಾಜಿ ಪ್ರಧಾನಿಗಳು; ಈ ಚರ್ಚೆ ಅನಗತ್ಯ. ಕೆಲವರು ಸುಖಾಸುಮ್ಮನೆ ಮಾತಾಡುತ್ತಿದ್ದಾರೆ. ಈ ವಿಚಾರದಲ್ಲಿ ನನಗೆ ಅಪಮಾನವಾಗಿದೆ ಎಂಬ ಹೇಳಿಕೆಗಳಿಗೆ ಯಾವುದೇ ಮಹತ್ವವನ್ನು ನಾನು ನೀಡುವುದಿಲ್ಲ. ಅದರಲ್ಲಿ ಯಾವುದೇ ಅರ್ಥವೂ ಇಲ್ಲ ಎಂದು ಹೇಳಿದರು.


ನನ್ನ ಮತ್ತು ಪ್ರಧಾನಿ ಮೋದಿ ಅವರ ನಡುವೆ ಉತ್ತಮ ಬಾಂಧವ್ಯ ಇದೆ. ಒಂದು ರಾಜ್ಯಸಭೆ ಸ್ಥಾನ ಇಂತಹ ಉತ್ತಮ ಬಾಂಧವ್ಯವನ್ನು ಹಾಳು ಮಾಡುತ್ತದೆ ಎಂದು ಯಾರಾದರೂ ಭಾವಿಸಿದ್ದರೆ ಅದು ಅವರ ಮೂರ್ಖತನ. ಒಂದು ಕಾಲದಲ್ಲಿ ನಾನು ಮೋದಿಯವರನ್ನು ಕಟುವಾಗಿ ಟೀಕಿಸಿದ್ದೆ ಎಂಬುದು ನಿಜ. ಆದರೆ ಕಳೆದ ಹಲವು ವರ್ಷಗಳಿಂದ ನಾನು ಅವರನ್ನು ಬಹಳಷ್ಟು ಅರ್ಥ ಮಾಡಿಕೊಂಡಿದ್ದೇನೆ. ಅವರಲ್ಲಿ ವಿಶ್ವಾಸ ಇರಿಸಿದ್ದೇನೆ. ಅವರ ಒಳ್ಳೆಯ ಕೆಲಸಗಳನ್ನು ಹೃದಯಪೂರ್ವಕವಾಗಿ ಶ್ಲಾಘಿಸಿದ್ದೇನೆ ಎಂದು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು.


ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆಗಳಿಗೆ ಅತೀವ ಬೇಸರ ವ್ಯಕ್ತಪಡಿಸಿದ ದೇವೇಗೌಡರು; ನಾನು ಸುಮ್ಮನೆ ಕೂರುವುದಿಲ್ಲ. ಪಕ್ಷದ ಬಲವರ್ಧನೆಗೆ ನನ್ನ ಶಕ್ತಿ ಮೀರಿ‌ ಕೆಲಸ‌ ಮಾಡುತ್ತೇನೆ. ರಾಜ್ಯ ಮತ್ತು ದೇಶದ ವಿಚಾರಗಳನ್ನು ಸಂಸತ್ತಿನ ಒಳಗೆ ಮತ್ತು ಹೊರಗೆಯು ನೇರವಾಗಿ ಮಾತನಾಡಿದ್ದೇನೆ ಎಂದು ಹೇಳಿದರು.



ನರೇಂದ್ರ ಮೋದಿ ಅವರ ಬಗ್ಗೆ ಭಾರತ ಅಷ್ಟೇ ಅಲ್ಲ ಜಗತ್ತಿನ ಎಲ್ಲಾ ಭಾಗಗಳಲ್ಲಿಯೂ ಗೌರವಭಾವ ಇದೆ. ಅದರಿಂದ ರಾಷ್ಟ್ರಕೂ ಒಳ್ಳೆಯದಾಗುತ್ತಿದೆ. ಅವರ ಮಟ್ಟಕ್ಕೆ ಯಾವ ನಾಯಕನು ಬೆಳೆಯಲು ಸಾಧ್ಯವಿಲ್ಲ. ಅವರೊಂದಿಗೆ ನಾನು ಹೊಂದಿರುವ ಬಾಂಧವ್ಯ ವೈಯಕ್ತಿಕ ಮಟ್ಟದ್ದು. ಅದನ್ನು ರಾಜಕೀಯ ಕಾರಣಕ್ಕಾಗಿ ಕಳೆದುಕೊಳ್ಳಲು ಬಯಸುವುದಿಲ್ಲ. ನಾನು ಸಂಸತ್ತಿನಲ್ಲಿ ಇರಲಿ ಇಲ್ಲರಲಿ ಮೋದಿ ಅವರ ನಡುವಿನ ಸಂಬಂಧಕ್ಕೆ ದಕ್ಕೆ ಬರುವುದಿಲ್ಲ. ಕೊನೆಯವರೆಗೂ ನಮ್ಮ ಸಂಬಂಧ ಹೀಗೆ ಇರುತ್ತದೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟಪಡಿಸಿದರು.


ತಮ್ಮ ರಾಜಕೀಯ ಜೀವನದ ಆರಂಭದ ದಿನಗಳನ್ನು ಸ್ಮರಿಸಿದ ದೇವೇಗೌಡರು, 'ನಾನು ರಾಜಕಾರಣಕ್ಕೆ ಬಂದು ಎಷ್ಟು ವರ್ಷವಾಯಿತು ಎಂದು ಒಮ್ಮೆ ಯೋಚಿಸಿ. 1954-55 ರಿಂದಲೇ ನಾನು ಸಕ್ರಿಯ ರಾಜಕಾರಣದಲ್ಲಿದ್ದೇನೆ. ಅಂದು ಕೇವಲ ಗುತ್ತಿಗೆ ಕೆಲಸ ಮಾಡುತ್ತಿದ್ದ ನಾನು, ಅದರ ಜೊತೆಜೊತೆಗೆ ಜನರ ಕಷ್ಟಗಳಿಗೆ ಸ್ಪಂದಿಸುತ್ತಾ ರಾಜಕೀಯಕ್ಕೆ ಬಂದವನು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಜನರ ಮಧ್ಯೆಯೇ ಇದ್ದೇನೆ. ಹಾಗಾಗಿ, ಇಂದು ಒಂದು ಸ್ಥಾನಕ್ಕಾಗಿ ನಾನು ಹಾತೊರೆಯುವ ಅಗತ್ಯವಿಲ್ಲ ಎಂದರು.


ರಾಜ್ಯಸಭೆ ಸ್ಥಾನ ತಪ್ಪಿಸಿ ಬಿಜೆಪಿ ದೇವೇಗೌಡರಿಗೆ ಅಪಮಾನ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಪದೇಪದೇ ದೂರುತ್ತಿದ್ದಾರಲ್ಲ ಎನ್ನುವ ಪ್ರಶ್ನೆಗೆ ಖಡಕ್ಕಾಗಿ ಉತ್ತರಿಸಿದ ದೇವೇಗೌಡರು; ಮೋದಿ ಅವರ ವಿಶ್ವಾಸದ ಮುಂದೆ ಇವರೆಲ್ಲರ ಹೇಳಿಕೆಗಳು ಟೀಕೆ ಟಿಪ್ಪಣಿಗಳು ಬಹಳ ಸಣ್ಣವು ಎಂದರು.


ಕೆಲವರು ನನ್ನ ಬಗ್ಗೆ ಕಾಳಜಿಯಿಂದ ಮಾತನಾಡುತ್ತಿದ್ದಾರೆ. ಬಹಳ ಅಪಮಾನವಾಯಿತು ಎಂದು ನೋವು ವ್ಯಕ್ತಪಡಿಸುತ್ತಿದ್ದಾರೆ. ಆದರೆ, ನನ್ನ ಹೆಸರು ಪರಿಗಣನೆಗೆ ಬರುತ್ತದೆ ಎಂದು ಮಾಧ್ಯಮಗಳಲ್ಲಿ ಪ್ರಚಾರವಾಗಿದ್ದು ಬಿಟ್ಟರೆ, ನಾನು ಆ ಬಗ್ಗೆ ಎಲ್ಲಿಯೂ ನನಗೆ ರಾಜ್ಯಸಭೆ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿರಲಿಲ್ಲ. ಈ ಬಗ್ಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರು ಆಗಿರುವ ಕುಮಾರಸ್ವಾಮಿಯವರು ಸ್ಪಷ್ಟವಾಗಿಯೇ ಹೇಳಿದ್ದಾರೆ. ಇದರಲ್ಲಿ ಮತ್ತೊಮ್ಮೆ ನಾನು ಹೇಳುವಂಥದ್ದು ಏನು ಇಲ್ಲ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟಪಡಿಸಿದರು.


ಆದರೆ ಕಾಂಗ್ರೆಸ್ ಪಕ್ಷದ ಸ್ನೇಹಿತರು ಮಾತ್ರ ಇದನ್ನೇ ದೊಡ್ಡದಾಗಿ ಬಿಂಬಿಸಿ, ಅದಕ್ಕೆ ರಾಜಕೀಯ ಬಣ್ಣ ಲೇಪಿಸಲು ಪ್ರಯತ್ನ ಮಾಡುತ್ತಿದ್ದಾರೆ. ಒಂದು ವೇಳೆ ರಾಜ್ಯಸಭೆಗೆ ಸ್ಪರ್ಧಿಸುವ ಆಸಕ್ತಿ ನನಗೆ ಇದ್ದಿದ್ದೇ ಆದಲ್ಲಿ ಕಳೆದ ಮೇ 26ರಂದು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕಾಗಿ ನವದೆಹಲಿಗೆ ಹೋಗಿದ್ದಾಗ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದೆ. ನಾನು ಯಾರೊಂದಿಗೂ ಈ ಬಗ್ಗೆ ಮಾತುಕತೆ ನಡೆಸಲಿಲ್ಲ. ಅಂದಿನ ಕಾರ್ಯಕ್ರಮ ಮುಗಿದ ಕೂಡಲೇ ನಾನು ಬೆಂಗಳೂರಿಗೆ ವಾಪಸ್ ಬಂದೆ ಎಂದು ಮಾಧ್ಯಮಗಳಿಗೆ ಮಾಜಿ ಪ್ರಧಾನಿಗಳು ಮಾಹಿತಿ ನೀಡಿದರು.


ಕಾಂಗ್ರೆಸ್ ಪಕ್ಷ ನೀಡುತ್ತಿರುವ ಹೇಳಿಕೆಗಳು ಮತ್ತು ಮಾಡುತ್ತಿರುವ ಟೀಕೆಗಳ ಬಗ್ಗೆ ಉತ್ತರಿಸಲು ನನಗೆ ಆಸಕ್ತಿ ಇಲ್ಲ ಎಂದ ದೇವೇಗೌಡರು; ಪಕ್ಷಕ್ಕಾಗಿ ಮತ್ತು ಕಾರ್ಯಕರ್ತರ ಸಲುವಾಗಿ ನಾನು ಕೆಲಸ ಮಾಡಲು ಸದಾ ಮುಂದೆ ಇರುತ್ತೇನೆ. ಈಗಲೂ ನಿಮ್ಮೆಲ್ಲರನ್ನು (ಮಾಧ್ಯಮ ಮಿತ್ರರು) ಭೇಟಿಯಾಗಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದರು.


ಇವತ್ತು ಒಂದು ವಿಷಯ ಇಟ್ಟುಕೊಂಡು ನನ್ನ ಬಗ್ಗೆ ಇಷ್ಟೆಲ್ಲಾ ಅನುಕಂಪದ ನಾಟಕ ಆಡುತ್ತಿರುವ ಕಾಂಗ್ರೆಸ್ ನಾಯಕರು ಹಿಂದೆಲ್ಲಾ ನನ್ನ ವಿಚಾರದಲ್ಲಿ ಹೇಗೆಲ್ಲಾ ನಡೆದುಕೊಂಡರು ಎಂಬುದು ಗೊತ್ತಿದೆ. ಇದರ ಬಗ್ಗೆ ಹೇಳುತ್ತಾ ಹೋದರೆ ಬಹಳಷ್ಟು ಹೇಳಬಹುದು. ನನಗೆ ಅದರ ಬಗ್ಗೆ ಆಸಕ್ತಿ ಇಲ್ಲ ಎಂದು ಅವರು ತಿಳಿಸಿದರು.


ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕರಾದ ಕೆ.ಎ.ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ದೊಡ್ಡನಗೌಡ ಪಾಟೀಲ್, ಜೆಡಿಎಸ್ ರಾಜ್ಯ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಚಂದನ್ ಸೇರಿದಂತೆ ಪಕ್ಷದ ಹಲವಾರು ಮುಖಂಡರು ಹಾಜರಿದ್ದರು.

2 months ago | [YT] | 0

Karnataka Ayuktha. Tv

ಇಂದು ಬೆಂಗಳೂರಿನ ದೊಮ್ಮಲೂರು, ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ಶನೇಶ್ವರ ಸ್ವಾಮಿ ಜಯಂತಿ ಯಲ್ಲಿ ಭಕ್ತ ಸಾಗರ.

2 months ago | [YT] | 1

Karnataka Ayuktha. Tv

*HDD News | Bengaluru*📌


*ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ; ಹೆಚ್.ಡಿ. ದೇವೇಗೌಡರ ಘೋಷಣೆ*


*ಟೌನ್ ಶಿಪ್ ಹೆಸರಿನಲ್ಲಿ ಭೂ ದಂಧೆ ನಡೆಯುತ್ತಿದೆ ಎಂದು ಮಾಜಿ ಪ್ರಧಾನಿ ಅಕ್ರೋಶ*

*ಟೌನ್ ಶಿಪ್ ಸೂತ್ರಧಾರಿ ವಿರುದ್ಧ ಗುಡುಗಿದ ಮಣ್ಣಿನ ಮಗ*

*ಅವರು ಹೋಗಿ ರೈತರಿಂದ ಹೊಡೆಸಿಕೊಂಡು ಬರಲಿ, ಆಮೇಲೆ ನಾನು ಹೋಗಿ ಮಾತನಾಡುತ್ತೇನೆ ಎಂದು ಕಿಡಿ*

*20,000 ಎಕರೆ ಭೂಮಿ ಯಾರ ಹೆಸರಿನಲ್ಲಿ ಇದೆ ಎಂದು ಸಿಎಂಗೆ ಕೇಳಿದ ಮಾಜಿ ಪ್ರಧಾನಿ*




*ಬೆಂಗಳೂರು 16 ಮೇ 2026*

ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು, ಈ ದಂಧೆಯ ವಿರುದ್ಧ ಹೋರಾಟಕ್ಕೆ ಧುಮುಕುವುದಾಗಿ ಘೋಷಿಸಿದರು.


ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾಜಿ ಪ್ರಧಾನಿಗಳು ಮಾತನಾಡಿದರು.


ರೈತರ ಭೂಮಿಯನ್ನು ಕಿತ್ತುಕೊಂಡು ದಂಧೆ ಮಾಡಲು ಈ ಸರ್ಕಾರ ಹೊರಟಿದೆ. ಒಬ್ಬರು 'ರೈತರು ಹೊಡೆದರೆ ಹೊಡೆಸಿಕೊಳ್ಳುವೆ' ಎಂದು ಹೇಳಿದ್ದಾರೆ. ಮೊದಲು ಅವರು ಹೋಗಿ ರೈತರಿಂದ ಹೊಡೆಸಿಕೊಂಡು ಬರಲಿ, ಆಮೇಲೆ ನಾನು ಹೋಗಿ ಮಾತನಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.


ದೇವೇಗೌಡರು ಈ ಹಿಂದೆ ಸಭೆಯಲ್ಲಿ ಅಳುತ್ತಿದ್ದರು ಎಂದು ಕೆಲವರು ವ್ಯಂಗ್ಯ ಮಾಡುತ್ತಿದ್ದರು. ಆದರೆ ಈ ವ್ಯವಸ್ಥೆಯನ್ನು ನೋಡಿ ನಾನು ನಗುತ್ತಿದ್ದೇನೆ. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಸ್ನೇಹಿತರು ಮತ್ತು ಹಳೆಯ ಸಹೋದ್ಯೋಗಿ. ಜೊತೆಯಲ್ಲಿ ಕೆಲಸ ಮಾಡಿದ್ದೇವೆ. ಆದರೆ ಇಲ್ಲಿ ನಡೆಯುತ್ತಿರುವುದು ಯಾರಿಗೂ ಕಾಣದಿರುವುದು ನನಗೆ ಅತೀವ ನೋವು ತಂದಿದೆ ಎಂದು ಮಾಜಿ ಪ್ರಧಾನಿಗಳು ಬೇಸರ ವ್ಯಕ್ತಪಡಿಸಿದರು.


ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗಿದ್ದಾರೆ. ಇವತ್ತು ನಾನು ಒಂದು ಇಂಗ್ಲೀಷ್ ಪೇಪರ್ ನೋಡಿದೆ. ಕುಮಾರಸ್ವಾಮಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ ಎಂದು ಒಬ್ಬ ವ್ಯಕ್ತಿ ಹೇಳಿರುವ ವರದಿಯನ್ನು ಗಮನಿಸಿದೆ. ಕುಮಾರಸ್ವಾಮಿ ಮಾಡಿದ ಬಿಡದಿ ಟೌನ್ಶಿಪ್ ಅನ್ನು ನಾನು ಮಾಡುತ್ತಿದ್ದೇನೆ ಎಂದು ಆ ವ್ಯಕ್ತಿ ಹೇಳಿದ್ದಾರೆ. ಆಗ ಕುಮಾರಸ್ವಾಮಿ ಮಾಡಲು ಹೊರಟಿದ್ದು ಏನು? ಈ ವ್ಯಕ್ತಿ ಈಗ ಮಾಡುತ್ತಿರುವ ದಂಧೆ ಏನು ಎಂಬುದು ಜನರಿಗೆ ಅರ್ಥವಾಗಿದೆ. ಅದರ ವಿರುದ್ಧ ನಾನು ಹೋರಾಟ ಮಾಡುತ್ತೇನೆ ಎಂದು ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಮೇಲೆ ಹೆಚ್ಚು ಒತ್ತಡ ಆಗುತ್ತದೆ ಎಂದು ಕುಮಾರಸ್ವಾಮಿ ಐದು ಟೌನ್ ಶಿಪ್ ಗಳನ್ನು ಮಾಡಲು ಹೊರಟಿದ್ದರು. ಆಗ ಕಾಂಗ್ರೆಸ್ ಪಕ್ಷದ ನಾಯಕರು ದೊಡ್ಡ ಅಪಪ್ರಚಾರ ನಡೆಸಿ ಕುಮಾರಸ್ವಾಮಿಯವರು ಭೂಮಿಯನ್ನು ಹೊಡೆಯಲು ಹೊರಟಿದ್ದಾರೆ ಎಂದು ಸತ್ಯಶೋಧನ ಸಮಿತಿ ರಚಿಸಿ ತನಿಖೆಯನ್ನು ಮಾಡಿದರು. ಅವರ ಸತ್ಯಶೋಧನ ಸಮಿತಿ ವರದಿಯಲ್ಲಿ ಯಾವ ಸತ್ಯ ಹೊರಗೆ ಬಂತು ದೇವರೇ ಬಲ್ಲರು ಎಂದು ಮಾಜಿ ಪ್ರಧಾನಿಗಳು ವ್ಯಂಗ್ಯವಾಡಿದರು.

ಅಂದು ಜನರು ವಿರೋಧ ಮಾಡಿದ್ದಕ್ಕೆ ಕುಮಾರಸ್ವಾಮಿಯವರು ಐದು ಟೌನ್ ಶಿಪ್ ಯೋಜನೆಗಳನ್ನು ಕೈಬಿಟ್ಟರು. ಈಗಲೂ ಕೂಡ ಬಿಡದಿ ಟೌನ್ ಶಿಪ್ ಯೋಜನೆಗೆ ಜನರ ಆಕ್ರೋಶ, ವಿರೋಧ ಇದೆ. ಹೀಗಾಗಿ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದು ದೇವೇಗೌಡರು ಹೇಳಿದರು.

ಈಗ ಬೆಂಗಳೂರು ಜವಾಬ್ದಾರಿ ಹಾಗೂ ನೀರಾವರಿ ಜವಾಬ್ದಾರಿಯನ್ನು ಒಬ್ಬರೇ ವಹಿಸಿಕೊಂಡಿದ್ದಾರೆ. ಅದರ ಜೊತೆಗೆ ರಾಷ್ಟ್ರೀಯ ಪಕ್ಷದ ಜವಾಬ್ದಾರಿಯನ್ನು ಕೂಡ ಅವರೇ ಹೊತ್ತುಕೊಂಡಿದ್ದಾರೆ. ಏನೋ ಮುಖ್ಯಮಂತ್ರಿ ಆಗಬೇಕೆಂದು ಒಡಂಬಡಿಕೆ ಆಗಿದೆಯಂತೆ. ನಿಮ್ಮಗಳ ಮುಂದೆ ಮನೋರಂಜನೆ ಮಾಡುತ್ತಿದ್ದಾರೆ. ಬಿಡದಿಯ ರೈತರು ಕಣ್ಣೀರಿನಲ್ಲಿ ಕೈ ತೊಡೆಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಕಿಡಿಕಾರಿದರು.


*20,000 ಎಕರೆ ಭೂಮಿ ಯಾರ ಹೆಸರಿನಲ್ಲಿ ಇದೆ?*

ಸಿಎಂ ಸಿದ್ದರಾಮಯ್ಯ ಅವರನ್ನು ನೇರವಾಗಿ ಪ್ರಶ್ನಿಸಿದ ಮಾಜಿ ಪ್ರಧಾನಿಗಳು; ಸಿದ್ದರಾಮಯ್ಯನವರೇ, ನೀವು ನನ್ನ ಜೊತೆ ಕೆಲಸ ಮಾಡಿದ್ದೀರಿ. ನಿಮ್ಮ ಸಾಮಾಜಿಕ ನ್ಯಾಯದ ಮಾತಿನ ಬಗ್ಗೆ ನನಗೂ ಅರಿವಿದೆ. ಬೆಂಗಳೂರು ಸುತ್ತಮುತ್ತ ಸುಮಾರು 20,000 ಎಕರೆ ಭೂಮಿ ಯಾರ ಹೆಸರಿನಲ್ಲಿ ಇದೆ ಎಂಬುದನ್ನು ತನಿಖೆ ಮಾಡಿ ಎಂದು ಈಗಾಗಲೇ ಪತ್ರ ಬರೆದಿದ್ದೇನೆ. ಸಿದ್ದರಾಮಯ್ಯನವರೇ ಬೆಂಗಳೂರು ನಗರದ ಹೊಣೆ ಹೊತ್ತಿರುವವರ ಒತ್ತಡಕ್ಕೆ ಮಣಿದು ಜನರ ಸಮಸ್ಯೆಯನ್ನು ನೀವು ಕೇಳುತ್ತಿಲ್ಲ. ಬಿಡದಿ ರೈತರ ಸಮಸ್ಯೆಯನ್ನು ಯಾರಾದರೂ ಹೋಗಿ ಕೇಳಿದ್ದೀರಾ ಎಂದು ದೇವೇಗೌಡರು ಪ್ರಶ್ನಿಸಿದರು.


ಟೌನ್ ಶಿಪ್ ಹೆಸರಿನಲ್ಲಿ ಫಲವತ್ತಾದ ಭೂಮಿಯನ್ನು ಹೊಡೆಯಲು ಹೊರಟಿದ್ದಾರೆ. ಭೂಮಿಯನ್ನು ಕಿತ್ತುಕೊಂಡು ಯಾರಿಗೆ ಕೊಡಲು ಹೊರಟಿದ್ದಾರೆ ಎಂಬುದನ್ನು ಸರ್ಕಾರ ಹೇಳಬೇಕು. ಭಾಗದಲ್ಲಿ ರೈತರು ದೊಡ್ಡ ಮಟ್ಟದ ಹೈನುಗಾರಿಕೆ, ತೋಟಗಾರಿಕೆ ಮಾಡುತ್ತಿದ್ದಾರೆ. ದೊಡ್ಡ ಪ್ರಮಾಣದಲ್ಲಿ ರೈತರು ನಿತ್ಯವೂ ಡೇರಿಗೆ ಹಾಲನ್ನು ನೀಡುತ್ತಿದ್ದಾರೆ. ಹಿಂದೆ ಕುಮಾರಸ್ವಾಮಿ ಅವರು 250 ಕೋಟಿ ವೆಚ್ಚದಲ್ಲಿ ನೀರಾವರಿ ಯೋಜನೆ ಮಾಡಿ ಈ ಭಾಗಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇಂತಹ ನೀರಾವರಿ ಜಾಗವನ್ನು ಕಿತ್ತುಕೊಳ್ಳಲು ನಿಮ್ಮ ಪಕ್ಷದ ಅಧ್ಯಕ್ಷರು ಹೊರಟಿದ್ದಾರೆ. ನೀವು ನನ್ನ ಜೊತೆ ಕೆಲಸ ಮಾಡಿದ್ದೀರಿ. ಬಡವರು ಹಿಂದುಳಿದವರ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಿದ್ದೀರಿ. ನೀವು ಅದರ ಬಗ್ಗೆ ನಿರ್ಧಾರ ಕೈಗೊಳ್ಳುವ ಸಮಯ ಇದಾಗಿದೆ. ಬೆಂಗಳೂರು ಹೊಣೆಗಾರಿಕೆ ಗೊತ್ತಿರುವ ವ್ಯಕ್ತಿಯ ಒತ್ತಡಕ್ಕೆ ಮಣಿದು ಜನಸಾಮಾನ್ಯರಿಗೆ ಅನ್ಯಾಯ ಮಾಡಬೇಡಿ. ಬಿಡದಿ ರೈತರು ಕಣ್ಣೀರು ಹಾಕುತ್ತಿದ್ದಾರೆ ಎಂದು ದೇವೇಗೌಡರು ಹೇಳಿದರು.


*ಇವತ್ತಿನಿಂದ ನನ್ನ ಹೋರಾಟ ಆರಂಭವಾಗಿದೆ*

ಕುಮಾರಸ್ವಾಮಿ ಮಾಡಿದ್ದನ್ನು ನಾನು ಮುಂದುವರಿಸುತ್ತೇನೆ ಎನ್ನುತ್ತಾರೆ ಆ ವ್ಯಕ್ತಿ. ಜನರಿಂದ ವಿರೋಧ ಬಂದಿದ್ದಕ್ಕೆ ಅವರು ನಿಲ್ಲಿಸಿದರು. ಅದನ್ನೇ ಈ ವ್ಯಕ್ತಿ ಕೂಡ ಮಾಡಬೇಕಲ್ಲವೇ? ಜನರಿಂದ ತೀವ್ರ ವಿರೋಧ ಬಂದರು ನಾನು ಟೌನ್‌ಶಿಪ್ ಮಾಡಿ ತೀರುತ್ತೇನೆ ಎಂದು ಹಠ ಮಾಡುತ್ತಿದ್ದಾರೆ. ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ಇವತ್ತಿನಿಂದ ನನ್ನ ಹೋರಾಟ ಆರಂಭವಾಗಿದೆ. ಬೆಂಗಳೂರು ಸುತ್ತಮುತ್ತ ಬಡವರ ಜಮೀನನ್ನು ಕಿತ್ತುಕೊಳ್ಳುವ ಶಕ್ತಿಗಳನ್ನು ಮಟ್ಟ ಹಾಕಬೇಕಿದೆ. ಬಿಡಿಎ ಸೇರಿದಂತೆ ಎಲ್ಲೆಲ್ಲಿ ಅಕ್ರಮ ನಡೆದಿದೆಯೋ ಅಲ್ಲೆಲ್ಲ ನಾನು ಹೋರಾಟ ನಡೆಸುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದು ಅವರು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.


*ಬಿಡದಿಗೆ ಬನ್ನಿ ಎಂದು ಮುಖ್ಯಮಂತ್ರಿಯನ್ನು ಕರೆದ ದೇವೇಗೌಡರು:*

ಬಿಡದಿಯ ರೈತರ ಪರಿಸ್ಥಿತಿಯನ್ನು ಒಮ್ಮೆ ನೀವೇ ಖುದ್ದಾಗಿ ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ ದೇವೇಗೌಡರು; ನಾನು ಬರುತ್ತೇನೆ, ನೀವು ಬನ್ನಿ. ಸ್ಥಳಕ್ಕೆ ಭೇಟಿ ನೀಡೋಣ. ಈವರೆಗೂ ಸ್ಥಳೀಯ ಶಾಸಕರು ತಹಸೀಲ್ದಾರರು ಜಿಲ್ಲಾಧಿಕಾರಿಗಳು ಆ ಜನರ ಸಮಸ್ಯೆಯನ್ನು ಕೇಳಿಲ್ಲ. ಇಲ್ಲಿ ದಂಧೆ ನಡೆಯುತ್ತಿದೆ. ರೈತರ ಭೂಮಿಯನ್ನು ಕಿತ್ತುಕೊಂಡು ದಂಧೆ ಮಾಡುತ್ತಿದ್ದಾರೆ. ಕನಕಪುರದಲ್ಲಿ ಎಷ್ಟು ಜಮೀನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂಬ ಬಗ್ಗೆ ನನ್ನ ಬಳಿ ಮಾಹಿತಿ ಇದೆ ಎಂದು ಯಾರೊಬ್ಬರ ಹೆಸರು ಹೇಳದೆಯೇ ಮಾಜಿ ಪ್ರಧಾನಿಗಳು ವಾಗ್ದಾಳಿ ನಡೆಸಿದರು.


ಮಾಧ್ಯಮಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಂಜುನಾಥ್ ಸೇರಿ ಬಿಡದಿ ಭಾಗದ ಅನೇಕ ರೈತರು ಉಪಸ್ಥಿತರಿದ್ದರು.

2 months ago | [YT] | 1