Galaxy TV Kannada

Galaxytvkannada is a Pioneering 24x7 Kannada Delivering high quality news content not seen before in Kannada Television News.


Galaxy TV Kannada

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ (Darshan), ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ (Supreme Court) ಆದೇಶ ಹೊರಡಿಸಿದೆ

4 months ago | [YT] | 1

Galaxy TV Kannada

ಏಪ್ರಿಲ್ 18 ರಂದು ತೆರೆಗೆ ಬರಲಿದೆ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ "ಯುದ್ದ ಕಾಂಡ".

ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ "ಯುದ್ಧಕಾಂಡ" ಚಿತ್ರ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

"ಯುದ್ಧಕಾಂಡ" ಪ್ರತಿಯೊಬ್ಬ ಮಹಿಳೆಯು ನೋಡಲೇ ಬೇಕಾದ ಚಿತ್ರ. ಮಹಿಳೆಯರ ಮೇಲೆ ಯಾವ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ ಎಂದು ತೋರಿಸುತ್ತಿರುವ ಚಿತ್ರವೂ ಹೌದು. ನೊಂದ ಮಹಿಳೆಯರನ್ನು ಪ್ರತಿನಿಧಿಸುವ ಪಾತ್ರವನ್ನು ಅರ್ಚನಾ ಜೋಯಿಸ್ ಅದ್ಭುತವಾಗಿ ನಿಭಾಯಿಸಿದ್ದಾರೆ. ಪವನ್ ಭಟ್ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಹಿರಿಯ ನಟರಾದ ಟಿ.ಎಸ್ ನಾಗಾಭರಣ, ಪ್ರಕಾಶ್ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಬೇಬಿ ರಾದ್ನ್ಯ ಸಹ ಈ ಚಿತ್ರದಲ್ಲಿದ್ದಾರೆ. ಇದೊಂದು ಸಾಮಾಜಿಕ ಕಳಕಳಿಯುಳ್ಳ ಚಿತ್ರವಾಗಿದೆ. "ಯುದ್ಧ ಕಾಂಡ" ತೀರಾ ಕಡಿಮೆ ಬಜೆಟ್ ಅಥವಾ ತೀರಾ ಹೆವಿ ಬಜೆಟ್ ನ ಚಿತ್ರವಲ್ಲ. ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣವಾಗಿರುವ ಚಿತ್ರ. ಇಂತಹ ಚಿತ್ರಗಳು ಹೆಚ್ಚಾಗಿ ಜನರನ್ನು ತಲುಪಬೇಕು. ಉತ್ತಮ ಸಂದೇಶವಿರುವ ಈ ಚಿತ್ರವನ್ನು ರಾಷ್ಟ್ರಪತಿಗಳಿಗೂ ತೋರಿಸುವ ಯೋಚನೆ ಇದೆ. ಏಪ್ರಿಲ್ 18 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ಮಾಪಕ & ನಾಯಕ ಅಜೇಯ್ ರಾವ್‌.

"ಯುದ್ಧ ಕಾಂಡ" 2022ರಲ್ಲೇ ಬರೆದ ಕಥೆ. ಈ ಕಥೆಯಲ್ಲಿ ಎಲ್ಲಾ ಪಾತ್ರಗಳು ಪ್ರಮುಖ ಪಾತ್ರಗಳೆ. ಈ ರೀತಿ ಕಥೆಯನ್ನು ನಿರ್ಮಾಪಕರು ಒಪ್ಪುತ್ತಾರೊ, ಇಲ್ಲವೊ? ಎಂಬ ಸಂಶಯದಿಂದ ಕಥೆ ಯಾರಿಗೂ ಹೇಳಿರಲಿಲ್ಲ‌. ಅನಂತರ ಕಥೆ ಕೇಳಿದ ಅಜೇಯ್ ರಾವ್ ಅವರು ನಿರ್ಮಾಣಕ್ಕೆ ಮುಂದಾದರು. ಚಿತ್ರಕಥೆ ಕೂಡ ಅಜೇಯ್ ರಾವ್ ಅವರದೆ‌. ಇನ್ನು, ಇದೊಂದು ಕೋರ್ಟ್ ರೂಮ್ ಡ್ರಾಮ. ನಾಗಾಭರಣ, ಪ್ರಕಾಶ್ ಬೆಳವಾಡಿ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ, ಹೇಮಂತ್ ಜೋಯಿಸ್,ಕೆ ಬಿ ಪ್ರವೀಣ್ ಸಂಗೀತ ನಿರ್ದೇಶನ ಹಾಗೂ ಶ್ರೀ ಕ್ರೇಜಿ ಮೈಂಡ್ಸ್ ಅವರ ಸಂಕಲನ "ಯುದ್ಧ ಕಾಂಡ" ಚಿತ್ರಕ್ಕಿದೆ ಎಂದರು ನಿರ್ದೇಶಕ ಪವನ್ ಭಟ್.

"ಯುದ್ಧಕಾಂಡ" ಚಿತ್ರದಲ್ಲಿ ಅನ್ಯಾಯದಿಂದ ನೊಂದ ಹೆಣ್ಣನ್ನು ಪ್ರತಿನಿಧಿಸುವ ಪಾತ್ರ ನನ್ನದು . ಪವನ್ ಭಟ್ ಅವರ ಕಥೆ ಚೆನ್ನಾಗಿದೆ ಎಂದು ನಟಿ ಅರ್ಚನಾ ಜೋಯಿಸ್ ತಿಳಿಸಿದರು.

ನ್ಯಾಯಾಧೀಶರ ಪಾತ್ರದಲ್ಲಿ ಅಭಿನಯಿಸಿರುವುದಾಗಿ ತಮ್ಮ ಪಾತ್ರದ ಬಗ್ಗೆ ವಿವರಿಸಿದ ಟಿ.ಎಸ್ ನಾಗಾಭರಣ,‌ "ಯುದ್ಧ ಕಾಂಡ" ಎಲ್ಲರಿಗೂ ಪ್ರಿಯವಾಗುವ ಚಿತ್ರವಾಗಲಿದೆ ಎಂಬ ಭರವಸೆ ನಮ್ಮ ತಂಡಕ್ಕಿದೆ ಎಂದರು.

ನಾನು ಹೆಚ್ಚಾಗಿ ಚಿತ್ರಗಳಲ್ಲಿ ನಟಿಸುತ್ತಿಲ್ಲ. ಅಜೇಯ್ ರಾವ್ ಅವರು ಈ ಚಿತ್ರದ ಕಥೆ ಬಗ್ಗೆ ಹೇಳಿದಾಗ ನಟಿಸಲು ಒಪ್ಪಿಕೊಂಡೆ. ನನ್ನದು ಈ ಚಿತ್ರದಲ್ಲಿ ವಕೀಲನ ಪಾತ್ರ ಎಂದು ಪ್ರಕಾಶ್ ಬೆಳವಾಡಿ ಹೇಳಿದರು.

ಸಂಕಲನಕಾರ ಶ್ರೀ ಕ್ರೇಜಿ ಮೈಂಡ್ಸ್ ಮತ್ತು ತಂಡದ ಇತರೆ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

8 months ago | [YT] | 2

Galaxy TV Kannada

ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ "ವೀರ ಚಂದ್ರಹಾಸ" ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಬಿಡುಗಡೆಗೊಳಿಸಿದರು.

ತಮಿಳು, ಮಲಯಾಳಂ, ಕನ್ನಡ ಸೇರಿ ಬಹುಭಾಷೆಗಳ ಸಿನಿಮಾಗಳಲ್ಲಿ ತನ್ನ ಕಲಾ ಸಾಮರ್ಥ್ಯ ಪ್ರದರ್ಶಿಸಿ ಜನಮೆಚ್ಚುಗೆ ಕಳಿಸಿದ್ದೀರಿ. ಈ ಸಿನಿಮಾ ಕೂಡ ಯಶಸ್ವಿ ಕಾಣುತ್ತದೆ. ಸರ್ಕಾರದಿಂದ ಅಗತ್ಯ ಇರುವ ಸಹಕಾರ ನೀಡಲಾಗುವುದು. ನಿಮ್ಮ ಇಡೀ ಕಲಾ ತಂಡಕ್ಕೆ ಮತ್ತು ಸಿನಿಮಾ ತಂಡಕ್ಕೆ ಶುಭಾಶಯಗಳು‌ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಮುಖ್ಯಮಂತ್ರಿಗಳ ಆಶೀರ್ವಾದ ಪಡೆದ ರವಿ ಬಸ್ರೂರು ತಂಡ ಅವರನ್ನು ಸಿನಿಮಾ ವೀಕ್ಷಣೆಗೆ ಬರಬೇಕು ಎಂದು ಆಹ್ವಾನಿಸಿದರು.

ಬರುತ್ತೇನೆ ಎಂದು ಆಶ್ವಾಸನೆ ನೀಡಿದ ಮುಖ್ಯಮಂತ್ರಿಗಳು ಸಿನಿಮಾ ತಂಡಕ್ಕೆ ಮತ್ತೊಮ್ಮೆ ಶುಭ ಹಾರೈಸಿದರು.

8 months ago | [YT] | 10

Galaxy TV Kannada

*ಎಕ್ಕ ಸಿನಿಮಾದ ಮೊದಲ ಹಾಡು ರಿಲೀಸ್...ಯುವರಾಜ್ ಕುಮಾರ್ ಜಬರ್ದಸ್ತ್ ಪಾರ್ಫೆಮನ್ಸ್*


*ಬಿಟ್ಟಿ ಶೋಕಿ ಭೂಮಿಗ್ ಭಾರ...ಎಕ್ಕಾ‌ ಮಾರ್‌ಮಾರ್..ಯುವ ಚಿಂದಿ ಪಾರ್ಫೆಮೆನ್ಸ್*


*ಅಪ್ಪು ಹುಟ್ಟುಹಬ್ಬಕ್ಕೆ ಎಕ್ಕ ಸಿನಿಮಾ ರಿಲೀಸ್...ಭರ್ಜರಿಯಾಗಿ ಹೆಜ್ಜೆ ಹಾಕಿದ ಯುವರಾಜ್ ಕುಮಾರ್*




ಯುವ ಬಳಿಕ ಯುವರಾಜ್ ಕುಮಾರ್ ಎಕ್ಕ ಅವತಾರವೆತ್ತಿರುವುದು ಗೊತ್ತೇ ಇದೆ. ಶೂಟಿಂಗ್ ಹಂತದಲ್ಲಿಯೇ ಭಾರೀ ಹೈಪ್ ಕ್ರಿಯೇಪ್ ಕ್ರಿಯೇಟ್ ಮಾಡಿರುವ ಎಕ್ಕ ಸಿನಿಮಾದ ಮೊದಲ ಹಾಡು ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಬಿಡುಗಡೆ ಮಾಡಲಾಗಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಎಕ್ಕ ಟೈಟಲ್ ಸಾಂಗ್ ಅನಾವರಣಗೊಂಡಿದೆ.


ಎಕ್ಕಾ ಮಾರ್ ಮಾರ್ ಅಂತಾ ಯುವರಾಜ್ ಕುಮಾರ್ ಚಿಂದಿ ಪರ್ಫಾಮೆನ್ಸ್ ಕೊಟ್ಟಿದ್ದಾರೆ. ಬಾಬಾ ಭಾಸ್ಕರ್ ಕೊರಿಯೋಗ್ರಫಿಗೆ ಯುವ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ನಾಗಾರ್ಜುನ್ ಶರ್ಮಾ ಕ್ಯಾಚಿ ಮ್ಯಾಚಿ ಪದ‌ಪೊಣಿಸಿ ಸಾಹಿತ್ಯ ಬರೆದಿದ್ದು, ಚರಣ್ ರಾಜ್ ಮ್ಯೂಸಿಕ್ ಕಿಕ್, ರೋಹಿತ್ ಪದಕಿ, ಚರಣ್ ರಾಜ್ ಹಾಗೂ ಮಹಾಲಿಂಗ್ ವಿ ಎಂ ವಾಯ್ಸ್, ಯುವ ಎನರ್ಜಿ.. ಟೋಟಲ್ ಆಗಿ ಎಕ್ಕ ಟೈಟಲ್ ಟ್ರ್ಯಾಂಕ್ ಬೊಂಬಾಟ್ ಆಗಿ ಮೂಡಿಬಂದಿದೆ.



ಪಿಆರ್‌ಕೆ ಪ್ರೊಡಕ್ಷನ್ಸ್, ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಫಿಲ್ಮ್ಸ್ ಒಟ್ಟಾಗಿ 'ಎಕ್ಕ' ಚಿತ್ರ ನಿರ್ಮಾಣ ಮಾಡುತ್ತಿವೆ. ಬಹಳ ಅದ್ಧೂರಿಯಾಗಿಯೇ ಈ ಆಕ್ಷನ್ ಥ್ರಿಲ್ಲರ್ ಚಿತ್ರ ಜೂನ್ 6ಕ್ಕೆ ಪ್ರೇಕ್ಷಕರ ಮುಂದೆ ಬರಲಿದೆ. ರೋಹಿತ್ ಪದಕಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ಎಕ್ಕ ಸಿನಿಮಾದಲ್ಲಿ ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿ. ಸಂಜನಾ ಆನಂದ್, ಸಂಪದಾ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ.


ರೋಹಿತ್‍ ಪದಕಿ, ವಿಕ್ರಂ ಹತ್ವಾರ್ ಜೊತೆಗೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇನ್ನು, ನಿರ್ದೇಶನವೂ ಅವರದ್ದೇ. ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ದೀಪು ಎಸ್‍ ಕುಮಾರ್ ಸಂಕಲನ ಎಕ್ಕ ಸಿನಿಮಾಗಿದೆ. ಒಬ್ಬ ಮನುಷ್ಯ ಭೂಗತ ಜಗತ್ತಿಗೆ ತುತ್ತಾದಾಗ ಆತನಿಗೆ ಆಗುವ ಅನುಭವವನ್ನು ಈ ಚಿತ್ರದ ಮೂಲಕ ಹೇಳಲಾಗುತ್ತಿದೆಯಂತೆ.

9 months ago | [YT] | 8

Galaxy TV Kannada

Bringing you all an irresistible dose of RETRO BEATS to take you on a ride 🔥

#KDSecondSingle Promo ~ #SetAgallaHogeNanguNingu will be out on March 22nd at 11:04 AM ❤️‍🔥

Instant chartbuster loading…⏳
🎙️- @MikaSingh ( Kannada and Hindi )
@Nakash_Aziz ( Telugu and Tamil )
@TipuSingerOfficial ( Malayalam )
✍️ - #Prem
🎧 - @Arjun_Janya_Musician


#KDTheDevil
#KD @dhruva_sarjaa @directorprems @duttsanjay @ramesh.aravind.official #VRavichandran @theshilpashetty @norafatehi @reeshma_nanaiah @boselyricist @madhankarky #ManakopuGopalakrishnan @lyricistraqueebalam @williamdaviddop @kvn.productions @suprith.ts @aanandaaudio

9 months ago | [YT] | 5

Galaxy TV Kannada

*ಅಣ್ಣಾವ್ರ ಜನ್ಮದಿನಕ್ಕೆ ಮೊಮ್ಮಗಳ ಗಿಫ್ಟ್..ನಿವೇದಿತಾ shivarajkumar ನಿರ್ಮಾಣದ ಚೊಚ್ಚಲ ಚಿತ್ರದ ಬಿಡುಗಡೆ ದಿನಾಂಕ ಫಿಕ್ಸ್*‌

ಡಾ.ರಾಜ್‌ ಜನ್ಮೋತ್ಸವಕ್ಕೆ ʼಫೈರ್ ಫ್ಲೈ‌ʼ ರಿಲೀಸ್..ಇದು ನಿವೇದಿತಾ shiva rajkumar ನಿರ್ಮಾಣದ ಚೊಚ್ಚಲ ಸಿನಿಮಾ

ಏಪ್ರಿಲ್‌ 24ಕ್ಕೆ ನಿವೇದಿತಾ ನಿರ್ಮಾಣದ ಫೈರ್‌ ಫ್ಲೈ ಸಿನಿಮಾ ತೆರೆಗೆ ಎಂಟ್ರಿ

ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್’ ಬ್ಯಾನರ್ ನಿರ್ಮಾಣದ ಚೊಚ್ಚಲ ಚಲನಚಿತ್ರ "ಫೈರ್ ಫ್ಲೈ". ಈಗಾಗಲೇ ಟೀಸರ್ ಮೂಲಕ ಜನರ ಮನಸನ್ನು ಗೆದ್ದಿರುವ ಈ ಚಿತ್ರವು ಏಪ್ರಿಲ್‌ 24, ವರನಟ ಡಾ. ರಾಜಕುಮಾರ್ ಅವರ ಜನ್ಮದಿನದಂದು ತೆರೆ ಮೇಲೆ ಬರುತ್ತಿದೆ.

‘ಫೈರ್ ಫ್ಲೈ’ ಚಿತ್ರದಲ್ಲಿ ವಂಶಿ ಹೀರೋ ಆಗಿ ನಟಿಸಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಆಚ್ಯುತ್ ಕುಮಾರ್, ಸುಧಾರಾಣಿ, ರಚನಾ ಇಂದರ್, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಚಿತ್ಕಲಾ ಬಿರಾದರ್, ಮೂಗು ಸುರೇಶ್ ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ಕಾಣಸಿಕೊಂಡಿದ್ದಾರೆ.

ಡಾ. ಶಿವರಾಜ್ ಕುಮಾರ್ ಮಾತನಾಡಿ, 'ಅಪ್ಪಾಜಿಯವರ ಹುಟ್ಟುಹಬ್ಬದಂದು ನನ್ನ ಮಗಳ ಮೊದಲ ಚಿತ್ರ ಬಿಡುಗಡೆಯಾಗುತ್ತಿರುವುದು ನನಗೆ ತುಂಬಾ ವಿಶೇಷವಾದ ಕ್ಷಣ. ನಮ್ಮ ಕುಟುಂಬದ ಮೇಲೆ ಜನರು ತೋರಿಸಿರುವ ಎಲ್ಲಾ ಪ್ರೀತಿ ಅಪ್ಪಾಜಿಯವರಿಂದ ಬಂದಿದೆ, ಮತ್ತು ಮುಂದಿನ ಪೀಳಿಗೆಯ ಮೇಲೆ ಎಲ್ಲರೂ ಅದೇ ಪ್ರೀತಿಯನ್ನು ತೋರಿಸುವುದನ್ನು ನೋಡುವುದು ತುಂಬಾ kushi kottide. ಎಲ್ಲಾ ಅಭಿಮಾನಿಗಳು ಮತ್ತು ಕನ್ನಡ ಸಿನಿಮಾ ಪ್ರೇಮಿಗಳ ನಿರಂತರ ಬೆಂಬಲಕ್ಕೆ ಧನ್ಯವಾದಗಳು. ಫೈರ್‌ಫ್ಲೈ saavu, novvu, mattu jeevana spoorthiya maru chiguruvikeya bagge mathaduva ಚಿತ್ರ intha gaada vaada vishayavannu saralavaagi, hasyada moolaka heliruvudu nannage thumba hatiravayathu. ಎಲ್ಲರೂ ಅದನ್ನು ಮೆಚ್ಚುತ್ತಾರೆ ಎಂದು ನನಗೆ nambike ide‘.

ಚರಣ್ ರಾಜ್ ಅವರು ‘ಫೈರ್ ಫ್ಲೈ’ ಚಿತ್ರಕ್ಕೆ ಸಂಗೀತವನ್ನು ನೀಡಿದ್ದಾರೆ. ಈ ಚಲನಚಿತ್ರದ ಹಾಡುಗಳು ತುಂಬಾ ಸೊಗಸಾಗಿ ಮೂಡಿಬಂದಿದ್ದು. ಚಿತ್ರತಂಡವು ಇದೇ ಯುಗಾದಿಗೆ ಈ ಚಿತ್ರದ ಮೊದಲ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ಅಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಜಯರಾಮ್ ಶ್ರೀನಿವಾಸ್ ಹಾಗೂ ಹ್ಯಾಪಿ ಹನುಮಂತ್ ಅವರ ಸಹ-ನಿರ್ದೇಶನ. ಅಭಿಲಾಷ್ ಕಳತ್ತಿ ಛಾಯಾಗ್ರಹಣ, ರಘು ನಿಡುವಳ್ಳಿ ಅವರ ಸಂಭಾಷಣೆ, ಸುರೇಶ್ ಆರ್ಮುಗಮ್ ಅವರ ಸಂಕಲನ, ವರದರಾಜ್ ಕಾಮತ್ ಅವರ ಕಲೆ, ಅರ್ಜುನ್ ರಾಜ್ ಅವರ ಸಾಹಸ, ರಾಹುಲ್ ಮಾಸ್ಟರ್ ಅವರ ನೃತ್ಯ ಸಂಯೋಜನೆ ಈ ಚಿತ್ರಕ್ಕಿದೆ. ಈ ಚಿತ್ರವು ತುಂಬಾ ಸೊಗಸಾಗಿ ಮೂಡಿಬಂದಿದೆ. ಇದೊಂದು ಕೌಟುಂಬಿಕ ಚಿತ್ರವಾಗಿದ್ದು ಎಲ್ಲಾ ವರ್ಗದ ಪ್ರೇಕ್ಷಕರು ಮನಸ್ಸು ಗೆಲ್ಲುವ ಚಿತ್ರವಾಗಿದೆ. ಈ ವರ್ಷದ ಕನ್ನಡ ಚಿತ್ರರಂಗದಲ್ಲಿ ತುಂಬಾ ಭರವಸೆ ಮೂಡಿಸಿರುವ ಚಿತ್ರಗಳಲ್ಲಿ "ಫೈರ್ ಫ್ಲೈ". ಕೂಡ ಒಂದಾಗಿದೆ.

9 months ago | [YT] | 3

Galaxy TV Kannada

*"ಠಾಣೆ" ಚಿತ್ರದಿಂದ ಬಂತು ಸುಂದರ ಹಾಡು* .‌

*ನಟ ರಿಷಿ, ಪೊಲೀಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಹಾಗೂ ಡಿ.ಎಸ್ ಮ್ಯಾಕ್ಸ್ ದಯಾನಂದ್ ಅವರಿಂದ ಹಾಡಿನ ಅನಾವರಣ*
.
ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ,"ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ "ಬಾಳಿನಲ್ಲಿ ಭರವಸೆಯ ಬೆಳಕು" ಎಂಬ ಅರ್ಥಗರ್ಭಿತ ಹಾಡು ಇತ್ತೀಚೆಗೆ ಅನಾವರಣವಾಯಿತು. ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ಈ ಸುಂದರ ಹಾಡನ್ನು ನಟ ರಿಷಿ, ಪೊಲೀಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಹಾಗೂ ಡಿ.ಎಸ್.ಮ್ಯಾಕ್ಸ್ ನ‌ ದಯಾನಂದ್ ಅವರು ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮಾನಸ ಹೊಳ್ಳ ಅವರ ಸಂಗೀತ ನಿರ್ದೇಶನದಲ್ಲಿ ಮಕ್ಕಳು ಹಾಡಿರುವ ಹಾಗೂ ರೆಮೊ ಅವರು ಬರೆದಿರುವ ನಮ್ಮ ಚಿತ್ರದ ಈ ಹಾಡನ್ನು ಅನಾವರಣ ಮಡಿಕೊಟ್ಟ ಗಣ್ಯರಿಗೆ ಧನ್ಯವಾದ‌. ಇನ್ನೂ "ಠಾಣೆ" ಚಿತ್ರದ ಚಿತ್ರೀಕರಣ ಹಾಗು ನಂತರದ ಚಟುವಟಿಕೆಗಳು ಮುಕ್ತಾಯವಾಗಿ, ತೆರೆಗೆ ಬರುವ ಹಂತದಲ್ಲಿದೆ. ಕಳೆದ ಕೆಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹ ಸಾಹಸ ಕಲಾವಿದನಾಗಿ ಗುರುತಿಸಿಕೊಂಡಿರುವ ಹಾಗೂ ರಂಗಭೂಮಿ ಕಲಾವಿದ ಪ್ರವೀಣ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಮೈಸೂರಿನ ಹರಿಣಾಕ್ಷಿ ಈ ಚಿತ್ರದ ನಾಯಕಿ. ಬಿ.ವಿ.ರಾಜರಾಂ, ಬಲ ರಾಜ್ವಾಡಿ, ರೋಹಿತ್ ನಾಗೇಶ್, ಕುಲದೀಪ್, ಸಂತೋಷ್ ಕರ್ಕಿ, ಭೀಷ್ಮ ರಾಮಯ್ಯ, ನಾಗರಾಜ್,‌ ಬಲ ರಾಜ್ವಾಡಿ , ಪಿ.ಡಿ.ಸತೀಶ್ ಚಂದ್ರ, ಪ್ರವೀಣ್ ಜಾನ್, ಪೂಜಾ ರಾವ್ . ಕುಮಾರಿ ದೀಪಿಕಾ, ರೂಪ .ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. 20 ವರ್ಷಗಳ ಹಿಂದೆ ಮಾಧ್ಯಮಗಳು, ಪೋಲೀಸ್ ಇಲಾಖೆಗಳ ಪ್ರಮಾಣ ಕಡಿಮೆ ಇದ್ದ ಕಾರಣ ಜನರೇ ನ್ಯಾಯಕ್ಕಾಗಿ ಹೋರಾಡಿ ಇಲಾಖೆಗಳ ಗಮನ ಸೆಳೆಯುವ ಕಾಲದಲ್ಲಿ ನಾಯಕ ಕಾಳಿ ನ್ಯಾಯಕ್ಕಾಗಿ ಯಾವ ರೀತಿಯ ಹೋರಾಟ ಮಾಡಿದ ಎನ್ನುವುದೇ ಈ ಚಿತ್ರದ ಪ್ರಮುಖ ಕಥಾಹಂದರ. "ಠಾಣೆ" ಚಿತ್ರಕ್ಕೆ C/O ಶ್ರೀರಾಂಪುರ ಎಂಬ ಅಡಿಬರಹವಿದೆ ಎಂದು ಎಸ್ ಭಗತ್ ರಾಜ್ ತಿಳಿಸಿದರು‌.

2007 ರಿಂದಲೂ ನಾನು ಚಿತ್ರರಂಗದಲ್ಲಿದ್ದೇನೆ. ಹೆಸರಾಂತ ಸಾಹಸ ಕಲಾವಿದರ ಬಳಿ ಕಾರ್ಯ ನಿರ್ವಹಿಸಿದ್ದೇನೆ. ಜೊತೆಗೆ ನಾನು ರಂಗಭೂಮಿ ಕಲಾವಿದನು ಹೌದು. ನನ್ನ ಜೊತೆಗೆ ರಂಗಭೂಮಿಯಲ್ಲಿದ್ದ ಅನೇಕ ಕಲಾವಿದರು ಇಂದು ಜನಪ್ರಿಯರಾಗಿದ್ದಾರೆ. ನಾನು ಈಗ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದೇನೆ. ಕಾಳಿ ನನ್ನ ಪಾತ್ರದ ಹೆಸರು. ಇದರ ಕಥೆ ಶ್ರೀರಾಮಪುರದಲ್ಲೇ ನಡೆಯುವ ಕಥೆ. ನಾನು ಕೂಡ ಇಲ್ಲೇ ಗಾಯತ್ರಿ ನಗರದವನು. ಶ್ರೀರಾಮಪುರವನು ಹತ್ತಿರದಿಂದ ಬಲ್ಲವನು. ಹಾಗಾಗಿ ಈ ಚಿತ್ರದಲ್ಲಿ ನಟಿಸಲು ಅನುಕೂಲವಾಯಿತು ಎನ್ನುತ್ತಾರೆ ನಾಯಕ ಪ್ರವೀಣ್‌.

ನಾನು ಮೈಸೂರಿನವಳು. ರಂಗ ಕಲಾವಿದೆ. ಈ ಚಿತ್ರದಲ್ಲಿ ನನ್ನ ಶ್ರೀ ದೇವಿ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ಹರಿಣಾಕ್ಷಿ ತಿಳಿಸಿದರು.

ನಮ್ಮ ಚಿತ್ರದಲ್ಲಿ ಎರಡು ಹಾಡುಗಳಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ. ಮತ್ತೊಂದು ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಖ್ಯಾತ ಗಾಯಕ ರಾಜೇಶ್ ಕೃಷ್ಣ ಆ ಹಾಡನ್ನು ಹಾಡಿದ್ದಾರೆ ಎಂದು ಮಾನಸ ಹೊಳ್ಳ ಮಾಹಿತಿ ನೀಡಿದರು. ಹಾಡು ಹುಟ್ಟಿದ ಸಮಯ ಬಗ್ಗೆ ಮಜಾ ಟಾಕೀಸ್ ಖ್ಯಾತಿಯ ರೆಮೊ ಹೇಳಿದರು. ಬಾಲ ಗಾಯಕಿಯರು ವೇದಿಕೆಯಲ್ಲೂ ಹಾಡಿ ರಂಜಿಸಿದರು.‌ ಛಾಯಾಗ್ರಾಹಕ ಪ್ರಶಾಂತ್ ಸಾಗರ್ ಸೇರಿದಂತೆ ಠಾಣೆ ಚಿತ್ರದ ಕಲಾವಿದರು ,ತಂತ್ರಜ್ಞರು ಸಮಾರಂಭದಲ್ಲಿದ್ದರು. ನಿರ್ಮಾಪಕಿ ಗಾಯತ್ರಿ ಅವರು ಎಲ್ಲರಿಗೂ ಧನ್ಯವಾದ ತಿಳಿಸಿದರು.

9 months ago | [YT] | 3

Galaxy TV Kannada

"BAD" ಚಿತ್ರದ ಪ್ರೇಮಗೀತೆಗೆ‌‌ ಅಭಿಮಾನಿಗಳು ಫಿದಾ .

ಇದು ಪಿ.ಸಿ.ಶೇಖರ್ ನಿರ್ದೇಶನದ ಹಾಗು ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ ಚಿತ್ರ

ಪಿ.ಸಿ.ಶೇಖರ್ ನಿರ್ದೇಶನದ,
ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "BAD" ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ ಅವರು ಬರೆದಿರುವ "ನೀ ಬರುವೆ ಅಂತ ನಾ ಕಾದು ಕುಂತ" ಎಂಬ ಸುಂದರ ಪ್ರೇಮಗೀತೆ ಇತ್ತೀಚೆಗೆ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು "ಸರಿಗಮಪ" ಖ್ಯಾತಿಯ ಪೃಥ್ವಿ ಭಟ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಹಾಡು ಜನಮನಸೂರೆಗೊಳ್ಳುತ್ತಿದ್ದು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನಕುಲ್ ಗೌಡ ಹಾಗೂ ಮಾನ್ವಿತ ಹರೀಶ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

ನಾಯಕನ ಬರುವಿಕೆಗಾಗಿ ಕಾದು ಕುಳಿತ್ತಿರುವ ನಾಯಕಿ, ಕಾಯುವಿಕೆಯ ಆ ಸಮಯದಲ್ಲಿ ಏನೆಲ್ಲಾ ಕಲ್ಪಿಸಿಕೊಳ್ಳುತ್ತಾಳೆ ಎಂಬುದನ್ನು ಈ ಹಾಡಿನ ಮೂಲಕ ತೋರಿಸಲಾಗಿದೆ ಎಂದು ತಿಳಿಸಿರುವ ನಿರ್ದೇಶಕ ಪಿ.ಸಿ.ಶೇಖರ್, ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಲ್ಲಿ ಆರು ಜನ ಕಲಾವಿದರು ಅಭಿನಯಿಸಿರುವುದು ಈ ಚಿತ್ರದ ವಿಶೇಷ ಎನ್ನುತ್ತಾರೆ.

"BAD" ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಿತ್ರೀಕರಣ ಮುಕ್ತಾಯವಾಗಿದೆ. ಟೀಸರ್ ಮೂಲಕ ಸದ್ದು ಮಾಡುತ್ತಿರುವ ಈ ಚಿತ್ರದ ಹಾಡುಗಳು ಸಹ ಜನಪ್ರಿಯವಾಗುತ್ತಿದೆ.

ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ "BAD" ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ. ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ "BAD" ಚಿತ್ರಕ್ಕೆ ಸಚಿನ್ ಜಗದೀಶ್ವರ್ ಎಸ್ ಬಿ ಸಂಭಾಷಣೆ ಬರೆದಿದ್ದಾರೆ.

"ಪ್ರೀತಿಯ ರಾಯಭಾರಿ" ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ "BAD" ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

9 months ago | [YT] | 2

Galaxy TV Kannada

ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರ 50 ನೇ ಜನ್ಮ ದಿನವನ್ನು ಸ್ಮರಣೀಯಗೊಳಿಸುವ ಹಿನ್ನೆಲೆಯಲ್ಲಿ ಉರ್ವಿ ಫ್ರಾಗ್ರೆನ್ಸಸ್ ಪ್ರೈವೇಟ್ ಲಿಮಿಟೆಡ್ ನ ಅಪ್ಪು ಗಂಧದಗುಡಿ ಅಗರಬತ್ತಿ ಸಹಯೋಗದಲ್ಲಿ ಇಂಡಿಯಾ ಪೋಸ್ಟ್ ಪುನಿತ್ ರಾಜ್ ಕುಮಾರ್ ಅವರ ಐದು ವಿಶೇಷ ಪೋಸ್ಟ್ ಪೋಸ್ಟ್ ಕಾರ್ಡ್ ಗಳನ್ನು ಬಿಡುಗಡೆ ಮಾಡಿತ್ತು.

9 months ago | [YT] | 3

Galaxy TV Kannada

ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು.

ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.

"ಮಿಲೇಸುರ್ ಮೇರಾ ತುಮಾರಾ" ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಬಾನಾ ಆಜ್ಮಿಯವರನ್ನು ಸ್ಮರಿಸಿದರು.

ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಶಬಾನಾ ಮತ್ತು ಜಾವೇದ್ ಅವರು ಮೆಚ್ಚುಗೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು
ಭೀಮ್ ಸೇನ್ ಜೋಶಿ, ಕುಮಾರ ಗಂಧರ್ವ, ಗಂಗೂಬಾಯಿ ಹಾನಗಲ್ ಇವರೆಲ್ಲಾ ಹಿಂದೂಸ್ತಾನಿ ಸಂಗೀತದ ದಿಗ್ಗಜರು, ನಮ್ಮ ರಾಜ್ಯದ ಹೆಮ್ಮೆ ಇವರೆಲ್ಲಾ ಧಾರವಾಡದವರು ಎನ್ನುವುದು ಮತ್ತೊಂದು ವಿಶೇಷ ಎಂದು ಮಾತು ಸೇರಿಸಿದರು.

ಕಾಪಿ ರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲ ಆಗಿರುವ ರೀತಿಯಲ್ಲೇ, GST ಯಲ್ಲೂ ಅನುಕೂಲ ಆಗುವ ರೀತಿಯಲ್ಲಿ GST ಕೌನ್ಸಿಲ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಬಗ್ಗೆಯೂ ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ , ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶಬಾನಾ ಆಜ್ಮಿ ಮತ್ತು ಜಾವೇದ್ ಅಖ್ತರ್ ಅವರನ್ನು ಸ್ವಾಗತಿಸಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದು ಗೌರವಿಸಿದರು.

9 months ago | [YT] | 1