Yaksha Bramara, This Channel is only for promoting the world's Greatest Art YAKSHAGANA 🙏🙏ಇದು ಜಗತ್ತಿನ ಸರ್ವಶ್ರೇಷ್ಠ ಕಲೆಯಾದ ಯಕ್ಷಗಾನವನ್ನು ಪ್ರೋತ್ಸಾಹಿಸುವ ಚಾನೆಲ್.. ಇಡೀ ರಾತ್ರಿ ಸಾವಿರಾರು ಜನರನ್ನು ಏಕ ಕಾಲದಲ್ಲಿ ರಂಜಿಸಿ, ಬುದ್ಧಿ ವಿಕಾಸ ಹಾಗೂ ಮನೋವಿಕಾಸಕ್ಕೆ ಕಾರಣವಾಗಬಲ್ಲ ಬಯಲ ವಿಶ್ವಾವಿ ಧ್ಯಾಲಯ ಎ೦ದು ಹೆಮ್ಮೆ ಪಡೆದ ನಮ್ಮ ಕರಾವಳಿಯ ಗಂಡುಕಲೆ ಯ ಸಣ್ಣ ಸೇವೆ..🙏🙏🙏
ಯಕ್ಷಗಾನವೆಂಬ ಸುಮದ ಮಧುವ ಹೀರುವ ಭ್ರಮರ ಅರ್ಥಾತ್ 'ಯಕ್ಷ ಭ್ರಮರ ನಾವಾಗುವ🙏🙏
GAJAN Suvarna Yaksha Bramara
✨✨✨✨✨✨🙏✨✨✨✨✨✨✨✨
3 years ago | [YT] | 2
View 0 replies
GAJAN Suvarna Yaksha Bramara
#ಕುಂಕುಮ
ಯಾವ ಬೆರಳಿನಿಂದ ಕುಂಕುಮ ಹಚ್ಚಬೇಕು ಮತ್ತು ಅದರ ಹಿಂದಿನ ಶಾಸ್ತ್ರವೇನು ?
ಸ್ತ್ರೀ-ಪುರುಷರು ಕುಂಕುಮ ಏಕೆ ಮತ್ತು ಹೇಗೆ ಹಚ್ಚಬೇಕು?
#ಶಾಸ್ತ್ರ :
ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಬ್ರಹ್ಮಾಂಡದಲ್ಲಿನ ಚೈತನ್ಯವು ಆಕರ್ಷಿತವಾಗುತ್ತದೆ ಮತ್ತು ಕಡಿಮೆ ಸಮಯದಲ್ಲಿ ವ್ಯಕ್ತಿಯ ಭಾವಜಾಗೃತಿಯಾಗುತ್ತದೆ.
ಕುಂಕುಮದಿಂದ ಕೆಟ್ಟ ಶಕ್ತಿಗಳಿಂದ ರಕ್ಷಣೆಯಾಗುತ್ತದೆ. ಆದುದರಿಂದ ಸ್ತ್ರೀಯರು ಬಿಂದಿಗಿಂತ ಕುಂಕುಮವನ್ನು ಹಚ್ಚಿಕೊಳ್ಳಬೇಕು.
ಪದ್ಧತಿ : ಪುರುಷರು ತಮ್ಮ ಮತ್ತು ಇತರರ ಭ್ರೂಮಧ್ಯದಲ್ಲಿ ಮಧ್ಯದ ಬೆರಳಿನಿಂದ ಕುಂಕುಮದ ಉದ್ದ ತಿಲಕವನ್ನು ಹಚ್ಚಬೇಕು. ಸ್ತ್ರೀಯರು ತಮಗೆ ಅನಾಮಿಕಾದಿಂದ (ಕಿರುಬೆರಳಿನ ಪಕ್ಕದ ಬೆರಳು) ಮತ್ತು ಇತರ ಸ್ತ್ರೀಯರ ಭ್ರೂಮಧ್ಯದಲ್ಲಿ ಮಧ್ಯದ ಬೆರಳಿನಿಂದ ಗೋಲಾಕಾರದ ಕುಂಕುಮವನ್ನು ಹಚ್ಚಬೇಕು.
ಇತರರಿಗೆ ಯಾವ ಬೆರಳಿನಿಂದ ಕುಂಕುಮ ಹಚ್ಚಬೇಕು ಮತ್ತು ಅದರ ಹಿಂದಿನ ಶಾಸ್ತ್ರವೇನು?
ಪುರುಷರಿರಲಿ ಅಥವಾ ಸ್ತ್ರೀಯರಿರಲಿ ಅವರು ಇತರರಿಗೆ ಕುಂಕುಮವನ್ನು ಹಚ್ಚುವಾಗ ಮಧ್ಯಮಾವನ್ನು (ಮಧ್ಯದ ಬೆರಳು) ಉಪಯೋಗಿಸಬೇಕು, ಏಕೆಂದರೆ ಇತರರನ್ನು ಸ್ಪರ್ಶಿಸುವಾಗ ಬೆರಳಿನ ಮೂಲಕ ಅವರಲ್ಲಿರುವ ಕೆಟ್ಟ ಶಕ್ತಿಗಳು ನಮ್ಮ ದೇಹದಲ್ಲಿ ಸೇರಿಕೊಳ್ಳುವ ಸಾಧ್ಯತೆಯಿರುತ್ತದೆ.
ಆದುದರಿಂದ ತೇಜದ ಬಲವಿರುವ ಮಧ್ಯಮಾವನ್ನು ಉಪಯೋಗಿಸಿ ತಮ್ಮ ದೇಹದ ರಕ್ಷಣೆಯನ್ನು ಮಾಡಿಕೊಳ್ಳಬೇಕು.
#ಕುಂಕುಮಾರ್ಚನೆ
ದೇವಿಯ ಉಪಾಸನೆಯಲ್ಲಿ ಕುಂಕುಮಾರ್ಚನೆಗೆ ಮಹತ್ವಪೂರ್ಣ ಸ್ಥಾನವಿದೆ. ಅನೇಕ ಸ್ಥಳಗಳಲ್ಲಿ ನವರಾತ್ರಿಯಲ್ಲಿಯೂ ವಿಶೇಷ ರೂಪದಲ್ಲಿ ಈ ವಿಧಿಯನ್ನು ಮಾಡಲಾಗುತ್ತದೆ. ದೇವಿ ಸಹಸ್ರನಾಮದಲ್ಲಿ ದೇವಿಯ ಒಂದೊಂದು ಹೆಸರನ್ನು ಹೇಳುತ್ತಾ ಅಥವಾ ದೇವಿಯ ನಾಮಜಪ ಮಾಡುತ್ತಾ ಒಂದು ಚಿಟಿಕೆ ಕುಂಕುಮವನ್ನು ಅರ್ಪಿಸುವ ಕೃತಿಗೆ 'ಕುಂಕುಮಾರ್ಚನೆ' ಎನ್ನುತ್ತಾರೆ.
ಕುಂಕುಮಾರ್ಚನೆಯನ್ನು ಮಾಡುವಾಗ ಪ್ರಥಮವಾಗಿ ದೇವಿಯ ಆವಾಹನೆಯನ್ನು ಮಾಡಿ ಪೂಜಿಸುತ್ತಾರೆ.
ನಂತರ ದೇವಿಯ ಹೆಸರನ್ನು ಉಚ್ಚರಿಸುತ್ತಾ ದೇವಿಯ ಮೂರ್ತಿಯ ಮೇಲೆ ಕುಂಕುಮವನ್ನು ಅರ್ಪಿಸುತ್ತಾರೆ.
ದೇವಿಯ ಚರಣಗಳಿಂದ ಆರಂಭಿಸಿ ಶಿರದವರೆಗೆ ಏರಿಸಿ, ಅವರನ್ನು ಕುಂಕುಮದಿಂದ ಆಚ್ಛಾದಿಸುತ್ತಾರೆ.
ಕುಂಕುಮಾರ್ಚನೆಯು ಪೂರ್ಣವಾದ ನಂತರ ದೇವಿಗೆ ಆರತಿಯನ್ನು ಬೆಳಗುತ್ತಾರೆ. ಎಲ್ಲರ ಕಲ್ಯಾಣಕ್ಕಾಗಿ ಪ್ರಾರ್ಥನೆಯನ್ನು ಮಾಡುತ್ತಾರೆ.
#ಹಣೆಗೆ_ಕುಂಕುಮಧಾರಣೆ_ಮಾಡಿಕೊಳ್ಳುವಾಗ
ಕುಂಕುಮಂ ಶೋಭನಂ ದಿವ್ಯಂ ಸರ್ವದಾ ಮಂಗಳಪ್ರದಂ | ಧಾರಣೇನಾಸ್ಯ ಶುಭದಂ ಶಾಂತಿರಸ್ತು ಸದಾಮಮ
ಎಂದು ಹೇಳಿಕೊಂಡು ಕುಂಕುಮಧಾರಣೆ ಮಾಡಿಕೊಳ್ಳಬೇಕು.
ಕುಂಕುಮ ಧರಿಸಿದ ನಾರಿಯನ್ನು ನೋಡಿದರೆ ಸಾಕ್ಷಾತ್ ದೇವಿ ಗೌರಿಯಂತೆ ಎನ್ನುವುದುಂಟು!
ಮಹಿಳೆಯರು ಮಾತ್ರವಲ್ಲ, ಪುರುಷರೂ ವಿವಿಧ ರೀತಿಯಲ್ಲಿ ಕುಂಕುಮ ಧಾರಣೆ ಮಾಡುತ್ತಾರೆ.
ಭಾರತೀಯ ಪರಂಪರೆ, ಸಂಸ್ಕೃತಿಗಳಲ್ಲಿ ಕುಂಕುಮಕ್ಕೆ ಮಹತ್ವದ ಬೆಲೆಯುಂಟು. ಉಂಗುರದ ಬೆರಳಿನಿಂದ ಭ್ರೂಮಧ್ಯೆ ಪುರುಷರೂ, ಸ್ತ್ರೀಯರೂ ಮಕ್ಕಳೂ ಕುಂಕುಮಧಾರಣೆ ಮಾಡುತ್ತಾರೆ.
ಉತ್ತರ ಭಾರತದಲ್ಲಿ ಕೂದಲಿನ ಬೈತಲೆಯ ಭಾಗದಲ್ಲಿ ಕುಂಕುಮ ನೀಳವಾಗಿ ಹಚ್ಚಿಕೊಳ್ಳುತ್ತಾರೆ. ಇದಕ್ಕೆ "ಮಾಂಗ್ ಮೇ ಸಿಂಧೂರ್ ಲಗಾನಾ' ಎನ್ನಲಾಗುತ್ತದೆ.
ಉತ್ತರ ಭಾರತದಲ್ಲಿ ಇದು ಮದುವೆಯಾದ ಸ್ತ್ರೀಯರು ಮಾತ್ರ ಹಚ್ಚುವ ಸಂಪ್ರದಾಯ.
ಆದರೆ ದಕ್ಷಿಣ ಭಾರತದಲ್ಲಿ ಹುಬ್ಬುಗಳ ನಡುವೆ ಕುಂಕುಮವಿರಿಸುವುದು ಮದುವೆಯಾದ ಸ್ತ್ರೀಯರು ಮಾತ್ರವಲ್ಲ , ಹೆಣ್ಣು ಮಕ್ಕಳಲ್ಲಿಯೂ ಸಂಪ್ರದಾಯ.
ವಿವಿಧ ರೀತಿಯಲ್ಲಿ ಕುಂಕುಮ ಬಳಸುವ ಸಂಪ್ರದಾಯವಿದೆ.
ಅದಕ್ಕೆ ವಿವಿಧ ಅರ್ಥವೂ ಇದೆ. ವೈಷ್ಣವರಲ್ಲಿ ಧರಿಸುವ ಬಿಳಿಯ ಗೆರೆಗಳ ನಡುವಿನ ಕುಂಕುಮ ಲಕ್ಷ್ಮೀದೇವಿಯ ಪಾದಕಮಲವನ್ನು ಸಾಂಕೇತಿಕವಾಗಿ ಸಂಬೋಧಿಸಿದರೆ, ಬಿಳಿ ಗೆರೆಗಳು ಶ್ರೀಮನ್ನಾರಾಯಣನ ಪಾದಗಳ ಚಿಹ್ನೆಯಾಗಿವೆ.
ಅಂತೆಯೇ ಭ್ರೂಮಧ್ಯೆ ಕುಂಕುಮ ಧರಿಸಿದರೆ ಅದರಿಂದ ದೇಹದ ಆರೋಗ್ಯದ ಮೇಲೂ ಸಕಾರಾತ್ಮಕ ಪರಿಣಾಮ ಉಂಟಾಗುತ್ತದೆ ಎಂದು ವೈಜ್ಞಾನಿಕವಾಗಿಯೂ ಒಪ್ಪಲಾಗಿದೆ.
ಭ್ರೂಮಧ್ಯೆ ಕುಂಕುಮವಿರಿಸುವ ಭಾಗದಲ್ಲಿ ನಿರ್ನಾಳಗ್ರಂಥಿಗಳಲ್ಲಿಯೇ ಮುಖ್ಯವಾಗಿರುವ ಪಿಟ್ಯುಟರಿ ಗ್ರಂಥಿಯಿದೆ.
ಕೆಂಪು ಬಣ್ಣ ಉತ್ತೇಜಕ ಗುಣವನ್ನು ಹೊಂದಿದೆ. ಆದ್ದರಿಂದ ಭ್ರೂಮಧ್ಯೆ ಧರಿಸಿದ ಕುಂಕುಮ ಪಿಟ್ಯುಟರಿ ಗ್ರಂಥಿಯನ್ನು ಉತ್ತೇಜಿಸಿ ಅದರ ಸ್ರಾವ (ಹಾರ್ಮೋನ್) ನಿಯಮಿತವಾಗಿ ಸ್ರವಿಸುವಂತೆ ಮಾಡುತ್ತದೆ.
ಮಾತ್ರವಲ್ಲ ಪಿಟ್ಯುಟರಿ ಗ್ರಂಥಿಯ ಪ್ರೇರಣೆಯಿಂದ ಇತರ ನಿರ್ನಾಳ ಗ್ರಂಥಿಯಿಂದ ಹಾರ್ಮೋನ್ಗಳೂ ಕ್ರಮಬದ್ದವಾಗಿ ಸ್ರವಿಸಲು ಸಾಧ್ಯವಾಗುವಂತೆ ಮಾಡುತ್ತದೆ.
ಕುಂಕುಮವನ್ನು ಅರಸಿನ ಅಥವಾ ಕೇಸರಿಯಿಂದ ತಯಾರಿಸಲಾಗುತ್ತದೆ. ಅರಸಿನ ಪುಡಿಯೊಂದಿಗೆ ಸುಣ್ಣವನ್ನು ಸೇರಿಸಿದರೆ ಅದು ಅದ್ಭುತ ಕೆಂಪು ಬಣ್ಣದ ಕುಂಕುಮವಾಗಿ ಮಾರ್ಪಡುತ್ತದೆ.
ಹಾಂ! ಕುಂಕುಮ ಕಲಬೆರಕೆಯದೋ ಎಂದು ಪರೀಕ್ಷಿಸಲು ಅದಕ್ಕೆ ಸ್ವಲ್ಪ ಸುಣ್ಣ ಸೇರಿಸಿದರೆ ಹಳದಿ ಬಣ್ಣ ಪಡೆಯದಿದ್ದರೆ, ಕಲಬೆರಕೆಯ ಕುಂಕುಮ ಎಂದರ್ಥ.
ಕಲಬೆರಕೆಯ ಕುಂಕುಮ, ರಾಸಾಯನಿಕಗಳಿರುವ ಕುಂಕುಮ ಲೇಪಿಸಿದಾಗ ತುರಿಕೆ ಕಜ್ಜಿಗಳೂ ಉಂಟಾಗುವುದಿದೆ. ಆದ್ದರಿಂದ ಮುತುವರ್ಜಿ ಅವಶ್ಯ.
ಅಲ್ಲದೆ ಕೃತಕ ಬಿಂದಿಗಳನ್ನು , ಕುಂಕುಮ ಬಣ್ಣದ ಸ್ಟಿಕರ್ಗಳನ್ನು ಬಳಸಿದರೂ, ಅದರ ನಿಜವಾದ ಪರಿಣಾಮ ಪ್ರಭಾವ ಉಂಟಾಗುವುದಿಲ್ಲ.
ಆದರೂ ನಾವು ಅನುಕೂಲಕ್ಕೆಂದೋ, ಫ್ಯಾಷನ್ ಎಂದೋ ಕುಂಕುಮದ ಬಿಂದಿ, ಸ್ಟಿಕರ್ಗಳನ್ನು , ಬಣ್ಣ ಬಣ್ಣದ ಸ್ಟಿಕರ್ಗಳನ್ನೋ ಬಿಂದಿಗಳನ್ನೋ ಬಳಸುವುದು ಸರ್ವೇಸಾಮಾನ್ಯವಾಗಿದೆ.
ಹಾಂ, ನಮ್ಮ ದೇಹದಲ್ಲಿರುವ 7 ಚಕ್ರಗಳಲ್ಲಿ 6ನೆಯ ಚಕ್ರ ಸ್ಥಿತವಾಗಿರುವುದು ಭ್ರೂಮಧ್ಯೆ - ಅದೇ ಆಜ್ಞಾಚಕ್ರ. ಅದನ್ನು "ಮರ್ಮಪ್ರದೇಶ'ವೆಂದೂ ಕರೆಯಲಾಗುತ್ತದೆ.
ದೇಹದ ಒಳಗಿರುವ 3ನೆಯ ಕಣ್ಣು ಕೂಡ ಇದೇ ಭಾಗದಲ್ಲಿ ಸ್ಥಿತವಾಗಿದೆ. 3ನೆಯ ಕಣ್ಣು ಇಂದ್ರಿಯವಲ್ಲ, ಬದಲಾಗಿ ಇಂದ್ರಿಯಾತೀತ. ಈ ಭಾಗದಿಂದಲೇ ಜೀವಾತ್ಮದ ರಹದಾರಿ ಪರಮಾತ್ಮನತ್ತ ಸಾಗುವ ಪ್ರಕ್ರಿಯೆ ಆರಂಭ.
ಆದ್ದರಿಂದಲೇ ಅಲ್ಲಿರಿಸುವ ಕುಂಕುಮ ಕ್ಕೆ ಅಷ್ಟೊಂದು ಪಾವಿತ್ರ್ಯ. ಕುಂಕುಮ ಮಂಗಲಕರವೂ ಹೌದು.
ಕುಂಕುಮ ಧಾರಣೆಯಿಂದ ಋಣಾತ್ಮಕ ಶಕ್ತಿ ದೂರವಾಗುತ್ತದೆ. ಜಾನಪದೀಯ ಮಾತೊಂದಿದೆ . "ಕಾಸಿನಗಲದ ಕುಂಕುಮ ಧರಿಸಿದ ಪತಿವ್ರತೆಗೆ ಕೆಟ್ಟ ದೃಷ್ಟಿ ತಗಲುವುದಿಲ್ಲ'.
ಮನೆಗೆ ಅತಿಥಿಗಳು ಬಂದಾಗ, ಶುಭ ಸಮಾರಂಭಗಳಲ್ಲಿ , ಹಬ್ಬ ಹರಿದಿನಗಳಲ್ಲಿ ಅರಶಿನಕುಂಕುಮ ನೀಡಿ ಮುತ್ತೈದೆಯರನ್ನು ಗೌರವಿಸುವುದು ಪ್ರಾಚೀನ ಸಂಪ್ರದಾಯ.
ಅದು ಮಂಗಲಪ್ರದವೆಂದು ನಂಬಿಕೆ. ದೇವಿದೇವತೆಯರ ಪೂಜೆಗೆ ಕುಂಕುಮ ಪವಿತ್ರವಾದ್ದರಿಂದ, ಅದನ್ನೇ ಬಳಸಲಾಗುತ್ತದೆ. ಅದನ್ನೇ ಕುಂಕುಮಾರ್ಚನೆ ಎನ್ನಲಾಗುತ್ತದೆ.
ಶಕ್ತಿ ಮತ್ತು ಲಕ್ಷ್ಮೀದೇವಿಯರ ಪೂಜೆಯಲ್ಲಿ ಕುಂಕುಮಾರ್ಚನೆಗೆ ಹೆಚ್ಚು ಮಹತ್ವವಿದೆ. ಹಾಂ! ಕುಂಕುಮ ಔಷಧೀಯವೂ ಹೌದು ಕುಂಕುಮವನ್ನು ಎಣ್ಣೆಯೊಂದಿಗೆ ಬೆರೆಸಿ ಮೊಡವೆಗಳಿಗೆ ಲೇಪಿಸಿದರೆ ಮೊಡವೆ ಮಾಯುತ್ತದೆ.
ಕುಂಕುಮದೊಂದಿಗೆ ಇತರ ಅಂಶಗಳನ್ನು ಹೊಂದಿರುವ ತೈಲವನ್ನು (ಕುಂಕುಮಾದಿ ತೈಲ)ನಿತ್ಯ ಲೇಪಿಸಿದರೆ ಮೊಡವೆ ಕಲೆ ನಿವಾರಣೆಯಾಗುವುದು ಮಾತ್ರವಲ್ಲ ಮೊಗದ ಚರ್ಮವೂ ಸ್ನಿಗ್ಧ ಮತ್ತು ಕೋಮಲವಾಗಿ
ಹೊಳೆಯುತ್ತದೆ.
ಉತ್ತರ ಭಾರತದ ದೇವಾಲಯಗಳಲ್ಲಿ "ಟೀಕಾಲಗಾನ' ಎಂದು ಹೆಬ್ಬೆಟ್ಟಿನಿಂದ ದೇವರಿಗೆ ಅರ್ಚಿಸಿದ ಕುಂಕುಮದಿಂದ ಹಣೆಯ ಮೇಲೆ ತಿಲಕ ಲೇಪನ ಮಾಡುತ್ತಾರೆ.
ವಿವಿಧ ಸಾಧುಸಂತರೂ ಕುಂಕುಮವನ್ನು ತಿಲಕವಾಗಿ ವಿವಿಧ ರೂಪದಲ್ಲಿ ಬಳಸುತ್ತಾರೆ. ಬ್ರಹ್ಮಾನಂದ ಪುರಾಣದಲ್ಲಿ ಕೆಂಪು ತಿಲಕವು ಸಂಯಮ ಮತ್ತು ವಿನಯವನ್ನು ಉಂಟುಮಾಡುತ್ತದೆ ಎನ್ನಲಾಗಿದೆ.
ನಿತ್ಯ ಕುಂಕುಮದ ತಿಲಕಧಾರಣೆ ಸೌಭಾಗ್ಯ, ದೇವದೇವತೆಗಳ ಆಶೀರ್ವಾದ ಉಂಟುಮಾಡುತ್ತದೆ. ದೀರ್ಘ ಜೀವನಕ್ಕೆ ಸಹಕಾರಿ.
ಯೌವ್ವನಕಾರಕವೂ ಹೌದು ಎನ್ನಲಾಗಿದೆ. ಅನಾಮಿಕಾ (ಉಂಗುರದ) ಬೆರಳಿನಿಂದ ಸರಿಯಾದ ರೀತಿಯಲ್ಲಿ ಧಾರಣೆ ಮಾಡಿದ ಕುಂಕುಮಾದಿಗಳ ತಿಲಕವು ಮೋಕ್ಷಕಾರಕವೆಂದು ಅದರ ಮಹತ್ವವನ್ನು ಶಾಸ್ತ್ರಗಳಲ್ಲಿ ಸಾರಲಾಗಿದೆ.
ಶಿಕ್ಷಪತ್ರಿ ಶ್ಲೋಕಗಳಲ್ಲಿ ಇವುಗಳನ್ನು ವಿವರಿಸಲಾಗಿದೆ. ಉಪನಿಷದ್, ಬ್ರಹ್ಮಾನಂದ ಪುರಾಣ, ಪದ್ಮ ಪುರಾಣಗಳಲ್ಲೂ ತಿಲಕದ ಉಲ್ಲೇಖವಿದೆ.
ಹೋಳಿ ಹಬ್ಬದ ಸಮಯದಲ್ಲೂ ಕುಂಕುಮದ ಜೊತೆಗೆ ವಿವಿಧ ರಂಗುಗಳನ್ನು ಎರಚಿ ಸಂತಸ ಸಂಭ್ರಮದಿಂದ ಹಬ್ಬ ಆಚರಿಸುತ್ತಾರೆ. ಹೀಗೆ ಕುಂಕುಮಧಾರಣೆಗೆ ವಿವಿಧ ಬಗೆಯ ಮಹತ್ವ, ಅರ್ಥಗಳಿವೆ.
ಸರ್ವರಿಗೂ ಶುಭವಾಗಲಿ ಸುಮಂಗಲಿಯರಿಗೆ
ಸುರಕ್ಷಾ ಕವಚ ಈ ಕುಂಕುಮ
ನಿಮ್ಮ ಸುರಕ್ಷೆ ನಿಮ್ಮ ಬೆರಳಿನಲ್ಲಿದೆ.
ಅನುಸರಿಸುವುದು ನಿಮಗೆ ಕಷ್ಟಕರ ಅನ್ನಿಸಬಹುದು
ಅದನ್ನು ರೂಢಿಸಿಕೊಂಡು ಬಂದಾಗ ಕಷ್ಟ ಅನ್ನೊದೆ ಇರೊದಿಲ್ಲ ಅಲ್ವ.
4 years ago | [YT] | 4
View 0 replies
GAJAN Suvarna Yaksha Bramara
✍🏽🏮
ಸಂಖ್ಯಾಶಾಸ್ತ್ರದಲ್ಲಿ ಒಂಬತ್ತನೆಯ ಸಂಖ್ಯೆಯನ್ನು 'ಬ್ರಹ್ಮಸಂಖ್ಯೆ' ಎನ್ನುತ್ತಾರೆ. 'ದೈವಸಂಖ್ಯೆ' ಮತ್ತು 'ವೃದ್ಧಿಸಂಖ್ಯೆ' ಎಂದೂ ಹೇಳುತ್ತಾರೆ. ಈ ಒಂಬತ್ತನೆಯ ಸಂಖ್ಯೆಯನ್ನೇ ಪುರಾಣ ಸಂಖ್ಯೆ' ಎಂದೂ ನಂಬುತ್ತಾರೆ.
ಈ ಒಂಭತ್ತನೆಯ ಸಂಖ್ಯೆ ಮಹತ್ವವೇನೋ ನೋಡೋಣ! ಸೊನ್ನೆ ಬಿಟ್ಟರೆ ಒಟ್ಟು ಸಂಖ್ಯೆಗಳು ಒಂಬತ್ತು. ನೀವು ಯಾವುದಾದರೂ ನಿಮ್ಮಿಷ್ಟ ಬಂದ ಒಂದು ಸಂಖ್ಯೆಯನ್ನು ಒಂಬತ್ತನೆಯ ಸಂಖ್ಯೆಯಿಂದ ಗುಣಾಕಾರ ಮಾಡಿರಿ. ಬಂದ ಶೇಷಸಂಖ್ಯೆಗಳನ್ನು ಸಂಕಲನ ಮಾಡಿ ಏಕ ಸಂಖ್ಯೆಯನ್ನಾಗಿಸಿರಿ, ಒಂಬತ್ತು ಅಗುತ್ತದೆ. ಇಲ್ಲಿ ಪೂರಾ ಒಂಬತ್ತು ಸಂಖ್ಯೆಗಳನ್ನು ಒಂಬತ್ತರಿಂದ ಗುಣಿಸಲಾಗಿದೆ.
123456789x9=1111111101 ಒಟ್ಟಾಗಿ ಕೂಡಿಸಿದರೆ "9" ಆಗುತ್ತದೆ.
ಇದೇ ರೀತಿ ಒಂಬತ್ತನೆಯ 'ಮಗ್ಗಿಯನ್ನು ನೋಡೋಣ.
9 × 1 = 9 -- 9 = 9
9 × 2 = 18 -- 1 + 8 = 9
9 × 3 = 27 -- 2 + 7 = 9
9 × 4 = 36 -- 3 + 6 = 9
9 × 5 = 45 -- 4 + 5 = 9
9 × 6 = 54 -- 5 + 4 = 9
9 × 7 = 63 -- 6 + 3 = 9
9 × 8 = 72 -- 7 + 2 = 9
9 × 9 = 81 -- 8 + 1 = 9
9 × 10= 90 -- 9 + 0 = 9
ಹೀಗೆ ಚತುರ್ಯುಗಗಳ ಕಾಲಾವಧಿಗಳನ್ನು ನೋಡೋಣ.
🔸 ಕಲಿಯುಗದ ಅವಧಿ:
4,32,000 ವರ್ಷಗಳು
4+3+2+0+0+0 = 9
🔸 ದ್ವಾಪರಯುಗದ ಅವಧಿ:
8,64,000 ವರ್ಷಗಳು
8+6+4+0+0+0=18, 1+8=9
🔸 ತ್ರೇತಾಯುಗದ ಅವಧಿ:
12,96,000 ವರ್ಷಗಳು
1+2+9+6+0+0+0 = 18, 1+8=9
🔸 ಕೃತಯುಗದ ಅವಧಿ:
17,28,000 ವರ್ಷಗಳು
1+7+2+8+0+0+0= 18,1+8=9
*ಇಲ್ಲಿ ನೀವು ಗಮನಿಸಿರಬಹುದು.
ಕಲಿಯುಗದ ಎರಡರಷ್ಟು ದ್ವಾಪರಯುಗವಿದೆ.
ಕಲಿಯುಗದ ಮೂರರಷ್ಟು ತ್ರೇತಾಯುಗವಿದೆ.
ಕಲಿಯುಗದ ನಾಲ್ಕರಷ್ಟು ಕೃತಯುಗವಿದೆ.
*ಮತ್ತೊಂದು ವಿಷಯ ಗಮನಿಸಿ.
ದ್ವಾಪರಯುಗದ ಅರ್ಧದಷ್ಟು ಕಲಿಯುಗವಿದೆ. ದ್ವಾಪರಯುಗದ ಒಂದೂವರೆ ಪಟ್ಟು ತ್ರೇತಾಯುಗವಿದೆ.
ದ್ವಾಪರಯುಗದ ಎರಡರಷ್ಟು ಕೃತಯುಗವಿದೆ
ಹೀಗೆ ನಾಲ್ಕು ಯುಗಗಳ ಒಟ್ಟುವರ್ಷಗಳು 43,20,000 * 4+3+2+0+0+0+0 = 9
🚩ಮಹಾ ಇತಿಹಾಸವೆಂದು ಖ್ಯಾತಿಯಿರುವ 'ಮಹಾಭಾರತ'ದ ಪರ್ವಗಳು: 18 * 1+8 = 9
🚩ಮಹಾಭಾರತದ ಕುರುಕ್ಷೇತ್ರಯುದ್ಧದ ದಿನಗಳು: 18 * 1+8 = 9
🚩ಕುರುಕ್ಷೇತ್ರ ಯುದ್ಧದಲ್ಲಿ ಪಾಲ್ಗೊಂಡ ಸೈನ್ಯದ ಸಂಖ್ಯೆ:
ಪಾಂಡವರದು: 7 ಅಕ್ಷೋಹಿಣಿ
ಕೌರವರದು: 11 ಅಕ್ಷೋಹಿಣಿ
ಒಟ್ಟು 18 ಅಕ್ಷೋಹಿಣಿಗಳು! 18 * 1+8 = 9
🚩ಮಹಾಭಾರತದ ಭಗವದ್ಗೀತೆಯ ಅಧ್ಯಾಯಗಳು ಹದಿನೆಂಟು: 18 * 1+8 =
📚 ವ್ಯಾಸಮಹರ್ಷಿಗಳು ಬರೆದ ಪುರಾಣಗಳು 18, (ಅಷ್ಟಾದಶ ಪುರಾಣಗಳು): 18* 1+8 = 9
ವ್ಯಾಸಭಗವಾನರಿಗೂ ಒಂಬತ್ತನೆಯ ಸಂಖ್ಯೆಗೂ ಏನೋ ಅವಿನಾಭಾವ ಸಂಬಂಧವಿದೆ.
ಸಂಖ್ಯಾಶಾಸ್ತ್ರ ಮಹತ್ವದಿಂದಾಗಿ ಒಂಬತ್ತನೆಯ ಸಂಖ್ಯೆಗೆ ದೈವತ್ವವು ಬಂದಿದೆ.
ನಕ್ಷತ್ರಗಳು: 27 -- 2+7 = 9
ರುದ್ರಾಕ್ಷಿ ಮಾಲೆಯಲ್ಲಿರುವ ರುದ್ರಾಕ್ಷಿಮಣಿಗಳ ಸಂಖ್ಯೆ: 108 -- 1+0+8 = 9
ಈ ಒಂಬತ್ತನೆಯ ಸಂಖ್ಯೆಯ ಬಗ್ಗೆ ಮತ್ತಷ್ಟು ನೋಡೋಣ!
ಗಂಟೆಗೆ 3,600 ಸೆಕೆಂಡುಗಳು * 3+6+0+0=9
ದಿನಕ್ಕೆ 1,440 ನಿಮಿಷಗಳು * 1+4+4+0 = 9
ವಾರಕ್ಕೆ 10,080 ನಿಮಿಷಗಳು *1+0+0+8+0=9
ತಿಂಗಳಿಗೆ 720 ಗಂಟೆಗಳು * 7+2+0 = 9
ವರ್ಷಕ್ಕೆ 360 ದಿನಗಳು * 3+6+0 = 9
60 ವರ್ಷಗಳಿಗೆ 720 ತಿಂಗಳುಗಳು *7+2+0=9
60 ವರ್ಷಗಳಿಗೆ 21,600 ದಿನಗಳು *2+1+6+0+0 = 9
ಮನುಷ್ಯನ ಶರೀರಕ್ಕಿರುವ ರಂಧ್ರಗಳು 9 (ಸೃಷ್ಟಿಯ ಪ್ರಾಣಿಗಳಲ್ಲಿ ಸರ್ಪವನ್ನು ಬಿಟ್ಟರೆ ಉಳಿದ ಪ್ರಾಣಿಗಳಿಗೆ ಒಂಭತ್ತು ರಂಧ್ರಗಳಿರುತ್ತವೆ.)
ಮಾನವ ಶಿಶು ತಾಯಿಗರ್ಭದಲ್ಲಿ ಇರುವುದು:
9 ತಿಂಗಳುಗಳು, ಅಂದರೆ
270 ದಿನಗಳು, 7+2+0 = 9
ನವಗ್ರಹಗಳು *9
ನವರತ್ನಗಳು *9
ನವರಸಗಳು *9
ನವನಾದಗಳು *9
ನವನಿಧಿಗಳು *9
ನವಚಿತ್ತವೃತ್ತಿಗಳು *9
ನವರಂಧ್ರಗಳು *9
ನವಚಕ್ರಗಳು *9
ನವಧಾನ್ಯಗಳು *9
ನವನಾಥ ಸಿದ್ಧರು *9
ನವಭಯಗಳು *9
ನವನಾಡಿಗಳು *9
ಹೀಗೆ ಒಂಬತ್ತರ ಸಂಖ್ಯೆಗೆ ಮಹತ್ವದ ಸ್ಥಾನವಿದೆ. ಇದೇ ಸನಾತನ ಧರ್ಮದ ವೈಶಿಷ್ಟ್ಯ
ಮತ್ತೆ ಯಾವ ಧರ್ಮದಲ್ಲೂ ಇಷ್ಟು ವಿಜ್ಞಾನವನ್ನು ತಿಳಿಸಲು ಸಾಧ್ಯವಿಲ್ಲ.
ಸಂಗ್ರಹ.
4 years ago | [YT] | 2
View 0 replies
GAJAN Suvarna Yaksha Bramara
🕉️ *ಶ್ರೀ ವಿಷ್ಣು ಸಹಸ್ರನಾಮ ಮತ್ತು ಅದರ ಮಹತ್ವದ ಬಗ್ಗೆ ಹಿರಿಯರೊಬ್ಬರಿಂದ ಕೇಳಿ ತಿಳಿದ ವಿಚಾರ* 🕉️
ತಿರುಚ್ಚಿಯ ಶ್ರೀರಂಗನಾಥ ದೇವಸ್ಥಾನ , ಅಲ್ಲಿ ಬೆಳಗಿನ ಪೂಜೆ ಆದ ಬಳಿಕ ದೇವರಿಗೆ ಸಮರ್ಪಣೆ ಮಾಡಿದ ಪ್ರಸಾದವನ್ನು ನೆರೆದ ಭಕ್ತರಿಗೆ ಹಂಚುವುದು ವಾಡಿಕೆ .
ಹಾಗೆ ಅದನ್ನು ಸ್ವಕರಿಸಲು ಭಕ್ತರೆಲ್ಲರೂ ಸರದಿಯ ಸಾಲಿನಲ್ಲಿ ಬಂದು ಭಕ್ತಿಯಿಂದ ಸ್ವೀಕರಿಸುತ್ತಿದ್ದಾಗ ಕಡು ಬಡವ ಹಿರಿಯರೊಬ್ಬರು ಸರದಿಯ ಸಾಲಿನಲ್ಲಿ ನಿಲ್ಲದೆ ಎಲ್ಲರನ್ನು ದೂಡಿ ಮುಂದೆಹೋಗಿ ನಿಲ್ಲುತ್ತಿದ್ದರು ಅಲ್ಲದೆ ಕೈಯಲ್ಲಿ ದೊಡ್ಡದೊಂದು ಪಾತ್ರೆಯನ್ನು ಹಿಡಿದು ಪ್ರಸಾದವನ್ನು ಕೇಳುತ್ತಿದ್ದರು.
ನಾನು ಬಡವ ನನಗೆ 6 ಜನ ಮಕ್ಕಳಿದ್ದಾರೆ , ಇದು ಸಿಗದಿದ್ದರೆ ಅವರೆಲ್ಲ ನಿರಾಹಾರರಾಗ ಬೇಕಾಗುತ್ತದೆ ಎನ್ನುತ್ತಾ ಪ್ರಸಾದವನ್ನು ಕೇಳಿ ಪಡೆಯುತ್ತಿದ್ದರು.
ಆದರೆ ಇದು ಪ್ರಸಾದ ಹಂಚುವ ದೇವಸ್ಥಾನದವರಿಗೆ ಮುಜುಗರ ತರುತ್ತಿತ್ತು, ಹಾಗಾಗಿ ಅವರು ನೇರವಾಗಿ *ಶ್ರೀಪಾದ ರಾಮಾನುಜರ* ಬಳಿ ದೂರು ಕೊಟ್ಟರು.
ಇದನ್ನು ಕೇಳಿದ ಶ್ರೀಪಾದ ರಾಮಾನುಜರು ಆ ಬಡವನನ್ನು ನೋಡಿ ವಿಚಾರ ತಿಳಿಯಲೆಂದು ಒಂದು ದಿನ ಪ್ರಸಾದ ಹಂಚುವಲ್ಲಿಗೆ ಬಂದು ಆ ಬಡವ ಹಿರಿಯರನ್ನು ಕಂಡು ಯಾಕೆ ಹೀಗೆ ಮಾಡುತ್ತೀರಿ ಎನ್ನಲು .
ಆ ಬಡವ ಹಿರಿಯರು ಸ್ವಾಮಿ ನಾನು ಬಡವ ನನಗೆ 6 ಜನ ಸಣ್ಣಸಣ್ಣ ಮಕ್ಕಳಿದ್ದಾರೆ , ಹೊಟ್ಟೆಗೆ ಗತಿಯಿಲ್ಲ ಹಾಗಾಗಿ ನಾನು ಎಲ್ಲರನ್ನು ಹಿಂದೆಹಾಕಿ ಮುಂದೆನಿಂತು ಪಾತ್ರೆಯಲ್ಲಿ ಪ್ರಸಾದ ಕೇಳುತ್ತೇನೆ. ಸಾಲಿನಲ್ಲಿ ನಿಂತರೆ ಎಲ್ಲಿ ಪ್ರಸಾದ ಖಾಲಿಯಾಗುತ್ತದೆಯೋ ಅನ್ನುವ ತವಕ.
ವಿಚಾರ ತಿಳಿದ ಶ್ರೀಪಾದ ರಾಮಾನುಜರು ಆ ಹಿರಿಯರನ್ನು ನಿಮಗೆ ಶ್ರೀ ವಿಷ್ಣುಸಹಸ್ರನಾಮ ಹೇಳಲು ಬರುತ್ತದೆಯೋ ಅನ್ನಲು ಹಿರಿಯರು ನಾನು ಕಲಿತವನಲ್ಲ .. ಆದರೆ ಇಲ್ಲಿ ದೇವಸ್ಥಾನದಲ್ಲಿ ಅಲ್ಪ ಸ್ವಲ್ಪ ಕೇಳಿದ್ದೇನೆ.. ಶ್ರೀ ವಿಷ್ಣುಸಹಸ್ರನಾಮವನ್ನು...
ಹಾಗಾದರೆ ನಿನಗೆ ಬರುವಷ್ಟು ಹೇಳು ಅನ್ನಲು ಆತ
*ವಿಶ್ವಂ ವಿಷ್ಣುರ್ವಷಟ್ಕಾರೋ ಭೂತಭವ್ಯಭವತ್ಪ್ರಭುಃ |*
*ಭೂತಕೃದ್ಭೂತಭೃದ್ಭಾವೋ ...*
ಅನ್ನುತ್ತಲೇ ಶ್ರೀರಾಮಾನುಜರು ಅಂದರೆ ನಿನಗೆ ಶ್ರೀ ವಿಷ್ಣುವಿನ ಸಾವಿರ ಹೆಸರಿನಲ್ಲಿ ಆರು ಹೆಸರು ಮಾತ್ರ ಬರುತ್ತದೆ .. ಹೌದು ನಾನು ಕಲಿತವನಲ್ಲ... ಆಗ ಶ್ರೀಪಾದರು ಅದಕ್ಕೇನು ಬೇಸರವಿಲ್ಲ ಅದರಲ್ಲಿ ಬರುವ ಆರನೆಯ ಹೆಸರು *ಭೂತ-ಭೃತ್:* ಅಂದರೆ ಎಲ್ಲಾ ಜೀವಿಗಳನ್ನು ಪೋಷಿಸುವವನು ಎಂದು , ನೀನು ಶ್ರದ್ದೆ ಮತ್ತು ಸಂಪೂರ್ಣ ಭಕ್ತಿಯಿಂದ ಆ ಆರನೆಯ ಹೆಸರನ್ನು ಜಪಮಾಡು ಅದರಿಂದ ನಿನ್ನ ಕಷ್ಟ ಪರಿಹಾರವಾಗುತ್ತದೆ ಎಂದು ಆತನಿಗೆ *ಶ್ರೀ ಭೂತ-ಭೃತ್ಯಯೇ ನಮಃ* ಅನ್ನುವಂತೆ ಉಪದೇಶಿಸಿದರು..
ಕೆಲದಿನಗಳ ಬಳಿಕ ಶ್ರೀಪಾದರು ಪ್ರಸಾದ ಹಂಚುವವರನ್ನು ಆ ಹಿರಿಯ ವಿಚಾರದಲ್ಲಿ ಕೇಳಿದಾಗ ಅವರು ಸ್ವಾಮಿ ಅವರು ಈಗ ಬರುತ್ತಿಲ್ಲ . ಏನಾಗಿದೆ ಅಂತ ಗೊತ್ತಿಲ್ಲ. ಬಹಳಷ್ಟು ಸಮಯ ವಾಯಿತು ಅವರನ್ನು ನೋಡದೆ.. ಆದರೆ ಒಂದು ವಿಚಾರ ದೇವರಿಗೆ ಸಮರ್ಪಣೆ ಮಾಡಿದ ಪ್ರಸಾದ ಪೂಜೆಯ ಬಳಿಕ ನೋಡಿದರೆ ಯಾರೋ ತೆಗೆದಂತೆ ಕಾಣುತ್ತದೆ .
ಆ ಹಿರಿಯರು ಹೇಗೋ ಬಂದು ಅದನ್ನು ತೆಗೆಯುತ್ತಾರಾ ಏನೋ ಅನ್ನುವ ಸಂಶಯ ವ್ಯಕ್ತ ಪಡಿಸಿದರು. ಶ್ರೀಪಾದರು ಒಂದು ದಿನ ನೋಡಲು ಪ್ರಸಾದ ಪೂಜೆಯ ಬಳಿಕ ಕಮ್ಮಿಯಾದದ್ದನ್ನು ಕಂಡು...
ಶ್ರೀಪಾದರು ಆ ಹಿರಿಯರನ್ನು ಕಾಣಲು ನದಿಯನ್ನು ದಾಟಿ ಹಿರಿಯರಿದ್ದ ಸಣ್ಣ ಗುಡಿಸಲಿನತ್ತ ಹೋದಾಗ ಹಿರಿಯರು ಶ್ರೀಪಾದರ ಕಾಲಿಗೆ ನಮಸ್ಕರಿಸಿ ತಾವು ಮಹಾನ್ ಮಹಿಮರು ನಮ್ಮ ಕಷ್ಟಗಳೆಲ್ಲ ಪರಿಹಾರವಾಯಿತು.
ಅಲ್ಲಿಗೆ ಪ್ರಸಾದಕ್ಕೆ ಬರಬೇಕಾಗಿಲ್ಲ ದಿನಾ ನೀವು ಕಳುಹಿಸಿದ ಹುಡುಗ ಬಂದು ನಮಗೆ ಬೇಕಾದಷ್ಟು ಪ್ರಸಾದವನ್ನು ಕೊಟ್ಟು ಹೋಗುತ್ತಿದ್ದಾನೆ . ನಿಮಗೆ ತುಂಬುದು ಹೃದಯದ ಧನ್ಯವಾದಗಳು ಅನ್ನುತ್ತಲೇ ಶ್ರೀಪಾದರಿಗೆ ಅರಿವಾಯಿತು ಇದೆಲ್ಲ ಶ್ರೀ ರಂಗನಾಥನ ಮಹಿಮೆ ....
ಭೂತ-ಭೃತ್: ಎಲ್ಲಾ ಜೀವಿಗಳನ್ನು ಪೋಷಿಸುವವನು ಅವನೇ ಹಾಗಿರುವಾಗ ಭಕ್ತಿಯಿಂದ ಪೂಜಿಸಿದ ಜಪಮಾಡಿದ ಹಿರಿಯರನ್ನು ಹೇಗೆಬಿಟ್ಟುಹೋಗುತ್ತಾನೆ ಎಂದು ಮನದಲ್ಲಿಯೇ ನೆನೆಸಿದರು. ಅಲ್ಲದೆ ಭಗವದ್ಗೀತೆಯಲ್ಲಿ ಶ್ರೀ ಕೃಷ್ಣ ಹೇಳಿದ ಮಾತು ಮತ್ತೆ ನೆನಪಾಯಿತು. *ನಚ ಮಸ್ತಾನಿ ಭೂತಾನಿ .. ಪಶ್ಯಾಮಿ ಯೋಗ ಮಸ್ವರಂ..*
ಶ್ರೀ ವಿಷ್ಣುಸಹಸ್ರನಾಮದ ಪ್ರತಿಯೊಂದು ಹೆಸರು ಅದರದೇ ಆದ ಮಹತ್ವವನ್ನು ಹೊಂದಿದೆ ಅದನ್ನು ಅರಿತು ಪಠಿಸಿದರೆ ಒಳ್ಳೆಯದು...
🙏🏻
ಕೃಪೆ : ವಾಟ್ಸಪ್🙏
4 years ago | [YT] | 4
View 0 replies
GAJAN Suvarna Yaksha Bramara
https://youtu.be/tag-CtAfoj8 ಮಹಿಮೆದ ಮಂತ್ರದೇವತೆ
4 years ago | [YT] | 17
View 0 replies
GAJAN Suvarna Yaksha Bramara
ಪುಟ್ಟು ಪರ್ಬದ ಎಡ್ಡೆಪು ಪ್ರಶಾಂತಣ್ಣ 😍https://youtu.be/uuObvN1YlsA
ಶ್ರೀ ದೇವಿ ಮಹಾತ್ಮೆ ಯಕ್ಷಗಾನ 🔥🔥
4 years ago | [YT] | 30
View 0 replies
GAJAN Suvarna Yaksha Bramara
ಹುಟ್ಟು ಹಬ್ಬದ ಶುಭಾಶಯಗಳು ಪ್ರಶಾಂತಣ್ಣ🏵️
ಪ್ರಶಾಂತ ಶೆಟ್ಟಿ ನೆಲ್ಯಾಡಿ -ಸಾಕ್ಷಾತ್ ಧರೆಗಿಳಿದ ದೇವಿ🙏🙏🙏👌🏻👌🏻
https://youtu.be/enyCy_Pikks
4 years ago | [YT] | 25
View 0 replies
GAJAN Suvarna Yaksha Bramara
*ತೆಂಕುತಿಟ್ಟಿನ ಅನುಭವಿ ಕಲಾವಿದ ಶ್ರೀ ವಾಮನ್ ಕುಮಾರ್ ವೇಣೂರು
ಯಾವ ಪಾತ್ರಕ್ಕೂ ಒಗ್ಗಿಕೊಂಡು - ರಂಗದಲ್ಲಿ ಪಾದರಸದಂತಿದ್ದ ಕಲಾವಿದ ಇಂದು ಯಕ್ಷ ಮಾತೆಯ ಪಾದ ಸೇರಿದ್ದಾರೆ. ಬಹುಷಃ ಮಂಗಳಾದೇವಿ ಮೇಳದಲ್ಲಿ ಅವರು ನಿರ್ವಹಿಸಿದ ಪಾತ್ರಗಳನ್ನು ಕಲಾಪ್ರೇಮಿಗಳು ಮರೆಯಲು ಸಾಧ್ಯವೇ ಇಲ್ಲ..ಅದರಲ್ಲೂ ಮಲ್ಲಿಗೆ ಸಂಪಿಗೆ ಪ್ರಸಂಗದಲ್ಲಿ ವಿಭಿನ್ನ ಮಾತು ಅಭಿನಯದಿಂದ ಗಮನ ಸೆಳೆದಿದ್ದರು.
ಶ್ರೀ ವಾಮನ ಕುಮಾರರು ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಗೋಳಿತ್ಯಾರು ಎಂಬಲ್ಲಿ ಶ್ರೀ ಅಣ್ಣು ದೇವಾಡಿಗ ಮತ್ತು ಶ್ರೀಮತಿ ಮೋನಮ್ಮ ದಂಪತಿಗಳ ಪುತ್ರನಾಗಿ 1974 ಎಪ್ರಿಲ್ 18ರಂದು ಜನಿಸಿದರು. ಅವರ ಮನೆಯವರು (ಹಿರಿಯರಿಂದಲೂ) ವೇಣೂರು ಅಜಿಲ ಸೀಮೆಯ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಪದಾರ್ಥಿಗಳಾಗಿ ಸೇವೆ ಸಲ್ಲಿಸುತ್ತಾ ಬಂದವರು.
ವಾಮನಕುಮಾರರು ಓದಿದ್ದು ವೇಣೂರು ವಿದ್ಯೋದಯ ಶಾಲೆಯಲ್ಲಿ. ಎಂಟನೇ ತರಗತಿ ವರೆಗೆ. ಇವರೂ ಮದ್ದಳೆಗಾರರಾದ ಕೊಂಕಣಾಜೆ ಚಂದ್ರಶೇಖರ ಭಟ್ಟರೂ ಶಾಲೆಯಲ್ಲಿ ಸಹಪಾಠಿಗಳಾಗಿದ್ದರು. ಬಾಲ್ಯದಲ್ಲೇ ಯಕ್ಷಗಾನಾಸಕ್ತರಾಗಿದ್ದರು.
1989ರಲ್ಲಿ ಲಲಿತ ಕಲಾ ಕೇಂದ್ರದ ವಿದ್ಯಾರ್ಥಿಯಾಗಿ ಕರ್ಗಲ್ಲು ಶ್ರೀ ವಿಶ್ವೇಶ್ವರ ಭಟ್ಟರಿಂದ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು.ಕಲಿಕಾ ಕೇಂದ್ರದಲ್ಲಿ ಶಂಭಯ್ಯ ಭಟ್, ಮಹೇಶ ಮಣಿಯಾಣಿ. ಪಂಜ ಕಿರಣ್ ಕುಮಾರ್, ಸುಜಯ ಹೆಗ್ಡೆ ಕುತ್ಲೂರು ಇವರ ಸಹಪಾಠಿಗಳಾಗಿದ್ದರು. ಕಲಿಕಾ ಕೇಂದ್ರದ ಮೊದಲ ಪ್ರದರ್ಶನ ಪಂಚವಟಿ ಪ್ರಸಂಗದಲ್ಲಿ ಸೀತೆಯಾಗಿ ರಂಗಪ್ರವೇಶ. ಬಳಿಕ ರತಿಕಲ್ಯಾಣ ಪ್ರಸಂಗದ ಮನ್ಮಥ. ಬಾಲಲೀಲೆ ಪ್ರಸಂಗದ ಶ್ರೀಕೃಷ್ಣನಾಗಿ ಅಭಿನಯಿಸುವ ಅವಕಾಶವು ಸಿಕ್ಕಿತ್ತು.
ಶ್ರೀ ವಾಮನ ಕುಮಾರರ ಮೊದಲ ತಿರುಗಾಟ ಶ್ರೀ ಧರ್ಮಸ್ಥಳ ಮೇಳದಲ್ಲಿ. ಕಲಿಕಾ ಕೇಂದ್ರದ ಸಹಪಾಠಿ ಪಂಜ ಕಿರಣ್ ಕುಮಾರರ ಜತೆ ಬಾಲಗೋಪಾಲರಾಗಿ ವ್ಯವಸಾಯ ಆರಂಭ. ಎರಡು ವರ್ಷಗಳ ಕಾಲ ಧರ್ಮಸ್ಥಳ ಮೇಳದಲ್ಲಿ. ಹಿರಿಯ ಹೆಸರಾಂತ ಕಲಾವಿದರ ಒಡನಾಟ ಕಲಿಕೆಗೆ ಅವಕಾಶವಾಗಿತ್ತು.
ಹಿರಿಯ ಕಲಾವಿದ ಡಿ. ಮನೋಹರ ಕುಮಾರರ ಸಂಚಾಲಕತ್ವದ ಕದ್ರಿ ಮೇಳದಲ್ಲಿ 4 ವರ್ಷಗಳ ವ್ಯವಸಾಯ ಮಾಡಿದ್ದರು. ಪುರಾಣ ಪ್ರಸಂಗಗಳಲ್ಲಿ ಸಿದ್ದಕಟ್ಟೆ ಶ್ರೀ ವಿಶ್ವನಾಥ ಶೆಟ್ಟರ ನಿರ್ದೇಶನ, ಸಹಕಾರಗಳು ವಾಮನ ಕುಮಾರರಿಗೆ ದೊರಕಿತ್ತು. ಅವರ ಜತೆ, ಜತೆಪಾತ್ರಗಳಲ್ಲಿ ರಂಜಿಸಿದರು. (ವಿಷ್ಣು-ಸುದರ್ಶನ, ಶ್ರೀರಾಮ-ತರಣಿಸೇನ ಮೊದಲಾದವುಗಳು). ಕದ್ರಿ ಮೇಳದಲ್ಲಿ ನಾಲ್ಕು ವರ್ಷಗಳ ತಿರುಗಾಟ. ಬಳಿಕ ಶ್ರೀ ಕಿಶನ್ ಹೆಗ್ಡೆ ಅವರ ಸಂಚಾಲಕತ್ವದ ಮಂಗಳಾದೇವಿ ಮೇಳದಲ್ಲಿ. ಆರಂಭದಿಂದ ಕೊನೆ ತನಕ ಹದಿನೈದು ವರ್ಷ ಸದ್ರಿ ಮೇಳದಲ್ಲಿ ವ್ಯವಸಾಯ. ಖ್ಯಾತ ಕಲಾವಿದರ ಒಡನಾಟ ದೊರಕಿತ್ತು. ಖ್ಯಾತ ಪುಂಡುವೇಷಧಾರಿಯಾಗಿದ್ದ ಶ್ರೀ ಉದಯ ನಾವಡರೊಂದಿಗೆ ಜತೆ ವೇಷಗಳಲ್ಲಿ ರಂಜಿಸಿದ್ದರು.
ಪುರಾಣ ಪ್ರಸಂಗದ ಹೆಚ್ಚಿನ ಎಲ್ಲಾ ಪುಂಡುವೇಷ ಮತ್ತು ಸ್ತ್ರೀ ಪಾತ್ರಗಳಲ್ಲಿ ವಾಮನ ಕುಮಾರರು ಅಭಿನಯಿಸಿದ್ದಾರೆ. ಚಂಡಮುಂಡರು, ಬಬ್ರುವಾಹನ, ವಿಷ್ಣು, ಶ್ರೀಕೃಷ್ಣ, ಭಾರ್ಗವ, ಶ್ರೀರಾಮ, ಲಕ್ಷ್ಮಣ, ಶ್ವೇತಕುಮಾರ, ತ್ರಿಲೋಕಸುಂದರಿ, ಪದ್ಮಾವತಿ, ಲಕ್ಷ್ಮಿ ಅಲ್ಲದೆ ಅನೇಕ ಶೃಂಗಾರಕ್ಕೆ ಸಂಬಂಧಿಸಿದ ಸ್ತ್ರೀ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶ್ವೇತಕುಮಾರ ಚರಿತ್ರೆ ಪ್ರಸಂಗದಲ್ಲಿ ಶ್ವೇತಕುಮಾರ, ತ್ರಿಲೋಕಸುಂದರಿ, ಸಿತಕೇತ, ರಂಭೆ ಈ ನಾಲ್ಕೂ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀನಿವಾಸ ಕಲ್ಯಾಣ ಪ್ರಸಂಗದಲ್ಲಿ ಕಿರಾತನ ಪಾತ್ರವನ್ನೂ, ಪದ್ಮಾವತಿಯ ಪಾತ್ರವನ್ನೂ ಮಾಡಿದ್ದಾರೆ.
ಕಸೆ ಸ್ತ್ರೀ ವೇಷಗಳಲ್ಲೂ ವಾಮನ ಕುಮಾರರು ಕಾಣಿಸಿಕೊಂಡರು. ಮೀನಾಕ್ಷಿ, ಶಶಿಪ್ರಭೆ, ಭ್ರಮರಕುಂತಳೆ, ಪ್ರಮೀಳೆ, ಸ್ವಯಂಪ್ರಭೆ ಮೊದಲಾದ ಪಾತ್ರಗಳನ್ನೂ ನಿರ್ವಹಿಸಿದ್ದರು. ಶ್ರೀ ವಾಮನ ಕುಮಾರರು ಕಳೆದ ಎಂಟು ವರ್ಷಗಳಿಂದ ಹಿರಿಯಡಕ ಮೇಳದಲ್ಲಿ ವ್ಯವಸಾಯ ಮಾಡುತ್ತಿದ್ದರು. ಈಗ ಸದ್ರಿ ಮೇಳದ ಮ್ಯಾನೇಜರ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
*ವಾಮನ ಕುಮಾರರಂತಹಾ ಉತ್ತಮ ಕಲಾವಿದನೊಬ್ಬನನ್ನು ಅಕಾಲಿಕವಾಗಿ ಕಳಕೊಂಡ ಯಕ್ಷಗಾನ ರಂಗಕ್ಕೆ ಅವರ ಅಗಲಿಕೆ ತುಂಬಲಾರದ ನಷ್ಟ. ಈ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೂ ಎಲ್ಲಾ ಯಕ್ಷಗಾನ ಪ್ರೇಮಿಗಳಿಗೂ ಆ ಭಗವಂತನು ನೀಡಲಿ ಎಂಬ ಪ್ರಾರ್ಥನೆ. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ💐*.
ಕೃಪೆ - .*🔥ಯಕ್ಷದೀಷ🔥*
*ಯಕ್ಷಗಾನ, ವ್ಯಕ್ತಿ ವಿಶೇಷ,* January 20, 2022
4 years ago | [YT] | 19
View 0 replies
GAJAN Suvarna Yaksha Bramara
https://youtu.be/Ksqt51QQzpE
👆👆👆👆👆👆👆👆👆 ಶ್ರೀದೇವಿ ಮಹಾತ್ಮೆ - ಕೌಶಿಕೆ
ಪೂಜಿಸಿದನು. ಮಾತೆಯ -
ಕುದಿಯು ದೇತಕೆ ಶೋಕದಲಿ
ಭಿನ್ನವಿಸುವ ದೇನು ತಾಯೆ
ಕರುಣಿಸುತಾ ಅಭಯವನು
ಅಳುವ ಸಮನಸರಿಂಗೆ
ಎ೦ದು ಯೋಚಿಸಿ... ಮಹಿಮಾ ಯಿ👌👌👌
4 years ago | [YT] | 15
View 0 replies
GAJAN Suvarna Yaksha Bramara
https://youtu.be/3du33oRngkE
👆👆👆👆👆👆👆👆👆👆
4 years ago | [YT] | 10
View 0 replies
Load more