ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಹಾಗೂ ಸೋನಂ ವಾಂಗ್ಚುಕ್ ಜೀವÀ ರಕ್ಷಣೆಗೆ ಆಗ್ರಹಿಸಿ ಧರಣಿ
ಕೊಪ್ಪಳ : ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಹಾಗೂ ಸೋನಂ ವಾಂಗ್ಚುಕ್ ಅವರ ಜೀವ ರಕ್ಷಣೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕೊಪ್ಪಳದ ಸಾಹಿತ್ಯ ಭವನದ ಪಕ್ಕದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಭಾರತದ ಶಿಕ್ಷಣ ವ್ಯವಸ್ಥೆ ಇಂದು ಗಂಭೀರ ಬಿಕ್ಕಟ್ಟಿನಲ್ಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನಡೆಸುತ್ತಿರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ಆಡಳಿತಾತ್ಮಕ ವೈಫಲ್ಯಗಳು ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಯುವಕರ ಭವಿಷ್ಯವನ್ನು ಅಪಾಯಕ್ಕೆ ದೂಡಿವೆ. ವರ್ಷಗಳ ಕಾಲ ಕಠಿಣ ಪರಿಶ್ರಮ ಪಟ್ಟು ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳ ಕನಸುಗಳು ಕೆಲವರ ಭ್ರಷ್ಟಾಚಾರ ಮತ್ತು ಆಡಳಿತದ ನಿರ್ಲಕ್ಷ್ಯದಿಂದಾಗಿ ನುಚ್ಚುನೂರಾಗುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ಇಂತಹ ಆತಂಕಕಾರಿ ಬೆಳವಣಿಗೆಗಳು ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಸಚಿವಾಲಯ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿವೆ ಈ ಹಿನ್ನೆಲೆಯಲ್ಲಿ ಖ್ಯಾತ ಪರಿಸರ ತಜ್ಞ, ಶಿಕ್ಷಣ ಸುಧಾರಣಾ ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರರಾದ ಸೋನಂ ವಾಂಗ್ಚುಕ್ ಅವರು ದೇಶದ ವಿದ್ಯಾರ್ಥಿಗಳು ಮತ್ತು ಯುವಜನರ ಭವಿಷ್ಯಕ್ಕಾಗಿ ನವದೆಹಲಿಯ ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರೂ ಕೇಂದ್ರ ಸರ್ಕಾರ ಮೌನ ವಹಿಸಿರುವುದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಧ್ವನಿಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯವಾಗಿದೆ. ಆದರೆ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎತ್ತಿರುವ ಹೋರಾಟಗಾರರೊಂದಿಗೆ ಸಂವಾದ ನಡೆಸುವ ಬದಲು ಅವರನ್ನು ನಿರ್ಲಕ್ಷಿಸುವ ಧೋರಣೆ ಅಧಿಕಾರದ ಅಹಂಕಾರವನ್ನು ಪ್ರತಿಬಿಂಬಿಸುತ್ತದೆ. ಆದ್ದರಿಂದ ಮೂಲಕ ಕೇಂದ್ರ ಸರ್ಕಾರಕ್ಕೆ ಈ ಕೆಳಕಂಡAತೆ ನಿರ್ದೇಶನ ನೀಡಬೇಕು ಎಂದು ರಾ಼ಷ್ಟçಪತಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ಆಗ್ರಹಿಸಲಾಗಿದೆ ಸೋನಂ ವಾಂಗ್ಚುಕ್ ಅವರು ಪರಿಸರ ಸಂರಕ್ಷಣೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರ ಜೀವ ಕೇವಲ ಒಬ್ಬ ವ್ಯಕ್ತಿಯ ಜೀವವಲ್ಲ, ಅದು ಪ್ರಜಾಪ್ರಭುತ್ವದ ಮೌಲ್ಯಗಳಿಗಾಗಿ ನಡೆಯುತ್ತಿರುವ ಹೋರಾಟದ ಸಂಕೇತವಾಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ಕೂಡಲೇ ರಾಜೀನಾಮೆ ನೀಡಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯ ಕಾರ್ಯವೈಖರಿ, ಪ್ರಶ್ನೆಪತ್ರಿಕೆ ಸೋರಿಕೆಗಳು ಹಾಗೂ ಪರೀಕ್ಷಾ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ವಿದ್ಯಾರ್ಥಿಗಳು ಮತ್ತು ಯುವಜನರು ಮುಂದಿಟ್ಟಿರುವ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ತಕ್ಷಣವೇ ಅರ್ಥಪೂರ್ಣ ಸಂವಾದ ಆರಂಭಿಸಬೇಕು. ಸೋನಂ ವಾಂಗ್ಚುಕ್ ಅವರ ಆರೋಗ್ಯ ರಕ್ಷಣೆಗೆ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.ದೇಶದ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಪುನಃಸ್ಥಾಪಿಸಲು ಸಮಗ್ರ ಶಿಕ್ಷಣ ಸುಧಾರಣಾ ಕ್ರಮಗಳನ್ನು ಜಾರಿಗೆ ತರಬೇಕು ಎಂದು ರಾಷ್ಟçಪತಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ಆಗ್ರಹಿಸಿದುರ. ಈ ಸಂದರ್ಭದಲ್ಲಿ ಹೋರಾಟಗಾರರಾದ ಬಸವರಾಜ್ ಸೂಳಿಬಾವಿ, ಬಿ.ಪೀರಬಾಷಾ, ಬಸವರಾಜ್ ಶೀಲವಂತರ, ಮಂಜುನಾಥ ಗೊಂಡಬಾಳ, ಶರಣು ಗಡ್ಡಿ, ಎಸ್ ಎ ಗಫಾರ್, ಕಾಶಪ್ಪ ಚಲುವಾದಿ, ಮಕ್ಬೂಲ್ ಬಸವರಾಜ್ ನರೆಗಲ್ ತುಕಾರಾಮ, ಶಿವಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೊಪ್ಪಳ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರ ಮಾತ್ರೋಶ್ರೀ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಚೆನ್ನಮ್ಮನವರ ಒಡನಾಟದ ಮಾತೃ ಹೃದಯವನ್ನು ಅನುಭವಿಸಿದವರಲ್ಲಿ ನಾನೂ ಒಬ್ಬ. ಗೃಹಣಿಯಾಗಿ, ಪತ್ನಿಯಾಗಿ ಹಾಗೂ ತಾಯಿಯಾಗಿ ಅವರು ಭಾರತೀಯ ನಾರಿ ಪರಂಪರೆಯ ಸಂಕೇತದಂತೆ ಇದ್ದರು. ಅಪಾರ ದೈವಿ ಭಕ್ತರಾಗಿದ್ದ ಅವರು ಅತಿಥಿ ಸತ್ಕಾರರ ಪರಂಪರೆಗೆ ಅರ್ಥ ತುಂಬಿದ್ದರು. ಸುಮಾರು 25 ವರ್ಷಗಳ ಹಿಂದೆ ಅವರ ಮೇಲೆ ನಡೆದ ತೀವ್ರ ದಾಳಿಯಿಂದ ಅವರು ಬದುಕಿ ಮತ್ತೆ ಅರ್ಥಪೂರ್ಣ ಜೀವನ ಸಾಗಿಸಿದ್ದು ಅವರು ನಂಬಿದ್ದ ದೈವಬಲ ಸರಳತೆ ಮತ್ತು ಮೌಲ್ಯಗಳಿಂದ. ಅವರು ಕನ್ನಡ ನಾಡಿನ ಒಂದು ಕಾಲಘಟ್ಟದ ಪ್ರತಿನಿಧಿಯಂತೆ ಬದುಕಿದರು. ಅವರ ಅಗಲಿಕೆ ತೀವ್ರ ದುಃಖ ತರಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳದ ಅಶೋಕ ವೃತ್ತದಲ್ಲಿ ಸೊನಮ್ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲಿಸಿ ಪ್ರತಿಭಟಿಸಿ ರಾಷ್ಟ್ರಪತಿಗಳಿಗೆ ಮನವಿ.
ಕೊಪ್ಪಳ, : ಸೊನಮ್ ವಾಂಗ್ಚುಕ್ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲಿಸಿ ಹಾಗೂ ದೇಶದ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಕೊಪ್ಪಳದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ,ಬಳಿಕ ಉಪ ತಹಶೀಲ್ದಾರ್ ಗವಿಸಿದ್ದಪ್ಪ ಮಣ್ಣೂರ ಅವರ ಮೂಲಕ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಚಿಕ್ಕಮಗಳೂರಿನ ಗಾಯತ್ರಿ ಶಾಂತೇಗೌಡ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಸುಪ್ರೀಂಕೋರ್ಟ್ ನಲ್ಲಿ ನಡೆದ ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿ ವಿಧಾನ ಪರಿಷತ್ತಿಗೆ ಪ್ರವೇಶ ಪಡೆದಿರುವ ಗಾಯತ್ರಿ ಶಾಂತೇಗೌಡ ಅವರನ್ನು ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಅಭಿನಂದಿಸಿ ಶುಭ ಹಾರೈಸಿದರು. ಶಾಸಕರಾದ ತಮ್ಮಯ್ಯ, ಶ್ರೀನಿವಾಸ್, ಮಾಜಿ ಸಚಿವರಾದ ಬಿ.ಎಲ್. ಶಂಕರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎನ್. ಮೂರ್ತಿ, ಪಕ್ಷದ ಮುಖಂಡರಾದ ಶಾಂತೇಗೌಡ ಹಾಜರಿದ್ದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹೊಸ ರೂಪ ಪಡೆದ ಕೊಪ್ಪಳ ರೈಲು ನಿಲ್ದಾಣ ಲೋಕಾರ್ಪಣೆ
ಕೊಪ್ಪಳ ): ಕೇಂದ್ರ ಸರ್ಕಾರದ ‘ಅಮೃತ್ ಸ್ಟೇಷನ್' ಯೋಜನೆಯಡಿ ಹೊಸ ರೂಪ ಪಡೆದ ಕೊಪ್ಪಳ ರೈಲ್ವೆ ನಿಲ್ದಾಣವನ್ನು ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಜುಲೈ 17ರಂದು ಲೋಕಾರ್ಪಣೆ ಮಾಡಿದರು. ಕೊಪ್ಪಳ ಜಿಲ್ಲೆಯ ಜೊತೆಗೆ ರಾಜ್ಯದ 4 ನಿಲ್ದಾಣಗಳು ಸೇರಿದಂತೆ ದೇಶದ ಒಟ್ಟು 75 ರೈಲು ನಿಲ್ದಾಣಗಳು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿದ್ದು, ಪ್ರಧಾನಮಂತ್ರಿಗಳು ಪಂಜಾಬ್ನ ಜಲಂಧರ್ ಕಂಟೋನ್ಮೆAಟ್ನಿAದ ವರ್ಚುವಲ್ ಮೂಲಕ ಲೋಕಾರ್ಪಣೆಗೊಳಿಸಿದರು. ಲೋಕಾರ್ಪಣೆ ಹಿನ್ನೆಲೆಯಲ್ಲಿ ಕೊಪ್ಪಳ ರೈಲು ನಿಲ್ದಾಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಬಹು ಕೋಟಿ ರೂ.ಗಳ ವೆಚ್ಚದಲ್ಲಿ, ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ಕರ್ನಾಟಕದ 50ಕ್ಕೂ ಅಧಿಕ ರೈಲು ನಿಲ್ದಾಣಗಳ ಅಭಿವೃದ್ಧಿ ಕಾರ್ಯ ಚಾಲನೆಯಲ್ಲಿದ್ದು, ಈ 50 ನಿಲ್ದಾಣಗಳ ಪೈಕಿ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ರಾಜ್ಯದ ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬಾಗಲಕೋಟೆ ಜಿಲ್ಲೆಯ ಬಾದಾಮಿ ಹಾಗೂ ಧಾರವಾಡ ಜಿಲ್ಲೆಯ ಅಳ್ನಾವರ ರೈಲು ನಿಲ್ದಾಣಗಳು ಪ್ರಯಾಣಿಕರ ಬಳಕೆಗೆ ಇಂದು ಲೋಕಾರ್ಪಣೆಗೊಂಡವು. ಹೊಸ ರೂಪದಲ್ಲಿ ನಿಲ್ದಾಣಗಳು: ಪುನರಾಭಿವೃದ್ಧಿಗೊಂಡ ಕೊಪ್ಪಳ ಸೇರಿದಂತೆ ರಾಜ್ಯದ ಅಳ್ನಾವರ, ಬಾದಾಮಿ ಮತ್ತು ಬಂಟ್ವಾಳ ರೈಲು ನಿಲ್ದಾಣಗಳು ಆಧುನಿಕ ಸೌಲಭ್ಯಗಳು, ಸುಧಾರಿತ ಪ್ರವೇಶ ವ್ಯವಸ್ಥೆ, ಉನ್ನತೀಕೃತ ಪ್ರಯಾಣಿಕರ ಸೌಲಭ್ಯಗಳು, ವಿಶಾಲ ಸಂಚಾರ ಸ್ಥಳಗಳು ಹಾಗೂ ನವೀಕೃತ ನಿಲ್ದಾಣ ಪರಿಸರದೊಂದಿಗೆ ಹೊಸ ರೂಪ ಪಡೆದುಕೊಂಡಿದೆ. ದೇಶದ ರೈಲ್ವೆ ನಿಲ್ದಾಣಗಳ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲುಗಲ್ಲಾಗಿದೆ. ಹೊಸದಾಗಿ ನಿರ್ಮಾಣಗೊಂಡ ರಾಜ್ಯದ ಕೊಪ್ಪಳ ರೈಲು ನಿಲ್ದಾಣದಲ್ಲಿ ಹೈಟೆಕ್ ಎಸ್ಕಲೇಟರ್ಗಳು, 12 ಮೀಟರ್ ಅಗಲದ ವಿಶಾಲ ಮೇಲ್ಸೇತುವೆಗಳು, ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ಸುಲಭ ಸಂಚಾರ ಸೇರಿದಂತೆ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಒಳಗೊಂಡಿದೆ. ಸುಸಜ್ಜಿತ ವಿಶ್ರಾಂತಿ ಕೊಠಡಿ, ವಿದ್ಯುತ್ ಲೈಟ್, ವಾಹನ ಪಾರ್ಕಿಂಗ್ ವ್ಯವಸ್ಥೆ, ಭದ್ರತೆಗಾಗಿ ಸಿಸಿಟಿವಿ, ಮೊದಲಿಗಿಂತ ಅಧಿಕ ಮತ್ತು ಹೆಚ್ಚು ಉದ್ದನೆಯ ಪ್ಲಾಟ್ಫಾರ್ಮ್ಗಳು ಸೇರಿದಂತೆ ಎಲ್ಲ ಸೌಕರ್ಯಗಳು ಈ ನಿಲ್ದಾಣ ಹೊಂದಿದೆ. ಪ್ರತ್ಯೇಕ ಪ್ರವೇಶ, ನಿರ್ಗಮನ ದ್ವಾರಗಳು, ಉಚಿತ ವೈಫೈ ಸೌಲಭ್ಯ, ಉನ್ನತೀಕರಿಸಿದ ನಿರೀಕ್ಷಣಾ ಕೊಠಡಿಗಳು, ಸ್ಕೆöÊವಾಕ್ ಜೊತೆಗೆ ಎರಡು ಲಿಫ್ಟ್ಗಳು ಇವೆ. ನಿಲ್ದಾಣದ ಮುಂಭಾಗದ ಸೌಂದರ್ಯಕ್ಕೆ ಆದ್ಯತೆ ನೀಡಲಾಗಿದೆ. ಕೊಪ್ಪಳ ಸೇರಿದಂತೆ ಅಳ್ನಾವರ, ಬಾದಾಮಿ, ಬಂಟ್ವಾಳ ನಿಲ್ದಾಣಗಳಲ್ಲೂ ಇದೇ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ನಾಲ್ಕು ನಿಲ್ದಾಣಗಳಿಗೆ ಅಂದಾಜು 80 ಕೋಟಿ ರೂಪಾಯಿ ಖರ್ಚಾಗಿದೆ. ಕೊಪ್ಪಳ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಅಂದಾಜು ರೂ.21.14 ಕೋಟಿ ವೆಚ್ಚ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುನಿರಾಬಾದ್ ತುಂಗಾಭದ್ರಾ ಯೋಜನೆ (ಕಾಡಾ) ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್ಸಾಬ್ ನಬಿಸಾಬ್ ದೋಟಿಹಾಳ ಅವರು ಮಾತನಾಡಿ, ಕೊಪ್ಪಳ ಜಿಲ್ಲಾ ಕೇಂದ್ರವಾಗಿದ್ದು, ಇಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಉನ್ನತೀಕರಿಸಿದ ರೈಲು ನಿಲ್ದಾಣದ ಅಗತ್ಯವಿತ್ತು. ಕೇಂದ್ರ ಸರ್ಕಾರದ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ನಮ್ಮ ಜಿಲ್ಲಾ ಕೇಂದ್ರದ ರೈಲು ನಿಲ್ದಾಣ ಎಲ್ಲ ಮೂಲಸೌಕರ್ಯಗಳೊಂದಿಗೆ ಪುನರಾಭಿವೃದ್ಧಿಗೊಂಡಿದ್ದು, ಅಭಿವೃದ್ಧಿಯೆಡೆಗಿನ ಮಹತ್ವದ ಹೆಜ್ಜೆಯಾಗಿದೆ. ಇದರಂತೆ ಕುಷ್ಟಗಿಯಿಂದ ಹುಬ್ಬಳ್ಳಿಗೆ ರೈಲು ಸಂಪರ್ಕವಿರುವAತೆ ಕುಷ್ಟಗಿಯಿಂದ ಬೆಂಗಳೂರಿಗೆ ನೇರ ಸಂಪರ್ಕ ಒದಗಿಸಲು ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಈ ಬಗ್ಗೆ ಸ್ಪಷ್ಟ ಯೋಜನೆ ರೂಪಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು. ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ನಮ್ಮ ರಾಜ್ಯದವರೇ ಇದ್ದು, ಅವರ ಮೂಲಕ ಜಿಲ್ಲೆಗೆ ಇನ್ನೂ ಹೆಚ್ಚಿನ ರೈಲು ಸೇವೆಗಳನ್ನು ಒದಗಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ರೈಲ್ವೇ ಇಲಾಖೆಯ ಸಿಪಿಎಂ ಸಂಜಯ್ ಕುಮಾರ್ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು. ಇಲಾಖೆಯ ಸಿಸಿಎಂ ವಿನಾಯಕ ಆರ್. ನಾಯಕ, ಐಜಿ ಕಮ್ ಪಿಸಿಎಸ್ಸಿ ಸಂತೋಷ ಎನ್. ಚಂದ್ರನ್, ಎಡಿಆರ್ಎಂ ಪ್ರೇಮಚಂದ್, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷರಾದ ನಾಲವಾಡ ಸೇರಿದಂತೆ ರೈಲ್ವೇ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಇದೇ ಸಂದರ್ಭ ಪದ್ಮಶ್ರೀ ಪುರಸ್ಕೃತ ಭೀಮವ್ವ ಶಿಳ್ಳೆಕ್ಯಾತರ ಹಾಗೂ ಸ್ವಾತಂತ್ರö್ಯ ಹೋರಾಟಗಾರರಾದ ನಾರಾಯಣ ಆಚಾರ್ ಶ್ರೀನಿವಾಸ್ ಆಚಾರ ಅವರನ್ನು ಇಲಾಖೆಯಿಂದ ಸನ್ಮಾನಿಸಿ ಗೌರವಿಸಲಾಯಿತು. ಅಮೃತ್ ಭಾರತ್ ನಿಲ್ದಾಣ ಯೋಜನೆ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು.
ಜು.19 ರಂದು ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಕೊಪ್ಪಳ : ಜಿಲ್ಲಾ ವಿಶ್ವಕರ್ಮ ಸಮಾಜ ಕೊಪ್ಪಳ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜುಲೈ 19ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಶ್ರೀ ಸಿರಸಪ್ಪಯ್ಯ ಸ್ವಾಮಿ ಮಠದಲ್ಲಿ ಆಯೋಜಿಸಲಾಗಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನವದೆಹಲಿಯ 10ನೇ ಜನಪಥ್ ರಸ್ತೆಯ ನಿವಾಸದಲ್ಲಿ ಗುರುವಾರ ಸಮಾಲೋಚನೆ ನಡೆಸಿದ ನಂತರ ಅವರ ಜತೆ ಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಿಎಂ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರು ಕಾಣಿಸಿಕೊಂಡದ್ದು ಹೀಗೆ...
ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ
ಕರ್ನಾಟಕ ಕೃಷಿ ಉತ್ಪಾದನೆ ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿದೆ
18 ಜಿಲ್ಲೆ, 141 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ
ಬೇಳೆಕಾಳು ಉತ್ಪಾದನೆ ಹಾಗೂ ಬೆಲೆಗಳ ಮೇಲೆ ಪರಿಣಾಮ
ಬೆಂಗಳೂರು, ಜು.14:
"ಎಲ್ ನೀನೋ ಪರಿಣಾಮದಿಂದಾಗಿ ಕರ್ನಾಟಕ ರಾಜ್ಯದಲ್ಲಿ ಶೇ. 30ರಷ್ಟು (ಜು.11ರ ಮಾಹಿತಿ)ಮಳೆ ಕೊರತೆಯಾಗಿದ್ದು, ರಾಜ್ಯದಲ್ಲಿನ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಂಡ ನಿಯೋಜಿಸಬೇಕು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿನ ಮಳೆ ಕೊರತೆ ಕುರಿತಂತೆ ಶಿವಕುಮಾರ್ ಅವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಪರಿಸ್ಥಿತಿ ವಿವರಿಸಿದ್ದಾರೆ.
"ಕೇಂದ್ರ ಸರ್ಕಾರ ನಿಯೋಜಿತ ತಂಡದ ಭೇಟಿಯೂ ಉದ್ಭವಿಸುತ್ತಿರುವ ಬರ ಪರಿಸ್ಥಿತಿಯ ತೀವ್ರತೆಯನ್ನು ಪ್ರತ್ಯಕ್ಷವಾಗಿ ಮೌಲ್ಯಮಾಪನ ಮಾಡಲು ಸಹಕಾರಿಯಾಗುತ್ತದೆ. ಈ ಕಷ್ಟದ ಅವಧಿಯಲ್ಲಿ ಭಾರತ ಸರ್ಕಾರವು ತಮ್ಮೊಂದಿಗಿದೆ ಎಂಬ ಭರವಸೆಯನ್ನು ರೈತ ಸಮುದಾಯಕ್ಕೆ ನೀಡುತ್ತದೆ. ಭಾರತ ಸರ್ಕಾರದಿಂದ ಆರಂಭಿಕ ಮೌಲ್ಯಮಾಪನ ಮತ್ತು ಸಮಯೋಚಿತ ಬೆಂಬಲವು, ವಿಕೋಪಕ್ಕೆ ತಿರುಗುತ್ತಿರುವ ಬರ ಪರಿಸ್ಥಿತಿಯ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಜ್ಯ ಸರ್ಕಾರವು ಕೈಗೊಳ್ಳುತ್ತಿರುವ ಪ್ರಯತ್ನಗಳಿಗೆ ಹೆಚ್ಚಿನ ಬಲವನ್ನು ನೀಡುತ್ತದೆ" ಎಂದು ವಿವರಿಸಿದ್ದಾರೆ.
ಕೃಷಿ ಉತ್ಪಾದನೆ ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿದೆ:
ಕರ್ನಾಟಕವು ತನ್ನ ಸ್ವಾಭಾವಿಕ ಕೃಷಿ-ಹವಾಮಾನ ಮತ್ತು ಜಲವಿಜ್ಞಾನದ ಗುಣಲಕ್ಷಣಗಳಿಂದಾಗಿ ದೇಶದಲ್ಲೇ ಅತ್ಯಂತ ಹೆಚ್ಚು ಬರಪೀಡಿತ ರಾಜ್ಯಗಳಲ್ಲಿ ಒಂದಾಗಿದೆ. ರಾಜ್ಯವು 10 ವಿಭಿನ್ನ ಕೃಷಿ-ಹವಾಮಾನ ವಲಯಗಳನ್ನು ಹೊಂದಿದ್ದು, ಅದರ ಭೌಗೋಳಿಕ ಪ್ರದೇಶದ ಸುಮಾರು ಶೇಕಡಾ 77 ರಷ್ಟು ಭಾಗವು ಶುಷ್ಕ ಮತ್ತು ಅರೆ-ಶುಷ್ಕ ಪ್ರದೇಶಗಳ ವ್ಯಾಪ್ತಿಗೆ ಬರುತ್ತದೆ. ರಾಜ್ಯವು ಸುಮಾರು 84.79 ಲಕ್ಷ ಹೆಕ್ಟೇರ್ ಮಳೆ ಆಶ್ರಿತ ಕೃಷಿ ಭೂಮಿ ಹೊಂದಿದ್ದು, ಇದು ರಾಜಸ್ಥಾನದ ನಂತರ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಈ ಕಾರಣದಿಂದಾಗಿ ಇಲ್ಲಿನ ಕೃಷಿ ಉತ್ಪಾದನೆಯು ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿದೆ" ಎಂದು ಹೇಳಿದ್ದಾರೆ.
"ರಾಜ್ಯದ ವಾರ್ಷಿಕ ಮಳೆಯಲ್ಲಿ 74% ಮಳೆಯು ನೈಋತ್ಯ ಮುಂಗಾರು ಅವಧಿಯಲ್ಲೇ ಲಭ್ಯವಾಗುವುದರಿಂದ, ಮಳೆಯ ವ್ಯತ್ಯಾಸ, ಸುದೀರ್ಘ ಒಣ ಹವೆ ಮತ್ತು ಮರುಕಳಿಸುವ ಬರಗಾಲದ ಪರಿಸ್ಥಿತಿಗಳಿಗೆ ಕರ್ನಾಟಕವು ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಇದು ಕೃಷಿ, ಕುಡಿಯುವ ನೀರಿನ ಲಭ್ಯತೆ, ಜೀವನೋಪಾಯ ಮತ್ತು ಒಟ್ಟಾರೆ ಗ್ರಾಮೀಣ ಆರ್ಥಿಕತೆಯ ಮೇಲೆ ಅತ್ಯಂತ ಪ್ರತಿಕೂಲ ಪರಿಣಾಮ ಬೀರುತ್ತದೆ" ಎಂದು ತಿಳಿಸಿದ್ದಾರೆ.
18 ಜಿಲ್ಲೆ, 141 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ
"ಎಲ್ ನಿನೋ ಕಾರಣದಿಂದಾಗಿ 2026 ರ ನೈಋತ್ಯ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು (IMD) ತಿಳಿಸಿತ್ತು. ಇದಕ್ಕೆ ಅನುಗುಣವಾಗಿ, ರಾಜ್ಯದಲ್ಲಿ ಮಳೆಯ ಕೊರತೆಯು ಗಮನಾರ್ಹವಾಗಿ ಕಂಡುಬಂದಿದೆ. 11 ಜುಲೈ 2026 ರ ಮಾಹಿತಿಯಂತೆ, ಕರ್ನಾಟಕದಲ್ಲಿ ವಾಡಿಕೆ ಮಳೆಯಾದ 292 ಮಿಮೀ ಗೆ ಪ್ರತಿಯಾಗಿ ಕೇವಲ 203 ಮಿಮೀ ಮಳೆಯಾಗಿದೆ. ಇದು 'ಕೊರತೆ ಮಳೆ'ಯ ವರ್ಗಕ್ಕೆ ಸೇರುತ್ತದೆ. 22 ಜೂನ್ 2026 ರ ವೇಳೆಗೆ ಮುಂಗಾರು ರಾಜ್ಯ ವ್ಯಾಪಿಸಿತ್ತಾದರೂ 11 ಜುಲೈ 2026 ರ ಹೊತ್ತಿಗೆ, ಒಟ್ಟು 31 ಜಿಲ್ಲೆಗಳಲ್ಲಿ 18 ಜಿಲ್ಲೆಗಳು ತೀವ್ರ ಕೊರತೆ ಎದುರಿಸಿವೆ. ತಾಲ್ಲೂಕು ಮಟ್ಟದಲ್ಲಿ ನೋಡುವುದಾದರೆ, 240 ತಾಲ್ಲೂಕುಗಳಲ್ಲಿ 141 ತಾಲ್ಲೂಕುಗಳು ಕೊರತೆಯಿಂದ ತೀವ್ರ ಕೊರತೆಯ ಮಳೆಯ ವಿಭಾಗದಲ್ಲಿ ದಾಖಲಾಗಿದ್ದು, ಮಳೆ ಕೊರತೆಯು ರಾಜ್ಯಾದ್ಯಂತ ವ್ಯಾಪಕವಾಗಿ ಹರಡಿರುವುದನ್ನು ಇದು ಸೂಚಿಸುತ್ತದೆ" ಎಂದು ತಿಳಿಸಿದ್ದಾರೆ.
"ರಾಜ್ಯದ ನಾಲ್ಕು ಹವಾಮಾನ ವಲಯಗಳ ಪೈಕಿ, ಕಾವೇರಿ, ತುಂಗಾ ಮತ್ತು ಭದ್ರಾ ನದಿ ವ್ಯವಸ್ಥೆಗಳ ಪ್ರಮುಖ ಜಲಾನಯನ ಪ್ರದೇಶವಾಗಿರುವ ಮಲೆನಾಡು ಪ್ರದೇಶವು ಅತ್ಯಧಿಕ ಅಂದರೆ 34% ಮಳೆ ಕೊರತೆಯನ್ನು ದಾಖಲಿಸಿದೆ. ಇದರ ಬೆನ್ನಲ್ಲೇ ಕರಾವಳಿ ಪ್ರದೇಶ (ಶೇ. -30), ಉತ್ತರ ಒಳನಾಡು ಕರ್ನಾಟಕ (ಶೇ. -24) ಮತ್ತು ದಕ್ಷಿಣ ಒಳನಾಡು ಕರ್ನಾಟಕ (ಶೇ. -18) ಮುಂಗಾರು ಕೊರತೆಯನ್ನು ಎದುರಿಸುತ್ತಿವೆ. ಜುಲೈ 2026 ರ ಮೊದಲ ವಾರದ ಹೊತ್ತಿಗೆ, ಮುಂಗಾರು ಬಿತ್ತನೆಯು ಕೇವಲ 28.36 ಲಕ್ಷ ಹೆಕ್ಟೇರ್ ಪ್ರದೇಶವನ್ನು ಆವರಿಸಿದೆ. ಇದು ಈ ಹಂಗಾಮಿನ ಗುರಿಯಾದ 84.10 ಲಕ್ಷ ಹೆಕ್ಟೇರ್ ಪೈಕಿ 34% ರಷ್ಟು ಮಾತ್ರ. ಇದು ಕೃಷಿ ಕಾರ್ಯಾಚರಣೆಗಳ ಮೇಲೆ ಮಳೆ ಕೊರತೆಯು ಬೀರುತ್ತಿರುವ ಹೆಚ್ಚುತ್ತಿರುವ ಪ್ರಭಾವವನ್ನು ಪ್ರತಿಬಿಂಬಿಸುತ್ತದೆ" ಎಂದು ವಿವರಿಸಿದ್ದಾರೆ.
"ರಾಜ್ಯದಲ್ಲಿನ ಪ್ರಸ್ತುತ ಜಲವಿಜ್ಞಾನದ (Hydrological) ಪರಿಸ್ಥಿತಿಯು ಕೂಡ ತೀವ್ರ ಕಳವಳಕ್ಕೆ ಕಾರಣವಾಗಿದೆ. ರಾಜ್ಯದ ಪ್ರಮುಖ ನದಿ ಪಾತ್ರಗಳ ಮೇಲ್ಭಾಗದ ಜಲಾನಯನ ಪ್ರದೇಶಗಳಲ್ಲಿ ಉಂಟಾಗಿರುವ ಗಣನೀಯ ಮಳೆ ಕೊರತೆಯು ವಿಶೇಷವಾಗಿ ಚಿಂತಾಜನಕವಾಗಿದೆ. ಏಕೆಂದರೆ ಇದು ಮುಂಬರುವ ತಿಂಗಳುಗಳಲ್ಲಿ ಜಲಾಶಯಗಳ ಒಳಹರಿವು, ನೀರಾವರಿ, ಕುಡಿಯುವ ನೀರಿನ ಭದ್ರತೆ ಮತ್ತು ಜಲವಿದ್ಯುತ್ ಉತ್ಪಾದನೆಯ ಮೇಲೆ ಅತ್ಯಂತ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. 10 ಜುಲೈ 2026 ರ ಮಾಹಿತಿಯಂತೆ, ಕರ್ನಾಟಕದ 14 ಪ್ರಮುಖ ಜಲಾಶಯಗಳಲ್ಲಿನ ಒಟ್ಟು ಸಂಗ್ರಹಣೆಯು ಕೇವಲ 303 ಟಿಎಂಸಿ ಆಗಿದ್ದು, ಇದು ಒಟ್ಟು ಒಟ್ಟಾರೆ ಸಂಗ್ರಹಣಾ ಸಾಮರ್ಥ್ಯವಾದ 895.65 ಟಿಎಂಸಿಯ ಕೇವಲ ಶೇಕಡಾ 34 ರಷ್ಟಾಗಿದೆ" ಎಂದು ಹೇಳಿದ್ದಾರೆ.
ಬೇಳೆಕಾಳು ಉತ್ಪಾದನೆ ಹಾಗೂ ಬೆಲೆಗಳ ಮೇಲೆ ಪರಿಣಾಮ:
ಮಣ್ಣಿನಲ್ಲಿ ಸಾಕಷ್ಟು ತೇವಾಂಶವಿಲ್ಲದಿರುವುದು ಮತ್ತು ನಿರಂತರವಾಗಿ ಮಳೆಯ ಖಾತರಿ ಇಲ್ಲದಿರುವುದರಿಂದ, ರೈತರು ಮತ್ತಷ್ಟು ಬಿತ್ತನೆ ಮಾಡಲು ಹಿಂಜರಿಯುತ್ತಿದ್ದು ತೀವ್ರ ಅನಿಶ್ಚಿತತೆಯನ್ನು ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯು ರಾಷ್ಟ್ರೀಯ ಮಟ್ಟದಲ್ಲೂ ಮಹತ್ವವನ್ನು ಪಡೆದುಕೊಂಡಿದೆ. ಏಕೆಂದರೆ ಕರ್ನಾಟಕವು ಭಾರತದಲ್ಲಿ ಬೇಳೆಕಾಳುಗಳನ್ನು ಉತ್ಪಾದಿಸುವ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ.ಪ್ರಸ್ತುತ ಬರಗಾಲದ ಪರಿಸ್ಥಿತಿಯಿಂದಾಗಿ ಉತ್ಪಾದನೆಯಲ್ಲಿ ಯಾವುದೇ ಗಮನಾರ್ಹ ಕುಸಿತ ಉಂಟಾದರೂ, ಅದು ರಾಷ್ಟ್ರೀಯ ಮಟ್ಟದಲ್ಲಿ ಬೇಳೆಕಾಳುಗಳ, ವಿಶೇಷವಾಗಿ ತೊಗರಿ ಬೇಳೆಯ ಲಭ್ಯತೆ ಮತ್ತು ಬೆಲೆಗಳ ಮೇಲೆ ವ್ಯಾಪಕ ಪರಿಣಾಮ ಬೀರಲಿದೆ" ಎಂದು ಹೇಳಿದ್ದಾರೆ.
"ರಾಜ್ಯ ಸರ್ಕಾರವು ಉದ್ಭವಿಸುತ್ತಿರುವ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಿರುವ ಎಲ್ಲಾ ಸಂಭಾವ್ಯ ಕ್ರಮಗಳನ್ನು ಪೂರ್ವಭಾವಿಯಾಗಿ ಕೈಗೊಂಡಿದೆ. ಕೃಷಿ ತಜ್ಞರೊಂದಿಗೆ ಸಮಾಲೋಚಿಸಿ ಬೆಳೆ ಸಲಹೆಗಳು ಮತ್ತು ಜಿಲ್ಲಾವಾರು ತುರ್ತು ಯೋಜನೆಗಳನ್ನು ಹೊರಡಿಸಲಾಗಿದೆ ಮತ್ತು ಸೂಕ್ತ ಬರ ಪರಿಹಾರ ಕ್ರಮಗಳನ್ನು ಅನುಷ್ಠಾನಗೊಳಿಸಲು ಎಲ್ಲಾ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ. ಇದಲ್ಲದೆ, ನೀರಿನ ಲಭ್ಯತೆಯ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ನೀರಿನ ಉದ್ದೇಶಗಳಿಗಾಗಿ ಸಂರಕ್ಷಿಸಲು ರಾಜ್ಯ ಸರ್ಕಾರವು ಅತ್ಯುನ್ನತ ಆದ್ಯತೆ ನೀಡುವ ನೀತಿ ನಿರ್ಧಾರವನ್ನು ಕೈಗೊಂಡಿದೆ" ಎಂದು ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಗುಜರಿ ಅಂಗಡಿಗೆ ಶಾಲಾ ಪಠ್ಯಪುಸ್ತಕ ಮಾರಾಟ: ಸಮಗ್ರ ತನಿಖೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ Koppal BEO
ಕೊಪ್ಪಳ:ಜು.13.ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಗುಜರಿ ಅಂಗಡಿಯೊಂದಕ್ಕೆ ಸರ್ಕಾರಿ ಶಾಲಾ ಕಲಿಕಾ ಬಲವರ್ಧನೆ ಪಠ್ಯಪುಸ್ತಕಗಳನ್ನು ಮಾರಾಟ ಮಾಡಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ಈ ಕುರಿತು ತನಿಖೆ ನಡೆಸಿ 3-4 ದಿನಗಳಲ್ಲಿ ವರದಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಶೇಖರ್ ಹೊರಪೇಟೆ ಅವರು ವಿಶೇಷ ತಂಡ ರಚಿಸಿ ಆದೇಶಿಸಿದ್ದಾರೆ. "ಘಟನೆಯ ವಿವರ:" ಕಳೆದ ಶನಿವಾರ ಸಂಜೆ ರೈಲ್ವೆ ನಿಲ್ದಾಣದ ರಸ್ತೆಯ ಗುಜರಿ ಅಂಗಡಿಯೊಂದರಲ್ಲಿ ಶಾಲಾ ಪುಸ್ತಕಗಳನ್ನು ಹಾಕಿರುವುದರ ಕುರಿತು ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷರಾದ ಎಸ್.ಎ. ಗಫಾರ್. ಗೌರವ ಅಧ್ಯಕ್ಷ ಬಸವರಾಜ್ ಶೀಲವಂತರ್ ಅವರಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಅವರು ತಕ್ಷಣವೇ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಅವರಿಗೆ ದೂರವಾಣಿ ಕರೆ ಮಾಡಿ ದೂರು ನೀಡಿದ್ದರು. ದೂರಿಗೆ ತಕ್ಷಣ ಸ್ಪಂದಿಸಿದ ಬಿಇಓ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ವೈಶಂಪಾಯನ ಹಾಗೂ ಸದಾನಂದ ಭಾವಿಮನಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದರು. ಅಧಿಕಾರಿಗಳು ಗುಜರಿ ಅಂಗಡಿಯಲ್ಲಿದ್ದ ಪುಸ್ತಕಗಳನ್ನು ತೂಕ ಮಾಡಿ, ಸುಮಾರು 99 ಕೆಜಿ ತೂಕದ ಕಲಿಕಾ ಬಲವರ್ಧನೆ ಸರ್ಕಾರಿ ಪಠ್ಯಪುಸ್ತಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
"ಸಮಗ್ರ ತನಿಖೆಗೆ ಆಗ್ರಹ:" ಈ ಸಂಬಂಧ ಸೋಮವಾರ ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ಎ. ಗಫಾರ್ ಹಾಗೂ ಗೌರವಾಧ್ಯಕ್ಷ ಬಸವರಾಜ್ ಶೀಲವಂತರ್ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬಿಇಓ ಶೇಖರ್ ಹೊರಪೇಟೆ ಅವರನ್ನು ಭೇಟಿಯಾಗಿ ಚರ್ಚಿಸಿದರು. ಬಡ ವಿದ್ಯಾರ್ಥಿಗಳಿಗೆ ವಿತರಿಸಬೇಕಾದ ಸರ್ಕಾರಿ ಪುಸ್ತಕಗಳು ಗುಜರಿ ಪಾಲಾದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಅವರು, "ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈಗಾಗಲೇ ತನಿಖಾ ತಂಡವನ್ನು ರಚಿಸಲಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ವರದಿ ಬಂದ ತಕ್ಷಣ ಮೇಲಧಿಕಾರಿಗಳ ಗಮನಕ್ಕೆ ತಂದು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು," ಎಂದು ಭರವಸೆ ನೀಡಿದರು.
Kannadanet
ಕರ್ನಾಟಕ ಮಳೆಯ ಪ್ರಮಾಣ : ಸದ್ಯ ಶೇ. 60 ರಷ್ಟು ಮಳೆ ಕೊರತೆ 178 ತಾಲ್ಲೂಕುಗಳಲ್ಲಿ ಮಳೆಯ ಕೊರತೆ
2 days ago | [YT] | 1
View 0 replies
Kannadanet
ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಹಾಗೂ ಸೋನಂ ವಾಂಗ್ಚುಕ್ ಜೀವÀ ರಕ್ಷಣೆಗೆ ಆಗ್ರಹಿಸಿ ಧರಣಿ
ಕೊಪ್ಪಳ : ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಹಾಗೂ ಸೋನಂ ವಾಂಗ್ಚುಕ್ ಅವರ ಜೀವ ರಕ್ಷಣೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕೊಪ್ಪಳದ ಸಾಹಿತ್ಯ ಭವನದ ಪಕ್ಕದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಭಾರತದ ಶಿಕ್ಷಣ ವ್ಯವಸ್ಥೆ ಇಂದು ಗಂಭೀರ ಬಿಕ್ಕಟ್ಟಿನಲ್ಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನಡೆಸುತ್ತಿರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ಆಡಳಿತಾತ್ಮಕ ವೈಫಲ್ಯಗಳು ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಯುವಕರ ಭವಿಷ್ಯವನ್ನು ಅಪಾಯಕ್ಕೆ ದೂಡಿವೆ. ವರ್ಷಗಳ ಕಾಲ ಕಠಿಣ ಪರಿಶ್ರಮ ಪಟ್ಟು ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳ ಕನಸುಗಳು ಕೆಲವರ ಭ್ರಷ್ಟಾಚಾರ ಮತ್ತು ಆಡಳಿತದ ನಿರ್ಲಕ್ಷ್ಯದಿಂದಾಗಿ ನುಚ್ಚುನೂರಾಗುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ಇಂತಹ ಆತಂಕಕಾರಿ ಬೆಳವಣಿಗೆಗಳು ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಸಚಿವಾಲಯ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿವೆ ಈ ಹಿನ್ನೆಲೆಯಲ್ಲಿ ಖ್ಯಾತ ಪರಿಸರ ತಜ್ಞ, ಶಿಕ್ಷಣ ಸುಧಾರಣಾ ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರರಾದ ಸೋನಂ ವಾಂಗ್ಚುಕ್ ಅವರು ದೇಶದ ವಿದ್ಯಾರ್ಥಿಗಳು ಮತ್ತು ಯುವಜನರ ಭವಿಷ್ಯಕ್ಕಾಗಿ ನವದೆಹಲಿಯ ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರೂ ಕೇಂದ್ರ ಸರ್ಕಾರ ಮೌನ ವಹಿಸಿರುವುದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಧ್ವನಿಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯವಾಗಿದೆ. ಆದರೆ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಎತ್ತಿರುವ ಹೋರಾಟಗಾರರೊಂದಿಗೆ ಸಂವಾದ ನಡೆಸುವ ಬದಲು ಅವರನ್ನು ನಿರ್ಲಕ್ಷಿಸುವ ಧೋರಣೆ ಅಧಿಕಾರದ ಅಹಂಕಾರವನ್ನು ಪ್ರತಿಬಿಂಬಿಸುತ್ತದೆ. ಆದ್ದರಿಂದ ಮೂಲಕ ಕೇಂದ್ರ ಸರ್ಕಾರಕ್ಕೆ ಈ ಕೆಳಕಂಡAತೆ ನಿರ್ದೇಶನ ನೀಡಬೇಕು ಎಂದು ರಾ಼ಷ್ಟçಪತಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ಆಗ್ರಹಿಸಲಾಗಿದೆ
ಸೋನಂ ವಾಂಗ್ಚುಕ್ ಅವರು ಪರಿಸರ ಸಂರಕ್ಷಣೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರ ಜೀವ ಕೇವಲ ಒಬ್ಬ ವ್ಯಕ್ತಿಯ ಜೀವವಲ್ಲ, ಅದು ಪ್ರಜಾಪ್ರಭುತ್ವದ ಮೌಲ್ಯಗಳಿಗಾಗಿ ನಡೆಯುತ್ತಿರುವ ಹೋರಾಟದ ಸಂಕೇತವಾಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ಕೂಡಲೇ ರಾಜೀನಾಮೆ ನೀಡಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯ ಕಾರ್ಯವೈಖರಿ, ಪ್ರಶ್ನೆಪತ್ರಿಕೆ ಸೋರಿಕೆಗಳು ಹಾಗೂ ಪರೀಕ್ಷಾ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ವಿದ್ಯಾರ್ಥಿಗಳು ಮತ್ತು ಯುವಜನರು ಮುಂದಿಟ್ಟಿರುವ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ತಕ್ಷಣವೇ ಅರ್ಥಪೂರ್ಣ ಸಂವಾದ ಆರಂಭಿಸಬೇಕು. ಸೋನಂ ವಾಂಗ್ಚುಕ್ ಅವರ ಆರೋಗ್ಯ ರಕ್ಷಣೆಗೆ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.ದೇಶದ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಪುನಃಸ್ಥಾಪಿಸಲು ಸಮಗ್ರ ಶಿಕ್ಷಣ ಸುಧಾರಣಾ ಕ್ರಮಗಳನ್ನು ಜಾರಿಗೆ ತರಬೇಕು ಎಂದು ರಾಷ್ಟçಪತಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ಆಗ್ರಹಿಸಿದುರ.
ಈ ಸಂದರ್ಭದಲ್ಲಿ ಹೋರಾಟಗಾರರಾದ ಬಸವರಾಜ್ ಸೂಳಿಬಾವಿ, ಬಿ.ಪೀರಬಾಷಾ, ಬಸವರಾಜ್ ಶೀಲವಂತರ, ಮಂಜುನಾಥ ಗೊಂಡಬಾಳ, ಶರಣು ಗಡ್ಡಿ, ಎಸ್ ಎ ಗಫಾರ್, ಕಾಶಪ್ಪ ಚಲುವಾದಿ, ಮಕ್ಬೂಲ್ ಬಸವರಾಜ್ ನರೆಗಲ್ ತುಕಾರಾಮ, ಶಿವಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
3 days ago | [YT] | 1
View 0 replies
Kannadanet
ಚೆನ್ನಮ್ಮನವರ ನಿಧನ: ಸಿವಿಸಿ ಸಂತಾಪ
ಕೊಪ್ಪಳ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರ ಮಾತ್ರೋಶ್ರೀ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಚೆನ್ನಮ್ಮನವರ ಒಡನಾಟದ ಮಾತೃ ಹೃದಯವನ್ನು ಅನುಭವಿಸಿದವರಲ್ಲಿ ನಾನೂ ಒಬ್ಬ. ಗೃಹಣಿಯಾಗಿ, ಪತ್ನಿಯಾಗಿ ಹಾಗೂ ತಾಯಿಯಾಗಿ ಅವರು ಭಾರತೀಯ ನಾರಿ ಪರಂಪರೆಯ ಸಂಕೇತದಂತೆ ಇದ್ದರು. ಅಪಾರ ದೈವಿ ಭಕ್ತರಾಗಿದ್ದ ಅವರು ಅತಿಥಿ ಸತ್ಕಾರರ ಪರಂಪರೆಗೆ ಅರ್ಥ ತುಂಬಿದ್ದರು. ಸುಮಾರು 25 ವರ್ಷಗಳ ಹಿಂದೆ ಅವರ ಮೇಲೆ ನಡೆದ ತೀವ್ರ ದಾಳಿಯಿಂದ ಅವರು ಬದುಕಿ ಮತ್ತೆ ಅರ್ಥಪೂರ್ಣ ಜೀವನ ಸಾಗಿಸಿದ್ದು ಅವರು ನಂಬಿದ್ದ ದೈವಬಲ ಸರಳತೆ ಮತ್ತು ಮೌಲ್ಯಗಳಿಂದ. ಅವರು ಕನ್ನಡ ನಾಡಿನ ಒಂದು ಕಾಲಘಟ್ಟದ ಪ್ರತಿನಿಧಿಯಂತೆ ಬದುಕಿದರು. ಅವರ ಅಗಲಿಕೆ
ತೀವ್ರ ದುಃಖ ತರಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
3 days ago | [YT] | 1
View 0 replies
Kannadanet
ಕೊಪ್ಪಳದ ಅಶೋಕ ವೃತ್ತದಲ್ಲಿ ಸೊನಮ್ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲಿಸಿ ಪ್ರತಿಭಟಿಸಿ ರಾಷ್ಟ್ರಪತಿಗಳಿಗೆ ಮನವಿ.
ಕೊಪ್ಪಳ, : ಸೊನಮ್ ವಾಂಗ್ಚುಕ್ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲಿಸಿ ಹಾಗೂ ದೇಶದ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಕೊಪ್ಪಳದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ,ಬಳಿಕ ಉಪ ತಹಶೀಲ್ದಾರ್ ಗವಿಸಿದ್ದಪ್ಪ ಮಣ್ಣೂರ ಅವರ ಮೂಲಕ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
4 days ago | [YT] | 1
View 0 replies
Kannadanet
ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಚಿಕ್ಕಮಗಳೂರಿನ ಗಾಯತ್ರಿ ಶಾಂತೇಗೌಡ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಸುಪ್ರೀಂಕೋರ್ಟ್ ನಲ್ಲಿ ನಡೆದ ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿ ವಿಧಾನ ಪರಿಷತ್ತಿಗೆ ಪ್ರವೇಶ ಪಡೆದಿರುವ ಗಾಯತ್ರಿ ಶಾಂತೇಗೌಡ ಅವರನ್ನು ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಅಭಿನಂದಿಸಿ ಶುಭ ಹಾರೈಸಿದರು.
ಶಾಸಕರಾದ ತಮ್ಮಯ್ಯ, ಶ್ರೀನಿವಾಸ್, ಮಾಜಿ ಸಚಿವರಾದ ಬಿ.ಎಲ್. ಶಂಕರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎನ್. ಮೂರ್ತಿ, ಪಕ್ಷದ ಮುಖಂಡರಾದ ಶಾಂತೇಗೌಡ ಹಾಜರಿದ್ದರು.
4 days ago | [YT] | 3
View 0 replies
Kannadanet
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ
ಹೊಸ ರೂಪ ಪಡೆದ ಕೊಪ್ಪಳ ರೈಲು ನಿಲ್ದಾಣ ಲೋಕಾರ್ಪಣೆ
ಕೊಪ್ಪಳ ): ಕೇಂದ್ರ ಸರ್ಕಾರದ ‘ಅಮೃತ್ ಸ್ಟೇಷನ್' ಯೋಜನೆಯಡಿ ಹೊಸ ರೂಪ ಪಡೆದ ಕೊಪ್ಪಳ ರೈಲ್ವೆ ನಿಲ್ದಾಣವನ್ನು ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಜುಲೈ 17ರಂದು ಲೋಕಾರ್ಪಣೆ ಮಾಡಿದರು.
ಕೊಪ್ಪಳ ಜಿಲ್ಲೆಯ ಜೊತೆಗೆ ರಾಜ್ಯದ 4 ನಿಲ್ದಾಣಗಳು ಸೇರಿದಂತೆ ದೇಶದ ಒಟ್ಟು 75 ರೈಲು ನಿಲ್ದಾಣಗಳು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿದ್ದು, ಪ್ರಧಾನಮಂತ್ರಿಗಳು ಪಂಜಾಬ್ನ ಜಲಂಧರ್ ಕಂಟೋನ್ಮೆAಟ್ನಿAದ ವರ್ಚುವಲ್ ಮೂಲಕ ಲೋಕಾರ್ಪಣೆಗೊಳಿಸಿದರು. ಲೋಕಾರ್ಪಣೆ ಹಿನ್ನೆಲೆಯಲ್ಲಿ ಕೊಪ್ಪಳ ರೈಲು ನಿಲ್ದಾಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.
ಬಹು ಕೋಟಿ ರೂ.ಗಳ ವೆಚ್ಚದಲ್ಲಿ, ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ಕರ್ನಾಟಕದ 50ಕ್ಕೂ ಅಧಿಕ ರೈಲು ನಿಲ್ದಾಣಗಳ ಅಭಿವೃದ್ಧಿ ಕಾರ್ಯ ಚಾಲನೆಯಲ್ಲಿದ್ದು, ಈ 50 ನಿಲ್ದಾಣಗಳ ಪೈಕಿ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ರಾಜ್ಯದ ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬಾಗಲಕೋಟೆ ಜಿಲ್ಲೆಯ ಬಾದಾಮಿ ಹಾಗೂ ಧಾರವಾಡ ಜಿಲ್ಲೆಯ ಅಳ್ನಾವರ ರೈಲು ನಿಲ್ದಾಣಗಳು ಪ್ರಯಾಣಿಕರ ಬಳಕೆಗೆ ಇಂದು ಲೋಕಾರ್ಪಣೆಗೊಂಡವು.
ಹೊಸ ರೂಪದಲ್ಲಿ ನಿಲ್ದಾಣಗಳು: ಪುನರಾಭಿವೃದ್ಧಿಗೊಂಡ ಕೊಪ್ಪಳ ಸೇರಿದಂತೆ ರಾಜ್ಯದ ಅಳ್ನಾವರ, ಬಾದಾಮಿ ಮತ್ತು ಬಂಟ್ವಾಳ ರೈಲು ನಿಲ್ದಾಣಗಳು ಆಧುನಿಕ ಸೌಲಭ್ಯಗಳು, ಸುಧಾರಿತ ಪ್ರವೇಶ ವ್ಯವಸ್ಥೆ, ಉನ್ನತೀಕೃತ ಪ್ರಯಾಣಿಕರ ಸೌಲಭ್ಯಗಳು, ವಿಶಾಲ ಸಂಚಾರ ಸ್ಥಳಗಳು ಹಾಗೂ ನವೀಕೃತ ನಿಲ್ದಾಣ ಪರಿಸರದೊಂದಿಗೆ ಹೊಸ ರೂಪ ಪಡೆದುಕೊಂಡಿದೆ. ದೇಶದ ರೈಲ್ವೆ ನಿಲ್ದಾಣಗಳ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲುಗಲ್ಲಾಗಿದೆ.
ಹೊಸದಾಗಿ ನಿರ್ಮಾಣಗೊಂಡ ರಾಜ್ಯದ ಕೊಪ್ಪಳ ರೈಲು ನಿಲ್ದಾಣದಲ್ಲಿ ಹೈಟೆಕ್ ಎಸ್ಕಲೇಟರ್ಗಳು, 12 ಮೀಟರ್ ಅಗಲದ ವಿಶಾಲ ಮೇಲ್ಸೇತುವೆಗಳು, ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ಸುಲಭ ಸಂಚಾರ ಸೇರಿದಂತೆ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಒಳಗೊಂಡಿದೆ. ಸುಸಜ್ಜಿತ ವಿಶ್ರಾಂತಿ ಕೊಠಡಿ, ವಿದ್ಯುತ್ ಲೈಟ್, ವಾಹನ ಪಾರ್ಕಿಂಗ್ ವ್ಯವಸ್ಥೆ, ಭದ್ರತೆಗಾಗಿ ಸಿಸಿಟಿವಿ, ಮೊದಲಿಗಿಂತ ಅಧಿಕ ಮತ್ತು ಹೆಚ್ಚು ಉದ್ದನೆಯ ಪ್ಲಾಟ್ಫಾರ್ಮ್ಗಳು ಸೇರಿದಂತೆ ಎಲ್ಲ ಸೌಕರ್ಯಗಳು ಈ ನಿಲ್ದಾಣ ಹೊಂದಿದೆ.
ಪ್ರತ್ಯೇಕ ಪ್ರವೇಶ, ನಿರ್ಗಮನ ದ್ವಾರಗಳು, ಉಚಿತ ವೈಫೈ ಸೌಲಭ್ಯ, ಉನ್ನತೀಕರಿಸಿದ ನಿರೀಕ್ಷಣಾ ಕೊಠಡಿಗಳು, ಸ್ಕೆöÊವಾಕ್ ಜೊತೆಗೆ ಎರಡು ಲಿಫ್ಟ್ಗಳು ಇವೆ. ನಿಲ್ದಾಣದ ಮುಂಭಾಗದ ಸೌಂದರ್ಯಕ್ಕೆ ಆದ್ಯತೆ ನೀಡಲಾಗಿದೆ. ಕೊಪ್ಪಳ ಸೇರಿದಂತೆ ಅಳ್ನಾವರ, ಬಾದಾಮಿ, ಬಂಟ್ವಾಳ ನಿಲ್ದಾಣಗಳಲ್ಲೂ ಇದೇ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ನಾಲ್ಕು ನಿಲ್ದಾಣಗಳಿಗೆ ಅಂದಾಜು 80 ಕೋಟಿ ರೂಪಾಯಿ ಖರ್ಚಾಗಿದೆ. ಕೊಪ್ಪಳ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಅಂದಾಜು ರೂ.21.14 ಕೋಟಿ ವೆಚ್ಚ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುನಿರಾಬಾದ್ ತುಂಗಾಭದ್ರಾ ಯೋಜನೆ (ಕಾಡಾ) ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್ಸಾಬ್ ನಬಿಸಾಬ್ ದೋಟಿಹಾಳ ಅವರು ಮಾತನಾಡಿ, ಕೊಪ್ಪಳ ಜಿಲ್ಲಾ ಕೇಂದ್ರವಾಗಿದ್ದು, ಇಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಉನ್ನತೀಕರಿಸಿದ ರೈಲು ನಿಲ್ದಾಣದ ಅಗತ್ಯವಿತ್ತು. ಕೇಂದ್ರ ಸರ್ಕಾರದ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ನಮ್ಮ ಜಿಲ್ಲಾ ಕೇಂದ್ರದ ರೈಲು ನಿಲ್ದಾಣ ಎಲ್ಲ ಮೂಲಸೌಕರ್ಯಗಳೊಂದಿಗೆ ಪುನರಾಭಿವೃದ್ಧಿಗೊಂಡಿದ್ದು, ಅಭಿವೃದ್ಧಿಯೆಡೆಗಿನ ಮಹತ್ವದ ಹೆಜ್ಜೆಯಾಗಿದೆ. ಇದರಂತೆ ಕುಷ್ಟಗಿಯಿಂದ ಹುಬ್ಬಳ್ಳಿಗೆ ರೈಲು ಸಂಪರ್ಕವಿರುವAತೆ ಕುಷ್ಟಗಿಯಿಂದ ಬೆಂಗಳೂರಿಗೆ ನೇರ ಸಂಪರ್ಕ ಒದಗಿಸಲು ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಈ ಬಗ್ಗೆ ಸ್ಪಷ್ಟ ಯೋಜನೆ ರೂಪಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು. ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ನಮ್ಮ ರಾಜ್ಯದವರೇ ಇದ್ದು, ಅವರ ಮೂಲಕ ಜಿಲ್ಲೆಗೆ ಇನ್ನೂ ಹೆಚ್ಚಿನ ರೈಲು ಸೇವೆಗಳನ್ನು ಒದಗಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ರೈಲ್ವೇ ಇಲಾಖೆಯ ಸಿಪಿಎಂ ಸಂಜಯ್ ಕುಮಾರ್ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು. ಇಲಾಖೆಯ ಸಿಸಿಎಂ ವಿನಾಯಕ ಆರ್. ನಾಯಕ, ಐಜಿ ಕಮ್ ಪಿಸಿಎಸ್ಸಿ ಸಂತೋಷ ಎನ್. ಚಂದ್ರನ್, ಎಡಿಆರ್ಎಂ ಪ್ರೇಮಚಂದ್, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷರಾದ ನಾಲವಾಡ ಸೇರಿದಂತೆ ರೈಲ್ವೇ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಇದೇ ಸಂದರ್ಭ ಪದ್ಮಶ್ರೀ ಪುರಸ್ಕೃತ ಭೀಮವ್ವ ಶಿಳ್ಳೆಕ್ಯಾತರ ಹಾಗೂ ಸ್ವಾತಂತ್ರö್ಯ ಹೋರಾಟಗಾರರಾದ ನಾರಾಯಣ ಆಚಾರ್ ಶ್ರೀನಿವಾಸ್ ಆಚಾರ ಅವರನ್ನು ಇಲಾಖೆಯಿಂದ ಸನ್ಮಾನಿಸಿ ಗೌರವಿಸಲಾಯಿತು. ಅಮೃತ್ ಭಾರತ್ ನಿಲ್ದಾಣ ಯೋಜನೆ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು.
4 days ago | [YT] | 0
View 0 replies
Kannadanet
ಜು.19 ರಂದು ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಕೊಪ್ಪಳ : ಜಿಲ್ಲಾ ವಿಶ್ವಕರ್ಮ ಸಮಾಜ ಕೊಪ್ಪಳ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜುಲೈ 19ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಶ್ರೀ ಸಿರಸಪ್ಪಯ್ಯ ಸ್ವಾಮಿ ಮಠದಲ್ಲಿ ಆಯೋಜಿಸಲಾಗಿದೆ.
4 days ago | [YT] | 8
View 0 replies
Kannadanet
ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನವದೆಹಲಿಯ 10ನೇ ಜನಪಥ್ ರಸ್ತೆಯ ನಿವಾಸದಲ್ಲಿ ಗುರುವಾರ ಸಮಾಲೋಚನೆ ನಡೆಸಿದ ನಂತರ ಅವರ ಜತೆ ಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಿಎಂ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರು ಕಾಣಿಸಿಕೊಂಡದ್ದು ಹೀಗೆ...
5 days ago | [YT] | 2
View 0 replies
Kannadanet
ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ
ಕರ್ನಾಟಕ ಕೃಷಿ ಉತ್ಪಾದನೆ ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿದೆ
18 ಜಿಲ್ಲೆ, 141 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ
ಬೇಳೆಕಾಳು ಉತ್ಪಾದನೆ ಹಾಗೂ ಬೆಲೆಗಳ ಮೇಲೆ ಪರಿಣಾಮ
ಬೆಂಗಳೂರು, ಜು.14:
"ಎಲ್ ನೀನೋ ಪರಿಣಾಮದಿಂದಾಗಿ ಕರ್ನಾಟಕ ರಾಜ್ಯದಲ್ಲಿ ಶೇ. 30ರಷ್ಟು (ಜು.11ರ ಮಾಹಿತಿ)ಮಳೆ ಕೊರತೆಯಾಗಿದ್ದು, ರಾಜ್ಯದಲ್ಲಿನ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಂಡ ನಿಯೋಜಿಸಬೇಕು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿನ ಮಳೆ ಕೊರತೆ ಕುರಿತಂತೆ ಶಿವಕುಮಾರ್ ಅವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಪರಿಸ್ಥಿತಿ ವಿವರಿಸಿದ್ದಾರೆ.
"ಕೇಂದ್ರ ಸರ್ಕಾರ ನಿಯೋಜಿತ ತಂಡದ ಭೇಟಿಯೂ ಉದ್ಭವಿಸುತ್ತಿರುವ ಬರ ಪರಿಸ್ಥಿತಿಯ ತೀವ್ರತೆಯನ್ನು ಪ್ರತ್ಯಕ್ಷವಾಗಿ ಮೌಲ್ಯಮಾಪನ ಮಾಡಲು ಸಹಕಾರಿಯಾಗುತ್ತದೆ. ಈ ಕಷ್ಟದ ಅವಧಿಯಲ್ಲಿ ಭಾರತ ಸರ್ಕಾರವು ತಮ್ಮೊಂದಿಗಿದೆ ಎಂಬ ಭರವಸೆಯನ್ನು ರೈತ ಸಮುದಾಯಕ್ಕೆ ನೀಡುತ್ತದೆ. ಭಾರತ ಸರ್ಕಾರದಿಂದ ಆರಂಭಿಕ ಮೌಲ್ಯಮಾಪನ ಮತ್ತು ಸಮಯೋಚಿತ ಬೆಂಬಲವು, ವಿಕೋಪಕ್ಕೆ ತಿರುಗುತ್ತಿರುವ ಬರ ಪರಿಸ್ಥಿತಿಯ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಜ್ಯ ಸರ್ಕಾರವು ಕೈಗೊಳ್ಳುತ್ತಿರುವ ಪ್ರಯತ್ನಗಳಿಗೆ ಹೆಚ್ಚಿನ ಬಲವನ್ನು ನೀಡುತ್ತದೆ" ಎಂದು ವಿವರಿಸಿದ್ದಾರೆ.
ಕೃಷಿ ಉತ್ಪಾದನೆ ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿದೆ:
ಕರ್ನಾಟಕವು ತನ್ನ ಸ್ವಾಭಾವಿಕ ಕೃಷಿ-ಹವಾಮಾನ ಮತ್ತು ಜಲವಿಜ್ಞಾನದ ಗುಣಲಕ್ಷಣಗಳಿಂದಾಗಿ ದೇಶದಲ್ಲೇ ಅತ್ಯಂತ ಹೆಚ್ಚು ಬರಪೀಡಿತ ರಾಜ್ಯಗಳಲ್ಲಿ ಒಂದಾಗಿದೆ. ರಾಜ್ಯವು 10 ವಿಭಿನ್ನ ಕೃಷಿ-ಹವಾಮಾನ ವಲಯಗಳನ್ನು ಹೊಂದಿದ್ದು, ಅದರ ಭೌಗೋಳಿಕ ಪ್ರದೇಶದ ಸುಮಾರು ಶೇಕಡಾ 77 ರಷ್ಟು ಭಾಗವು ಶುಷ್ಕ ಮತ್ತು ಅರೆ-ಶುಷ್ಕ ಪ್ರದೇಶಗಳ ವ್ಯಾಪ್ತಿಗೆ ಬರುತ್ತದೆ. ರಾಜ್ಯವು ಸುಮಾರು 84.79 ಲಕ್ಷ ಹೆಕ್ಟೇರ್ ಮಳೆ ಆಶ್ರಿತ ಕೃಷಿ ಭೂಮಿ ಹೊಂದಿದ್ದು, ಇದು ರಾಜಸ್ಥಾನದ ನಂತರ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಈ ಕಾರಣದಿಂದಾಗಿ ಇಲ್ಲಿನ ಕೃಷಿ ಉತ್ಪಾದನೆಯು ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿದೆ" ಎಂದು ಹೇಳಿದ್ದಾರೆ.
"ರಾಜ್ಯದ ವಾರ್ಷಿಕ ಮಳೆಯಲ್ಲಿ 74% ಮಳೆಯು ನೈಋತ್ಯ ಮುಂಗಾರು ಅವಧಿಯಲ್ಲೇ ಲಭ್ಯವಾಗುವುದರಿಂದ, ಮಳೆಯ ವ್ಯತ್ಯಾಸ, ಸುದೀರ್ಘ ಒಣ ಹವೆ ಮತ್ತು ಮರುಕಳಿಸುವ ಬರಗಾಲದ ಪರಿಸ್ಥಿತಿಗಳಿಗೆ ಕರ್ನಾಟಕವು ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಇದು ಕೃಷಿ, ಕುಡಿಯುವ ನೀರಿನ ಲಭ್ಯತೆ, ಜೀವನೋಪಾಯ ಮತ್ತು ಒಟ್ಟಾರೆ ಗ್ರಾಮೀಣ ಆರ್ಥಿಕತೆಯ ಮೇಲೆ ಅತ್ಯಂತ ಪ್ರತಿಕೂಲ ಪರಿಣಾಮ ಬೀರುತ್ತದೆ" ಎಂದು ತಿಳಿಸಿದ್ದಾರೆ.
18 ಜಿಲ್ಲೆ, 141 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ
"ಎಲ್ ನಿನೋ ಕಾರಣದಿಂದಾಗಿ 2026 ರ ನೈಋತ್ಯ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು (IMD) ತಿಳಿಸಿತ್ತು. ಇದಕ್ಕೆ ಅನುಗುಣವಾಗಿ, ರಾಜ್ಯದಲ್ಲಿ ಮಳೆಯ ಕೊರತೆಯು ಗಮನಾರ್ಹವಾಗಿ ಕಂಡುಬಂದಿದೆ. 11 ಜುಲೈ 2026 ರ ಮಾಹಿತಿಯಂತೆ, ಕರ್ನಾಟಕದಲ್ಲಿ ವಾಡಿಕೆ ಮಳೆಯಾದ 292 ಮಿಮೀ ಗೆ ಪ್ರತಿಯಾಗಿ ಕೇವಲ 203 ಮಿಮೀ ಮಳೆಯಾಗಿದೆ. ಇದು 'ಕೊರತೆ ಮಳೆ'ಯ ವರ್ಗಕ್ಕೆ ಸೇರುತ್ತದೆ. 22 ಜೂನ್ 2026 ರ ವೇಳೆಗೆ ಮುಂಗಾರು ರಾಜ್ಯ ವ್ಯಾಪಿಸಿತ್ತಾದರೂ 11 ಜುಲೈ 2026 ರ ಹೊತ್ತಿಗೆ, ಒಟ್ಟು 31 ಜಿಲ್ಲೆಗಳಲ್ಲಿ 18 ಜಿಲ್ಲೆಗಳು ತೀವ್ರ ಕೊರತೆ ಎದುರಿಸಿವೆ. ತಾಲ್ಲೂಕು ಮಟ್ಟದಲ್ಲಿ ನೋಡುವುದಾದರೆ, 240 ತಾಲ್ಲೂಕುಗಳಲ್ಲಿ 141 ತಾಲ್ಲೂಕುಗಳು ಕೊರತೆಯಿಂದ ತೀವ್ರ ಕೊರತೆಯ ಮಳೆಯ ವಿಭಾಗದಲ್ಲಿ ದಾಖಲಾಗಿದ್ದು, ಮಳೆ ಕೊರತೆಯು ರಾಜ್ಯಾದ್ಯಂತ ವ್ಯಾಪಕವಾಗಿ ಹರಡಿರುವುದನ್ನು ಇದು ಸೂಚಿಸುತ್ತದೆ" ಎಂದು ತಿಳಿಸಿದ್ದಾರೆ.
"ರಾಜ್ಯದ ನಾಲ್ಕು ಹವಾಮಾನ ವಲಯಗಳ ಪೈಕಿ, ಕಾವೇರಿ, ತುಂಗಾ ಮತ್ತು ಭದ್ರಾ ನದಿ ವ್ಯವಸ್ಥೆಗಳ ಪ್ರಮುಖ ಜಲಾನಯನ ಪ್ರದೇಶವಾಗಿರುವ ಮಲೆನಾಡು ಪ್ರದೇಶವು ಅತ್ಯಧಿಕ ಅಂದರೆ 34% ಮಳೆ ಕೊರತೆಯನ್ನು ದಾಖಲಿಸಿದೆ. ಇದರ ಬೆನ್ನಲ್ಲೇ ಕರಾವಳಿ ಪ್ರದೇಶ (ಶೇ. -30), ಉತ್ತರ ಒಳನಾಡು ಕರ್ನಾಟಕ (ಶೇ. -24) ಮತ್ತು ದಕ್ಷಿಣ ಒಳನಾಡು ಕರ್ನಾಟಕ (ಶೇ. -18) ಮುಂಗಾರು ಕೊರತೆಯನ್ನು ಎದುರಿಸುತ್ತಿವೆ. ಜುಲೈ 2026 ರ ಮೊದಲ ವಾರದ ಹೊತ್ತಿಗೆ, ಮುಂಗಾರು ಬಿತ್ತನೆಯು ಕೇವಲ 28.36 ಲಕ್ಷ ಹೆಕ್ಟೇರ್ ಪ್ರದೇಶವನ್ನು ಆವರಿಸಿದೆ. ಇದು ಈ ಹಂಗಾಮಿನ ಗುರಿಯಾದ 84.10 ಲಕ್ಷ ಹೆಕ್ಟೇರ್ ಪೈಕಿ 34% ರಷ್ಟು ಮಾತ್ರ. ಇದು ಕೃಷಿ ಕಾರ್ಯಾಚರಣೆಗಳ ಮೇಲೆ ಮಳೆ ಕೊರತೆಯು ಬೀರುತ್ತಿರುವ ಹೆಚ್ಚುತ್ತಿರುವ ಪ್ರಭಾವವನ್ನು ಪ್ರತಿಬಿಂಬಿಸುತ್ತದೆ" ಎಂದು ವಿವರಿಸಿದ್ದಾರೆ.
"ರಾಜ್ಯದಲ್ಲಿನ ಪ್ರಸ್ತುತ ಜಲವಿಜ್ಞಾನದ (Hydrological) ಪರಿಸ್ಥಿತಿಯು ಕೂಡ ತೀವ್ರ ಕಳವಳಕ್ಕೆ ಕಾರಣವಾಗಿದೆ. ರಾಜ್ಯದ ಪ್ರಮುಖ ನದಿ ಪಾತ್ರಗಳ ಮೇಲ್ಭಾಗದ ಜಲಾನಯನ ಪ್ರದೇಶಗಳಲ್ಲಿ ಉಂಟಾಗಿರುವ ಗಣನೀಯ ಮಳೆ ಕೊರತೆಯು ವಿಶೇಷವಾಗಿ ಚಿಂತಾಜನಕವಾಗಿದೆ. ಏಕೆಂದರೆ ಇದು ಮುಂಬರುವ ತಿಂಗಳುಗಳಲ್ಲಿ ಜಲಾಶಯಗಳ ಒಳಹರಿವು, ನೀರಾವರಿ, ಕುಡಿಯುವ ನೀರಿನ ಭದ್ರತೆ ಮತ್ತು ಜಲವಿದ್ಯುತ್ ಉತ್ಪಾದನೆಯ ಮೇಲೆ ಅತ್ಯಂತ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. 10 ಜುಲೈ 2026 ರ ಮಾಹಿತಿಯಂತೆ, ಕರ್ನಾಟಕದ 14 ಪ್ರಮುಖ ಜಲಾಶಯಗಳಲ್ಲಿನ ಒಟ್ಟು ಸಂಗ್ರಹಣೆಯು ಕೇವಲ 303 ಟಿಎಂಸಿ ಆಗಿದ್ದು, ಇದು ಒಟ್ಟು ಒಟ್ಟಾರೆ ಸಂಗ್ರಹಣಾ ಸಾಮರ್ಥ್ಯವಾದ 895.65 ಟಿಎಂಸಿಯ ಕೇವಲ ಶೇಕಡಾ 34 ರಷ್ಟಾಗಿದೆ" ಎಂದು ಹೇಳಿದ್ದಾರೆ.
ಬೇಳೆಕಾಳು ಉತ್ಪಾದನೆ ಹಾಗೂ ಬೆಲೆಗಳ ಮೇಲೆ ಪರಿಣಾಮ:
ಮಣ್ಣಿನಲ್ಲಿ ಸಾಕಷ್ಟು ತೇವಾಂಶವಿಲ್ಲದಿರುವುದು ಮತ್ತು ನಿರಂತರವಾಗಿ ಮಳೆಯ ಖಾತರಿ ಇಲ್ಲದಿರುವುದರಿಂದ, ರೈತರು ಮತ್ತಷ್ಟು ಬಿತ್ತನೆ ಮಾಡಲು ಹಿಂಜರಿಯುತ್ತಿದ್ದು ತೀವ್ರ ಅನಿಶ್ಚಿತತೆಯನ್ನು ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯು ರಾಷ್ಟ್ರೀಯ ಮಟ್ಟದಲ್ಲೂ ಮಹತ್ವವನ್ನು ಪಡೆದುಕೊಂಡಿದೆ. ಏಕೆಂದರೆ ಕರ್ನಾಟಕವು ಭಾರತದಲ್ಲಿ ಬೇಳೆಕಾಳುಗಳನ್ನು ಉತ್ಪಾದಿಸುವ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ.ಪ್ರಸ್ತುತ ಬರಗಾಲದ ಪರಿಸ್ಥಿತಿಯಿಂದಾಗಿ ಉತ್ಪಾದನೆಯಲ್ಲಿ ಯಾವುದೇ ಗಮನಾರ್ಹ ಕುಸಿತ ಉಂಟಾದರೂ, ಅದು ರಾಷ್ಟ್ರೀಯ ಮಟ್ಟದಲ್ಲಿ ಬೇಳೆಕಾಳುಗಳ, ವಿಶೇಷವಾಗಿ ತೊಗರಿ ಬೇಳೆಯ ಲಭ್ಯತೆ ಮತ್ತು ಬೆಲೆಗಳ ಮೇಲೆ ವ್ಯಾಪಕ ಪರಿಣಾಮ ಬೀರಲಿದೆ" ಎಂದು ಹೇಳಿದ್ದಾರೆ.
"ರಾಜ್ಯ ಸರ್ಕಾರವು ಉದ್ಭವಿಸುತ್ತಿರುವ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಿರುವ ಎಲ್ಲಾ ಸಂಭಾವ್ಯ ಕ್ರಮಗಳನ್ನು ಪೂರ್ವಭಾವಿಯಾಗಿ ಕೈಗೊಂಡಿದೆ. ಕೃಷಿ ತಜ್ಞರೊಂದಿಗೆ ಸಮಾಲೋಚಿಸಿ ಬೆಳೆ ಸಲಹೆಗಳು ಮತ್ತು ಜಿಲ್ಲಾವಾರು ತುರ್ತು ಯೋಜನೆಗಳನ್ನು ಹೊರಡಿಸಲಾಗಿದೆ ಮತ್ತು ಸೂಕ್ತ ಬರ ಪರಿಹಾರ ಕ್ರಮಗಳನ್ನು ಅನುಷ್ಠಾನಗೊಳಿಸಲು ಎಲ್ಲಾ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ. ಇದಲ್ಲದೆ, ನೀರಿನ ಲಭ್ಯತೆಯ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ನೀರಿನ ಉದ್ದೇಶಗಳಿಗಾಗಿ ಸಂರಕ್ಷಿಸಲು ರಾಜ್ಯ ಸರ್ಕಾರವು ಅತ್ಯುನ್ನತ ಆದ್ಯತೆ ನೀಡುವ ನೀತಿ ನಿರ್ಧಾರವನ್ನು ಕೈಗೊಂಡಿದೆ" ಎಂದು ತಿಳಿಸಿದ್ದಾರೆ.
1 week ago | [YT] | 1
View 0 replies
Kannadanet
ಕೊಪ್ಪಳದಲ್ಲಿ ಗುಜರಿ ಅಂಗಡಿಗೆ ಶಾಲಾ ಪಠ್ಯಪುಸ್ತಕ ಮಾರಾಟ: ಸಮಗ್ರ ತನಿಖೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ Koppal BEO
ಕೊಪ್ಪಳ:ಜು.13.ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಗುಜರಿ ಅಂಗಡಿಯೊಂದಕ್ಕೆ ಸರ್ಕಾರಿ ಶಾಲಾ ಕಲಿಕಾ ಬಲವರ್ಧನೆ ಪಠ್ಯಪುಸ್ತಕಗಳನ್ನು ಮಾರಾಟ ಮಾಡಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ಈ ಕುರಿತು ತನಿಖೆ ನಡೆಸಿ 3-4 ದಿನಗಳಲ್ಲಿ ವರದಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಶೇಖರ್ ಹೊರಪೇಟೆ ಅವರು ವಿಶೇಷ ತಂಡ ರಚಿಸಿ ಆದೇಶಿಸಿದ್ದಾರೆ. "ಘಟನೆಯ ವಿವರ:"
ಕಳೆದ ಶನಿವಾರ ಸಂಜೆ ರೈಲ್ವೆ ನಿಲ್ದಾಣದ ರಸ್ತೆಯ ಗುಜರಿ ಅಂಗಡಿಯೊಂದರಲ್ಲಿ ಶಾಲಾ ಪುಸ್ತಕಗಳನ್ನು ಹಾಕಿರುವುದರ ಕುರಿತು ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷರಾದ ಎಸ್.ಎ. ಗಫಾರ್. ಗೌರವ ಅಧ್ಯಕ್ಷ ಬಸವರಾಜ್ ಶೀಲವಂತರ್ ಅವರಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಅವರು ತಕ್ಷಣವೇ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಅವರಿಗೆ ದೂರವಾಣಿ ಕರೆ ಮಾಡಿ ದೂರು ನೀಡಿದ್ದರು.
ದೂರಿಗೆ ತಕ್ಷಣ ಸ್ಪಂದಿಸಿದ ಬಿಇಓ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ವೈಶಂಪಾಯನ ಹಾಗೂ ಸದಾನಂದ ಭಾವಿಮನಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದರು. ಅಧಿಕಾರಿಗಳು ಗುಜರಿ ಅಂಗಡಿಯಲ್ಲಿದ್ದ ಪುಸ್ತಕಗಳನ್ನು ತೂಕ ಮಾಡಿ, ಸುಮಾರು 99 ಕೆಜಿ ತೂಕದ ಕಲಿಕಾ ಬಲವರ್ಧನೆ ಸರ್ಕಾರಿ ಪಠ್ಯಪುಸ್ತಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
"ಸಮಗ್ರ ತನಿಖೆಗೆ ಆಗ್ರಹ:"
ಈ ಸಂಬಂಧ ಸೋಮವಾರ ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ಎ. ಗಫಾರ್ ಹಾಗೂ ಗೌರವಾಧ್ಯಕ್ಷ ಬಸವರಾಜ್ ಶೀಲವಂತರ್ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬಿಇಓ ಶೇಖರ್ ಹೊರಪೇಟೆ ಅವರನ್ನು ಭೇಟಿಯಾಗಿ ಚರ್ಚಿಸಿದರು. ಬಡ ವಿದ್ಯಾರ್ಥಿಗಳಿಗೆ ವಿತರಿಸಬೇಕಾದ ಸರ್ಕಾರಿ ಪುಸ್ತಕಗಳು ಗುಜರಿ ಪಾಲಾದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಅವರು, "ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈಗಾಗಲೇ ತನಿಖಾ ತಂಡವನ್ನು ರಚಿಸಲಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ವರದಿ ಬಂದ ತಕ್ಷಣ ಮೇಲಧಿಕಾರಿಗಳ ಗಮನಕ್ಕೆ ತಂದು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು," ಎಂದು ಭರವಸೆ ನೀಡಿದರು.
1 week ago | [YT] | 3
View 0 replies
Load more