Kannada Live News, ಕನ್ನಡನೆಟ್ ಸಮಸ್ತ ಕನ್ನಡಿಗರ ನೆಟವರ್ಕ ಕನ್ನಡ ಯೂಟ್ಯೂಬ್ ಚಾನಲ್ ಕನ್ನಡನೆಟ್.ಕಾಂ
Kannada Online Media_News ,Entertainment,Politics, Karnataka News, Breaking News Kannada, Karanataka News & Information, Digital Creator #koppalnews #koppala #koppal #koppalanews #koppaldistrict #kannadanews #kannadalivenews #viralnews #kannadanewsupdate #kannadanewslatest #kannadanewschannel
Kannadanet
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ವಿಜೇತ ಬಾಡಿ ಬಿಲ್ಡರ್ ಎ.ವಿ. ರವಿ @siddaramaiahmediaofficial
1 day ago | [YT] | 14
View 0 replies
Kannadanet
ಸಿಎಂ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ನಂತರ ನಡೆದ ವಿಧಾನ ಮೊದಲ ಅಧಿವೇಶನ ಕಲಾಪದಲ್ಲಿ ಪಾಲ್ಗೊಳ್ಳಲು ಗುರುವಾರ ವಿಧಾನಸಭೆ ಪ್ರವೇಶಿಸುವ ಮುನ್ನ ಬಾಗಿಲಿಗೆ, ನಂತರ ಸಿಎಂ ಪೀಠಕ್ಕೆ ನಮಸ್ಕರಿಸಿದರು. @DkshivakumarIn @DKShivakumarOfficial
2 days ago | [YT] | 4
View 0 replies
Kannadanet
ವಿಧಾನಸಭೆ ಸಭಾಧ್ಯಕ್ಷರ ಸ್ಥಾನಕ್ಕೆ ಜಿ ಎಸ್ ಪಾಟೀಲ್ ಅವರು ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರ ಕಚೇರಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಡಿಸಿಎಂ ಡಾ ಜಿ ಪರಮೇಶ್ವರ, ಸಚಿವ ಕೆ ಎಚ್ ಮುನಿಯಪ್ಪ, ಕೆಪಿಸಿಸಿ ಅಧ್ಯಕ್ಷ, ಎಂಎಲ್ ಸಿ ಬಿ ಕೆ ಹರಿಪ್ರಸಾದ್, ಮಾಜಿ ಸಚಿವ ಎಚ್ ಕೆ ಪಾಟೀಲ್ ಅವರು ಉಪಸ್ಥಿತರಿದ್ದರು.
2 days ago | [YT] | 10
View 0 replies
Kannadanet
ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನಾಳೆ ನಡೆಯಲಿರುವ ಚುನಾವಣೆಗೆ ಸಲೀಂ ಅಹ್ಮದ್ ಅವರು ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಅವರ ಕಚೇರಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಎಂಎಲ್ ಸಿ ಬಿ ಕೆ ಹರಿಪ್ರಸಾದ್, ವಿನಯ್ ಕಾರ್ತಿಕ್, ನಾಗರಾಜ್ ಯಾದವ್ ಅವರು ಉಪಸ್ಥಿತರಿದ್ದರು.
2 days ago | [YT] | 18
View 0 replies
Kannadanet
ಶ್ರೀ ಗವಿಸಿದ್ಧೇಶ್ವರ ಪದವಿ ಕಾಲೇಜಿಗೆ ೩ ರ್ಯಾಂಕ್
ಕೊಪ್ಪಳ ಅ.೧೨: ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯವು ೨೦೨೪-
೨೫ನೇ ಸಾಲಿನಲ್ಲಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ
ವಿಶ್ವವಿದ್ಯಾಲಯದಿಂದ ಮೂರು ಪ್ರತಿಷ್ಠಿತ ರ್ಯಾಂಕ್ಗಳನ್ನು
ಪಡೆದುಕೊAಡಿದೆ. ಮಹಾವಿದ್ಯಾಲಯದ ಬಿ.ಎ. ತರಗತಿಯಲ್ಲಿ ವ್ಯಾಸಂಗ ಮಾಡಿದ
ವಿದ್ಯಾರ್ಥಿನಿ ಕು. ಕೀರ್ತಿ ವಿರೇಶ ಕೊಪ್ಪಳ ಇವರು ೭ನೇ ರ್ಯಾಂಕ್ ಗಳಿಸಿದರೆ, ಬಿ.ಎಸ್ಸಿ
ತರಗತಿಯಲ್ಲಿ ವ್ಯಾಸಂಗ ಮಾಡಿದ ಕು. ಸರಸ್ವತಿ ಶರಣಪ್ಪ ಹುಡೇದ ೪ನೇರ್ಯಾಂಕ್ ಮತ್ತು ಕು. ಹಿಮಬಿಂದು ಸೋಮಪ್ಪ ಇವರು ೮ನೇ ರ್ಯಾಂಕ್
ಪಡೆದುಕೊAಡಿರುತ್ತಾರೆ. ಈ ಸಾಧನೆಗೆ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಹಾಗೂ
ಆಡಳಿತ ಮಂಡಳಿ, ಪ್ರಾಚಾರ್ಯರ ಮತ್ತು ಎಲ್ಲಾ ಬೋಧಕ ಸಿಬ್ಬಂದಿಗಳ
ಮಾರ್ಗದರ್ಶನ ಕಾರಣವಾಗಿದೆ.
ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ರ್ಯಾಂಕ್ ಪಡೆದ ವಿದ್ಯಾರ್ಥಿನಿಯರನ್ನು
ಶ್ರೀ ಗವಿಸಿದ್ಧೇಶ್ವರ ವಿದ್ಯಾವರ್ಧಕ ಟ್ರಸ್ಟಿನ ಕಾರ್ಯದರ್ಶಿಗಳಾದ ಡಾ. ಆರ್.
ಮರೇಗೌಡ, ಟ್ರಸ್ಟಿನ ಸದಸ್ಯರಾದ ಸಂಜಯ ಕೊತಬಾಳ, ಮಹಾವಿದ್ಯಾಲಯ
ಪ್ರಾಚಾರ್ಯರು ಹಾಗೂ ಸರ್ವ ಬೋಧಕ ಮತ್ತು ಬೋಧಕೇತರ
ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
3 days ago | [YT] | 2
View 0 replies
Kannadanet
ಬಸವರಾಜ್ ರಾಯರಡ್ಡಿ : ಉನ್ನತ ಶಿಕ್ಷಣ ಇಲಾಖೆ
ಶಿವರಾಜ್ ತಂಗಡಗಿ ::ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ SHIVARAJ TANGADAGI #ಕೊಪ್ಪಳ #shivarajtangadagi
3 days ago | [YT] | 0
View 0 replies
Kannadanet
ನೀರೇ ಜೀವ - ರಾಜ್ಯದ ರೈತರ ಬದುಕಿಗೆ ಆಧಾರವಾದ ಜವಾಬ್ದಾರಿ
ಬೃಹತ್ ಮತ್ತು ಮಧ್ಯಮ ನೀರಾವರಿ ಖಾತೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್ಗೆ ಕೃತಜ್ಞತೆ
ಬೆಂಗಳೂರು.ಆಗಸ್ಟ್,13,
ರಾಜ್ಯದ ನೀರಾವರಿ ಮತ್ತು ಕೃಷಿ ಕ್ಷೇತ್ರಕ್ಕೆ ಮಹತ್ವದ್ದಾದ *ಬೃಹತ್ ಮತ್ತು ಮಧ್ಯಮ ನೀರಾವರಿ ಖಾತೆಯನ್ನು ನನಗೆ ನೀಡಿ ಗೌರವಿಸಿದ ಮುಖ್ಯಮಂತ್ರಿಗಳಾದ *ಡಿ.ಕೆ. ಶಿವಕುಮಾರ್ ರವರಿಗೆ, ಮಾಜಿ ಮುಖ್ಯಮಂತ್ರಿಗಳಾದ *ಸಿದ್ದರಾಮಯ್ಯ ರವರಿಗೆ ಮತ್ತು ಕಾಂಗ್ರೆಸ್ ಹೈಕಮಾಂಡ್ಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಚಿವ ಚಲುವರಾಯಸ್ವಾಮಿ ಸಲ್ಲಿಸಿದ್ದಾರೆ.
ಕರ್ನಾಟಕದಂತಹ ಕೃಷಿ ಪ್ರಧಾನ ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ನೀರಾವರಿ ಯೋಜನೆಗಳೇ ರೈತರ ಬೆನ್ನೆಲುಬು. ಕೆರೆ, ಕಟ್ಟೆ, ಬ್ಯಾರೇಜ್, ಚೆಕ್ಡ್ಯಾಂ, ಸಣ್ಣ ಅಣೆಕಟ್ಟುಗಳ ನಿರ್ಮಾಣ ಹಾಗೂ ಪುನಶ್ಚೇತನದ ಮೂಲಕ ಲಕ್ಷಾಂತರ ಎಕರೆ ಭೂಮಿಗೆ ನೀರು ಒದಗಿಸುವ ಜವಾಬ್ದಾರಿ ಈ ಖಾತೆಗಿದೆ.
ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ಗ್ರಾಮೀಣ ಭಾಗಗಳಿಗೆ ಕುಡಿಯುವ ನೀರು ಮತ್ತು ರೈತರ ಬೆಳೆಗಳಿಗೆ ನೀರು ಒದಗಿಸುವಲ್ಲಿ ಈ ಇಲಾಖೆಯ ಪಾತ್ರ ಅತ್ಯಂತ ದೊಡ್ಡದು. ಈ ಹಿಂದೆ *ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ಸೇರಿದಂತೆ ಹಲವು ಹಿರಿಯ ನಾಯಕರು ಈ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದ ನೀರಾವರಿಗೆ ಹೊಸ ಆಯಾಮ ನೀಡಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ಅಂತರ್ಜಲ ಹೆಚ್ಚಿಸುವುದು
ಬರಪೀಡಿತ ತಾಲ್ಲೂಕುಗಳಿಗೆ ತುರ್ತು ನೀರಿನ ವ್ಯವಸ್ಥೆ ಕಲ್ಪಿಸುವುದು
ರಾಜ್ಯಾದ್ಯಂತ ನನೆಗುದಿಗೆ ಬಿದ್ದಿರುವ ಬೃಹತ್ ಮತ್ತು ಮಧ್ಯಮ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವುದು
ಪ್ರತಿ ಹಳ್ಳಿಗೂ ನೀರಿನ ಸೌಲಭ್ಯ ತಲುಪಿಸಿ ರೈತರ ಆದಾಯ ಹೆಚ್ಚಿಸುವುದು
ಮಂಡ್ಯಜಿಲ್ಲೆ ಮತ್ತು ನಾಗಮಂಗಲ ಕ್ಷೇತ್ರ ಜನರ ಆಶೀರ್ವಾದದಿಂದ ನಾಲ್ಕನೇ ಬಾರಿ ಸಚಿವನಾಗಿರುವ ನನಗೆ ಈ ಮಹತ್ವದ ಜವಾಬ್ದಾರಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ರವರ ದೂರದೃಷ್ಟಿಗೆ ಧನ್ಯವಾದಗಳು.
ರೈತಪರ ಆಡಳಿತಕ್ಕೆ ಮಾದರಿಯಾಗಿರುವ ಸಿದ್ದರಾಮಯ್ಯ ರವರ ಮಾರ್ಗದರ್ಶನ ಮತ್ತು ಕಾಂಗ್ರೆಸ್ ಹೈಕಮಾಂಡ್ನ ವಿಶ್ವಾಸಕ್ಕೆ ಚಿರಋಣಿಯಾಗಿದ್ದೇನೆ ಎಂದು ಚಲುವರಾಸ್ವಾಮಿ ತಿಳಿಸಿದ್ದಾರೆ
ನನಗೆ ನೀಡಿರುವ ಈ ಜವಾಬ್ದಾರಿಯನ್ನು ರೈತರ, ಜನರ ಸೇವೆಗೆ ಸಮರ್ಪಿಸಿಕೊಳ್ಳುತ್ತೇನೆ. ರಾಜ್ಯದ ಪ್ರತಿ ಹಳ್ಳಿಗೂ ನೀರು, ಪ್ರತಿ ಹೊಲಕ್ಕೂ ಬೆಳೆ ಎಂಬ ಸಂಕಲ್ಪದೊಂದಿಗೆ ಕೆಲಸ ಮಾಡುತ್ತೇನೆ.
ಜನರ ಪ್ರೀತಿಯಿಂದ ಸಿಕ್ಕ ಈ ಅವಕಾಶವನ್ನು ಅಭಿವೃದ್ಧಿಯಿಂದ ಮರಳಿ ಕೊಡುತ್ತೇನೆ ಎಂದು ಸಚಿವರು ತಮ್ಮ ಪತ್ರಿಕೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
3 days ago | [YT] | 3
View 0 replies
Kannadanet
ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳ ರೈತರಿಗೆ ಅನ್ಯಾಯ ಮಾಡುವುದಿಲ್ಲ: ಶಿವರಾಜ ತಂಗಡಗಿ
126ನೇ ನೀರಾವರಿ ಸಲಹಾ ಸಮಿತಿ ಸಭೆ
; ರೈತರ ನೆಮ್ಮದಿಯೇ ನಮ್ಮ ನೆಮ್ಮದಿ. ರಾಜ್ಯ ಸರ್ಕಾರ ರೈತರ ಪರವಾಗಿದೆ. ಕಾಲುವೆಗೆ ನೀರು ಹರಿಸುವ ವಿಷಯದಲ್ಲಿ ರೈತರಿಗೆ ಅನ್ಯಾಯ ಮಾಡುವುದಿಲ್ಲ ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ಸ್ಪಷ್ಟಪಡಿಸಿದರು.
ಮುನಿರಾಬಾದ್ನ ಕಾಡಾ ಟಿ.ಬಿ.ಪಿ. ಸಭಾಂಗಣದಲ್ಲಿ ಆಗಸ್ಟ್ 11ರಂದು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ 126ನೇ ನೀರಾವರಿ ಸಲಹಾ ಸಮಿತಿ ಸಭೆಯ ಪೂರ್ವದಲ್ಲಿ ರೈತ ಮುಖಂಡರ ಸಲಹೆ ಪಡೆದು ಅವರು ಮಾತನಾಡಿದರು.
ಕೆಲ ಕಡೆಗಳಲ್ಲಿ ಮಳೆ ಆದಾಗ್ಯೂ ರಾಜ್ಯದಲ್ಲಿ ಬರದ ಛಾಯೆ ಇದೆ. 177 ತಾಲೂಕುಗಳಲ್ಲಿ ಬರದ ಪರಸ್ಥಿತಿ ಇದೆ. ತುಂಗಾ ಮತ್ತು ಭದ್ರಾ ಜಲಾಶಯಗಳಿಗೆ ನೀರು ಹರಿದು ಬಂದಿದೆ.
ತುಂಗಭದ್ರಾ ಜಲಾಶಯಕ್ಕೆ ಒಳ ಹರಿವು ಇದೆ. ಸದ್ಯ ಈಗ 82 ಟಿಎಂಸಿ ನೀರು ಲಭ್ಯವಿದೆ. ಜಲಾಶಯದಲ್ಲಿನ ನೀರು ಲಭ್ಯತೆ ಸ್ಥಿತಿಗತಿ ಅರಿತು ಈ ಭಾಗದ ಎಲ್ಲ ಜನಪ್ರತಿನಿಧಿಗಳ ಸಲಹೆ ಪಡೆದುಕೊಂಡು ಕಾಲುವೆಗೆ ನೀರು ಹರಿಸಲು ಕಾಲಾವಕಾಶ ನೀಡಬೇಕು ಎಂದು ಸಚಿವರು ಮನವಿ ಮಾಡಿದರು.
ಸಭೆಯಲ್ಲಿ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ, ಬಸನಗೌಡ ದದ್ದಲ್, ಹಂಪನಗೌಡ ಬಾದರ್ಲಿ,
ಜಿ.ಹಂಪಯ್ಯ ನಾಯಕ, ಬಸನನಗೌಡ ತುರವಿಹಾಳ, ಡಾ.ಎಸ್.ಶಿವರಾಜ ಪಾಟೀಲ, ಅನ್ನಪೂರ್ಣ ತುಕಾರಾಮ, ಜೆ ಎನ್ ಗಣೇಶ, ವಿಧಾನ ಪರಿಷತ್ ಶಾಸಕರಾದ ಬಸನಗೌಡ ಬಾದರ್ಲಿ, ಕಾಡಾ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ,
ಮುಖಂಡರಾದ
ಎನ್ ಎಸ್ ಬೋಸರಾಜು,
ಅಧಿಕಾರಿ ಸದಸ್ಯರಾದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಕರ್ನಾಟಕ ನೀರಾವರಿ ನಿಗಮ ನಿಯಮಿತದ ಎಂಜಿನಿಯರ್ ಮನೋಜಕುಮಾರ ಗಡಬಳ್ಳಿ, ಮುನಿರಾಬಾದನ ತುಂಗಭದ್ರಾ ಯೋಜನೆ ವೃತ್ತ ಅಧೀಕ್ಷಕ ಅಭಿಯಂತರರಾದ ಎಸ್ ಬಿ ಮಲ್ಲಿಗವಾಡ, ಯರಮರಸನ ತುಂಗಭದ್ರಾ ಕಾಲುವೆ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರರಾದ
ಸತ್ಯ ನಾರಾಯಾಣ ಶೆಟ್ಟಿ,
ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ರೈತ ಮುಖಂಡರಾದ ಚಾಮರಸ ಪಾಟೀಲ, ಶರಣಪ್ಪಗೌಡ್ರ, ಶಂಕರಗೌಡ್ರ
ಸೇರಿದಂತೆ ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ರೈತ ಮುಖಂಡರು ಇದ್ದರು.
4 days ago | [YT] | 4
View 0 replies
Kannadanet
ಜಿಲ್ಲೆಯಲ್ಲಿ 10,41,063 ನಮೂನೆಗಳ ಡಿಜಿಟಲೀಕರಣ
ಎಸ್ಐಆರ್ ಕಾರ್ಯಕ್ರಮದ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಕೊಪ್ಪಳ : ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ರಮದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿ ಭಾರತೀಯ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.
ಮರುನಿಗದಿತ ಪರಿಷ್ಕರಣೆ ವೇಳಾಪಟ್ಟಿ: ಬಿಎಲ್ಒ.ಗಳಿಂದ ಮನೆ ಮನೆ ಭೇಟಿ ಆಗಸ್ಟ್ 17ರವರೆಗೆ, ಮತಗಟ್ಟೆಗಳ ಸಬಲೀಕರಣ ಹಾಗೂ ಪುನರ್ರಚನೆ ಆ. 17ರವರೆಗೆ ನಡೆಯಲಿದ್ದು, ಆ. 24ರಂದು ಕರಡು ಮತದಾರರ ಪಟ್ಟಿ ಪ್ರಕಟಣೆಯಾಗಲಿದೆ. ಆ. 24 ರಿಂದ ಸೆಪ್ಟೆಂಬರ್ 23ರವರೆಗೆ ಆಕ್ಷೇಪಣೆ ಹಾಗೂ ಹಕ್ಕುಗಳ ಸಲ್ಲಿಕೆಗೆ ಅವಕಾಶ. ಆ. 24 ರಿಂದ ಅಕ್ಟೋಬರ್ 22ರವರೆಗೆ ನೋಟಿಸ್ ಹಂತ ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದ್ದು, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆಯಾಗಲಿದೆ. ನಾಗರಿಕರು ಹಾಗೂ ಮತದಾರರು ಈ ನಿಗದಿತ ಅವಧಿಯಲ್ಲಿ ತಮ್ಮ ಮಾಹಿತಿಯನ್ನು ಸರಿಪಡಿಸಿಕೊಳ್ಳಲು ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಸಹಕರಿಸಲು ಕೊಪ್ಪಳ ಜಿಲ್ಲಾಡಳಿತ ಕೋರಿದೆ.
10,41,063 ನಮೂನೆಗಳ ಡಿಜಿಟಲೀಕರಣ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಪ್ಪಳ ಜಿಲ್ಲೆಯ 1,315 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ ಮನೆ ಮನೆ ಭೇಟಿ ಹಾಗೂ ಡಿಜಿಟಲೀಕರಣ ಕಾರ್ಯವು ಪ್ರಗತಿಯಲ್ಲಿದ್ದು, ಆಗಸ್ಟ್ 08ರ ಸಂಜೆ 4 ಗಂಟೆಯವರೆಗಿನ ವರದಿಯಂತೆ, ಜಿಲ್ಲೆಯಲ್ಲಿ ಒಟ್ಟು ಹಂಚಿಕೆ ಮಾಡಲಾದ 11,90,214 ಗಣತಿ ನಮೂನೆಗಳಲ್ಲಿ (Enumeration Forms) ಈಗಾಗಲೇ 10,41,063 ನಮೂನೆಗಳನ್ನು ಯಶಸ್ವಿಯಾಗಿ ಡಿಜಿಟಲೀಕರಣ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
1 week ago | [YT] | 0
View 0 replies
Kannadanet
ವಿಧಾನ ಪರಿಷತ್ ಸಭಾಪತಿ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಲಿರುವ ಸಲೀಂ ಅಹಮದ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
1 week ago | [YT] | 42
View 0 replies
Load more