This creator name is Pattabhirama channel name was ABC NEWS KARNATAKA & now changed to sakkath suddi ,please encourage & support for our growth.
please subscribe our channel


ABC NEWS KARNATAKA

ತರುಣ್ ಸುಧೀರ್ " scripttoscreen "ಹೊಸ ಸಿನಿಮಾಗೆ ಸಜ್ಜಾಯ್ತು ವೇದಿಕೆ

38 minutes ago | [YT] | 0

ABC NEWS KARNATAKA

*ಜುಲೈ 24 ರಿಂದ ಚಿತ್ರಮಂದಿರಗಳಲ್ಲಿ "ಪಿಚ್ಚರ್"..*

*ಈಗಾಗಲೇ ಹಾಡುಗಳ ಮೂಲಕ ಜನಪ್ರಿಯವಾಗಿದೆ ಶಿಲ್ಪಾ ಗಣೇಶ್ ನಿರ್ಮಾಣದ ಈ ಚಿತ್ರ* .

ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಪ್ರಸ್ತುತ ಕನ್ನಡ ಹಾಗೂ ತುಳುವಿನಲ್ಲಿ ನಿರ್ಮಿಸಿರುವ "ಪಿಚ್ಚರ್" ಚಿತ್ರ ಇದೇ ಜುಲೈ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಂದೀಪ ಬೆದ್ರ ನಿರ್ದೇಶನದ ಈ ಚಿತ್ರದ ನಾಯಕರಾಗಿ ನಿತ್ಯಪ್ರಕಾಶ್ ಬಂಟ್ವಾಳ್ ನಟಿಸಿದ್ದಾರೆ. ಅಮೃತ ಸುದು ಈ ಚಿತ್ರದ ನಾಯಕಿ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಗೋಲ್ಡನ್ ಮೂವೀಸ್ ಸಂಸ್ಥೆಯ ಮೂಲಕ ಕನ್ನಡ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿದ್ದೇವೆ. ನೀವು ಮಂಗಳೂರಿನವರು. ತುಳು ಸಿನಿಮಾವೊಂದನ್ನು ನಿರ್ಮಾಣ ಮಾಡಿ ಎಂದು ಸ್ನೇಹಿತರು ಹೇಳುತ್ತಿದ್ದರು. ಒಳ್ಳೆಯ ಕಥೆ ಸಿಕ್ಕರೆ ಮಾಡೋಣ ಅಂತ ಹೇಳಿದ್ದೆ. ಕಾರ್ಯಕಾರಿ ನಿರ್ಮಾಪಕರಾದ ಮೋಹನ್ ಭಟ್ಕಳ್ ಅವರು ನಿರ್ದೇಶಕ ಸಂದೀಪ್ ಬೆದ್ರ ಅವರನ್ನು ಪರಿಚಯ ಮಾಡಿಕೊಟ್ಟರು. ಸಂದೀಪ್ ಅವರು ಈ ಚಿತ್ರದ ಕಥೆ ಹೇಳಿದಾಗ, ಕೇಳುತ್ತಲೆ ಇಷ್ಟವಾಯಿತು. ಗಣೇಶ್ ಅವರಿಗೂ ಈ ವಿಷಯ ಹೇಳಿದೆ. ಅವರು ಕೂಡ ನಿರ್ಮಾಣ ಮಾಡೋಣ ಅಂತ ಹೇಳಿದರು. ಕಡಿಮೆ ಬಜೆಟ್ ನಲ್ಲಿ ನಿರ್ಮಾಣ ಮಾಡಲು ಹೊರಟ ಚಿತ್ರವಿದು. ಆದರೆ ಮುಗಿಯುವ ವೇಳೆಗೆ ಬಿಗ್ ಬಜೆಟ್ ನ ಚಿತ್ರವಾಗಿದೆ. ಇಲ್ಲಿಯವರೆಗೂ ತುಳು ಚಿತ್ರದ ಚಿತ್ರೀಕರಣ ಕಾಶ್ಮೀರದಲ್ಲಿ ಆಗಿಲ್ಲ. ಇದೇ ಮೊದಲ ಬಾರಿಗೆ ನಮ್ಮ ಚಿತ್ರದ ಹಾಡೊಂದರ ಚಿತ್ರೀಕರಣ ಕಾಶ್ಮೀರದಲ್ಲಿ ನಡೆದಿದೆ. ಇನ್ನೊಂದು ವಿಶೇಷ ಎಂದರೆ ನಾನು ಮೊದಲ ಬಾರಿಗೆ ಈ ಚಿತ್ರದ "ಗೋಕುಲದ ರಾಧೆ" ಎಂಬ ಹಾಡನ್ನು ಹಾಡಿದ್ದೇನೆ. ಮೇಲ್ ವರ್ಷನ್ ಜಸ್ಕರಣ್ ಸಿಂಗ್ ಹಾಡಿದ್ದಾರೆ. ಈ ಹಾಡಿಗೆ ಮೆಚ್ಚುಗೆ ದೊರಕುತ್ತಿದೆ. ಇಡೀ ತಂಡದ ಸಹಕಾರದಿಂದ ಒಂದೊಳ್ಳೆ ಕೌಟುಂಬಿಕ ಚಿತ್ರ ಕನ್ನಡ ಹಾಗೂ ತುಳುವಿನಲ್ಲಿ ನಿರ್ಮಾಣವಾಗಿ ಜುಲೈ 24 ರಂದು ನಿಮ್ಮ ಮುಂದೆ ಬರಲಿದೆ. ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದು ನಿರ್ಮಾಪಕಿ ಶಿಲ್ಪಾ ಗಣೇಶ್ ತಿಳಿಸಿದರು.

ನಾನು, ನನ್ನ ಅಭಿನಯದ ಚಿತ್ರಗಳ ಅಥವಾ ಅತಿಥಿಯಾಗಿ ಬಂದ ಚಿತ್ರಗಳ ಪತ್ರಿಕಾಗೋಷ್ಠಿಯಲ್ಲಿ ಮಾತ್ರ ಭಾಗವಹಿಸಿತ್ತಿದ್ದೆ. ಈಗ ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಚಿತ್ರವನ್ನು ಪ್ರತಿನಿಧಿಸುತ್ತಾ ಈ ಪತ್ರಿಕಾಗೋಷ್ಠಿಗೆ ಬಂದಿದ್ದೇನೆ. ಶಿಲ್ಪಾ ಅವರು ಹೇಳಿದ ಹಾಗೆ ಸಂದೀಪ್ ಬೆದ್ರ ಒಂದೊಳ್ಳೆ ಕಥೆ ಬರೆದಿದ್ದಾರೆ. ಇದೊಂದು ಅವಿಭಕ್ತ ಕುಟುಂಬದ ಕಥೆಯೂ ಹೌದು. ಇದರ ಜೊತೆಗೆ ಎಮೋಷನ್, ಸೆಂಟಿಮೆಂಟ್, ಕಾಮಿಡಿ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ನನಗೆ ಫ್ಯಾಮಿಲಿ ಆಡಿಯನ್ಸ್ ಹೆಚ್ಚಾಗಿರುವುದರಿಂದ ನಾನು ಕೌಟುಂಬಿಕ ಚಿತ್ರಗಳಿಗೆ ಹೆಚ್ಚು ಒತ್ತು ಕೊಡುತ್ತೇನೆ. ಇನ್ನೂ, ಮಂಗಳೂರಿನ ಹೆಸರಾಂತ ಕಲಾವಿದರಾದ ದೇವದಾಸ್ ಕಾಪಿಕಾಡ್, ಅರವಿಂದ್ ಬೋಳಾರ್ , ಭೋಜರಾಜ್ ವಾಮಂಜೂರ್, ನವೀನ್ ಪಡೀಲ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ನಿತ್ಯಪ್ರಕಾಶ್ ಬಂಟ್ವಾಳ ಹಾಗೂ ಅಮೃತ ಸುದು ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಸ್ಯಾಮುಯೆಲ್ ಅಭಿ ಅವರ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ - ಚಂದ್ರಶೇಖರ್ ಕೆ.ಎಸ್ ಛಾಯಾಗ್ರಹಣ, ಜಸ್ಕರಣ್ ಸಿಂಗ್, ಶಿಲ್ಪಾ, ಹರಿಕೃಷ್ಣ, ಜೆಸ್ಸಿಗಿಫ್ಟ್ ಮುಂತಾದವರ ಗಾಯನ ಹಾಗೂ ಸಿಂಪಲ್ ಸುನಿ, ಅನೂಪ್ ಭಂಡಾರಿ, ಅರಸು ಅಂತಾರೆ, ಚೇತನ್ ಕುಮಾರ್ ಮುಂತಾದವರ ಗೀತರಚನೆ "ಪಿಚ್ಚರ್" ಅನ್ನು ಮತ್ತಷ್ಟು ಚಂದಗಾಣಿಸಿದೆ. ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರಿಗೆ ನಾನು ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ಗೋಲ್ಡನ್ ಸ್ಟಾರ್ ಗಣೇಶ್ .

ನಾಯಕ ನಿತ್ಯಪ್ರಕಾಶ್ ಬಂಟ್ವಾಳ ಹಾಗೂ ನಾಯಕಿ ಅಮೃತ ಸುದು ತಮ್ಮ ಪಾತ್ರದ ಕುರಿತು ಮಾತನಾಡಿದರು. ನಿರ್ದೇಶಕ ಸಂದೀಪ್ ಬೆದ್ರ "ಪಿಚ್ಚರ್" ಸಾಗಿ ಬಂದ ಬಗ್ಗೆ ಮಾಹಿತಿ ನೀಡಿದರು. ಛಾಯಾಗ್ರಾಹಕ ಚಂದ್ರಶೇಖರ್ ಕೆ.ಎಸ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

1 hour ago | [YT] | 5

ABC NEWS KARNATAKA

*"ಮಹಾನ್" ಚಿತ್ರದಲ್ಲಿ ಡಾ||ಶಿವರಾಜಕುಮಾರ್.* ‌
*ವಿಜಯ ರಾಘವೇಂದ್ರ ಅಭಿನಯದ ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ ಕರುನಾಡ ಚಕ್ರವರ್ತಿ* .

ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ, ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ "ಮಹಾನ್" ಚಿತ್ರದ ವಿಶೇಷಪಾತ್ರದಲ್ಲಿ ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್ ಅಭಿನಯಿಸಿದ್ದಾರೆ. ವಿಜಯ್ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಬಹಳ ವರ್ಷಗಳ ನಂತರ ಶಿವರಾಜಕುಮಾರ್ ಹಾಗೂ ವಿಜಯ ರಾಘವೇಂದ್ರ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
"ಮಹಾನ್" ರೈತರ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಮುಖ್ಯ ಪಾತ್ರಗಳಾಗಿರುತ್ತದೆ. ಮನೆಯಲ್ಲಿ ನಾವೇನಾದರೂ ತಪ್ಪು ಮಾಡಿದರೆ, ನಮಗೆ ಬುದ್ದಿ ಹೇಳಲು ತಂದೆ - ತಾಯಿ ಇರುತ್ತಾರೆ. ಅಂತಹುದೇ ಪರಿಸ್ಥಿತಿ ಸಮಾಜದಲ್ಲಿ ನಿರ್ಮಾಣವಾದಾಗ ಅಲ್ಲಿನ ತೊಂದರೆಗಳನ್ನು ತಿದ್ದಲು "ಮಹಾನ್" ವ್ಯಕ್ತಿಯ ಅಗತ್ಯವಿರುತ್ತದೆ. ಅಂತಹ "ಮಹಾನ್" ವ್ಯಕ್ತಿಯ ಪಾತ್ರದಲ್ಲಿ ಡಾ||ಶಿವರಾಜಕುಮಾರ್ ಅಭಿನಯಿಸಿದ್ದಾರೆ. "ಮಹಾನ್" ಚಿತ್ರದಲ್ಲಿ ಹಿರಿಯ ವಕೀಲರಾಗಿ ಶಿವರಾಜಕುಮಾರ್ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಈ ಪಾತ್ರ ತುಂಬಾ ಪ್ರಮುಖವಾದದ್ದು. ಎಲ್ಲಾ ನಿರ್ದೇಶಕರಿಗೂ ಶಿವರಾಜಕುಮಾರ್ ಅವರ ಚಿತ್ರ ನಿರ್ದೇಶನ ಮಾಡುವ ಆಸೆ ಇರುತ್ತದೆ. ನನಗೂ ಅದು ಬಹಳ ದಿನಗಳ ಹಂಬಲ. ಆ ಆಸೆ ಈಗ ಈಡೇರಿದೆ. ಶಿವರಾಜಕುಮಾರ್ ಅವರ ಅಭಿನಯ ಪ್ರಕಾಶ್ ಬುದ್ದೂರು ಅವರಿಗು ತುಂಬಾ ಸಂತೋಷ ತಂದಿದೆ. ಇಡೀ "ಮಹಾನ್" ಚಿತ್ರತಂಡ ಶಿವರಾಜಕುಮಾರ್ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ನಿರ್ದೇಶಕ ಪಿ‌.ಸಿ.ಶೇಖರ್ ತಿಳಿಸಿದ್ದಾರೆ. .

"ಮಹಾನ್" ಬಹು ತಾರಾಬಳಗದ ಚಿತ್ರವಾಗಿದ್ದು, ಡಾ||ಶಿವರಾಜಕುಮಾರ್, ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ, ಕಿರಣ್ ಶ್ರೀನಿವಾಸ್ ಸಹ ಆಭಿನಯಿಸಿದ್ದಾರೆ.
#shivarajkumar #vijayraghavendra #mahaan #movies #trailers #photos #abcnewskarnataka #trendingnow #kannada

1 day ago | [YT] | 8

ABC NEWS KARNATAKA

ಕಿಚ್ಚನ BRB ಶುರು ಗುರು 💥🔥
#brb #kicchasudeepa #billarangabasha #abcnewskarnataka #sudeep #kannadaಕಿಚ್ಚನ BRB ಶುರು ಗುರು 💥🔥
#brb #kicchasudeepa #billarangabasha #abcnewskarnataka #sudeep #kannada

6 days ago (edited) | [YT] | 10

ABC NEWS KARNATAKA

ಹೆಂಗಿದೆ ಗುರು ಶಿವಣ್ಣನ ಲುಕ್ಕು 💥🔥
#shivarajkumar #666operationdreamtheatre #kannada #abcnewskarnataka

6 days ago | [YT] | 7

ABC NEWS KARNATAKA

*'ಲಕ್ಷ್ಮೀಪುತ್ರ' ಸಿನಿಮಾದ ಮೊದಲ ಹಾಡು ಬಿಡುಗಡೆ..ಇನ್ಮೇಲೆ ಎನ್ನುತ್ತಾ ಹೆಜ್ಜೆ ಹಾಕಿದ ಚಿಕ್ಕಣ್ಣ-ವಂದಿತಾ*
*ಚಿಕ್ಕಣ್ಣ, ವಂದಿತಾ ನಟನೆಯ 'ಲಕ್ಷ್ಮೀ ಪುತ್ರ' ಚಿತ್ರದ ಇನ್ಮೇಲೆ ಸಾಂಗ್ ರಿಲೀಸ್*
ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ನಾಯಕನಾಗಿ ತೆರೆಮೇಲೆ ಮಿಂಚಲು ರೆಡಿಯಾಗಿರುವ ಎರಡನೇ ಸಿನಿಮಾ ಲಕ್ಷ್ಮೀಪುತ್ರ. ಸ್ಟಾರ್ ಡೈರೆಕ್ಟರ್ ಎಪಿ ಅರ್ಜುನ್ ಕಥೆ ಹಾಗೂ ಸಾಹಿತ್ಯ ಬರೆದಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ AMB ಕಪಾಲಿಯಲ್ಲಿ 'ಇನ್ಮೇಲೆ' ಎಂಬ ಮೆಲೋಡಿ ಗೀತೆಯನ್ನು ಚಿತ್ರರಂಗದ ಎಂಟು ನಟಿಮಣಿಯರಿಂದ ಅನಾವರಣ ಮಾಡಿಸಲಾಯಿತು.
ಈ ಸಂದರ್ಭದಲ್ಲಿ ನಿರ್ಮಾಪಕ ಎಪಿ ಅರ್ಜುನ್ ಮಾತನಾಡಿ, ಯಾವಾಗಲೂ ಮಾತನಾಡುವ ಪದದಿಂದ ಹಾಡು ಶುರುವಾಗಬೇಕು. ಹಾಡು ಎಲ್ಲರ ಬಾಯಲ್ಲಿ ಇರಬೇಕು ಅನ್ನೋದು ನನ್ನ ತಲೆಯಲ್ಲಿ ಇತ್ತು‌. ಲವರ್ಸ್ಸ್ ಮಾತನಾಡುವಾಗ ಇನ್ನೇಲೆ, ಆಮೇಲೆ ಅಂತಾರೆ ಮಾತನಾಡ್ತುತ್ತಾರೆ. ಅದನ್ನು ಇಟ್ಕೊಂಡು ಮಾಡಿದ ಹಾಡು ಇದು. ಇದನ್ನು ಕರ್ನಾಟಕ ಜನತೆಗೆ ಅರ್ಪಿಸಿದ್ದೇವೆ. ಅಪ್ಪಟ ಕನ್ನಡ ಹಾಡು. ಮಂಡ್ಯ ಸೊಗಡು ಇರುವ ಗೀತೆ. ಇದನ್ನು ಹಾಡಿರುವವರು ದರ್ಶನ್, ಸರಿಗಮಪ ರನ್ನರ್ ಅಪ್. ಅಪ್ಪಟ ಉತ್ತರ ಕರ್ನಾಟಕದ ಪ್ರತಿಭೆ. ಅವರ ಮೊದಲ ಹಾಡು ಇದಾಗಿದೆ. ಇನ್ನು ಅವರ ಜೊತೆ ಪೃಥ್ವಿ ಭಟ್ ಹಾಡಿದ್ದಾರೆ. ಎಲ್ಲರಿಗೂ ಹಾಡು ಕೇಳಿಸಿದಾಗ ಇಷ್ಟಪಟ್ಟರು ಎಂದು ಹೇಳಿದರು.
ನಟ ಚಿಕ್ಕಣ್ಣ ಮಾತನಾಡಿ, ಎಪಿ ಅರ್ಜುನ್ ಸಾಹಿತ್ಯ ಬರೆಯುತ್ತಾರೆ, ಅರ್ಜುನ್ ಜನ್ಯ ಸರ್ ಮ್ಯೂಸಿಕ್ ಮಾಡ್ತಾರೆ ಎಂದಾಗ ಭಯ ಆಗಿತ್ತು. ನನ್ನ ಮೊದಲ ಚಿತ್ರದ ನನಗೆ ನೀನು ಹಾಡು ಹಿಟ್ ಕೊಟ್ಟ ಜೋಡಿ. ಮತ್ತೆ ಒಂದಾಗ್ತಾರೆ ಎಂದಾಗ ಆ ನಿರೀಕ್ಷೆ ತಲುಪುತ್ತೇವಾ? ಎಂಬ ಭಯವಿತ್ತು. ಆ ನಿರೀಕ್ಷೆ ತಲುಪಿದ್ದೇವೆ. ಅದಕ್ಕಿಂದ ದೊಡ್ಡ ಮಟ್ಟದ ಯಶಸ್ಸು ಕೊಡ್ತಿರಾ ಎಂದು ಭಾವಿಸಿದ್ದೇನೆ. ಒಂದು ಚಿತ್ರದ ಮೊದಲ ಇನ್ವಿಟೇಷನ್ ಎಂದರೆ ಹಾಡು. ಹಾಡುಗಳು ಪ್ರೇಕ್ಷಕರನ್ನು ತಲುಪಲು ಬೇಕಿರೋದು ಆಡಿಯೋ ಕಂಪನಿಗಳು. ನಮ್ಮ‌ಚಿತ್ರದ ಆಡಿಯೋ ಹಕ್ಕನ್ನು ಒಂದೊಳ್ಳೆ ಮೊತ್ತಕ್ಕೆ ಡಿಬೀಟ್ಸ್ ಕಂಪನಿ ಕೊಂಡುಕೊಂಡಿದೆ ಎಂದು ಸಂತಸ ಹಂಚಿಕೊಂಡರು.
ಡಿಬೀಟ್ಸ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿರುವ ಇನ್ಮೇಲೆ ಗೀತೆಗೆ ಎಪಿ ಅರ್ಜುನ್ ಪದ ಪೋಣಿಸಿದ್ದಾರೆ. ದರ್ಶನ್ ಮೇಳವಂಕಿ ಹಾಗೂ ಪೃಥ್ವಿಭಟ್ ಧ್ವನಿಯಾಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಇನ್ಮೇಲೆ ಎನ್ನುತ್ತಾ ಚಿಕ್ಕಣ್ಣ ವಂದಿತಾ ಹೆಜ್ಜೆ ಹಾಕಿದ್ದಾರೆ.
ಲಕ್ಷ್ಮೀಪುತ್ರ ಚಿತ್ರವನ್ನು ಎ.ಪಿ.ಅರ್ಜುನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ಎ.ಪಿ.ಅರ್ಜುನ್ ಪತ್ನಿ ಅನ್ನಪೂರ್ಣ ಅರ್ಜುನ್ ಅವರು ನಿರ್ಮಾಣ ಮಾಡಿದ್ದಾರೆ. ರವಿಕಿರಣ್ ಗೌಡ ಸಹ-ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಸಂತೋಷ್ ಲಾಡ್ ಅವರ ಆಶೀರ್ವಾದ ಈ ಚಿತ್ರಕ್ಕಿದೆ.
ಎಪಿ ಅರ್ಜುನ್ ಗರಡಿಯಲ್ಲಿ ಪಳಗಿರುವ ವಿಜಯ್ ಸ್ವಾಮಿ ಆಕ್ಷನ್ ಕಟ್ ಹೇಳಿದ್ದು,
ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರ ಇದಾಗಿದೆ.‌ ಸಿನಿಮಾಗೆ ಅರ್ಜುನ್ ಜನ್ಯ ಮ್ಯೂಸಿಕ್ ಒದಗಿಸಿದ್ದಾರೆ. ಚಿತ್ರದ ಆ್ಯಕ್ಷನ್ ಸೀಕ್ವೆನ್ಸ್‌ಗಳಿಗೆ ಮಾಸ್ ಮಾದ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಆರ್.ಗೌಡ ಅವರ ಕ್ಯಾಮೆರಾ ಹಿಡಿದಿದ್ದಾರೆ.
ಲಕ್ಷ್ಮೀಪುತ್ರ ಚಿತ್ರದ ಮೂಲಕ ಯುವ ನಟಿ ವಂದಿತಾ ನಾಯಕಿಯಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಉಳಿದಂತೆ ತಾರಾ, ಕುರಿ ಪ್ರತಾಪ್, ಧರ್ಮಣ್ಣ ಸೇರಿ ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಎಲ್ಲಾ ಕೆಲಸ ಮುಗಿಸಿರುವ ಲಕ್ಷ್ಮೀಪುತ್ರ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ಚಿತ್ರವನ್ನು ಬೆಳ್ಳಿಪರದೆ ಅಖಾಡಕ್ಕೆ ಇಳಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. #Lakshmiputra #chikkanna #exploremore #kannada #abcnewskarnataka @chikkanna

1 week ago | [YT] | 26

ABC NEWS KARNATAKA

ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!


ಹಲವು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ನಟ ಶೀಲಮ್, ಇದೀಗ ‘ಮೋಡ ಕವಿದ ವಾತಾವರಣ’ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ. ಸೈನ್ಸ್ ಫಿಕ್ಷನ್ ಕಥಾಹಂದರ ಹೊಂದಿರುವ ಈ ವಿಭಿನ್ನ ಲವ್ ಸ್ಟೋರಿ ಚಿತ್ರದ ಟ್ರೇಲರ್ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಯಿತು.

ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ತಾರೆಗಳಾದ ವಿನಯ್ ರಾಜ್‌ಕುಮಾರ್, ನವೀನ್ ಶಂಕರ್ ಹಾಗೂ ಖ್ಯಾತ ನಿರ್ಮಾಪಕ ಉದಯ್ ಮೆಹ್ತಾ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಚಿತ್ರವು ಇದೇ ಜೂನ್ 26ರಂದು ಕನ್ನಡ ಹಾಗೂ ಮಲಯಾಳಂ ಎರಡೂ ಭಾಷೆಗಳಲ್ಲಿ ಏಕಕಾಲಕ್ಕೆ ತೆರೆಕಾಣುತ್ತಿದೆ.

ಚಿತ್ರತಂಡದ ಮಾತುಗಳು:
ನಾಯಕ ಶೀಲಂ: "ನಾನು ಜಗತ್ತಿನಲ್ಲೇ ಅತ್ಯಂತ ಅದೃಷ್ಟವಂತ ವ್ಯಕ್ತಿ. ಈ ಸಿನಿಮಾ ನೋಡಿದ ಮೇಲೆ ಪ್ರೇಕ್ಷಕರು ನಮ್ಮನ್ನು ನೋಡುವ ದೃಷ್ಟಿಯೇ ಬದಲಾಗುತ್ತದೆ. ಇತ್ತೀಚೆಗೆ ಸಿಂಗಾಪುರದಲ್ಲಿ ನಡೆದ ಪ್ರದರ್ಶನದಲ್ಲಿ ನಮಗೆ ನೂರಕ್ಕೆ ನೂರರಷ್ಟು ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದೆ. ನೀವೆಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ, ಖಂಡಿತಾ ನಿಮಗಿಷ್ಟವಾಗುತ್ತದೆ" ಎಂದು ಧೈರ್ಯವಾಗಿ ಹೇಳಿದರು.

ನಟಿ ಮೋಕ್ಷಾ ಕುಶಾಲ್: "ಈ ಸಿನಿಮಾದಿಂದ ನಾನು ತುಂಬಾ ಕಲಿತಿದ್ದೇನೆ. ಚಿತ್ರದಲ್ಲಿ ನನ್ನದು 'ಸೌಪರ್ಣಿಕ' ಎಂಬ ಅತ್ಯಂತ ಮುಗ್ಧ ಮತ್ತು ಹಳ್ಳಿ ಹುಡುಗಿಯ ಪಾತ್ರ. ನೀವು ಟ್ರೇಲರ್‌ನಲ್ಲಿ ನೋಡಿರುವುದು ಕೇವಲ ಶೇ. 5ರಷ್ಟು ಮಾತ್ರ, ಸಿನಿಮಾದಲ್ಲಿ ಇನ್ನೂ ದೊಡ್ಡ ಕಥೆಯಿದೆ. ನಿರ್ದೇಶಕ ಸುನಿ ಸರ್ ಹಾಗೂ ಹಿರಿಯ ಸಿನಿಮಾಟೋಗ್ರಾಫರ್‌ಗಳ ಜೊತೆ ಕೆಲಸ ಮಾಡಿದ್ದು ನನ್ನ ಭಾಗ್ಯ" ಎಂದರು.

ನಟಿ ಸಾತ್ವಿಕಾ: "ನನ್ನನ್ನು ನಂಬಿ ಈ ಪಾತ್ರ ನೀಡಿದ ಸುನಿ ಸರ್‌ಗೆ ಧನ್ಯವಾದಗಳು. ಸಿನಿಮಾ ಬಗ್ಗೆ ನಾನು ದೊಡ್ಡದಾಗಿ ಹೆಚ್ಚೇನೂ ಹೇಳಲ್ಲ, ಆದರೆ ಚಿತ್ರಮಂದಿರದಲ್ಲಿ ನೀವು ಕಳೆಯುವ ಎರಡು ಗಂಟೆ ಪಕ್ಕಾ 'ಪೈಸಾ ವಸೂಲ್' ಎಂಟರ್ಟೈನ್‌ಮೆಂಟ್ ಆಗಿರುತ್ತದೆ. ಶೀಲಂ ಅದ್ಭುತವಾಗಿ ನಟಿಸಿದ್ದಾರೆ, ಎಲ್ಲರೂ ಬೆಂಬಲಿಸಿ" ಎಂದು ಮನವಿ ಮಾಡಿದರು.

ನಿರ್ದೇಶಕ ಸುನಿ: "ಶೀಲಂ ಈ ಸಿನಿಮಾದ ಮೂಲಕ ಚಿತ್ರರಂಗದಲ್ಲಿ ಗಟ್ಟಿಯಾಗಿ ನಾಯಕನಾಗಿ ನಿಲ್ಲುತ್ತಾರೆ. ನಾಯಕಿಯರಾದ ಸಾತ್ವಿಕಾ ಹಾಗೂ ಮೋಕ್ಷಾ ಕುಶಾಲ್ ಇಬ್ಬರೂ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಸಿಂಗಾಪುರದಲ್ಲೂ ನಮಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಖಂಡಿತಾ ಈ ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಗಲಿದೆ" ಎಂದು ಭರವಸೆ ವ್ಯಕ್ತಪಡಿಸಿದರು.

ಬಲಿಷ್ಠ ತಾಂತ್ರಿಕ ತಂಡ
ಇತ್ತೀಚೆಗೆ 'ಒಂದು ಸರಳ ಪ್ರೇಮಕಥೆ'ಯಂತಹ ಯಶಸ್ವಿ ಸಿನಿಮಾ ನೀಡಿದ್ದ 'ರಾಮ್ ಮೂವೀಸ್' ಬ್ಯಾನರ್ ಅಡಿಯಲ್ಲಿ ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ ಹಾಗೂ ಗೋವಾ ರಮೇಶ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಸ್ಯಾಂಡಲ್‌ವುಡ್‌ನ ಸ್ಟಾರ್ ತಂತ್ರಜ್ಞರಾದ ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದ್ದು, ಜೂಡಾ ಸ್ಯಾಂಡಿ ಅವರ ಮೆಲೋಡಿಯಸ್ ಸಂಗೀತ ಚಿತ್ರಕ್ಕಿದೆ. ವಿಭಿನ್ನ ಕಥೆಯ ಮೂಲಕ ಸದ್ದು ಮಾಡುತ್ತಿರುವ ‘ಮೋಡ ಕವಿದ ವಾತಾವರಣ’ ಚಿತ್ರ ಜೂನ್ 26ರಿಂದ ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ.#modakavidavathavarana #sheelam #sathvika #MokshaKushal #kannada #SimpleSuni #movies #abcnewskarnataka

1 week ago | [YT] | 11

ABC NEWS KARNATAKA

**ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಅರವಿಂದ್ ವೆಂಕಟೇಶ್ ರೆಡ್ಡಿ ನೇತೃತ್ವದ "AVR CINE - MAX" ಗೆ ಅದ್ದೂರಿ ಚಾಲನೆ* .

AVR ಪ್ರೊಡಕ್ಷನ್ಸ್ ಮೂಲಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ಅರವಿಂದ್ ವೆಂಕಟೇಶ್ ರೆಡ್ಡಿ(AVR) ಅವರು ಈಗ "AVR CINE - MAX" ಎಂಬ ಕನ್ನಡ ಓಟಿಟಿಯನ್ನು ಆರಂಭಿಸಿದ್ದಾರೆ. ಹಿರಿಯ ನಟ ನರಸಿಂಹರಾಜು ಅವರ ಮೊಮ್ಮಗ ನಟ, ನಿರ್ದೇಶಕ ಅವಿನಾಶ್ ದಿವಾಕರ್ ಶೃಂಗೇರಿ ಇದರ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇತ್ತೀಚೆಗೆ "AVR CINE - MAX" ಓಟಿಟಿ ಅನಾವರಣ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಡಾ||ಜಯಮಾಲ, ನಿರ್ದೇಶಕರಾದ ಟಿ.ಎಸ್.ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ಟಿ.ಎನ್ ಸೀತಾರಾಮ್, ಪಿ.ಶೇಷಾದ್ರಿ, ಶಶಾಂಕ್, ನಾಗಣ್ಣ, ನಟರಾದ ದೊಡ್ಡಣ್ಣ, ಮುಖ್ಯಮಂತ್ರಿ ಚಂದ್ರು, ಸುಂದರರಾಜ್, ಮೋಹನ್, ಗುರುಕಿರಣ್, ಥ್ರಿಲ್ಲರ್ ಮಂಜು, ಶಿವಧ್ವಜ್, ನಟಿಯರಾದ ಗಿರಿಜಾ ಲೋಕೇಶ್, ಸುಧಾರಾಣಿ, ತಾರಾ ಅನುರಾಧ, ಹರ್ಷಿಕಾ ಪೂಣಚ್ಛ, ಪದ್ಮಜಾರಾವ್, ನಿರ್ಮಾಪಕ ಯೋಗೀಶ್ ದ್ವಾರಕೀಶ್, ಪತ್ರಕರ್ತ ಸದಾಶಿವ ಶೆಣೈ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

"AVR CINE - MAX" ಓಟಿಟಿಯನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ||ಜಯಮಾಲ, ಅರವಿಂದ್ ವೆಂಕಟೇಶ್ ರೆಡ್ಡಿ ಆರಂಭಿಸುತ್ತಿರುವ ಹಾಗೂ ನಟ ನರಸಿಂಹರಾಜು ಅವರ ಮೊಮ್ಮಗ ಅವಿನಾಶ್ ದಿವಾಕರ್ ಅವರ ಉಸ್ತುವಾರಿಯಲ್ಲಿ ಬರುತ್ತಿರುವ ಈ ನೂತನ ಓಟಿಟಿಗೆ ಶುಭವಾಗಲಿ ಹಾಗೂ ಇದರಿಂದ ಕನ್ನಡ ನಿರ್ಮಾಪಕರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

"AVR CINE - MAX" ಕನ್ನಡಿಗರಿಂದ ಕನ್ನಡಿಗರಿಗಾಗಿಯೇ ಆರಂಭಿಸಿರುವ ಓಟಿಟಿ . ಕನ್ನಡ ಚಲನಚಿತ್ರ ಹಾಗೂ ಸೃಜನಾತ್ಮಕ ಮನರಂಜನಾ ವಿಷಯಗಳನ್ನು ವಿಶ್ವದಾದ್ಯಂತ ಪ್ರೇಕ್ಷಕರಿಗೆ ತಲುಪಿಸುವ ಉದ್ದೇಶದಿಂದ ರೂಪುಗೊಂಡಿರುವ ಓಟಿಟಿಯೂ ಹೌದು. ಈ ಓಟಿಟಿಯಲ್ಲಿ ಈಗಾಗಲೇ 750ಕ್ಕೂ ಹೆಚ್ಚು ಸಿ‌ನಿಮಾಗಳಿದೆ. ಕೇವಲ ಸಿನಿಮಾ ಮಾತ್ರವಲ್ಲದೇ ರಿಯಾಲಿಟಿ ಶೋ, ಕ್ರೀಡೆ, ಸಂಗೀತ, ನೇರ ಕಾರ್ಯಕ್ರಮಗಳು ಹೀಗೆ ಮೂಲ ಸೃಜನಾತ್ಮಕ ವಿಷಯಗಳಿಗೆ ಉತ್ತೇಜನ ನೀಡಿ ಅವುಗಳನ್ನು ವಿಶ್ವದ ಪ್ರೇಕ್ಷಕರಿಗೆ ತಲುಪಿಸುವ ಮನರಂಜನಾ ವೇದಿಕೆ ಇದಾಗಿದೆ. ರವಿಶ್ರೀವತ್ಸ ಅವರ "ಗ್ಯಾಂಗ್ ಆಫ್ ಯುಕೆ" ಸಿನಿಮಾವನ್ನು ವೆಬ್ ಸಿರೀಸ್ ರೂಪದಲ್ಲಿ ಪ್ರದರ್ಶನ ಮಾಡಲಾಗುತ್ತಿದೆ. ಸೃಜನ್ ಲೋಕೇಶ್ ಅವರು "ಸೃಜಾ ಟಾಕೀಸ್" ಎಂಬ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ವಾರಾಂತ್ಯದಲ್ಲಿ ಸಂಗೀತದ ಕಾರ್ಯಕ್ರಮಗಳು ಇರುತ್ತದೆ. ಕ್ರಿಕೆಟ್ ಸೇರಿದಂತೆ ಯಾವುದೇ ಕ್ರೀಡೆಯನ್ನು ಇದರ ಮೂಲಕ ಆಸಕ್ತರು ನೇರಪ್ರಸಾರವನ್ನು ಮಾಡಬಹುದು. ಸದ್ಯದಲ್ಲೇ ಮಲೇಷಿಯಾದಲ್ಲಿ ಅದ್ದೂರಿ ಕ್ರಿಕೆಟ್ ಟೂರ್ನಿಯನ್ನು ಸಹ ಆಯೋಜಿಸುತ್ತಿದ್ದೇವೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ತಿಳಿಸಿದ "AVR CINE - MAX" ಓಟಿಟಿ ಸ್ಥಾಪಕ ಅರವಿಂದ್ ವೆಂಕಟೇಶ್ ರೆಡ್ಡಿ, ಸಮಾರಂಭಕ್ಕೆ ಆಗಮಿಸಿದ ಗಣ್ಯರಿಗೆ ಧನ್ಯವಾದ ತಿಳಿಸಿದರು.

ಇತ್ತೀಚೆಗೆ ನಡೆದ ಕನ್ನಡ ಚಿತ್ರರಂಗ "ಅಂದು ಇಂದು ಮುಂದು" ಕಾರ್ಯಕ್ರಮದಲ್ಲಿ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ||ಜಯಮಾಲ ಅವರು ಆಡಿದ ಮಾತು ನಾವು ಈ ಓಟಿಟಿ ಆರಂಭಿಸಲು ಸ್ಪೂರ್ತಿಯಾಯಿತು. ಈ ಹಿಂದೆ ಕೂಡ "ಕಟ್ಟೆ" ಎಂಬ ಓಟಿಟಿ ಮಾಡಿದ್ದೆವು. ಅದನ್ನು ಕಾರಣಾಂತರದಿಂದ ಮುಂದುವರೆಸಲು ಸಾಧ್ಯವಾಗಲಿಲ್ಲ. ಆನಂತರ "AVR CINE - MAX" ಓಟಿಟಿಯ ಬಗ್ಗೆ ಅರವಿಂದ್ ವೆಂಕಟೇಶ್ ರೆಡ್ಡಿ ಅವರ ಬಳಿ ನಾನು ಹೇಳಿದಾಗ ಅವರು ಸಂತೋಷದಿಂದ ಬಂಡವಾಳ ಹೂಡಲು ಮುಂದಾದರು. "AVR CINE - MAX" ಓಟಿಟಿ ವಿಶ್ವದಾದ್ಯಂತ ಇರುವ ಕನ್ನಡಿಗರಿಗೆ ಪರಿಶುದ್ಧ ಮನೋರಂಜನೆ ಒದಗಿಸಲಿದೆ ಎಂದು ನೂತನ ಓಟಿಟಿಯ ಉಸ್ತುವಾರಿ ಹಿರಿಯ ನಟ ನರಸಿಂಹರಾಜು ಅವರ ಮೊಮ್ಮಗ ಅವಿನಾಶ್ ದಿವಾಕರ್ ಶೃಂಗೇರಿ ತಿಳಿಸಿದರು. #avrcinemax #avr #kannadaott #abcnewskarnataka #aravindvenkateshreddy

1 week ago | [YT] | 9

ABC NEWS KARNATAKA

ನ್ಯಾಚುರಲ್ ಸ್ಟಾರ್ “ಚಿಕ್ಕಣ್ಣ”ನಿಗೆ ಹುಟ್ಟು ಹಬ್ಬದ ಶುಭಾಷಯಗಳು

Happy Birthday to the “Natural star” @chikkanna_official

@chikkanna_official
@sudhakarr_s_raj
@||__akash.s___||
@somasheker.k
@km_prakash_film_editor
@vharikrishnaofficial

#happybirthdaychikkanna
#jodettu #chikkanna #jodettumovie
#naturalstarchikkanna #kfi
#somashekerk #sudhakarrsraj #akashentertainment

1 week ago | [YT] | 66

ABC NEWS KARNATAKA

ಯೋಗ ದಿನದಂದು ಕಾರಿಡರ್ ನಲ್ಲಿ ಯೋಗಅಭ್ಯಾಸ ಮಾಡಿದ 😍 ದರ್ಶನ್
#darshan #darshanthoogudeepasrinivas

1 week ago | [YT] | 268