This creator name is Pattabhirama channel name was ABC NEWS KARNATAKA & now changed to sakkath suddi ,please encourage & support for our growth. please subscribe our channel
*'ಕಲರ್ಸ್ ಕನ್ನಡ'ದಿಂದ ಮತ್ತೊಂದು ದೃಶ್ಯ ವೈಭವ: ಜೂನ್ 8ರಿಂದ ಬರ್ತಿದೆ ಹೊಚ್ಚ ಹೊಸ ಕಥೆ 'ಅಗ್ನಿಸಾಕ್ಷಿ'!*
ಕನ್ನಡ ಕಿರುತೆರೆ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದ 'ಅಗ್ನಿಸಾಕ್ಷಿ' ಶೀರ್ಷಿಕೆ ಈಗ ಮತ್ತೆ ಕನ್ನಡಿಗರ ಮನೆಮನ ಬೆಳಗಲು ಸಜ್ಜಾಗಿದೆ. ಕೌಟುಂಬಿಕ ಮನರಂಜನೆಯಲ್ಲಿ ಸದಾ ಮುಂಚೂಣಿಯಲ್ಲಿರುವ 'ಕಲರ್ಸ್ ಕನ್ನಡ' ವಾಹಿನಿಯು ಇದೇ ಜೂನ್ 8ರಿಂದ ಸಂಜೆ 7:00 ಗಂಟೆಯ ಪ್ರೈಮ್ ಟೈಮ್ ಸ್ಲಾಟ್ನಲ್ಲಿ ಹೊಚ್ಚ ಹೊಸ ಕಥಾಹಂದರ ಹೊಂದಿರುವ 'ಅಗ್ನಿಸಾಕ್ಷಿ' ಧಾರಾವಾಹಿಯನ್ನು ಹೊತ್ತು ತರುತ್ತಿದೆ.
ಇದು ಹಳೆಯ ಧಾರಾವಾಹಿಯ ಮುಂದುವರಿದ ಭಾಗವಲ್ಲ; ಬದಲಿಗೆ ಇಂದಿನ ತಲೆಮಾರಿನ ಯುವಮನಸ್ಸುಗಳ ಅಹಂಕಾರ ಮತ್ತು ಸ್ವಾಭಿಮಾನದ ನಡುವೆ ನಡೆಯುವ ಹೈ-ವೋಲ್ಟೇಜ್ ಕಥೆಯಾಗಿದೆ.
"ಇಬ್ಬರು ಕಣ್ಣುಂದೆ ಬಂದ್ರೆ ಸಹಿಸೋಕಾಗಲ್ಲ, ಕಾಣದೇ ಹೋದ್ರೆ ಬದುಕೋಕೇ ಆಗಲ್ಲ!" ಎಂಬ ವಿಶಿಷ್ಟ ಪ್ರೇಮಬಂಧದ ಎಳೆ ಈ ಕಥೆಯಲ್ಲಿದೆ.
ಪಾತ್ರಗಳ ಪರಿಚಯ ಮತ್ತು ಹಿನ್ನೆಲೆ: ಈ ಬಾರಿಯ 'ಅಗ್ನಿಸಾಕ್ಷಿ' ಸಂಪೂರ್ಣವಾಗಿ ವಿಭಿನ್ನ ವ್ಯಕ್ತಿತ್ವಗಳ ಎರಡು ಧ್ರುವಗಳ ನಡುವಿನ ಸಂಘರ್ಷ. ಪೋಸ್ಟರ್ಗಳಲ್ಲಿ ಅನಾವರಣಗೊಂಡಿರುವಂತೆ ಪಾತ್ರಗಳ ಧೀಮಂತಿಕೆ ಹೀಗಿದೆ: • ಅಗ್ನಿ (ನಾಯಕ): ಅವನು ಎಲ್ಲವನ್ನೂ ಧ್ವಂಸ ಮಾಡೋ ಬಿರುಗಾಳಿ ಅಷ್ಟೇ ಅಲ್ಲ, ತನ್ನ ಅಹಂಗೆ ಎದುರು ನಿಂತರೆ 'ಅವನು ಎಲ್ಲವನ್ನೂ ಸುಟ್ಟು ಹಾಕೋ ಬೆಂಕಿ' ಸಂಪತ್ತು ಮತ್ತು ವಿಪರೀತ ಗರ್ವದ ಹಿನ್ನೆಲೆಯುಳ್ಳ ಈ ಹಠಮಾರಿ ಉದ್ಯಮಿಯ ಪಾತ್ರಕ್ಕೆ ಗಾಯಕ ಹಾಗೂ ನಟ ಶಮಂತ್ ಬ್ರೋ ಗೌಡ ಜೀವ ತುಂಬಿದ್ದಾರೆ. • ಸಾಕ್ಷಿ (ನಾಯಕಿ): ಅವಳು ಎಲ್ಲವನ್ನೂ ತಂಪಾಗಿಸೋ ತಂಗಾಳಿ ಆದರೆ ಅನ್ಯಾಯದ ವಿರುದ್ಧ ನಿಲ್ಲುವಾಗ, ಕತ್ತಲ ಹಾದಿಗೆ 'ಅವಳು ದಾರಿ ತೋರಿಸೋ ಬೆಳಕು'. ಎಷ್ಟೇ ಕಷ್ಟ ಬಂದರೂ ತನ್ನ ಆತ್ಮಗೌರವವನ್ನು ಬಿಟ್ಟುಕೊಡದ ಈ ಧೀಮಂತ ಯುವತಿಯ ಪಾತ್ರದಲ್ಲಿ ನಟಿ ವರ್ಷಿಣಿ ಗೌಡ ನಟಿಸುತ್ತಿದ್ದಾರೆ. ಹಸೆಮಣೆಯಲ್ಲಿ ಇವರಿಬ್ಬರ ಹಣೆಬರಹ ಹೇಗೆ ಒಂದಾಗಲಿದೆ, ಈ ಬೆಂಕಿ ಮತ್ತು ತಂಗಾಳಿಯ ನಡುವಿನ ಅಹಂ ಹಾಗೂ ಆದರ್ಶಗಳ ಹೋರಾಟ ಎತ್ತ ಸಾಗಲಿದೆ ಎನ್ನುವುದೇ ಇಡೀ ಸರಣಿಯ ಜೀವಾಳ.
ತಾಂತ್ರಿಕ ವರ್ಗ ಮತ್ತು ಪ್ರಸಾರದ ವಿವರ: ಈ ಹಿಂದಿನ ಸೂಪರ್ ಹಿಟ್ ‘ಅಗ್ನಿಸಾಕ್ಷಿ ‘ ಧಾರಾವಾಹಿಯ ಬರಹಗಾರರಾದ ಹ್ಯಾರಿಸ್ ಅವರೇ ಈ ಕಥೆಯನ್ನು ಬರೆಯುತ್ತಿದ್ದಾರೆ. ಇನ್ನು ಈ ಧಾರಾವಾಹಿಯು ಅತ್ಯುನ್ನತ ಮೇಕಿಂಗ್ ಹಾಗೂ ಶ್ರೀಮಂತ ದೃಶ್ಯವೈಭವದಿಂದ ಕೂಡಿರಲಿದೆ. ಬಾಂದವ್ಯಗಳ ಹೊಸ ಆಯಾಮವನ್ನು ಪರಿಚಯಿಸಲಿರುವ 'ಅಗ್ನಿಸಾಕ್ಷಿ' ಜೂನ್ 8 ರಿಂದ ಇದೇ ಸೋಮವಾರದಿಂದ ಪ್ರತಿ ಸಂಜೆ 7 ಗಂಟೆಗೆ ನಿಮ್ಮ ನೆಚ್ಚಿನ 'ಕಲರ್ಸ್ ಕನ್ನಡ' ವಾಹಿನಿಯಲ್ಲಿ ಪ್ರಸಾರವಾಗಲಿದೆ. ವೀಕ್ಷಕರು ಎಂದಿನಂತೆ ಈ ಹೊಸ ಪ್ರಯತ್ನಕ್ಕೂ ಪ್ರೀತಿ ಮತ್ತು ಬೆಂಬಲ ನೀಡಬೇಕಾಗಿ ವಿನಂತಿ. ಪ್ರಶಾಂತ್ ಡಿ.ಪಿ ನಿರ್ದೇಶಿಸುತ್ತಿರುವ ಈ ಧಾರಾವಾಹಿಯ ಅಗ್ನಿ ಪಾತ್ರದಲ್ಲಿ ಶಮಂತ್ ಗೌಡ(ಬ್ರೋ ಗೌಡ), ಸಾಕ್ಷಿ ಪಾತ್ರದಲ್ಲಿ ವರ್ಷಿಣಿ ನಟಿಸುತ್ತಿದ್ದಾರೆ. ಅಕ್ಷತ, ಲೇಖನ, ಶ್ರೀಕಾಂತ್ ಮುಂತಾದವರ ತಾರಾಬಳಗವಿರುವ "ಅಗ್ನಿಸಾಕ್ಷಿ" ಧಾರಾವಾಹಿಯಲ್ಲಿ ಬಹಳ ದಿನಗಳ ನಂತರ ನಟ ಮಿಥುನ್ ತೇಜಸ್ವಿ ಅಭಿನಯಿಸುತ್ತಿದ್ದಾರೆ. #agnishakshi#kannadaserial#trailers#trending#abcnewskarnataka#shamanthbrogowda#shakshi
*ಟ್ರೈಲರ್ ಹಾಗೂ ವಿಡಿಯೋ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿರುವ "ಪಂಚಮುಖಿ" ಜೂನ್ 26 ರಂದು ಬಿಡುಗಡೆ* .
ಎಸ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಚಂದ್ರು ಆಚಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆಗೆ ನಾಯಕನಾಗಿಯೂ ನಟಿಸಿರುವ "ಪಂಚಮುಖಿ" ಚಿತ್ರದ ಟ್ರೈಲರ್ ಹಾಗೂ ವಿಡಿಯೋ ಹಾಡುಗಳು ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಚಿತ್ರ ಜೂನ್ 26 ರಂದು ತೆರೆಗೆ ಬರುತ್ತಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
ಕೆಲವು ಚಿತ್ರಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿರುವ ನನಗೆ ಇದು ಮೊದಲ ನಿರ್ದೇಶನದ ಚಿತ್ರ. ಹಾರಾರ್ ಜೊತೆಗೆ ನೋಡುಗರಿಗೆ ಬೇಕಾದ ಎಲ್ಲಾ ಮನೋರಂಜನೆಯ ಅಂಶಗಳು ಇರುವ ಈ ಚಿತ್ರದಲ್ಲಿ ನಾನೇ ನಾಯಕನಾಗೂ ನಟಿಸಿದ್ದೇನೆ. ಸ್ಪೂರ್ತಿ ಮನೋಹರ್ ಈ ಚಿತ್ರದ ನಾಯಕಿ. ಕಳೆದ ಕೆಲವು ವರ್ಷಗಳ ಹಿಂದೆಯೇ ಈ ಚಿತ್ರಕ್ಕೆ ಚಾಲನೆ ದೊರೆಕಿತ್ತು. ಕಾರಣಾಂತರದಿಂದ ಬಿಡುಗಡೆ ಸ್ವಲ್ಪ ವಿಳಂಬವಾಗಿದೆ. ಇದೊಂದು ಕಡಿಮೆ ಬಜೆಟ್ ನ ಚಿತ್ರ. ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ನಿರ್ಮಾಣವಾಗಿರುವ ಚಿತ್ರವೂ ಹೌದು. ಈ ಚಿತ್ರದ ಬಹುತೇಕ ತಂತ್ರಜ್ಞರು ಹಾಗೂ ಕಲಾವಿದರು ಯಾವುದೇ ಸಂಭಾವನೆ ಪಡೆಯದೆ ಈ ಚಿತ್ರದಲ್ಲಿ ನಟಿಸಿದ್ದಾರೆ. ಅವರೆಲ್ಲರಿಗೂ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ. ಚಿತ್ರದಲ್ಲಿ ಅರೋನ್ ಕಾರ್ತಿಕ್ ವೆಂಕಟೇಶ್ ಸಂಗೀತ ಸಂಯೋಜಿಸಿರುವ 4 ಹಾಡುಗಳಿದೆ. ಖಿಚಿತ್ರ ಜೂನ್ 26 ಸಹಕಾರದಿಂದ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಪ್ರವೀಣ್ ಪೂಜಾರಿ ನಾಡ ಛಾಯಾಗ್ರಹಣ ಹಾಗೂ ಅರವಿಂದ್ ಮಲ್ಲು ಅವರ ಸಂಕಲನ ಚಿತ್ರಕ್ಕೆ ಪೂರಕವಾಗಿದೆ. ಚಿತ್ರ ಜೂನ್ 26 ರಂದು ತೆರೆಗೆ ಬರುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ದೇಶಕ ಹಾಗೂ ನಾಯಕ ಚಂದ್ರು ಆಚಾರ್ ತಿಳಿಸಿದರು.
ಈ ಚಿತ್ರದ ಕಥೆ ಚೆನ್ನಾಗಿದೆ. ನನ್ನದು ಇದು ಮೊದಲ ಚಿತ್ರ ಎಂದು ನಾಯಕಿ ಸ್ಪೂರ್ತಿ ಮನೋಹರ್ ಹೇಳಿದರು. ಹಾಡುಗಳ ಕುರಿತು ಸಂಗೀತ ನಿರ್ದೇಶಕ ಅರೋನ್ ಕಾರ್ತಿಕ್ ವೆಂಕಟೇಶ್ ಮಾಹಿತಿ ನೀಡಿದರು. ಸಂಕಲನಕಾರ ಅರವಿಂದ್ ಜೆ.ಪಿ ಮಲ್ಲು, ಕಲಾವಿದರಾದ ಪವನ್, ತೇಜಸ್, ಪೃಥ್ವಿ ಹಾಗೂ ವಿತರಕ ರಾಜು ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
*ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಕಾರ್ತಿಕ್ ಶರ್ಮ ಚೊಚ್ಚಲ ನಿರ್ದೇಶನದ ಈ ಚಿತ್ರ* .
"ವೀರ ಕನ್ನಡಿಗ", " ಮ್ಯಾಜಿಕ್ ಅಜ್ಜಿ" ಸೇರಿದಂತೆ ಮೂವತ್ತಕ್ಕೂ ಅಧಿಕ ಚಿತ್ರಗಳಲ್ಲಿ ಬಾಲನಟನಾಗಿ ಗುರುತಿಸಿಕೊಂಡಿದ್ದ ಕಾರ್ತಿಕ್ ಶರ್ಮ, ಸಂಗೀತ ನಿರ್ದೇಶಕನಾಗಿಯೂ ಜನಪ್ರಿಯ. ನೂರಕ್ಕೂ ಅಧಿಕ ಧಾರಾವಾಹಿ ಹಾಗೂ ಟಿವಿ ಶೋ ಗಳಿಗೂ ಸಂಗೀತ ನೀಡಿರುವ ಕಾರ್ತಿಕ್ ಶರ್ಮ ಪ್ರಸ್ತುತ "ಭಾವಾಂತರ" ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ನೈಜ ಘಟನೆ ಆಧರಿಸಿರುವ ಈ ಚಿತ್ರಕ್ಕೆ ಕಾರ್ತಿಕ್ ಶರ್ಮ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಸಂಗೀತ ನಿರ್ದೇಶನದ ಜೊತೆಗೆ ಪ್ರಮುಖಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿರುವ ಈ ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಇತ್ತೀಚಿಗೆ ಟೀಸರ್ ಬಿಡುಗಡೆಯಾಗಿದ್ದು, ಆಡಿಯೋ ಹಕ್ಕನ್ನು ಹೊಂಬಾಳೆ ಮ್ಯೂಸಿಕ್ ಸಂಸ್ಥೆ ಪಡೆದುಕೊಂಡಿದೆ.
ಬಾಲನಟನಾಗಿ ಹಾಗೂ ಸಂಗೀತ ಸಂಯೋಜಕನಾಗಿ ಪರಿಚಿತನಾಗಿದ್ದ ನಾನು, "ಭಾವಾಂತರ" ಸಿನಿಮಾ ಮೂಲಕ ನಿರ್ದೇಶಕನಾಗಿದ್ದೇನೆ. ನನ್ನ ಆರಂಭದ ದಿನಗಳಿಂದಲೂ ತಾವು ನೀಡುತ್ತಿರುವ ಪ್ರೋತ್ಸಾಹ ಈಗಲೂ ಮುಂದುವರೆಯಲಿ. "ಭಾವಾಂತರ", ಇದೊಂದು ನೈಜ ಘಟನೆ ಆಧಾರಿತ ಚಿತ್ರ. ನನಗೆ ತಿಳಿದ ಹಾಗೆ ದಕ್ಷಿಣ ಭಾರತದಲ್ಲೇ ಈ ರೀತಿಯ ಕಥೆ ಈವರೆಗೂ ಬಂದಿಲ್ಲ. ಅಂತಹ ಅಪರೂಪದ ಕಥಾಹಂದರ ಹೊಂದಿರುವ ಚಿತ್ರವಿದು. ಚಿತ್ರದಲ್ಲಿ ನಾನೇ ಸಂಗೀತ ಸಂಯೋಜಿಸಿರುವ ಐದು ಹಾಡುಗಳಿದ್ದು, ಹೆಸರಾಂತ ಹೊಂಬಾಳೆ ಮ್ಯೂಸಿಕ್ ಸಂಸ್ಥೆ ಆಡಿಯೋ ಹಕ್ಕು ಪಡೆದುಕೊಂಡಿದೆ. ಟೀಸರ್ ಕೂಡ ಬಿಡುಗಡೆಯಾಗಿದ್ದು, ನಿರೀಕ್ಷೆಗೂ ಮೀರಿ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಉಡುಪಿ, ಬೆಂಗಳೂರು ಹಾಗೂ ತಮಿಳುನಾಡಿನಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಆದಷ್ಟು ಬೇಗ ಬಿಡುಗಡೆಯಾಗಲಿದೆ. ನನ್ನ ಜೊತೆಗೆ ತನ್ವಿ ರಾವ್ ಅವರು ಸಹ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಣವ್ ಶ್ರೀಧರ್, ಶ್ರೀವೈಷ್ಣವ್, ವೇದ ರಾವ್, ಭಾನು ಮುಂತಾದವರು ತಾರಾಬಳಗದಲ್ಲಿದ್ದಾರೆ. ಕಿಕ್ ಮೀಡಿಯಾ ಸಂಸ್ಥೆ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸಾಗರ್ ಅತ್ದ್ಕರ್ ಛಾಯಾಗ್ರಹಣ ಹಾಗೂ ಆಶೀಷ್ ಹುಲಕುಂದ್ ಸಂಕಲನವಿದೆ ಎಂದು ನಿರ್ದೇಶಕ ಹಾಗೂ ನಟ ಕಾರ್ತಿಕ್ ಶರ್ಮ ತಿಳಿಸಿದ್ದಾರೆ.#bhavantaramusicalbum#photos#trailers#abcnewskarnataka#movies#HombaleFilms@HombaleFilms
"*ಕೊರಗಜ್ಜ*"ಚಿತ್ರ: *ನಿರ್ದೇಶಕ ಸುಧೀರ್ ಅತ್ತಾವರ್ ಗೆ ಐಶಾರಾಮಿ ಫ್ಲಾಟ್ ಗಿಫ್ಟ್ ನೀಡಿದ ನಿರ್ಮಾಪಕ*!
ಕಳೆದ ಜನವರಿ ತಿಂಗಳಲ್ಲಿ ಬಿಡುಗಡೆಗೆ ಸರ್ವ ಸನ್ನದ್ದವಾಗಿ, ಝೀ ಮ್ಯೂಸಿಕ್ ಬ್ಯಾನರ್ ಅಡಿ ಭರ್ಜರಿ ಆಡಿಯೋ ಲಾಂಚ್ ಕೂಡಾ ಮಾಡಿದ್ದ, ಸುಧೀರ್ ಅತ್ತಾವರ್ ನಿರ್ದೇಶನದ *ಕೊರಗಜ್ಜ* ಚಿತ್ರವನ್ನು ,ಕೊನೇ ಗಳಿಗೆಯಲ್ಲಿ ಧಿಡೀರ್ ಎಂದು ಚಿತ್ರವು 3D ಯಾಗಿ ಮಾರ್ಪಡಿಸುವ ದೊಡ್ಡ ಸುದ್ದಿ ಕೊಟ್ಟು ಬಿಡುಗಡೆಯನ್ನು ಮುಂದೂಡಿತು.
ಈಗ ಕೊಚ್ಚಿ ಮತ್ತು ಚೆನ್ನೈ ನಲ್ಲಿ ಚಿತ್ರದ 3ಡಿ ಕೆಲಸ ಭರದಿಂದ ಸಾಗುತ್ತಿದೆ. ಚಿತ್ರವು ತಾಂತ್ರಿಕವಾಗಿ ಯಾವುದೇ ಅಂತರಾಷ್ಟ್ರೀಯ ಮಟ್ಟದ ಸಿನಿಮಾಗೂ ಕಡಿಮೆ ಇಲ್ಲ ಎನ್ನುವ ಹಾಗೆ ಚಿತ್ರ ಮೂಡಿ ಬರುತ್ತಿದೆ ಎನ್ನುವ ವಿಷಯವನ್ನು ನಿರ್ದೇಶಕ ಸುಧೀರ್ ಅತ್ತಾವರ್ ತಿಳಿಸಿದರು. ಇದಕ್ಕೆ ಪೂರಕವಾಗಿ ಅಂತಾರಾಷ್ಟ್ರೀಯ ವಿತರಣಾ ಸಂಸ್ಥೆಗಳು ಆಸಕ್ತಿ ತೋರಿಸುತ್ತಿರುವುದರಿಂದ ಖುಷಿ ಪಟ್ಟಿರುವ ನಿರ್ಮಾಪಕ ತ್ರಿವಿಕ್ರಮ ಸಪಲ್ಯರವರು, ಕಳೆದ ಮೂರು ವರ್ಷಗಳಿಂದ ಚಿತ್ರದ ಈ ಮಟ್ಟದ ಬೆಳವಣಿಗೆಗೆ ಶ್ರಮಿಸುತ್ತಿರುವ ನಿರ್ದೇಶಕ ಸುಧೀರ್ ಅತ್ತಾವರ್ ಗೆ "ಶೋಭ ಡೆವಲಪರ್ಸ್" ನ ಮೂರು ಬೆಡ್ ರೂಮಿನ,ಮಾರ್ಕೆಟ್ ವೇಲ್ಯು ಸುಮಾರು ರೂ1.75 ಕೋಟಿ ಬೆಲೆಬಾಳುವ ಐಷಾರಾಮಿ ಫ್ಲಾಟ್ ನ್ನು ಗಿಫ್ಟ್ ಆಗಿ ನೀಡಿ, ಚಿತ್ರದ ಮೇಲೆ ಮತ್ತು ನಿರ್ದೇಶಕರ ಮೇಲೆ ತಮಗಿರುವ ಅಭಿಮಾನವನ್ನು ತೋರಿಸಿರುತ್ತಾರೆ.ಈಗಾಗಲೇ ಆರು ಭಾಷೆಗಳಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರಕ್ಕೆ ಅಸ್ಸಾಮಿ, ಚೈನಿಸ್ ಮತ್ತು ಇಂಗ್ಲಿಷ್ ಅವತರಣಿಕೆ ಗಳೂ ಸೇರ್ಪಡೆಗೊಂಡಿದೆ ಎಂಬವಿಚಾರ ಕೂಡಾ ತಿಳಿಸಿದರು. ಶುಕ್ರವಾರ ಹೊಸ ಫ್ಲಾಟ್ ನ ಗ್ರಹ ಪ್ರವೇಶ ನಡೆಯಿತು.ಬಳಿಕ ಪರಮಶ್ರೇಷ್ಠ ಶ್ರೀ ಸತ್ಯನಾರಾಯಣ ದೇವರ ವ್ರತ ಪೂಜೆ ಕೂಡಾ ನಡೆದು, ಭಾನುವಾರದಂದು ಬೆಂಗಳೂರಿಗೆ ತುಸು ಅಪರೂಪ ಅನ್ನಬಹುದಾದ ಕೊರಗಜ್ಜ ದೈವದ ಅಗೆಲು ಸೇವೆ ಯನ್ನು ಪತ್ರಕರ್ತರ ಮತ್ತು ಬಂದ ಅತಿಥಿಗಳ ಸಮ್ಮುಖದಲ್ಲಿ ನಡೆಸಲಾಯ್ತು.
ಹಿರಿಯ ನಟಿ ಭವ್ಯರವರು ಕೊರಗಜ್ಜ ದೈವದ ಅಗೆಲು ಸೇವೆಗೆ ಇಷ್ಟವಾದ ಕುಚಲಕ್ಕಿ ಅನ್ಮ, ಹುರುಳಿ-ಬಸಳೆ ಸಾರು, ಬಂಗುಡೆ ಮೀನಿನ ಗಸಿ,ಮಿಡಿ ಮಾವಿನ ಉಪ್ಪಿನಕಾಯ್,ಕೋಳಿ ಸುಕ್ಕ,ಕಳ್ಳು ಮೊದಲಾದ ಭಕ್ಷ್ಯಗಳನ್ನು ಗೆರಸೆಯಲ್ಲಿಟ್ಟು ಸಮರ್ಪಿಸಿದರು. ನಿರ್ದೇಶಕರ ಧರ್ಮ ಪತ್ನಿ ರಾಜಶ್ರೀ ಸುಧೀರ್ ಎಲ್ಲಾ ಭಕ್ಷ್ಯಗಳನ್ನು ಅಣಿಗೊಳಿಸಿದರೆ, ನಿರ್ಮಾಪಕ ತ್ರಿವಿಕ್ರಮ ಸಪಲ್ಯ, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಭವ್ಯರಿಗೆ ಸಾಥ್ ನೀಡಿದರು.
ನಂತರ ಪತ್ರಿಕಾಗೋಷ್ಟಿ ಯಲ್ಲಿ ಮಾತನಾಡಿದ ನಟಿ ಭವ್ಯರವರು" ಕೊರಗಜ್ಜ ಸಿನಿಮಾವು ನನ್ನನ್ನು ಹೆಚ್ಚು ದೈವಭಕ್ತಳನ್ನಾಗಿಸಿದೆ.ನಾನು ಈ ಚಿತ್ರದ ಎಲ್ಲಾ ಕಾರ್ಯಕ್ರಮಗಳಿಗೂ ಭಾಗಿಯಾಗುತ್ತಾ ಚಿತ್ರತಂಡದ ಅವಿಭಾಜ್ಯ ಅಂಗ ಎನ್ನುವ ರೀತಿಯಲ್ಲಿ ಜೊತೆಗಿದ್ದೇನೆ. ಚಿತ್ರದಲ್ಲಿ ನಾನು ಕೊರಗಜ್ಜನಿಗೆ ಪ್ರಪ್ರಥಮವಾಗಿ ಅಗೆಲು ಸೇವೆ ನೀಡುವ ರಾಣಿ "ಪಂಜಂದಾಯಿ" ಪಾತ್ರ ವಹಿಸಿದ್ದೆ. ಈಗ ನಿಜ ಜೀವನದಲ್ಲೂ ನಿರ್ದೇಶಕರಿಗೆ ಗಿಫ್ಟ್ ಆಗಿ ದೊರೆತಿರುವ ಹೊಸ ಫ್ಲಾಟ್ ನಲ್ಲಿ ಕೊರಗಜ್ಜನಿಗೆ ಅಗೆಲು ಸೇವೆ ಮಾಡುವಂತಹ ಸೌಭಾಗ್ಯ ನಿರ್ದೇಶಕರು ನನಗೆ ಮಾಡಿ ಕೊಟ್ಟಿದ್ದಾರೆ. ಬಹುಷಃ ನನ್ನಷ್ಟು ಸೌಭಾಗ್ಯ ವಂತೆ ಈ ಚಿತ್ರದಲ್ಲಿ ಯಾರೂ ಇರಲಿಕ್ಕೆ ಸಾಧ್ಯವಿಲ್ಲ ಎಂದರು.
ನಿರ್ಮಾಪಕ ತ್ರಿವಿಕ್ರಮರವರು ಮಾತನಾಡುತ್ತಾ ಚಿತ್ರವು ಚೈನಿಸ್ ಭಾಷೆಗೂ ಡಬ್ ಆಗುತ್ತಿದೆ ಎನ್ನುವ ಸುದ್ದಿಯನ್ನು ಸಂತೋಷದಿಂದ ಹಂಚಿಕೊಂಡರು.ಹಾಂಕಾಂಗ್ ಮತ್ತು ಬೀಜಿಂಗ್ ನಿಂದ ಹಾಗೂ ಇನ್ನಿತರ ಕಡೆಗಳಿಂದ ಅಂತರಾಷ್ಟ್ರೀಯ ವಿತರಣಾ ಸಂಸ್ಥೆಗಳು ವಿದೇಶಗಳಲ್ಲಿ ಚಿತ್ರ ಬಿಡುಗಡೆ ಗೊಳಿಸಲು ಮುಂದೆ ಬರುತ್ತಿದೆ. ಚಿತ್ರದ ಬಜೆಟ್ 40 ಕೋಟಿ ರುಪಾಯಿ ದಾಟಿದರೂ, ವ್ಯಾವಹಾರಿಕವಾಗಿ ಹೆಚ್ಚು ವಿಶ್ವಾಸ ಮತ್ತು ಖುಷಿ ಹೆಚ್ಚುತ್ತಿರುವ ಈ ಹಿನ್ನೆಯಲ್ಲಿ ಕಳೆದ 3ವರ್ಷಗಳಿಂದ ಈ ಚಿತ್ರಕ್ಕಾಗಿ ಶ್ರಮಿಸುತ್ತಿರುವ ನಿರ್ದೇಶಕರಿಗೆ ಈ ಫ್ಲಾಟನ್ನು ಗಿಫ್ಟ್ ಆಗಿ ನೀಡುತ್ತಿದ್ದೇನೆ- ಎಂದರು. ಕಾರ್ಯಕಾರಿ ನಿರ್ಮಾಪಕ ಹಾಗೂ ಚಿತ್ರದ ಎಡಿಟರ್ ವಿದ್ಯಾಧರ್ ಶೆಟ್ಟಿಯವರುಆಗಸ್ಟ್ ನಲ್ಲಿ ಚಿತ್ರ ಬಿಡುಗಡೆಗೆ ತಯಾರಿ ನಡೆಸಲಾಗುವುದು ಎಂಬಿತ್ಯಾದಿ ಮಾಹಿತಿಗಳನ್ನು ನೀಡಿದರು.
ಹನಿ ಫಿಲಂಸ್ ಲಾಂಛನದಲ್ಲಿ ಎನ್ ಎ ಶಿವಕುಮಾರ್(ಕುಮಾರ್ ನೊಣವಿನಕೆರೆ) ನಿರ್ಮಿಸಿರುವ, ಆಯುರ್ ನಿರ್ದೇಶಿಸಿರುವ ಹಾಗೂ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗಿದ್ದ ಜನಪ್ರಿಯ ಧಾರಾವಾಹಿ "ಸೀತಾರಾಮ" ಸೀರಿಯಲ್ ನ ಮೂಲಕ ನೋಡುಗರ ಮನ ಗೆದ್ದಿದ್ದ ಬೇಬಿ ರೀತು ಸಿಂಗ್ ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು "ಭಜರಂಗಿ ೨" ಚಿತ್ರದ ಖ್ಯಾತಿಯ ಚೆಲುವರಾಜ್ ಹಾಗು ಸಂಭ್ರಮಶ್ರೀ ನಾಯಕ - ನಾಯಕಿಯಾಗಿ ಅಭಿನಯಿಸಿರುವ "ನನ್ನ ಮಗಳೇ ಸೂಪರ್ ಸ್ಟಾರ್" ಚಿತ್ರದ ಟೀಸರ್ ಹಾಗೂ ಹಾಡುಗಳ ಅನಾವರಣ ಸಮಾರಂಭ ಇತ್ತೀಚೆಗೆ ನೆರವೇರಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಡಾ||ಜಯಮಾಲ, ಕನ್ನಡ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ, ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ ಟೀಸರ್ ಅನಾವರಣ ಮಾಡಿದರು. ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಸುಂದರರಾಜ್, ಸಾಹಿತಿ ಬಿ.ಆರ್ ಲಕ್ಷ್ಮಣರಾವ್ ಮತ್ತು ಪರಿಸರ ಪ್ರೇಮಿ ರೇವತಿ ಕಾಮತ್ ಹಾಡುಗಳನ್ನು ಬಿಡುಗಡೆಗೊಳಿಸಿದರು. ಹಾಡುಗಳು ಸಿರಿ ಮ್ಯೂಸಿಕ್ ನಲ್ಲಿ ಲಭ್ಯವಿದೆ. ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿದ ನಂತರ ಮಾತನಾಡಿದ ಗಣ್ಯರು ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ನಾನು ಮೂಲತಃ ಸಂಕಲನಕಾರ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಾನೇ ಬರೆದಿದ್ದೇನೆ. ಅಪ್ಪ - ಅಮ್ಮನಿಗೆ ತಮ್ಮ ಮಕ್ಕಳು ಸೂಪರ್ ಸ್ಟಾರ್ ಆಗಬೇಕೆಂಬ ಕನಸು. ಜೊತೆಗೆ ತಾವು ಅಂದುಕೊಂಡಂತೆ ಅವರು ಇರಬೇಕು ಎಂಬ ಆಸೆ. ಅದರಲ್ಲೂ ಈ ಸ್ವಭಾವ ತಾಯಿಗೆ ಸ್ವಲ್ಪ ಹೆಚ್ಚು. ಆದರೆ ಮಕ್ಕಳಿಗೂ ಅವರದೇ ಆಸೆ ಇರುತ್ತದೆ. ನಿಮ್ಮ ಆಸೆಯನ್ನು ಅವರ ಮೇಲೆ ಬಲವಂತವಾಗಿ ಅವರ ಮೇಲೆ ಹೇರಬೇಡಿ. ಅದರಿಂದ ಮಕ್ಕಳು ಏನೆಲ್ಲಾ ತೊಂದರೆ ಅನುಭವಿಸುತ್ತಾರೆ ಎಂಬ ಅಂಶವೇ ಈ ಚಿತ್ರದ ಕಥಾಹಂದರ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಬಿ.ಆರ್.ಲಕ್ಷ್ಮಣರಾವ್ ಅವರೆ ಮೂರು ಹಾಡುಗಳನ್ನು ಬರೆದಿದ್ದಾರೆ. ಕೆವಿನ್ ಸಂಗೀತ ನೀಡಿದ್ದಾರೆ ಎಂದು ನಿರ್ದೇಶಕ ಆಯುರ್ ತಿಳಿಸ ಹದಿನೈದು ವರ್ಷಗಳ ಹಿಂದೆ ನಾನು "ಮಹಾಭಾರತ" ಧಾರಾವಾಹಿಯಲ್ಲಿ ದುರ್ಯೋಧನನ ಪಾತ್ರ ಮಾಡಿದ್ದೆ. ಆಗ ನನಗೆ ಮೇಕಪ್ ಮಾಡಿದ್ದೆ ಕುಮಾರ್ ಅವರು. ಈವರೆಗೂ ವಿಲನ್ ಪಾತ್ರಗಳಲ್ಲಿ ಗುರುತಿಸಿಕೊಳ್ಳುತ್ತಿದ್ದ ನಾನು ಈ ಚಿತ್ರದ ಮೂಲಕ ನಾಯಕನಾಗಿದ್ದೇನೆ ಹಾಗೂ ಈವರೆಗೂ ಮಾಡಿರದ ಪಾತ್ರ ಮಾಡಿದ್ದೇನೆ ಎಂದರು ನಟ ಚಲುವರಾಜ್. ನಿರ್ದೇಶಕರು ಹೇಳಿದ ಹಾಗೆ ಪೋಷಕರು ಹಾಗೂ ಮಕ್ಕಳು ನೋಡಲೇ ಬೇಕಾದ ಚಿತ್ರವಿದು. ನಾನು ಈ ಚಿತ್ರದ ನಾಯಕಿ. ಬೇಬಿ ರೀತುಸಿಂಗ್ ತಾಯಿಯಾಗಿ ಅಭಿನಯಿಸಿದ್ದೇನೆ ಎಂದು ನಟಿ ಸಂಭ್ರಮಶ್ರೀ ಹೇಳಿದರು. ನಮ್ಮ ಹನಿ ಫಿಲಂ ಮೇಕರ್ಸ್ ನಿರ್ಮಾಣದ ಮೂರನೇ ಚಿತ್ರವಿದು. ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಹೊರಟಿರುವ ಈ ಚಿತ್ರದ ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಚಿತ್ರವನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವ ಸಿದ್ದತೆ ನಡೆಸಿದ್ದೇನೆ ಎಂದರು ನಿರ್ಮಾಪಕ ಎನ್ ಎ ಶಿವಕುಮಾರ್. ಸಂಗೀತ ನಿರ್ದೇಶಕ ಕೆವಿನ್ ಹಾಡುಗಳ ಬಗ್ಗೆ ವಿವರಣೆ ನೀಡಿದರು. ನಾನು ಈ ಚಿತ್ರದ ಮೂರು ಹಾಡುಗಳನ್ನು ಬರೆದಿದ್ದೇನೆ. ಕೆವಿನ್ ಉತ್ತಮವಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ ಎಂದು ಸಾಹಿತಿ ಬಿ.ಆರ್ ಲಕ್ಷ್ಮಣ್ ರಾವ್ ಹೇಳಿದರು. ಛಾಯಾಗ್ರಾಹಕರಾದ ರಾಘವೇಂದ್ರ ರೆಡ್ಡಿ, ಸಚಿನ್ ಹಾಗೂ ಸಂಕಲನಕಾರ ರಾಘವ ಅರ್ಜುನ್ ಡೋಣಿ ಹಾಗೂ ಹಿರಿಯ ಪ್ರಸಾದನ ಕಲಾವಿದರಾದ ರಾಮಕೃಷ್ಣ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. #nannamagalesuperstar#Cheluvaraj #kannada#trailers#abcnewskarnataka#photos
*ಶೀರ್ಷಿಕೆ ಅನಾವರಣ ಮಾಡಿ "ಕಿರುನಗೆ" ಬೀರಿದ ಚಿತ್ರತಂಡ** .
ಹರ್ಷಿಣಿ ಸಿನಿಮಾಸ್ ಲಾಂಛನದಲ್ಲಿ ಲತಾಶ್ರೀ ಡಿ.ಸಿ ಅವರು ನಿರ್ಮಿಸಿರುವ ಹಾಗೂ ಅಶೋಕ್ ಕಡಬ ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಚಿತ್ರಕ್ಕೆ "ಕಿರುನಗೆ" ಎಂದು ಹೆಸರಿಡಲಾಗಿದೆ. ಡಾ||ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು ಹಾಗೂ ಅಳಿಯ ಎಸ್ ಎ ಗೋವಿಂದರಾಜು ಅವರು ಶೀರ್ಷಿಕೆ ಅನಾವರಣ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್.ಕೆ ವಿಶ್ವನಾಥ್, ನಟ ಷಣ್ಮುಖ ಹಾಗೂ ಯುವ ಕಾಂಗ್ರೆಸ್ ಮುಖಂಡ ಅಶೋಕ್ ಭೀಮಾನಾಯಕ್ ಅವರು ಸಹ ಸಮಾರಂಭಕ್ಕೆ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
"ಕಿರುನಗೆ" ನನ್ನ ನಿರ್ದೇಶನದ ಆರನೇ ಚಿತ್ರ. ಇದೊಂದು ಲವ್ ಜಾನರ್ ನ ಚಿತ್ರ. ಆದರೆ ತಂದೆ - ತಾಯಿಗಾಗಿ ಮಕ್ಕಳೇ ಪ್ರೀತಿಯನ್ನು ತ್ಯಾಗ ಮಾಡುವ ಕಥಾಹಂದರ ಹೊಂದಿರುವ ಚಿತ್ರವೂ ಹೌದು. ಚಿತ್ರದ ಮೊದಲರ್ಧದ ಕಥೆ ಮದುವೆಮನೆಯಲ್ಲೇ ನಡೆಯುತ್ತದೆ. ನಿರ್ಮಾಪಕಿ ಲತಾಶ್ರೀ ಅವರೆ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಬೆಂಗಳೂರು, ಉಡುಪಿ, ವಿಜಾಪುರ, ಮುಂಬೈ ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ನೂತನ ಪ್ರತಿಭೆಗಳಾದ ವಿಜಯ್ ರಾಜ್ ಹಾಗೂ ಖುಷ್ಬು ಈ ಚಿತ್ರದ ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟಿ ಶೃತಿ, ಖ್ಯಾತ ನಟ ಅನುಪಮ್ ಖೇರ್ ಸಹೋದರ ರಾಜು ಖೇರ್, ಸಂಗೀತ, ಮೂಗು ಸುರೇಶ್, ಸುಧಾ ಬೆಳವಾಡಿ, ಮಂಜುನಾಥ್ ಹೆಗ್ಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ. ಶ್ರೀಶ ಅವರು ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎ.ಆರ್ ರೆಹಮಾನ್ ಅವರ ಬಳಿ ಕಾರ್ಯ ನಿರ್ವಹಿಸಿರುವ ಸುಕೃತ್ ಸಂಗೀತ ನಿರ್ದೇಶನ ಹಾಗೂ ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿರುವ ಈ ಚಿತ್ರದ ಹಾಡುಗಳನ್ನು ನಾಗಾರ್ಜುನ ಶರ್ಮ ಬರೆದಿದ್ದಾರೆ ಎಂದು ನಿರ್ದೇಶಕ ಅಶೋಕ್ ಕಡಬ "ಕಿರುನಗೆ" ಕುರಿತು ಮಾಹಿತಿ ನೀಡಿದರು.
ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅವರ ಆಶೀರ್ವಾದ ಹಾಗೂ ನನ್ನ ತಂದೆ ಮಾಜಿ ಶಾಸಕರಾದ ದೇವಾನಂದ್ ಚವ್ಹಾಣ್ ಅವರ ಸಹಕಾರದಿಂದ ಈ ಚಿತ್ರ ನಿರ್ಮಾಣವಾಗಿದೆ. ನಿರ್ದೇಶಕರು ಹೇಳಿದ ಹಾಗೆ ಇದೊಂದು ಲವ್ ಜಾನರ್ ನ ಚಿತ್ರವಾಗಿದರೂ, ಪ್ರೀತಿಯನ್ನು ನಮ್ಮ ಚಿತ್ರದಲ್ಲಿ ತೋರಿಸಿರುವ ರೀತಿಯೇ ಬೇರೆ. ಹೆಣ್ಣುಮಗಳೊಬ್ಬಳ ಮೇಲೆ ಈ ಚಿತ್ರದ ಕಥೆ ಸಾಗುತ್ತದೆ. ಹಾಗಂತ ಇದು ಮಹಿಳಾ ಪ್ರಧಾನ ಚಿತ್ರವಲ್ಲ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಉತ್ತಮ ಮನೋರಂಜನೆಯುಳ್ಳ ಚಿತ್ರ ಎಂದು ನಿರ್ಮಾಪಕಿ ಹಾಗೂ ಕಥೆ ಬರೆದಿರುವ ಲತಾಶ್ರೀ ಡಿ.ಸಿ ತಿಳಿಸಿದರು.
ಚಿತ್ರದ ಕಥೆ ಬಹಳ ಚಿನ್ನಾಗಿದೆ. ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ನನಗೆ ನಾಯಕನಾಗಿ ಇದು ಮೊದಲ ಚಿತ್ರ ಎಂದು ನಾಯಕ ವಿಜಯ್ ರಾಜ್ ಹೇಳಿದರು.
ಅವಕಾಶ ನೀಡಿದವರಿಗೆ ಧನ್ಯವಾದ ತಿಳಿಸಿ ತಮ್ಮ ಪಾತ್ರದ ಬಗ್ಗೆ ನಾಯಕಿ ಖುಷ್ಬು ಹಾಗೂ ಪ್ರಮುಖಪಾತ್ರಧಾರಿ ಶ್ರೀಶ ಮಾಹಿತಿ ನೀಡಿದರು.
ABC NEWS KARNATAKA
ಇದನ್ನು ಬಿಡಿಸಿ.. ❓❓❓
"ಸುತ್ತ ಮುತ್ತ ಸುಣ್ಣದ ಗೋಡೆ
ಆಚೆ ಬರಲು ಎಲ್ಲೂ ಬಾಗಿಲಿಲ್ಲ
ನಾನ್ಯಾರು"
ನಾನಾರು ಹೇಳಿ ನೋಡುವ..?
#generalknowledge #kannada #quiz #abcnewskarnataka #riddles
5 hours ago | [YT] | 3
View 1 reply
ABC NEWS KARNATAKA
*'ಕಲರ್ಸ್ ಕನ್ನಡ'ದಿಂದ ಮತ್ತೊಂದು ದೃಶ್ಯ ವೈಭವ: ಜೂನ್ 8ರಿಂದ ಬರ್ತಿದೆ ಹೊಚ್ಚ ಹೊಸ ಕಥೆ 'ಅಗ್ನಿಸಾಕ್ಷಿ'!*
ಕನ್ನಡ ಕಿರುತೆರೆ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದ 'ಅಗ್ನಿಸಾಕ್ಷಿ' ಶೀರ್ಷಿಕೆ ಈಗ ಮತ್ತೆ ಕನ್ನಡಿಗರ ಮನೆಮನ ಬೆಳಗಲು ಸಜ್ಜಾಗಿದೆ. ಕೌಟುಂಬಿಕ ಮನರಂಜನೆಯಲ್ಲಿ ಸದಾ ಮುಂಚೂಣಿಯಲ್ಲಿರುವ 'ಕಲರ್ಸ್ ಕನ್ನಡ' ವಾಹಿನಿಯು ಇದೇ ಜೂನ್ 8ರಿಂದ ಸಂಜೆ 7:00 ಗಂಟೆಯ ಪ್ರೈಮ್ ಟೈಮ್ ಸ್ಲಾಟ್ನಲ್ಲಿ ಹೊಚ್ಚ ಹೊಸ ಕಥಾಹಂದರ ಹೊಂದಿರುವ 'ಅಗ್ನಿಸಾಕ್ಷಿ' ಧಾರಾವಾಹಿಯನ್ನು ಹೊತ್ತು ತರುತ್ತಿದೆ.
ಇದು ಹಳೆಯ ಧಾರಾವಾಹಿಯ ಮುಂದುವರಿದ ಭಾಗವಲ್ಲ; ಬದಲಿಗೆ ಇಂದಿನ ತಲೆಮಾರಿನ ಯುವಮನಸ್ಸುಗಳ ಅಹಂಕಾರ ಮತ್ತು ಸ್ವಾಭಿಮಾನದ ನಡುವೆ ನಡೆಯುವ ಹೈ-ವೋಲ್ಟೇಜ್ ಕಥೆಯಾಗಿದೆ.
"ಇಬ್ಬರು ಕಣ್ಣುಂದೆ ಬಂದ್ರೆ ಸಹಿಸೋಕಾಗಲ್ಲ, ಕಾಣದೇ ಹೋದ್ರೆ ಬದುಕೋಕೇ ಆಗಲ್ಲ!" ಎಂಬ ವಿಶಿಷ್ಟ ಪ್ರೇಮಬಂಧದ ಎಳೆ ಈ ಕಥೆಯಲ್ಲಿದೆ.
ಪಾತ್ರಗಳ ಪರಿಚಯ ಮತ್ತು ಹಿನ್ನೆಲೆ:
ಈ ಬಾರಿಯ 'ಅಗ್ನಿಸಾಕ್ಷಿ' ಸಂಪೂರ್ಣವಾಗಿ ವಿಭಿನ್ನ ವ್ಯಕ್ತಿತ್ವಗಳ ಎರಡು ಧ್ರುವಗಳ ನಡುವಿನ ಸಂಘರ್ಷ. ಪೋಸ್ಟರ್ಗಳಲ್ಲಿ ಅನಾವರಣಗೊಂಡಿರುವಂತೆ ಪಾತ್ರಗಳ ಧೀಮಂತಿಕೆ ಹೀಗಿದೆ:
• ಅಗ್ನಿ (ನಾಯಕ): ಅವನು ಎಲ್ಲವನ್ನೂ ಧ್ವಂಸ ಮಾಡೋ ಬಿರುಗಾಳಿ ಅಷ್ಟೇ ಅಲ್ಲ, ತನ್ನ ಅಹಂಗೆ ಎದುರು ನಿಂತರೆ 'ಅವನು ಎಲ್ಲವನ್ನೂ ಸುಟ್ಟು ಹಾಕೋ ಬೆಂಕಿ' ಸಂಪತ್ತು ಮತ್ತು ವಿಪರೀತ ಗರ್ವದ ಹಿನ್ನೆಲೆಯುಳ್ಳ ಈ ಹಠಮಾರಿ ಉದ್ಯಮಿಯ ಪಾತ್ರಕ್ಕೆ ಗಾಯಕ ಹಾಗೂ ನಟ ಶಮಂತ್ ಬ್ರೋ ಗೌಡ ಜೀವ ತುಂಬಿದ್ದಾರೆ.
• ಸಾಕ್ಷಿ (ನಾಯಕಿ): ಅವಳು ಎಲ್ಲವನ್ನೂ ತಂಪಾಗಿಸೋ ತಂಗಾಳಿ ಆದರೆ ಅನ್ಯಾಯದ ವಿರುದ್ಧ ನಿಲ್ಲುವಾಗ, ಕತ್ತಲ ಹಾದಿಗೆ 'ಅವಳು ದಾರಿ ತೋರಿಸೋ ಬೆಳಕು'. ಎಷ್ಟೇ ಕಷ್ಟ ಬಂದರೂ ತನ್ನ ಆತ್ಮಗೌರವವನ್ನು ಬಿಟ್ಟುಕೊಡದ ಈ ಧೀಮಂತ ಯುವತಿಯ ಪಾತ್ರದಲ್ಲಿ ನಟಿ ವರ್ಷಿಣಿ ಗೌಡ ನಟಿಸುತ್ತಿದ್ದಾರೆ.
ಹಸೆಮಣೆಯಲ್ಲಿ ಇವರಿಬ್ಬರ ಹಣೆಬರಹ ಹೇಗೆ ಒಂದಾಗಲಿದೆ, ಈ ಬೆಂಕಿ ಮತ್ತು ತಂಗಾಳಿಯ ನಡುವಿನ ಅಹಂ ಹಾಗೂ ಆದರ್ಶಗಳ ಹೋರಾಟ ಎತ್ತ ಸಾಗಲಿದೆ ಎನ್ನುವುದೇ ಇಡೀ ಸರಣಿಯ ಜೀವಾಳ.
ತಾಂತ್ರಿಕ ವರ್ಗ ಮತ್ತು ಪ್ರಸಾರದ ವಿವರ:
ಈ ಹಿಂದಿನ ಸೂಪರ್ ಹಿಟ್ ‘ಅಗ್ನಿಸಾಕ್ಷಿ ‘ ಧಾರಾವಾಹಿಯ ಬರಹಗಾರರಾದ ಹ್ಯಾರಿಸ್ ಅವರೇ ಈ ಕಥೆಯನ್ನು ಬರೆಯುತ್ತಿದ್ದಾರೆ. ಇನ್ನು ಈ ಧಾರಾವಾಹಿಯು ಅತ್ಯುನ್ನತ ಮೇಕಿಂಗ್ ಹಾಗೂ ಶ್ರೀಮಂತ ದೃಶ್ಯವೈಭವದಿಂದ ಕೂಡಿರಲಿದೆ. ಬಾಂದವ್ಯಗಳ ಹೊಸ ಆಯಾಮವನ್ನು ಪರಿಚಯಿಸಲಿರುವ 'ಅಗ್ನಿಸಾಕ್ಷಿ' ಜೂನ್ 8 ರಿಂದ ಇದೇ ಸೋಮವಾರದಿಂದ ಪ್ರತಿ ಸಂಜೆ 7 ಗಂಟೆಗೆ ನಿಮ್ಮ ನೆಚ್ಚಿನ 'ಕಲರ್ಸ್ ಕನ್ನಡ' ವಾಹಿನಿಯಲ್ಲಿ ಪ್ರಸಾರವಾಗಲಿದೆ. ವೀಕ್ಷಕರು ಎಂದಿನಂತೆ ಈ ಹೊಸ ಪ್ರಯತ್ನಕ್ಕೂ ಪ್ರೀತಿ ಮತ್ತು ಬೆಂಬಲ ನೀಡಬೇಕಾಗಿ ವಿನಂತಿ.
ಪ್ರಶಾಂತ್ ಡಿ.ಪಿ ನಿರ್ದೇಶಿಸುತ್ತಿರುವ ಈ ಧಾರಾವಾಹಿಯ ಅಗ್ನಿ ಪಾತ್ರದಲ್ಲಿ ಶಮಂತ್ ಗೌಡ(ಬ್ರೋ ಗೌಡ), ಸಾಕ್ಷಿ ಪಾತ್ರದಲ್ಲಿ ವರ್ಷಿಣಿ ನಟಿಸುತ್ತಿದ್ದಾರೆ. ಅಕ್ಷತ, ಲೇಖನ, ಶ್ರೀಕಾಂತ್ ಮುಂತಾದವರ ತಾರಾಬಳಗವಿರುವ "ಅಗ್ನಿಸಾಕ್ಷಿ" ಧಾರಾವಾಹಿಯಲ್ಲಿ ಬಹಳ ದಿನಗಳ ನಂತರ ನಟ ಮಿಥುನ್ ತೇಜಸ್ವಿ ಅಭಿನಯಿಸುತ್ತಿದ್ದಾರೆ. #agnishakshi #kannadaserial #trailers #trending #abcnewskarnataka #shamanthbrogowda #shakshi
1 day ago | [YT] | 21
View 0 replies
ABC NEWS KARNATAKA
*ಟ್ರೈಲರ್ ಹಾಗೂ ವಿಡಿಯೋ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿರುವ "ಪಂಚಮುಖಿ" ಜೂನ್ 26 ರಂದು ಬಿಡುಗಡೆ* .
ಎಸ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಚಂದ್ರು ಆಚಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆಗೆ ನಾಯಕನಾಗಿಯೂ ನಟಿಸಿರುವ "ಪಂಚಮುಖಿ" ಚಿತ್ರದ ಟ್ರೈಲರ್ ಹಾಗೂ ವಿಡಿಯೋ ಹಾಡುಗಳು ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಚಿತ್ರ ಜೂನ್ 26 ರಂದು ತೆರೆಗೆ ಬರುತ್ತಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
ಕೆಲವು ಚಿತ್ರಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿರುವ ನನಗೆ ಇದು ಮೊದಲ ನಿರ್ದೇಶನದ ಚಿತ್ರ. ಹಾರಾರ್ ಜೊತೆಗೆ ನೋಡುಗರಿಗೆ ಬೇಕಾದ ಎಲ್ಲಾ ಮನೋರಂಜನೆಯ ಅಂಶಗಳು ಇರುವ ಈ ಚಿತ್ರದಲ್ಲಿ ನಾನೇ ನಾಯಕನಾಗೂ ನಟಿಸಿದ್ದೇನೆ. ಸ್ಪೂರ್ತಿ ಮನೋಹರ್ ಈ ಚಿತ್ರದ ನಾಯಕಿ. ಕಳೆದ ಕೆಲವು ವರ್ಷಗಳ ಹಿಂದೆಯೇ ಈ ಚಿತ್ರಕ್ಕೆ ಚಾಲನೆ ದೊರೆಕಿತ್ತು. ಕಾರಣಾಂತರದಿಂದ ಬಿಡುಗಡೆ ಸ್ವಲ್ಪ ವಿಳಂಬವಾಗಿದೆ. ಇದೊಂದು ಕಡಿಮೆ ಬಜೆಟ್ ನ ಚಿತ್ರ. ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ನಿರ್ಮಾಣವಾಗಿರುವ ಚಿತ್ರವೂ ಹೌದು. ಈ ಚಿತ್ರದ ಬಹುತೇಕ ತಂತ್ರಜ್ಞರು ಹಾಗೂ ಕಲಾವಿದರು ಯಾವುದೇ ಸಂಭಾವನೆ ಪಡೆಯದೆ ಈ ಚಿತ್ರದಲ್ಲಿ ನಟಿಸಿದ್ದಾರೆ. ಅವರೆಲ್ಲರಿಗೂ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ. ಚಿತ್ರದಲ್ಲಿ ಅರೋನ್ ಕಾರ್ತಿಕ್ ವೆಂಕಟೇಶ್ ಸಂಗೀತ ಸಂಯೋಜಿಸಿರುವ 4 ಹಾಡುಗಳಿದೆ. ಖಿಚಿತ್ರ ಜೂನ್ 26 ಸಹಕಾರದಿಂದ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಪ್ರವೀಣ್ ಪೂಜಾರಿ ನಾಡ ಛಾಯಾಗ್ರಹಣ ಹಾಗೂ ಅರವಿಂದ್ ಮಲ್ಲು ಅವರ ಸಂಕಲನ ಚಿತ್ರಕ್ಕೆ ಪೂರಕವಾಗಿದೆ. ಚಿತ್ರ ಜೂನ್ 26 ರಂದು ತೆರೆಗೆ ಬರುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ದೇಶಕ ಹಾಗೂ ನಾಯಕ ಚಂದ್ರು ಆಚಾರ್ ತಿಳಿಸಿದರು.
ಈ ಚಿತ್ರದ ಕಥೆ ಚೆನ್ನಾಗಿದೆ. ನನ್ನದು ಇದು ಮೊದಲ ಚಿತ್ರ ಎಂದು ನಾಯಕಿ ಸ್ಪೂರ್ತಿ ಮನೋಹರ್ ಹೇಳಿದರು. ಹಾಡುಗಳ ಕುರಿತು ಸಂಗೀತ ನಿರ್ದೇಶಕ ಅರೋನ್ ಕಾರ್ತಿಕ್ ವೆಂಕಟೇಶ್ ಮಾಹಿತಿ ನೀಡಿದರು. ಸಂಕಲನಕಾರ ಅರವಿಂದ್ ಜೆ.ಪಿ ಮಲ್ಲು, ಕಲಾವಿದರಾದ ಪವನ್, ತೇಜಸ್, ಪೃಥ್ವಿ ಹಾಗೂ ವಿತರಕ ರಾಜು ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
1 day ago | [YT] | 12
View 0 replies
ABC NEWS KARNATAKA
*ಹೊಂಬಾಳೆ ಮ್ಯೂಸಿಕ್ ನಲ್ಲಿ "ಭಾವಾಂತರ"ದ ಹಾಡುಗಳು* .
*ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಕಾರ್ತಿಕ್ ಶರ್ಮ ಚೊಚ್ಚಲ ನಿರ್ದೇಶನದ ಈ ಚಿತ್ರ* .
"ವೀರ ಕನ್ನಡಿಗ", " ಮ್ಯಾಜಿಕ್ ಅಜ್ಜಿ" ಸೇರಿದಂತೆ ಮೂವತ್ತಕ್ಕೂ ಅಧಿಕ ಚಿತ್ರಗಳಲ್ಲಿ ಬಾಲನಟನಾಗಿ ಗುರುತಿಸಿಕೊಂಡಿದ್ದ ಕಾರ್ತಿಕ್ ಶರ್ಮ, ಸಂಗೀತ ನಿರ್ದೇಶಕನಾಗಿಯೂ ಜನಪ್ರಿಯ. ನೂರಕ್ಕೂ ಅಧಿಕ ಧಾರಾವಾಹಿ ಹಾಗೂ ಟಿವಿ ಶೋ ಗಳಿಗೂ ಸಂಗೀತ ನೀಡಿರುವ ಕಾರ್ತಿಕ್ ಶರ್ಮ ಪ್ರಸ್ತುತ "ಭಾವಾಂತರ" ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ನೈಜ ಘಟನೆ ಆಧರಿಸಿರುವ ಈ ಚಿತ್ರಕ್ಕೆ ಕಾರ್ತಿಕ್ ಶರ್ಮ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಸಂಗೀತ ನಿರ್ದೇಶನದ ಜೊತೆಗೆ ಪ್ರಮುಖಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿರುವ ಈ ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಇತ್ತೀಚಿಗೆ ಟೀಸರ್ ಬಿಡುಗಡೆಯಾಗಿದ್ದು, ಆಡಿಯೋ ಹಕ್ಕನ್ನು ಹೊಂಬಾಳೆ ಮ್ಯೂಸಿಕ್ ಸಂಸ್ಥೆ ಪಡೆದುಕೊಂಡಿದೆ.
ಬಾಲನಟನಾಗಿ ಹಾಗೂ ಸಂಗೀತ ಸಂಯೋಜಕನಾಗಿ ಪರಿಚಿತನಾಗಿದ್ದ ನಾನು, "ಭಾವಾಂತರ" ಸಿನಿಮಾ ಮೂಲಕ ನಿರ್ದೇಶಕನಾಗಿದ್ದೇನೆ. ನನ್ನ ಆರಂಭದ ದಿನಗಳಿಂದಲೂ ತಾವು ನೀಡುತ್ತಿರುವ ಪ್ರೋತ್ಸಾಹ ಈಗಲೂ ಮುಂದುವರೆಯಲಿ. "ಭಾವಾಂತರ", ಇದೊಂದು ನೈಜ ಘಟನೆ ಆಧಾರಿತ ಚಿತ್ರ. ನನಗೆ ತಿಳಿದ ಹಾಗೆ ದಕ್ಷಿಣ ಭಾರತದಲ್ಲೇ ಈ ರೀತಿಯ ಕಥೆ ಈವರೆಗೂ ಬಂದಿಲ್ಲ. ಅಂತಹ ಅಪರೂಪದ ಕಥಾಹಂದರ ಹೊಂದಿರುವ ಚಿತ್ರವಿದು. ಚಿತ್ರದಲ್ಲಿ ನಾನೇ ಸಂಗೀತ ಸಂಯೋಜಿಸಿರುವ ಐದು ಹಾಡುಗಳಿದ್ದು, ಹೆಸರಾಂತ ಹೊಂಬಾಳೆ ಮ್ಯೂಸಿಕ್ ಸಂಸ್ಥೆ ಆಡಿಯೋ ಹಕ್ಕು ಪಡೆದುಕೊಂಡಿದೆ. ಟೀಸರ್ ಕೂಡ ಬಿಡುಗಡೆಯಾಗಿದ್ದು, ನಿರೀಕ್ಷೆಗೂ ಮೀರಿ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಉಡುಪಿ, ಬೆಂಗಳೂರು ಹಾಗೂ ತಮಿಳುನಾಡಿನಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಆದಷ್ಟು ಬೇಗ ಬಿಡುಗಡೆಯಾಗಲಿದೆ. ನನ್ನ ಜೊತೆಗೆ ತನ್ವಿ ರಾವ್ ಅವರು ಸಹ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಣವ್ ಶ್ರೀಧರ್, ಶ್ರೀವೈಷ್ಣವ್, ವೇದ ರಾವ್, ಭಾನು ಮುಂತಾದವರು ತಾರಾಬಳಗದಲ್ಲಿದ್ದಾರೆ. ಕಿಕ್ ಮೀಡಿಯಾ ಸಂಸ್ಥೆ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸಾಗರ್ ಅತ್ದ್ಕರ್ ಛಾಯಾಗ್ರಹಣ ಹಾಗೂ ಆಶೀಷ್ ಹುಲಕುಂದ್ ಸಂಕಲನವಿದೆ ಎಂದು ನಿರ್ದೇಶಕ ಹಾಗೂ ನಟ ಕಾರ್ತಿಕ್ ಶರ್ಮ ತಿಳಿಸಿದ್ದಾರೆ.#bhavantaramusicalbum #photos #trailers #abcnewskarnataka #movies #HombaleFilms @HombaleFilms
5 days ago | [YT] | 7
View 0 replies
ABC NEWS KARNATAKA
"*ಕೊರಗಜ್ಜ*"ಚಿತ್ರ: *ನಿರ್ದೇಶಕ ಸುಧೀರ್ ಅತ್ತಾವರ್ ಗೆ ಐಶಾರಾಮಿ ಫ್ಲಾಟ್ ಗಿಫ್ಟ್ ನೀಡಿದ ನಿರ್ಮಾಪಕ*!
ಕಳೆದ ಜನವರಿ ತಿಂಗಳಲ್ಲಿ ಬಿಡುಗಡೆಗೆ ಸರ್ವ ಸನ್ನದ್ದವಾಗಿ, ಝೀ ಮ್ಯೂಸಿಕ್ ಬ್ಯಾನರ್ ಅಡಿ ಭರ್ಜರಿ ಆಡಿಯೋ ಲಾಂಚ್ ಕೂಡಾ ಮಾಡಿದ್ದ, ಸುಧೀರ್ ಅತ್ತಾವರ್ ನಿರ್ದೇಶನದ *ಕೊರಗಜ್ಜ* ಚಿತ್ರವನ್ನು ,ಕೊನೇ ಗಳಿಗೆಯಲ್ಲಿ ಧಿಡೀರ್ ಎಂದು ಚಿತ್ರವು 3D ಯಾಗಿ ಮಾರ್ಪಡಿಸುವ ದೊಡ್ಡ ಸುದ್ದಿ ಕೊಟ್ಟು
ಬಿಡುಗಡೆಯನ್ನು ಮುಂದೂಡಿತು.
ಈಗ ಕೊಚ್ಚಿ ಮತ್ತು ಚೆನ್ನೈ ನಲ್ಲಿ ಚಿತ್ರದ 3ಡಿ ಕೆಲಸ ಭರದಿಂದ ಸಾಗುತ್ತಿದೆ. ಚಿತ್ರವು ತಾಂತ್ರಿಕವಾಗಿ ಯಾವುದೇ ಅಂತರಾಷ್ಟ್ರೀಯ ಮಟ್ಟದ ಸಿನಿಮಾಗೂ ಕಡಿಮೆ ಇಲ್ಲ ಎನ್ನುವ ಹಾಗೆ ಚಿತ್ರ ಮೂಡಿ ಬರುತ್ತಿದೆ ಎನ್ನುವ ವಿಷಯವನ್ನು ನಿರ್ದೇಶಕ ಸುಧೀರ್ ಅತ್ತಾವರ್ ತಿಳಿಸಿದರು. ಇದಕ್ಕೆ ಪೂರಕವಾಗಿ ಅಂತಾರಾಷ್ಟ್ರೀಯ ವಿತರಣಾ ಸಂಸ್ಥೆಗಳು ಆಸಕ್ತಿ ತೋರಿಸುತ್ತಿರುವುದರಿಂದ ಖುಷಿ ಪಟ್ಟಿರುವ ನಿರ್ಮಾಪಕ ತ್ರಿವಿಕ್ರಮ ಸಪಲ್ಯರವರು, ಕಳೆದ ಮೂರು ವರ್ಷಗಳಿಂದ ಚಿತ್ರದ ಈ ಮಟ್ಟದ ಬೆಳವಣಿಗೆಗೆ ಶ್ರಮಿಸುತ್ತಿರುವ ನಿರ್ದೇಶಕ ಸುಧೀರ್ ಅತ್ತಾವರ್ ಗೆ "ಶೋಭ ಡೆವಲಪರ್ಸ್" ನ ಮೂರು ಬೆಡ್ ರೂಮಿನ,ಮಾರ್ಕೆಟ್ ವೇಲ್ಯು ಸುಮಾರು ರೂ1.75 ಕೋಟಿ ಬೆಲೆಬಾಳುವ ಐಷಾರಾಮಿ ಫ್ಲಾಟ್ ನ್ನು ಗಿಫ್ಟ್ ಆಗಿ ನೀಡಿ, ಚಿತ್ರದ ಮೇಲೆ ಮತ್ತು ನಿರ್ದೇಶಕರ ಮೇಲೆ ತಮಗಿರುವ ಅಭಿಮಾನವನ್ನು ತೋರಿಸಿರುತ್ತಾರೆ.ಈಗಾಗಲೇ ಆರು ಭಾಷೆಗಳಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರಕ್ಕೆ ಅಸ್ಸಾಮಿ, ಚೈನಿಸ್ ಮತ್ತು ಇಂಗ್ಲಿಷ್ ಅವತರಣಿಕೆ ಗಳೂ ಸೇರ್ಪಡೆಗೊಂಡಿದೆ ಎಂಬವಿಚಾರ ಕೂಡಾ ತಿಳಿಸಿದರು.
ಶುಕ್ರವಾರ ಹೊಸ ಫ್ಲಾಟ್ ನ ಗ್ರಹ ಪ್ರವೇಶ ನಡೆಯಿತು.ಬಳಿಕ ಪರಮಶ್ರೇಷ್ಠ ಶ್ರೀ ಸತ್ಯನಾರಾಯಣ ದೇವರ ವ್ರತ ಪೂಜೆ ಕೂಡಾ ನಡೆದು, ಭಾನುವಾರದಂದು ಬೆಂಗಳೂರಿಗೆ ತುಸು ಅಪರೂಪ ಅನ್ನಬಹುದಾದ ಕೊರಗಜ್ಜ ದೈವದ ಅಗೆಲು ಸೇವೆ ಯನ್ನು ಪತ್ರಕರ್ತರ ಮತ್ತು ಬಂದ ಅತಿಥಿಗಳ ಸಮ್ಮುಖದಲ್ಲಿ ನಡೆಸಲಾಯ್ತು.
ಹಿರಿಯ ನಟಿ ಭವ್ಯರವರು ಕೊರಗಜ್ಜ ದೈವದ ಅಗೆಲು ಸೇವೆಗೆ ಇಷ್ಟವಾದ ಕುಚಲಕ್ಕಿ ಅನ್ಮ, ಹುರುಳಿ-ಬಸಳೆ ಸಾರು, ಬಂಗುಡೆ ಮೀನಿನ ಗಸಿ,ಮಿಡಿ ಮಾವಿನ ಉಪ್ಪಿನಕಾಯ್,ಕೋಳಿ ಸುಕ್ಕ,ಕಳ್ಳು ಮೊದಲಾದ ಭಕ್ಷ್ಯಗಳನ್ನು
ಗೆರಸೆಯಲ್ಲಿಟ್ಟು ಸಮರ್ಪಿಸಿದರು.
ನಿರ್ದೇಶಕರ ಧರ್ಮ ಪತ್ನಿ ರಾಜಶ್ರೀ ಸುಧೀರ್ ಎಲ್ಲಾ ಭಕ್ಷ್ಯಗಳನ್ನು ಅಣಿಗೊಳಿಸಿದರೆ, ನಿರ್ಮಾಪಕ ತ್ರಿವಿಕ್ರಮ ಸಪಲ್ಯ, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಭವ್ಯರಿಗೆ ಸಾಥ್ ನೀಡಿದರು.
ನಂತರ ಪತ್ರಿಕಾಗೋಷ್ಟಿ ಯಲ್ಲಿ ಮಾತನಾಡಿದ ನಟಿ ಭವ್ಯರವರು" ಕೊರಗಜ್ಜ ಸಿನಿಮಾವು ನನ್ನನ್ನು ಹೆಚ್ಚು ದೈವಭಕ್ತಳನ್ನಾಗಿಸಿದೆ.ನಾನು ಈ ಚಿತ್ರದ ಎಲ್ಲಾ ಕಾರ್ಯಕ್ರಮಗಳಿಗೂ ಭಾಗಿಯಾಗುತ್ತಾ ಚಿತ್ರತಂಡದ ಅವಿಭಾಜ್ಯ ಅಂಗ ಎನ್ನುವ ರೀತಿಯಲ್ಲಿ ಜೊತೆಗಿದ್ದೇನೆ.
ಚಿತ್ರದಲ್ಲಿ ನಾನು ಕೊರಗಜ್ಜನಿಗೆ ಪ್ರಪ್ರಥಮವಾಗಿ ಅಗೆಲು ಸೇವೆ ನೀಡುವ ರಾಣಿ "ಪಂಜಂದಾಯಿ" ಪಾತ್ರ ವಹಿಸಿದ್ದೆ. ಈಗ ನಿಜ ಜೀವನದಲ್ಲೂ ನಿರ್ದೇಶಕರಿಗೆ ಗಿಫ್ಟ್ ಆಗಿ ದೊರೆತಿರುವ ಹೊಸ ಫ್ಲಾಟ್ ನಲ್ಲಿ ಕೊರಗಜ್ಜನಿಗೆ ಅಗೆಲು ಸೇವೆ ಮಾಡುವಂತಹ ಸೌಭಾಗ್ಯ ನಿರ್ದೇಶಕರು ನನಗೆ ಮಾಡಿ ಕೊಟ್ಟಿದ್ದಾರೆ. ಬಹುಷಃ ನನ್ನಷ್ಟು ಸೌಭಾಗ್ಯ ವಂತೆ ಈ ಚಿತ್ರದಲ್ಲಿ ಯಾರೂ ಇರಲಿಕ್ಕೆ ಸಾಧ್ಯವಿಲ್ಲ ಎಂದರು.
ನಿರ್ಮಾಪಕ ತ್ರಿವಿಕ್ರಮರವರು ಮಾತನಾಡುತ್ತಾ
ಚಿತ್ರವು ಚೈನಿಸ್ ಭಾಷೆಗೂ ಡಬ್ ಆಗುತ್ತಿದೆ ಎನ್ನುವ ಸುದ್ದಿಯನ್ನು ಸಂತೋಷದಿಂದ ಹಂಚಿಕೊಂಡರು.ಹಾಂಕಾಂಗ್ ಮತ್ತು ಬೀಜಿಂಗ್ ನಿಂದ ಹಾಗೂ ಇನ್ನಿತರ ಕಡೆಗಳಿಂದ ಅಂತರಾಷ್ಟ್ರೀಯ ವಿತರಣಾ ಸಂಸ್ಥೆಗಳು ವಿದೇಶಗಳಲ್ಲಿ ಚಿತ್ರ ಬಿಡುಗಡೆ ಗೊಳಿಸಲು ಮುಂದೆ ಬರುತ್ತಿದೆ. ಚಿತ್ರದ ಬಜೆಟ್ 40 ಕೋಟಿ ರುಪಾಯಿ ದಾಟಿದರೂ, ವ್ಯಾವಹಾರಿಕವಾಗಿ ಹೆಚ್ಚು ವಿಶ್ವಾಸ ಮತ್ತು ಖುಷಿ ಹೆಚ್ಚುತ್ತಿರುವ ಈ ಹಿನ್ನೆಯಲ್ಲಿ ಕಳೆದ 3ವರ್ಷಗಳಿಂದ ಈ ಚಿತ್ರಕ್ಕಾಗಿ ಶ್ರಮಿಸುತ್ತಿರುವ ನಿರ್ದೇಶಕರಿಗೆ ಈ ಫ್ಲಾಟನ್ನು ಗಿಫ್ಟ್ ಆಗಿ ನೀಡುತ್ತಿದ್ದೇನೆ- ಎಂದರು. ಕಾರ್ಯಕಾರಿ ನಿರ್ಮಾಪಕ ಹಾಗೂ ಚಿತ್ರದ ಎಡಿಟರ್ ವಿದ್ಯಾಧರ್ ಶೆಟ್ಟಿಯವರುಆಗಸ್ಟ್ ನಲ್ಲಿ ಚಿತ್ರ ಬಿಡುಗಡೆಗೆ ತಯಾರಿ ನಡೆಸಲಾಗುವುದು ಎಂಬಿತ್ಯಾದಿ ಮಾಹಿತಿಗಳನ್ನು ನೀಡಿದರು.
ಬಹುಷಃ 2D ಯಿಂದ 3D ಕನ್ವರ್ಷನ್ ಆಗುತ್ತಿರುವ ಇದೇ ಮೊದಲ ಕನ್ನಡ ಚಿತ್ರ "ಕೊರಗಜ್ಜ". #koragajja #koragajjakannadamovie #kannada #abcnewskarnataka #trailers #trending #movies
5 days ago | [YT] | 14
View 0 replies
ABC NEWS KARNATAKA
*ಟೀಸರ್ ಹಾಗೂ ಹಾಡುಗಳಲ್ಲಿ "ನನ್ನ ಮಗಳೇ ಸೂಪರ್ ಸ್ಟಾರ್"*
ಹನಿ ಫಿಲಂಸ್ ಲಾಂಛನದಲ್ಲಿ ಎನ್ ಎ ಶಿವಕುಮಾರ್(ಕುಮಾರ್ ನೊಣವಿನಕೆರೆ) ನಿರ್ಮಿಸಿರುವ, ಆಯುರ್ ನಿರ್ದೇಶಿಸಿರುವ ಹಾಗೂ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗಿದ್ದ ಜನಪ್ರಿಯ ಧಾರಾವಾಹಿ "ಸೀತಾರಾಮ" ಸೀರಿಯಲ್ ನ ಮೂಲಕ ನೋಡುಗರ ಮನ ಗೆದ್ದಿದ್ದ ಬೇಬಿ ರೀತು ಸಿಂಗ್ ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು "ಭಜರಂಗಿ ೨" ಚಿತ್ರದ ಖ್ಯಾತಿಯ ಚೆಲುವರಾಜ್ ಹಾಗು ಸಂಭ್ರಮಶ್ರೀ ನಾಯಕ - ನಾಯಕಿಯಾಗಿ ಅಭಿನಯಿಸಿರುವ "ನನ್ನ ಮಗಳೇ ಸೂಪರ್ ಸ್ಟಾರ್" ಚಿತ್ರದ ಟೀಸರ್ ಹಾಗೂ ಹಾಡುಗಳ ಅನಾವರಣ ಸಮಾರಂಭ ಇತ್ತೀಚೆಗೆ ನೆರವೇರಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಡಾ||ಜಯಮಾಲ, ಕನ್ನಡ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ, ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ ಟೀಸರ್ ಅನಾವರಣ ಮಾಡಿದರು. ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಸುಂದರರಾಜ್, ಸಾಹಿತಿ ಬಿ.ಆರ್ ಲಕ್ಷ್ಮಣರಾವ್ ಮತ್ತು ಪರಿಸರ ಪ್ರೇಮಿ ರೇವತಿ ಕಾಮತ್ ಹಾಡುಗಳನ್ನು ಬಿಡುಗಡೆಗೊಳಿಸಿದರು. ಹಾಡುಗಳು ಸಿರಿ ಮ್ಯೂಸಿಕ್ ನಲ್ಲಿ ಲಭ್ಯವಿದೆ. ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿದ ನಂತರ ಮಾತನಾಡಿದ ಗಣ್ಯರು ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ನಾನು ಮೂಲತಃ ಸಂಕಲನಕಾರ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಾನೇ ಬರೆದಿದ್ದೇನೆ. ಅಪ್ಪ - ಅಮ್ಮನಿಗೆ ತಮ್ಮ ಮಕ್ಕಳು ಸೂಪರ್ ಸ್ಟಾರ್ ಆಗಬೇಕೆಂಬ ಕನಸು. ಜೊತೆಗೆ ತಾವು ಅಂದುಕೊಂಡಂತೆ ಅವರು ಇರಬೇಕು ಎಂಬ ಆಸೆ. ಅದರಲ್ಲೂ ಈ ಸ್ವಭಾವ ತಾಯಿಗೆ ಸ್ವಲ್ಪ ಹೆಚ್ಚು. ಆದರೆ ಮಕ್ಕಳಿಗೂ ಅವರದೇ ಆಸೆ ಇರುತ್ತದೆ. ನಿಮ್ಮ ಆಸೆಯನ್ನು ಅವರ ಮೇಲೆ ಬಲವಂತವಾಗಿ ಅವರ ಮೇಲೆ ಹೇರಬೇಡಿ. ಅದರಿಂದ ಮಕ್ಕಳು ಏನೆಲ್ಲಾ ತೊಂದರೆ ಅನುಭವಿಸುತ್ತಾರೆ ಎಂಬ ಅಂಶವೇ ಈ ಚಿತ್ರದ ಕಥಾಹಂದರ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಬಿ.ಆರ್.ಲಕ್ಷ್ಮಣರಾವ್ ಅವರೆ ಮೂರು ಹಾಡುಗಳನ್ನು ಬರೆದಿದ್ದಾರೆ. ಕೆವಿನ್ ಸಂಗೀತ ನೀಡಿದ್ದಾರೆ ಎಂದು ನಿರ್ದೇಶಕ ಆಯುರ್ ತಿಳಿಸ ಹದಿನೈದು ವರ್ಷಗಳ ಹಿಂದೆ ನಾನು "ಮಹಾಭಾರತ" ಧಾರಾವಾಹಿಯಲ್ಲಿ ದುರ್ಯೋಧನನ ಪಾತ್ರ ಮಾಡಿದ್ದೆ. ಆಗ ನನಗೆ ಮೇಕಪ್ ಮಾಡಿದ್ದೆ ಕುಮಾರ್ ಅವರು. ಈವರೆಗೂ ವಿಲನ್ ಪಾತ್ರಗಳಲ್ಲಿ ಗುರುತಿಸಿಕೊಳ್ಳುತ್ತಿದ್ದ ನಾನು ಈ ಚಿತ್ರದ ಮೂಲಕ ನಾಯಕನಾಗಿದ್ದೇನೆ ಹಾಗೂ ಈವರೆಗೂ ಮಾಡಿರದ ಪಾತ್ರ ಮಾಡಿದ್ದೇನೆ ಎಂದರು ನಟ ಚಲುವರಾಜ್.
ನಿರ್ದೇಶಕರು ಹೇಳಿದ ಹಾಗೆ ಪೋಷಕರು ಹಾಗೂ ಮಕ್ಕಳು ನೋಡಲೇ ಬೇಕಾದ ಚಿತ್ರವಿದು. ನಾನು ಈ ಚಿತ್ರದ ನಾಯಕಿ. ಬೇಬಿ ರೀತುಸಿಂಗ್ ತಾಯಿಯಾಗಿ ಅಭಿನಯಿಸಿದ್ದೇನೆ ಎಂದು ನಟಿ ಸಂಭ್ರಮಶ್ರೀ ಹೇಳಿದರು.
ನಮ್ಮ ಹನಿ ಫಿಲಂ ಮೇಕರ್ಸ್ ನಿರ್ಮಾಣದ ಮೂರನೇ ಚಿತ್ರವಿದು. ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಹೊರಟಿರುವ ಈ ಚಿತ್ರದ ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಚಿತ್ರವನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವ ಸಿದ್ದತೆ ನಡೆಸಿದ್ದೇನೆ ಎಂದರು ನಿರ್ಮಾಪಕ ಎನ್ ಎ ಶಿವಕುಮಾರ್.
ಸಂಗೀತ ನಿರ್ದೇಶಕ ಕೆವಿನ್ ಹಾಡುಗಳ ಬಗ್ಗೆ ವಿವರಣೆ ನೀಡಿದರು. ನಾನು ಈ ಚಿತ್ರದ ಮೂರು ಹಾಡುಗಳನ್ನು ಬರೆದಿದ್ದೇನೆ. ಕೆವಿನ್ ಉತ್ತಮವಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ ಎಂದು ಸಾಹಿತಿ ಬಿ.ಆರ್ ಲಕ್ಷ್ಮಣ್ ರಾವ್ ಹೇಳಿದರು. ಛಾಯಾಗ್ರಾಹಕರಾದ ರಾಘವೇಂದ್ರ ರೆಡ್ಡಿ, ಸಚಿನ್ ಹಾಗೂ ಸಂಕಲನಕಾರ ರಾಘವ ಅರ್ಜುನ್ ಡೋಣಿ ಹಾಗೂ ಹಿರಿಯ ಪ್ರಸಾದನ ಕಲಾವಿದರಾದ ರಾಮಕೃಷ್ಣ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. #nannamagalesuperstar #Cheluvaraj
#kannada #trailers #abcnewskarnataka #photos
5 days ago | [YT] | 23
View 0 replies
ABC NEWS KARNATAKA
*ಶೀರ್ಷಿಕೆ ಅನಾವರಣ ಮಾಡಿ "ಕಿರುನಗೆ" ಬೀರಿದ ಚಿತ್ರತಂಡ** .
ಹರ್ಷಿಣಿ ಸಿನಿಮಾಸ್ ಲಾಂಛನದಲ್ಲಿ ಲತಾಶ್ರೀ ಡಿ.ಸಿ ಅವರು ನಿರ್ಮಿಸಿರುವ ಹಾಗೂ ಅಶೋಕ್ ಕಡಬ ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಚಿತ್ರಕ್ಕೆ "ಕಿರುನಗೆ" ಎಂದು ಹೆಸರಿಡಲಾಗಿದೆ. ಡಾ||ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು ಹಾಗೂ ಅಳಿಯ ಎಸ್ ಎ ಗೋವಿಂದರಾಜು ಅವರು ಶೀರ್ಷಿಕೆ ಅನಾವರಣ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್.ಕೆ ವಿಶ್ವನಾಥ್, ನಟ ಷಣ್ಮುಖ ಹಾಗೂ ಯುವ ಕಾಂಗ್ರೆಸ್ ಮುಖಂಡ ಅಶೋಕ್ ಭೀಮಾನಾಯಕ್ ಅವರು ಸಹ ಸಮಾರಂಭಕ್ಕೆ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
"ಕಿರುನಗೆ" ನನ್ನ ನಿರ್ದೇಶನದ ಆರನೇ ಚಿತ್ರ. ಇದೊಂದು ಲವ್ ಜಾನರ್ ನ ಚಿತ್ರ. ಆದರೆ ತಂದೆ - ತಾಯಿಗಾಗಿ ಮಕ್ಕಳೇ ಪ್ರೀತಿಯನ್ನು ತ್ಯಾಗ ಮಾಡುವ ಕಥಾಹಂದರ ಹೊಂದಿರುವ ಚಿತ್ರವೂ ಹೌದು. ಚಿತ್ರದ ಮೊದಲರ್ಧದ ಕಥೆ ಮದುವೆಮನೆಯಲ್ಲೇ ನಡೆಯುತ್ತದೆ. ನಿರ್ಮಾಪಕಿ ಲತಾಶ್ರೀ ಅವರೆ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಬೆಂಗಳೂರು, ಉಡುಪಿ, ವಿಜಾಪುರ, ಮುಂಬೈ ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ನೂತನ ಪ್ರತಿಭೆಗಳಾದ ವಿಜಯ್ ರಾಜ್ ಹಾಗೂ ಖುಷ್ಬು ಈ ಚಿತ್ರದ ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟಿ ಶೃತಿ, ಖ್ಯಾತ ನಟ ಅನುಪಮ್ ಖೇರ್ ಸಹೋದರ ರಾಜು ಖೇರ್, ಸಂಗೀತ, ಮೂಗು ಸುರೇಶ್, ಸುಧಾ ಬೆಳವಾಡಿ, ಮಂಜುನಾಥ್ ಹೆಗ್ಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ. ಶ್ರೀಶ ಅವರು ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎ.ಆರ್ ರೆಹಮಾನ್ ಅವರ ಬಳಿ ಕಾರ್ಯ ನಿರ್ವಹಿಸಿರುವ ಸುಕೃತ್ ಸಂಗೀತ ನಿರ್ದೇಶನ ಹಾಗೂ ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿರುವ ಈ ಚಿತ್ರದ ಹಾಡುಗಳನ್ನು ನಾಗಾರ್ಜುನ ಶರ್ಮ ಬರೆದಿದ್ದಾರೆ ಎಂದು ನಿರ್ದೇಶಕ ಅಶೋಕ್ ಕಡಬ "ಕಿರುನಗೆ" ಕುರಿತು ಮಾಹಿತಿ ನೀಡಿದರು.
ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅವರ ಆಶೀರ್ವಾದ ಹಾಗೂ ನನ್ನ ತಂದೆ ಮಾಜಿ ಶಾಸಕರಾದ ದೇವಾನಂದ್ ಚವ್ಹಾಣ್ ಅವರ ಸಹಕಾರದಿಂದ ಈ ಚಿತ್ರ ನಿರ್ಮಾಣವಾಗಿದೆ. ನಿರ್ದೇಶಕರು ಹೇಳಿದ ಹಾಗೆ ಇದೊಂದು ಲವ್ ಜಾನರ್ ನ ಚಿತ್ರವಾಗಿದರೂ, ಪ್ರೀತಿಯನ್ನು ನಮ್ಮ ಚಿತ್ರದಲ್ಲಿ ತೋರಿಸಿರುವ ರೀತಿಯೇ ಬೇರೆ. ಹೆಣ್ಣುಮಗಳೊಬ್ಬಳ ಮೇಲೆ ಈ ಚಿತ್ರದ ಕಥೆ ಸಾಗುತ್ತದೆ. ಹಾಗಂತ ಇದು ಮಹಿಳಾ ಪ್ರಧಾನ ಚಿತ್ರವಲ್ಲ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಉತ್ತಮ ಮನೋರಂಜನೆಯುಳ್ಳ ಚಿತ್ರ ಎಂದು ನಿರ್ಮಾಪಕಿ ಹಾಗೂ ಕಥೆ ಬರೆದಿರುವ ಲತಾಶ್ರೀ ಡಿ.ಸಿ ತಿಳಿಸಿದರು.
ಚಿತ್ರದ ಕಥೆ ಬಹಳ ಚಿನ್ನಾಗಿದೆ. ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ನನಗೆ ನಾಯಕನಾಗಿ ಇದು ಮೊದಲ ಚಿತ್ರ ಎಂದು ನಾಯಕ ವಿಜಯ್ ರಾಜ್ ಹೇಳಿದರು.
ಅವಕಾಶ ನೀಡಿದವರಿಗೆ ಧನ್ಯವಾದ ತಿಳಿಸಿ ತಮ್ಮ ಪಾತ್ರದ ಬಗ್ಗೆ ನಾಯಕಿ ಖುಷ್ಬು ಹಾಗೂ ಪ್ರಮುಖಪಾತ್ರಧಾರಿ ಶ್ರೀಶ ಮಾಹಿತಿ ನೀಡಿದರು.
ಸಂಗೀತ ನಿರ್ದೇಶಕ ಸುಕೃತ್, ಛಾಯಾಗ್ರಾಹಕ ಸಿದ್ದು ಕಂಚನಹಳ್ಳಿ, ಹಾಡುಗಳನ್ನು ಬರೆದಿರುವ ನಾಗಾರ್ಜುನ ಶರ್ಮ ಹಾಗೂ ಕಲಾವಿದರಾದ ಸಂಗೀತ, ಮೂಗು ಸುರೇಶ್ ಮುಂತಾದವರು "ಕಿರುನಗೆ" ಯ ಕುರಿತು ಮಾತನಾಡಿದರು.
#kirunage #kirunagekannadamovie #trailers #kannada #abcnewskarnataka #trending #photos
5 days ago | [YT] | 13
View 0 replies
ABC NEWS KARNATAKA
ಕರ್ನಾಟಕಕ್ಕೆ ನೂತನ ಸಾರಥಿ,ರೈತನ ಮಗ ದೊಡ್ದಾಳಲ್ಲಿ ಕೆಂಪೇಗೌಡ ಶಿವಕುಮಾರ್ ಅದ ನಾನು.....🌞
#DKShivakumar #KarnatakaPolitics #AICC #KarnatakaCM #kannada #abcnewskarnataka DK Shivakumar
5 days ago | [YT] | 15
View 0 replies
ABC NEWS KARNATAKA
ಇದನ್ನು ಬಿಡಿಸಿ.. ❓❓❓
ಊರಿಗೆಲ್ಲ ಒಂದೆ ಅಪ್ಪಳ
ನಾನಾರು ಹೇಳಿ ನೋಡುವ..?
#generalknowledge #kannada #quiz #abcnewskarnataka #riddles
5 days ago | [YT] | 2
View 0 replies
ABC NEWS KARNATAKA
ಅಭಿಮಾನಿಯ ಅಭಿಮಾನ ಮದುವೆಯಲ್ಲೂ ತನ್ನ ಆರಾಧ್ಯ ದೈವ ದರ್ಶನ್
#darshan #dboss #darshanthoogudeepa #darshanfans
6 days ago | [YT] | 340
View 0 replies
Load more