This creator name is Pattabhirama channel name was ABC NEWS KARNATAKA & now changed to sakkath suddi ,please encourage & support for our growth. please subscribe our channel
*ಆಸಿಡ್ ದಾಳಿಗೆ ತುತ್ತಾದ ಮಹಿಳೆಯರನ್ನು ಸನ್ಮಾನಿಸಿ, ಚಿತ್ರದ ಸಕ್ಸಸ್ ಮೀಟ್ ಅನ್ನು ಅರ್ಥಪೂರ್ಣವಾಗಿ ಆಚರಿಸಿದ 'ಅಪರಿಚಿತೆ'* .
ಈ ಮೊದಲು 'ತಾಯವ್ವ' ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಅಭಿನಯದ 'ಅಪರಿಚಿತೆ' ಚಿತ್ರ ಕೆಲವು ದಿನಗಳ ಹಿಂದಷ್ಟೇ ಬಿಡುಗಡೆಯಾಗಿ ಎಲ್ಲರ ಗಮನ ಸೆಳೆದಿತ್ತು. ಇತ್ತೀಚಿಗೆ ಈ ಚಿತ್ರದ ಸಕ್ಸಸ್ ಮೀಟ್ ಅನ್ನು ನಿರ್ಮಾಪಕ ಸುರೇಶ್ ಕುಮಾರ್ ಹಾಗೂ ನಟಿ ಗೀತಪ್ರಿಯ ಅವರು "ಸಕ್ಸಸ್ ಆಫ್ ಅಪರಿಚಿತೆ" ಎಂಬ ಹೆಸರಿನಿಂದ ವಿಭಿನ್ನವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಚಿತ್ರದ ಕಲೆಕ್ಷನ್ ನಿಂದ ಬಂದ ಹಣದಿಂದ ಆಸಿಡ್ ದಾಳಿಗೆ ತುತ್ತಾದ ಮೂವರು ಮಹಿಳೆಯರಿಗೆ ಐವತ್ತು ಸಾವಿರದ ಚೆಕ್ ನೀಡಿ ಸನ್ಮಾನಿಸಿದರು. ನಟಿ ಮೇಘನರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹಿರಿಯ ನಟರಾದ ಶ್ರೀನಾಥ್, ಸುರೇಶ್ ಹೆಬ್ಳೀಕರ್ ಹಾಗೂ ಪತ್ರಕರ್ತ ಸದಾಶಿವ ಶೆಣೈ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಗೀತಪ್ರಿಯ ಅವರು ಈ ಹಿಂದೆ "ತಾಯವ್ವ" ಚಿತ್ರದ ಸಕ್ಸಸ್ ಮೀಟ್ ನಲ್ಲಿ ಗರ್ಭಿಣಿ ಮಹಿಳೆಯರನ್ನು ಸನ್ಮಾನಿಸಿದ್ದರು. ಗೀತಪ್ರಿಯ ಅವರು ಒಂದೊಳ್ಳೆ ಉದ್ದೇಶವಿಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ಚಿತ್ರದ ಯಶಸ್ಸನ್ನು ಬಹಳ ಅರ್ಥಪೂರ್ಣವಾಗಿ ಸಂಭ್ರಮಿಸಿದ್ದಾರೆ. ಆಸಿಡ್ ದಾಳಿಯಿಂದ ತುತ್ತಾದ ಮಹಿಳೆಯರಿಗೆ ಸಹಾಯ ಮಾಡುವ ಉತ್ತಮ ಕಾರ್ಯದ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಇಲ್ಲಿ ಬಂದಿರುವ ಮಹಿಳೆಯರ ಕಥೆ ಕೇಳಿ ನಾನು ಭಾವುಕಳಾದೆ. ಅದಕ್ಕಿಂತ ಅವರನ್ನು ನೋಡಿ ನನ್ನ ಧೈರ್ಯ ಮತ್ತಷ್ಟು ಹೆಚ್ಚಾಯಿತು. ಈ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಗೀತಪ್ರಿಯ ಅವರಿಗೆ ಧನ್ಯವಾದ ಎಂದರು ನಟಿ ಮೇಘನಾರಾಜ್. ನಮ್ಮ "ಅಪರಿಚಿತೆ" ಚಿತ್ರದ ಗಳಿಕೆಯಿಂದ ಬಂದ ಹಣದಿಂದ ಆಸಿಡ್ ದಾಳಿಯಿಂದ ನೊಂದು, ಪುನಃ ಜೀವನ ಕಟ್ಟಿಕೊಂಡಿರುವ ಮೂವರು ಮಹಿಳೆಯರಿಗೆ ಸಹಾಯ ಮಾಡೋಣ ಎನಿಸಿತು. ಇಂದಿನ ಯುವಪೀಳಿಗೆಯ ಧ್ವನಿಯಾಗಿರುವ ಮೇಘನಾರಾಜ್ ಅವರಿಂದ ಆ ಮಹಿಳೆಯರಿಗೆ ಸನ್ಮಾನ ಮಾಡಿಸಬೇಕೆಂದುಕೊಂಡೆವು. ಮೇಘನಾರಾಜ್ ಅವರು ಒಪ್ಪಿಕೊಂಡು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಅವರಿಗೆ ಹಾಗೂ ಹಿರಿಯ ನಟರಾದ ಶ್ರೀನಾಥ್, ಸುರೇಶ್ ಹೆಬ್ಳೀಕರ್ ಮತ್ತು ಪತ್ರಕರ್ತ ಸದಾಶಿವ ಶೆಣೈ ಅವರಿಗೆ ನನ್ನ ಧನ್ಯವಾದ. ಮುಂದೆ ಕೂಡ ನಮ್ಮ ಸಂಸ್ಥೆಯಿಂದ ಇಂತಹ ಸದಭಿರುಚಿಯ ಚಿತ್ರಗಳು ನಿರ್ಮಾಣವಾಗುತ್ತದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಟಿ ಗೀತಪ್ರಿಯ. ನಟರಾದ ಶ್ರೀನಾಥ್, ಸುರೇಶ್ ಹೆಬ್ಳೀಕರ್ ಹಾಗೂ ಪತ್ರಕರ್ತ ಸದಾಶಿವ ಶೆಣೈ ಅವರು ಸಹ ತಮ್ಮ ಮಾತುಗಳ ಮೂಲಕ ಗೀತಪ್ರಿಯ ಅವರ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.
ಅಮರ ಫಿಲಂಸ್ ಲಾಂಛನದಲ್ಲಿ ಸುರೇಶ್ ಕುಮಾರ್ ಅವರು ನಿರ್ಮಿಸಿರುವ ಈ ಚಿತ್ರವನ್ನು ವಿಶ್ವನಾಥ್ ನಿರ್ದೇಶಿಸಿದ್ದಾರೆ. ಗೀತಪ್ರಿಯ, ಸಿಂಧೂ ಲೋಕನಾಥ್, ಆರ್.ಜೆ. ನಿಖಿತಾ, ಹಿರಿಯ ನಟ ಶ್ರೀನಾಥ್ ಹಾಗೂ ಶ್ರೀನಾಥ್ ಅವರ ಮಗ ರೋಹಿತ್ ಕೂಡ ಚಿತ್ರದ ತಾರಾಬಳಗದಲ್ಲಿದ್ದಾರೆ.
*ಗೋಲ್ಡನ್ ಸ್ಟಾರ್ ಗಣೇಶ್ ಅವರ 20 ವರ್ಷಗಳ ಸಿನಿ ಪಯಣಕ್ಕೆ 'ಪಿನಾಕ' ಸೆಟ್ನಲ್ಲಿ ಅದ್ಧೂರಿ ಗೌರವ*
ಸ್ಯಾಂಡಲ್ವುಡ್ನ ಅಪ್ರತಿಮ ನಟ 'ಗೋಲ್ಡನ್ ಸ್ಟಾರ್' ಗಣೇಶ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಯಶಸ್ವಿ 20 ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದ್ದಾರೆ. ಕಳೆದ ಎರಡು ದಶಕಗಳಿಂದ ಪ್ರೇಕ್ಷಕರಿಂದಲೂ ಅತಿ ಹೆಚ್ಚು ಪ್ರೀತಿಯನ್ನೂ ಗಳಿಸಿದ್ದಾರೆ ಈ ನಟ. ಈ ವಿಶೇಷ ಮೈಲಿಗಲ್ಲನ್ನು ಅವರ ಬಹುನಿರೀಕ್ಷಿತ ಚಿತ್ರ 'ಪಿನಾಕ' ಚಿತ್ರೀಕರಣದ ಸೆಟ್ನಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಖ್ಯಾತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ 'ಪಿನಾಕ' ಚಿತ್ರದ ಶೂಟಿಂಗ್ ಬಿರುಸಿನಿಂದ ಸಾಗುತ್ತಿದೆ. ಇದೇ ವೇಳೆ ಚಿತ್ರದ ನಿರ್ಮಾಪಕರಾದ ಟಿಜಿ ವಿಶ್ವಪ್ರಸಾದ್ ಮತ್ತು ಕೃತಿ ಪ್ರಸಾದ್, ಗಣೇಶ್ ಅವರ ದೀರ್ಘಕಾಲದ ಸಾಧನೆಯನ್ನು ಸ್ಮರಿಸಿ, ಅವರಿಗೆ ಸನ್ಮಾನ ಮಾಡುವ ಮೂಲಕ ಗೌರವ ಸಲ್ಲಿಸಿದರು. ಚಿತ್ರೀಕರಣದ ಸ್ಥಳದಲ್ಲೇ ಕೇಕ್ ಕತ್ತರಿಸಿ, ಇಡೀ ಚಿತ್ರತಂಡದ ಸಮ್ಮುಖದಲ್ಲಿ ಗಣೇಶ್ ಅವರಿಗೆ ಅಭಿನಂದನೆಗಳನ್ನು ತಿಳಿಸಲಾಯಿತು.
*ಭರ್ಜರಿಯಾಗಿ ಮೂಡಿಬರುತ್ತಿದೆ 'ಪಿನಾಕ'* ಪೀಪಲ್ ಮೀಡಿಯಾ ಫ್ಯಾಕ್ಟರಿಯ ಈ ಮಹತ್ವಾಕಾಂಕ್ಷೆಯ ಚಿತ್ರವು ಭಾರಿ ವೆಚ್ಚದಲ್ಲಿ ಮತ್ತು ಅದ್ಧೂರಿ ತಾರಾಗಣದೊಂದಿಗೆ ನಿರ್ಮಾಣವಾಗುತ್ತಿದೆ. ಈಗಾಗಲೇ ಚಿತ್ರದ ಶೇ. 80 ಭಾಗದ ಶೂಟಿಂಗ್ ಮುಕ್ತಾಯವಾಗಿದ್ದು, ಸಿನಿಮಾ ಅತ್ಯಂತ ಅದ್ಭುತವಾಗಿ ಮೂಡಿಬರುತ್ತಿದೆ. ವಿವಿಧ ಭಾಷೆಗಳ ಖ್ಯಾತ ಕಲಾವಿದರು ಈ ಚಿತ್ರದಲ್ಲಿ ಒಂದಾಗುತ್ತಿದ್ದು, ಇದು ಗಣೇಶ್ ಅವರ ಕೆರಿಯರ್ನಲ್ಲೇ ಅತಿ ದೊಡ್ಡ ಸಿನಿಮಾವಾಗಲಿದೆ. ತಾಂತ್ರಿಕವಾಗಿ ಮತ್ತು ಮೇಕಿಂಗ್ ವಿಚಾರದಲ್ಲಿ ರಾಜಿಯಾಗದೆ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣ ಮಾಡುತ್ತಿದೆ.
*ಗಣೇಶ್ ಅವರ ಭಾವನಾತ್ಮಕ ಮಾತುಗಳು* ಸನ್ಮಾನ ಸ್ವೀಕರಿಸಿ ಮಾತನಾಡಿದ ಗೋಲ್ಡನ್ ಸ್ಟಾರ್ ಗಣೇಶ್ ಅವರು, ತಮ್ಮ 20 ವರ್ಷಗಳ ಪ್ರಯಾಣದ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸಿದರು "ನಾನು ಚಿತ್ರರಂಗಕ್ಕೆ ಬಂದು 20 ವರ್ಷಗಳಾದವು. ಅಂದು ನನ್ನನ್ನು ಹೇಗೆ ಸ್ವೀಕರಿಸಿದ್ದಿರೋ, ಅದೇ ಪ್ರೀತಿ ಮತ್ತು ವಿಶ್ವಾಸವನ್ನು ಇಂದಿಗೂ ಚಿತ್ರರಂಗದವರು ಹಾಗೂ ನನ್ನ ಅಭಿಮಾನಿಗಳು ತೋರಿಸುತ್ತಿದ್ದಾರೆ. ಕಾಲ ಉರುಳಿದರೂ ನನ್ನ ಅಭಿಮಾನಿ ಬಳಗ ಇನ್ನೂ ದೊಡ್ಡದಾಗುತ್ತಿರುವುದು ನನ್ನ ಪುಣ್ಯ. ಎಲ್ಲರಿಗೂ ನನ್ನ ಹೃತ್ಪೂರ್ವಕ ನಮಸ್ಕಾರಗಳು. ಹಾಗೆಯೇ, ನನ್ನನ್ನು ಇಷ್ಟು ಗೌರವದಿಂದ ನಡೆಸಿಕೊಳ್ಳುತ್ತಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆಗೂ ನಾನು ಧನ್ಯವಾದ ಅರ್ಪಿಸುತ್ತೇನೆ." ಎಂದರು.
ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆಯು ಈಗಾಗಲೇ ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದು, ಈಗ ಕನ್ನಡದಲ್ಲಿ 'ಪಿನಾಕ' ಮೂಲಕ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ಗಣೇಶ್ ಅವರ ವೃತ್ತಿಜೀವನದ ಈ ಸಂಭ್ರಮದ ಘಟ್ಟವು 'ಪಿನಾಕ' ಚಿತ್ರದ ಯಶಸ್ಸಿಗೆ ಮತ್ತಷ್ಟು ಮುನ್ನುಡಿ ಬರೆದಿದೆ. #goldenstarganesh#pinaka#kannada#movies#abcnewskarnataka@abcnewskarnataka2812
*ಅದ್ದೂರಿಯಾಗಿ ನೆರವೇರಿತು ಚಂದನ್ ಶೆಟ್ಟಿ ಅಭಿನಯದ "ಎಲ್ರ ಕಾಲೆಳಿಯತ್ತೆ ಕಾಲ'' ಚಿತ್ರದ ಪ್ರೀ ರಿಲೀಸ್ ಇವೆಂಟ್* .
*ಸುಜಯ್ ಶಾಸ್ತ್ರಿ ನಿರ್ದೇಶನದ 90 ರ ಕಾಲಘಟ್ಟದ ಕಥಾಹಂದರ ಹೊಂದಿರುವ ಈ ಚಿತ್ರ ಏಪ್ರಿಲ್ 24 ರಂದು ಬಿಡುಗಡೆ* .
ಸುಜಯ್ ಶಾಸ್ತ್ರಿ ನಿರ್ದೇಶನದ, ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಹಾಗೂ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರ "ಎಲ್ರ ಕಾಲೆಳಿಯತ್ತೆ ಕಾಲ". ಇತ್ತೀಚೆಗೆ ನಡೆದ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು. ಇಡೀ ಚಿತ್ರತಂಡದ ಸದಸ್ಯರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಏಪ್ರಿಲ್ 17 ಕ್ಕೆ ಬಿಡುಗಡೆಯಾಗಬೇಕಾಗಿದ್ದ ನಮ್ಮ ಚಿತ್ರ ಕಾರಣಾಂತರದಿಂದ ಒಂದು ವಾರ ತಡವಾಗಿ ಏಪ್ರಿಲ್ 24 ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಎಲ್ಲರಿಗೂ ಪ್ರಿಯವಾಗುವ ಭರವಸೆ ಇದೆ ಎಂದು ನಿರ್ದೇಶಕ ಸುಜಯ್ ಶಾಸ್ತ್ರಿ ಹೇಳಿದರು.
ಈಗಾಗಲೇ ಚಿತ್ರದ ಕುರಿತು ಸಾಕಷ್ಟು ಮಾತನಾಡಿದ್ದೇನೆ. ಈಗ ಹೇಳಬೇಕಿರುವುದು ನಮ್ಮ ಚಿತ್ರ ಒಂದು ವಾರ ತಡವಾಗಿ ಅಂದರೆ , ಏಪ್ರಿಲ್ 24 ರಂದು ಬಿಡುಗಡೆಯಾಗುತ್ತಿದೆ. ನಮ್ಮೆಲ್ಲರ ಆರಾಧ್ಯ ದೈವ ವರನಟ ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಬಿಡುಗಡೆಯಾಗುತ್ತಿರುವುದು ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ. ಈ ಚಿತ್ರದಲ್ಲಿ ನನ್ನದು ಗಮನಾರ್ಹ ಪಾತ್ರ ಎಂದು ಮಾತನಾಡಿದ ನಟಿ ತಾರಾ ಅನುರಾಧ, ಸುಜಯ್ ಶಾಸ್ತ್ರಿ ಹಾಗೂ ರಾಜ್ ಗುರು ಹೊಸಕೋಟೆ ರಂಗಭೂಮಿಯಿಂದ ಪರಿಚಿತರು. ಚಂದನ್ ಶೆಟ್ಟಿ ಹಾಗೂ ಅವರು ತಂದೆ - ತಾಯಿ ಕೂಡ ಪರಿಚಯ. ಇನ್ನೂ, ಅರ್ಚನಾ ಕೊಟ್ಟಿಗೆ ನಾನು ಇಷ್ಟ ಪಡುವ ನಾಯಕಿ. ಒಂದೊಳ್ಳೆ ತಂಡ ಸೇರಿ ಉತ್ತಮ ಚಿತ್ರ ಮಾಡಿದ್ದಾರೆ. ಹಾಡುಗಳು ಚೆನ್ನಾಗಿದೆ. ಇದೇ ಏಪ್ರಿಲ್ 24, ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಈ ಚಿತ್ರ ತೆರೆಗೆ ಬರಲಿದೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಈ ಚಿತ್ರವನ್ನು ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದರು.
ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ಮಾಪಕ ಗೋವಿಂದರಾಜು, ಚಂದನ್ ಫಿಲಂಸ್ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ ಎಂದರು. ನಾಯಕಿ ಅರ್ಚನಾ ಕೊಟ್ಟಿಗೆ ಸಹ ಎಲ್ಲರಿಗೂ ಧನ್ಯವಾದ ಹೇಳಿದರು. ನಟರಾದ ರಜನಿಕಾಂತ್, ಅನಂತ ಪದ್ಮನಾಭ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ವಿತರಣೆಯ ಬಗ್ಗೆ ಚಂದನ್ ಫಿಲಂಸ್ ನ ಕುನಾಲ್ ಮಾತನಾಡಿದರು. ನಿರ್ಮಾಪಕರ ಸ್ನೇಹಿತರಾದ ಶ್ರೀನಿವಾಸ್, ಶಂಕರ್ ಅವರು ಚಿತ್ರಕ್ಕೆ ಯಶಸ್ಸನ್ನು ಕೋರಿದರು. ಉಷಾ ಗೋವಿಂದರಾಜು ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.
*ಮೇ 15 ರಂದು ಕಿರಣ್ ರಾಜ್ - ಕ್ರಿಶ್ ಅಭಿನಯದ "ಶೇರ್" ಚಿತ್ರ ತೆರೆಗೆ*
*ಆರಂಭದಿಂದಲೂ ಕುತೂಹಲ ಮೂಡಿಸಿದೆ ಪ್ರಸಿದ್ದ್ ನಿರ್ದೇಶನದ ಈ ಚಿತ್ರ* .
ಪ್ರಸಿದ್ಧ್ ನಿರ್ದೇಶನದಲ್ಲಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ ಚಿತ್ರ "ಶೇರ್". ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಗ್ರೇಸ್ ರಾಜ್ ಪ್ರೊಡಕ್ಷನ್ ಲಾಂಛನದಲ್ಲಿ ಡಾ||ಸುದರ್ಶನ್ ಸುಂದರರಾಜ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಹೆಚ್.ಕುಮಾರ್ (ರಾಟೆ) ಜತೆಯಾಗಿದ್ದಾರೆ. ಕಿರಣ್ ರಾಜ್ , ಸುರೇಖಾ, ಕ್ರಿಶ್, ತನಿಷಾ ಕುಪ್ಪಂಡ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಪ್ರಸಿದ್ದ್, "ಶೇರ್", ನನ್ನ ನಿರ್ದೇಶನದ ಮೂರನೇ ಚಿತ್ರ. ಕಿರಣ್ ರಾಜ್ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ನಾರ್ಮಲ್ ಕಥೆಯಾದರು, ಸಾಕಷ್ಟು ಕುತೂಹಲಕರ ಅಂಶಗಳು ಚಿತ್ರದಲ್ಲಿದೆ. ಅನಾಥ ಮಕ್ಕಳ ಜೀವನದಲ್ಲಿ ಏನೇನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲಿ ಹೇಳಲಾಗಿದೆ. ಈ ಚಿತ್ರದಲ್ಲಿ ನಿರ್ಮಾಪಕರ ಪುತ್ರ ಕ್ರಿಶ್ ರಾಡ್ರಿಗ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅವರ ಡೆಡಿಕೇಶನ್ ತುಂಬಾ ಇದೆ. ತನಿಷಾ ಕುಪ್ಪಂಡ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಪ್ರಾದೇಶಿಕ ಸೆನ್ಸಾರ್ ಮಂಡಳಿ ನಮಗೆ ಎ ಪ್ರಮಾಣಪತ್ರ ನೀಡಿದೆ. ಚಿತ್ರ ಮೇ 15 ರಂದು ಬಿಡುಗಡೆಯಾಗಲಿದೆ ಎಂದರು. ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದ್ದೇನೆ. "ದುನಿಯಾ" ಚಿತ್ರದಲ್ಲಿ ಯೋಗಿ ಅವರು ಮಾಡಿದಂತಹ ಪಾತ್ರವಿದು. ತುಂಬಾ ತಯಾರಿ ಮಾಡಿಕೊಂಡು ಅಭಿನಯಿಸಿರುವುದಾಗಿ ಹೇಳಿದರು ನಟ ಕ್ರಿಶ್. ನಿರ್ದೇಶಕ ಪ್ರಸಿದ್ದ್ ಅವರು ನನ್ನನ್ನು ಆಕ್ಷನ್ ಹೀರೋ ಆಗಿ ಪರಿಚಯ ಮಾಡಿಸಿದ್ದರು. ನಾನು ಈ ಚಿತ್ರದಲ್ಲಿ ಅನಾಥ ಹುಡುಗನಾಗಿ ನಟಿಸಿದ್ದೇನೆ. ಇದೊಂದು ಕ್ರೈಮ್ ಆಕ್ಷನ್ ಥ್ರಿಲ್ಲರ್ ಚಿತ್ರ. ಎಲ್ಲರಿಗೂ ಈ ಚಿತ್ರ ಇಷ್ಟವಾಗಲಿದೆ ಎಂದು ನಟ ಕಿರಣ್ ರಾಜ್ ತಿಳಿಸಿದರು. . ನಿರ್ಮಾಪಕ ಡಾಕ್ಟರ್ ಸುದರ್ಶನ್ ಸುಂದರ ರಾಜ್ ಮಾತನಾಡಿ, ವೃತ್ತಿಯಲ್ಲಿ ನಾನು ವಕೀಲ. ನಾವು ನಾಲ್ಕು ಜನ ಅಣ್ಣ ತಮ್ಮಂದಿರು ಸೇರಿ ಮಗನಿಗಾಗಿ ಈ ಸಿನಿಮಾ ಮಾಡಿದ್ದೇವೆ. ಅವನಿಗಾಗಿ ಪ್ರೊಡಕ್ಷನ್ ಹೌಸ್ ಪ್ರಾರಂಭ ಮಾಡಿದೆವು. ಈಗ ಮೇ 15 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಕೆ.ಆರ್.ಜಿ. ಫಿಲಂಸ್ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ ಎಂದರು. ನಾಯಕಿ ಸುರೇಖಾ ಮಾತನಾಡಿ ಇದು ಎರಡನೇ ಸಿನಿಮಾ. ಈ ಮೊದಲು "ಭರ್ಜರಿ ಗಂಡು" ಸಿನಿಮಾದಲ್ಲಿ ಅಭಿನಯಿಸಿದ್ದೆ. ಇದರಲ್ಲಿ ನನಗೆ ಎರಡು ಶೇಡ್ ಪಾತ್ರವಿದೆ ಎಂದರು.
ನಟಿ ತನಿಷಾ ಕುಪ್ಪಂಡ ಮಾತನಾಡಿ, ನಾನು ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿರುವ ಮೊದಲ ಚಿತ್ರವಿದು. ಆನಂತರ "ಪೆನ್ ಡ್ರೈವ್" ಚಿತ್ರದಲ್ಲಿ ಮಾಡಿದ್ದೆ ಎಂದರು. ಕಾರ್ಯಕಾರಿ ನಿರ್ಮಾಪಕ ರಾಟೆ ಕುಮಾರ್, ಛಾಯಾಗ್ರಾಹಕ ಕಿಟ್ಟಿ ಕೌಶಿಕ್, ನಟ ಶೋಭನ್ ಚಿತ್ರದ ಕುರಿತಂತೆ ಮಾತನಾಡಿದರು. ವಿಜಯ್ ಗುಮ್ಮಿನೇನಿ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಡಾಗ್ ಸತೀಶ್ , ಕಿರಣ್ ಕುಮಾರ್ (ಕಾಂಗ್ರೆಸ್ ಮುಖಂಡರು) ಹಾಗೂ ರಾಜೇಶ್ ಅತಿಥಿಗಳಾಗಿ ಆಗಮಿಸಿದ್ದರು.
ABC NEWS KARNATAKA
ಶಿಖಂಡಿ ಕನ್ನಡದ ವಿನೂತನ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ
Shikandi #kannada #movies #yuvaraj #priya #nikitagowda #kyathei #abcnewskarnataka
3 days ago | [YT] | 37
View 0 replies
ABC NEWS KARNATAKA
ಲೋ ನವೀನ ನಿಮ್ಮ ನೆಚ್ಚಿನ ಥೇಟರ್ನಲ್ಲಿ
#lonaveena #naveensajju #kannada #movie #abcnewskarnataka
3 days ago | [YT] | 10
View 0 replies
ABC NEWS KARNATAKA
https://youtu.be/Y98EspQdxYs
6 days ago | [YT] | 0
View 0 replies
ABC NEWS KARNATAKA
ನಮ್ ರಚ್ಚು ❤️ 14ಕ್ಕು ವರ್ಷಗಳ ಸಿನಿ ಪಯಣ
ಕನ್ನಡದ ಲೇಡಿ ಸೂಪರ್ ಸ್ಟಾರ್ ಗೆ ❤️❤️
#rachitaram #kannada #dimplequeen #sandalwood #trending #abcnewskarnataka
1 week ago | [YT] | 119
View 0 replies
ABC NEWS KARNATAKA
ದರ್ಶನ್ ತೂಗುದೀಪ ಮುಂದಿನ ಸಿನಿಮಾ
#darshan #dboss #kannada #abcnewskarnataka @abcnewskarnataka2812 @everyone
1 week ago | [YT] | 466
View 3 replies
ABC NEWS KARNATAKA
ಮತ್ತೆ ತನ್ನ ಹಳೆಯ ಗತವೈಭವ ಬರೆದ ಕನ್ನಡ ಚಿತ್ರರಂಗ......ಬ್ಲಾಕ್ ನಲ್ಲಿ ಕೆ ಡಿ ಚಿತ್ರದ ಟಿಕೆಟ್ ಮಾರಾಟ
2 weeks ago (edited) | [YT] | 29
View 2 replies
ABC NEWS KARNATAKA
*ಆಸಿಡ್ ದಾಳಿಗೆ ತುತ್ತಾದ ಮಹಿಳೆಯರನ್ನು ಸನ್ಮಾನಿಸಿ, ಚಿತ್ರದ ಸಕ್ಸಸ್ ಮೀಟ್ ಅನ್ನು ಅರ್ಥಪೂರ್ಣವಾಗಿ ಆಚರಿಸಿದ 'ಅಪರಿಚಿತೆ'* .
ಈ ಮೊದಲು 'ತಾಯವ್ವ' ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಅಭಿನಯದ 'ಅಪರಿಚಿತೆ' ಚಿತ್ರ ಕೆಲವು ದಿನಗಳ ಹಿಂದಷ್ಟೇ ಬಿಡುಗಡೆಯಾಗಿ ಎಲ್ಲರ ಗಮನ ಸೆಳೆದಿತ್ತು. ಇತ್ತೀಚಿಗೆ ಈ ಚಿತ್ರದ ಸಕ್ಸಸ್ ಮೀಟ್ ಅನ್ನು ನಿರ್ಮಾಪಕ ಸುರೇಶ್ ಕುಮಾರ್ ಹಾಗೂ ನಟಿ ಗೀತಪ್ರಿಯ ಅವರು "ಸಕ್ಸಸ್ ಆಫ್ ಅಪರಿಚಿತೆ" ಎಂಬ ಹೆಸರಿನಿಂದ ವಿಭಿನ್ನವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಚಿತ್ರದ ಕಲೆಕ್ಷನ್ ನಿಂದ ಬಂದ ಹಣದಿಂದ ಆಸಿಡ್ ದಾಳಿಗೆ ತುತ್ತಾದ ಮೂವರು ಮಹಿಳೆಯರಿಗೆ ಐವತ್ತು ಸಾವಿರದ ಚೆಕ್ ನೀಡಿ ಸನ್ಮಾನಿಸಿದರು. ನಟಿ ಮೇಘನರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹಿರಿಯ ನಟರಾದ ಶ್ರೀನಾಥ್, ಸುರೇಶ್ ಹೆಬ್ಳೀಕರ್ ಹಾಗೂ ಪತ್ರಕರ್ತ ಸದಾಶಿವ ಶೆಣೈ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಗೀತಪ್ರಿಯ ಅವರು ಈ ಹಿಂದೆ "ತಾಯವ್ವ" ಚಿತ್ರದ ಸಕ್ಸಸ್ ಮೀಟ್ ನಲ್ಲಿ ಗರ್ಭಿಣಿ ಮಹಿಳೆಯರನ್ನು ಸನ್ಮಾನಿಸಿದ್ದರು.
ಗೀತಪ್ರಿಯ ಅವರು ಒಂದೊಳ್ಳೆ ಉದ್ದೇಶವಿಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ಚಿತ್ರದ ಯಶಸ್ಸನ್ನು ಬಹಳ ಅರ್ಥಪೂರ್ಣವಾಗಿ ಸಂಭ್ರಮಿಸಿದ್ದಾರೆ. ಆಸಿಡ್ ದಾಳಿಯಿಂದ ತುತ್ತಾದ ಮಹಿಳೆಯರಿಗೆ ಸಹಾಯ ಮಾಡುವ ಉತ್ತಮ ಕಾರ್ಯದ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಇಲ್ಲಿ ಬಂದಿರುವ ಮಹಿಳೆಯರ ಕಥೆ ಕೇಳಿ ನಾನು ಭಾವುಕಳಾದೆ. ಅದಕ್ಕಿಂತ ಅವರನ್ನು ನೋಡಿ ನನ್ನ ಧೈರ್ಯ ಮತ್ತಷ್ಟು ಹೆಚ್ಚಾಯಿತು. ಈ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಗೀತಪ್ರಿಯ ಅವರಿಗೆ ಧನ್ಯವಾದ ಎಂದರು ನಟಿ ಮೇಘನಾರಾಜ್.
ನಮ್ಮ "ಅಪರಿಚಿತೆ" ಚಿತ್ರದ ಗಳಿಕೆಯಿಂದ ಬಂದ ಹಣದಿಂದ ಆಸಿಡ್ ದಾಳಿಯಿಂದ ನೊಂದು, ಪುನಃ ಜೀವನ ಕಟ್ಟಿಕೊಂಡಿರುವ ಮೂವರು ಮಹಿಳೆಯರಿಗೆ ಸಹಾಯ ಮಾಡೋಣ ಎನಿಸಿತು. ಇಂದಿನ ಯುವಪೀಳಿಗೆಯ ಧ್ವನಿಯಾಗಿರುವ ಮೇಘನಾರಾಜ್ ಅವರಿಂದ ಆ ಮಹಿಳೆಯರಿಗೆ ಸನ್ಮಾನ ಮಾಡಿಸಬೇಕೆಂದುಕೊಂಡೆವು. ಮೇಘನಾರಾಜ್ ಅವರು ಒಪ್ಪಿಕೊಂಡು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಅವರಿಗೆ ಹಾಗೂ ಹಿರಿಯ ನಟರಾದ ಶ್ರೀನಾಥ್, ಸುರೇಶ್ ಹೆಬ್ಳೀಕರ್ ಮತ್ತು ಪತ್ರಕರ್ತ ಸದಾಶಿವ ಶೆಣೈ ಅವರಿಗೆ ನನ್ನ ಧನ್ಯವಾದ. ಮುಂದೆ ಕೂಡ ನಮ್ಮ ಸಂಸ್ಥೆಯಿಂದ ಇಂತಹ ಸದಭಿರುಚಿಯ ಚಿತ್ರಗಳು ನಿರ್ಮಾಣವಾಗುತ್ತದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಟಿ ಗೀತಪ್ರಿಯ. ನಟರಾದ ಶ್ರೀನಾಥ್, ಸುರೇಶ್ ಹೆಬ್ಳೀಕರ್ ಹಾಗೂ ಪತ್ರಕರ್ತ ಸದಾಶಿವ ಶೆಣೈ ಅವರು ಸಹ ತಮ್ಮ ಮಾತುಗಳ ಮೂಲಕ ಗೀತಪ್ರಿಯ ಅವರ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.
ಅಮರ ಫಿಲಂಸ್ ಲಾಂಛನದಲ್ಲಿ ಸುರೇಶ್ ಕುಮಾರ್ ಅವರು ನಿರ್ಮಿಸಿರುವ ಈ ಚಿತ್ರವನ್ನು ವಿಶ್ವನಾಥ್ ನಿರ್ದೇಶಿಸಿದ್ದಾರೆ. ಗೀತಪ್ರಿಯ, ಸಿಂಧೂ ಲೋಕನಾಥ್, ಆರ್.ಜೆ. ನಿಖಿತಾ, ಹಿರಿಯ ನಟ ಶ್ರೀನಾಥ್ ಹಾಗೂ ಶ್ರೀನಾಥ್ ಅವರ ಮಗ ರೋಹಿತ್ ಕೂಡ ಚಿತ್ರದ ತಾರಾಬಳಗದಲ್ಲಿದ್ದಾರೆ.
3 weeks ago | [YT] | 30
View 0 replies
ABC NEWS KARNATAKA
*ಗೋಲ್ಡನ್ ಸ್ಟಾರ್ ಗಣೇಶ್ ಅವರ 20 ವರ್ಷಗಳ ಸಿನಿ ಪಯಣಕ್ಕೆ 'ಪಿನಾಕ' ಸೆಟ್ನಲ್ಲಿ ಅದ್ಧೂರಿ ಗೌರವ*
ಸ್ಯಾಂಡಲ್ವುಡ್ನ ಅಪ್ರತಿಮ ನಟ 'ಗೋಲ್ಡನ್ ಸ್ಟಾರ್' ಗಣೇಶ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಯಶಸ್ವಿ 20 ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದ್ದಾರೆ. ಕಳೆದ ಎರಡು ದಶಕಗಳಿಂದ ಪ್ರೇಕ್ಷಕರಿಂದಲೂ ಅತಿ ಹೆಚ್ಚು ಪ್ರೀತಿಯನ್ನೂ ಗಳಿಸಿದ್ದಾರೆ ಈ ನಟ. ಈ ವಿಶೇಷ ಮೈಲಿಗಲ್ಲನ್ನು ಅವರ ಬಹುನಿರೀಕ್ಷಿತ ಚಿತ್ರ 'ಪಿನಾಕ' ಚಿತ್ರೀಕರಣದ ಸೆಟ್ನಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಖ್ಯಾತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ 'ಪಿನಾಕ' ಚಿತ್ರದ ಶೂಟಿಂಗ್ ಬಿರುಸಿನಿಂದ ಸಾಗುತ್ತಿದೆ. ಇದೇ ವೇಳೆ ಚಿತ್ರದ ನಿರ್ಮಾಪಕರಾದ ಟಿಜಿ ವಿಶ್ವಪ್ರಸಾದ್ ಮತ್ತು ಕೃತಿ ಪ್ರಸಾದ್, ಗಣೇಶ್ ಅವರ ದೀರ್ಘಕಾಲದ ಸಾಧನೆಯನ್ನು ಸ್ಮರಿಸಿ, ಅವರಿಗೆ ಸನ್ಮಾನ ಮಾಡುವ ಮೂಲಕ ಗೌರವ ಸಲ್ಲಿಸಿದರು. ಚಿತ್ರೀಕರಣದ ಸ್ಥಳದಲ್ಲೇ ಕೇಕ್ ಕತ್ತರಿಸಿ, ಇಡೀ ಚಿತ್ರತಂಡದ ಸಮ್ಮುಖದಲ್ಲಿ ಗಣೇಶ್ ಅವರಿಗೆ ಅಭಿನಂದನೆಗಳನ್ನು ತಿಳಿಸಲಾಯಿತು.
*ಭರ್ಜರಿಯಾಗಿ ಮೂಡಿಬರುತ್ತಿದೆ 'ಪಿನಾಕ'*
ಪೀಪಲ್ ಮೀಡಿಯಾ ಫ್ಯಾಕ್ಟರಿಯ ಈ ಮಹತ್ವಾಕಾಂಕ್ಷೆಯ ಚಿತ್ರವು ಭಾರಿ ವೆಚ್ಚದಲ್ಲಿ ಮತ್ತು ಅದ್ಧೂರಿ ತಾರಾಗಣದೊಂದಿಗೆ ನಿರ್ಮಾಣವಾಗುತ್ತಿದೆ. ಈಗಾಗಲೇ ಚಿತ್ರದ ಶೇ. 80 ಭಾಗದ ಶೂಟಿಂಗ್ ಮುಕ್ತಾಯವಾಗಿದ್ದು, ಸಿನಿಮಾ ಅತ್ಯಂತ ಅದ್ಭುತವಾಗಿ ಮೂಡಿಬರುತ್ತಿದೆ. ವಿವಿಧ ಭಾಷೆಗಳ ಖ್ಯಾತ ಕಲಾವಿದರು ಈ ಚಿತ್ರದಲ್ಲಿ ಒಂದಾಗುತ್ತಿದ್ದು, ಇದು ಗಣೇಶ್ ಅವರ ಕೆರಿಯರ್ನಲ್ಲೇ ಅತಿ ದೊಡ್ಡ ಸಿನಿಮಾವಾಗಲಿದೆ. ತಾಂತ್ರಿಕವಾಗಿ ಮತ್ತು ಮೇಕಿಂಗ್ ವಿಚಾರದಲ್ಲಿ ರಾಜಿಯಾಗದೆ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣ ಮಾಡುತ್ತಿದೆ.
*ಗಣೇಶ್ ಅವರ ಭಾವನಾತ್ಮಕ ಮಾತುಗಳು*
ಸನ್ಮಾನ ಸ್ವೀಕರಿಸಿ ಮಾತನಾಡಿದ ಗೋಲ್ಡನ್ ಸ್ಟಾರ್ ಗಣೇಶ್ ಅವರು, ತಮ್ಮ 20 ವರ್ಷಗಳ ಪ್ರಯಾಣದ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸಿದರು "ನಾನು ಚಿತ್ರರಂಗಕ್ಕೆ ಬಂದು 20 ವರ್ಷಗಳಾದವು. ಅಂದು ನನ್ನನ್ನು ಹೇಗೆ ಸ್ವೀಕರಿಸಿದ್ದಿರೋ, ಅದೇ ಪ್ರೀತಿ ಮತ್ತು ವಿಶ್ವಾಸವನ್ನು ಇಂದಿಗೂ ಚಿತ್ರರಂಗದವರು ಹಾಗೂ ನನ್ನ ಅಭಿಮಾನಿಗಳು ತೋರಿಸುತ್ತಿದ್ದಾರೆ. ಕಾಲ ಉರುಳಿದರೂ ನನ್ನ ಅಭಿಮಾನಿ ಬಳಗ ಇನ್ನೂ ದೊಡ್ಡದಾಗುತ್ತಿರುವುದು ನನ್ನ ಪುಣ್ಯ. ಎಲ್ಲರಿಗೂ ನನ್ನ ಹೃತ್ಪೂರ್ವಕ ನಮಸ್ಕಾರಗಳು. ಹಾಗೆಯೇ, ನನ್ನನ್ನು ಇಷ್ಟು ಗೌರವದಿಂದ ನಡೆಸಿಕೊಳ್ಳುತ್ತಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆಗೂ ನಾನು ಧನ್ಯವಾದ ಅರ್ಪಿಸುತ್ತೇನೆ." ಎಂದರು.
ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆಯು ಈಗಾಗಲೇ ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದು, ಈಗ ಕನ್ನಡದಲ್ಲಿ 'ಪಿನಾಕ' ಮೂಲಕ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ಗಣೇಶ್ ಅವರ ವೃತ್ತಿಜೀವನದ ಈ ಸಂಭ್ರಮದ ಘಟ್ಟವು 'ಪಿನಾಕ' ಚಿತ್ರದ ಯಶಸ್ಸಿಗೆ ಮತ್ತಷ್ಟು ಮುನ್ನುಡಿ ಬರೆದಿದೆ. #goldenstarganesh #pinaka #kannada #movies #abcnewskarnataka @abcnewskarnataka2812
3 weeks ago | [YT] | 30
View 0 replies
ABC NEWS KARNATAKA
*ಅದ್ದೂರಿಯಾಗಿ ನೆರವೇರಿತು ಚಂದನ್ ಶೆಟ್ಟಿ ಅಭಿನಯದ "ಎಲ್ರ ಕಾಲೆಳಿಯತ್ತೆ ಕಾಲ'' ಚಿತ್ರದ ಪ್ರೀ ರಿಲೀಸ್ ಇವೆಂಟ್* .
*ಸುಜಯ್ ಶಾಸ್ತ್ರಿ ನಿರ್ದೇಶನದ 90 ರ ಕಾಲಘಟ್ಟದ ಕಥಾಹಂದರ ಹೊಂದಿರುವ ಈ ಚಿತ್ರ ಏಪ್ರಿಲ್ 24 ರಂದು ಬಿಡುಗಡೆ* .
ಸುಜಯ್ ಶಾಸ್ತ್ರಿ ನಿರ್ದೇಶನದ, ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಹಾಗೂ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರ "ಎಲ್ರ ಕಾಲೆಳಿಯತ್ತೆ ಕಾಲ". ಇತ್ತೀಚೆಗೆ ನಡೆದ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.
ಇಡೀ ಚಿತ್ರತಂಡದ ಸದಸ್ಯರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಏಪ್ರಿಲ್ 17 ಕ್ಕೆ ಬಿಡುಗಡೆಯಾಗಬೇಕಾಗಿದ್ದ ನಮ್ಮ ಚಿತ್ರ ಕಾರಣಾಂತರದಿಂದ ಒಂದು ವಾರ ತಡವಾಗಿ ಏಪ್ರಿಲ್ 24 ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಎಲ್ಲರಿಗೂ ಪ್ರಿಯವಾಗುವ ಭರವಸೆ ಇದೆ ಎಂದು ನಿರ್ದೇಶಕ ಸುಜಯ್ ಶಾಸ್ತ್ರಿ ಹೇಳಿದರು.
ಈಗಾಗಲೇ ಚಿತ್ರದ ಕುರಿತು ಸಾಕಷ್ಟು ಮಾತನಾಡಿದ್ದೇನೆ. ಈಗ ಹೇಳಬೇಕಿರುವುದು ನಮ್ಮ ಚಿತ್ರ ಒಂದು ವಾರ ತಡವಾಗಿ ಅಂದರೆ , ಏಪ್ರಿಲ್ 24 ರಂದು ಬಿಡುಗಡೆಯಾಗುತ್ತಿದೆ. ನಮ್ಮೆಲ್ಲರ ಆರಾಧ್ಯ ದೈವ ವರನಟ ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಬಿಡುಗಡೆಯಾಗುತ್ತಿರುವುದು ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ.
ಈ ಚಿತ್ರದಲ್ಲಿ ನನ್ನದು ಗಮನಾರ್ಹ ಪಾತ್ರ ಎಂದು ಮಾತನಾಡಿದ ನಟಿ ತಾರಾ ಅನುರಾಧ, ಸುಜಯ್ ಶಾಸ್ತ್ರಿ ಹಾಗೂ ರಾಜ್ ಗುರು ಹೊಸಕೋಟೆ ರಂಗಭೂಮಿಯಿಂದ ಪರಿಚಿತರು. ಚಂದನ್ ಶೆಟ್ಟಿ ಹಾಗೂ ಅವರು ತಂದೆ - ತಾಯಿ ಕೂಡ ಪರಿಚಯ. ಇನ್ನೂ, ಅರ್ಚನಾ ಕೊಟ್ಟಿಗೆ ನಾನು ಇಷ್ಟ ಪಡುವ ನಾಯಕಿ. ಒಂದೊಳ್ಳೆ ತಂಡ ಸೇರಿ ಉತ್ತಮ ಚಿತ್ರ ಮಾಡಿದ್ದಾರೆ. ಹಾಡುಗಳು ಚೆನ್ನಾಗಿದೆ. ಇದೇ ಏಪ್ರಿಲ್ 24, ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಈ ಚಿತ್ರ ತೆರೆಗೆ ಬರಲಿದೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಈ ಚಿತ್ರವನ್ನು ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದರು.
ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ಮಾಪಕ ಗೋವಿಂದರಾಜು, ಚಂದನ್ ಫಿಲಂಸ್ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ ಎಂದರು. ನಾಯಕಿ ಅರ್ಚನಾ ಕೊಟ್ಟಿಗೆ ಸಹ ಎಲ್ಲರಿಗೂ ಧನ್ಯವಾದ ಹೇಳಿದರು. ನಟರಾದ ರಜನಿಕಾಂತ್, ಅನಂತ ಪದ್ಮನಾಭ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ವಿತರಣೆಯ ಬಗ್ಗೆ ಚಂದನ್ ಫಿಲಂಸ್ ನ ಕುನಾಲ್ ಮಾತನಾಡಿದರು. ನಿರ್ಮಾಪಕರ ಸ್ನೇಹಿತರಾದ ಶ್ರೀನಿವಾಸ್, ಶಂಕರ್ ಅವರು ಚಿತ್ರಕ್ಕೆ ಯಶಸ್ಸನ್ನು ಕೋರಿದರು. ಉಷಾ ಗೋವಿಂದರಾಜು ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಪ್ರವೀಣ್ - ಪ್ರದೀಪ್ ಸಂಗೀತ ನಿರ್ದೇಶನ ಹಾಗೂ ವಿಶ್ವಜಿತ್ ರಾವ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜ್ ಗುರು ಹೊಸಕೋಟೆ ಕಥೆ ಬರೆದಿದ್ದಾರೆ. #chandanshetty #Archanakottige #taraanuradha #yellrakalyeleyuttekala #kannada #abcnewskarnataka
3 weeks ago | [YT] | 30
View 0 replies
ABC NEWS KARNATAKA
*ಮೇ 15 ರಂದು ಕಿರಣ್ ರಾಜ್ - ಕ್ರಿಶ್ ಅಭಿನಯದ "ಶೇರ್" ಚಿತ್ರ ತೆರೆಗೆ*
*ಆರಂಭದಿಂದಲೂ ಕುತೂಹಲ ಮೂಡಿಸಿದೆ ಪ್ರಸಿದ್ದ್ ನಿರ್ದೇಶನದ ಈ ಚಿತ್ರ* .
ಪ್ರಸಿದ್ಧ್ ನಿರ್ದೇಶನದಲ್ಲಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ ಚಿತ್ರ "ಶೇರ್". ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಗ್ರೇಸ್ ರಾಜ್ ಪ್ರೊಡಕ್ಷನ್ ಲಾಂಛನದಲ್ಲಿ ಡಾ||ಸುದರ್ಶನ್ ಸುಂದರರಾಜ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಹೆಚ್.ಕುಮಾರ್ (ರಾಟೆ) ಜತೆಯಾಗಿದ್ದಾರೆ. ಕಿರಣ್ ರಾಜ್ , ಸುರೇಖಾ, ಕ್ರಿಶ್, ತನಿಷಾ ಕುಪ್ಪಂಡ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಪ್ರಸಿದ್ದ್, "ಶೇರ್", ನನ್ನ ನಿರ್ದೇಶನದ ಮೂರನೇ ಚಿತ್ರ. ಕಿರಣ್ ರಾಜ್ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ನಾರ್ಮಲ್ ಕಥೆಯಾದರು, ಸಾಕಷ್ಟು ಕುತೂಹಲಕರ ಅಂಶಗಳು ಚಿತ್ರದಲ್ಲಿದೆ. ಅನಾಥ ಮಕ್ಕಳ ಜೀವನದಲ್ಲಿ ಏನೇನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲಿ ಹೇಳಲಾಗಿದೆ. ಈ ಚಿತ್ರದಲ್ಲಿ ನಿರ್ಮಾಪಕರ ಪುತ್ರ ಕ್ರಿಶ್ ರಾಡ್ರಿಗ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅವರ ಡೆಡಿಕೇಶನ್ ತುಂಬಾ ಇದೆ. ತನಿಷಾ ಕುಪ್ಪಂಡ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಪ್ರಾದೇಶಿಕ ಸೆನ್ಸಾರ್ ಮಂಡಳಿ ನಮಗೆ ಎ ಪ್ರಮಾಣಪತ್ರ ನೀಡಿದೆ. ಚಿತ್ರ ಮೇ 15 ರಂದು ಬಿಡುಗಡೆಯಾಗಲಿದೆ ಎಂದರು.
ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದ್ದೇನೆ. "ದುನಿಯಾ" ಚಿತ್ರದಲ್ಲಿ ಯೋಗಿ ಅವರು ಮಾಡಿದಂತಹ ಪಾತ್ರವಿದು. ತುಂಬಾ ತಯಾರಿ ಮಾಡಿಕೊಂಡು ಅಭಿನಯಿಸಿರುವುದಾಗಿ ಹೇಳಿದರು ನಟ ಕ್ರಿಶ್.
ನಿರ್ದೇಶಕ ಪ್ರಸಿದ್ದ್ ಅವರು ನನ್ನನ್ನು ಆಕ್ಷನ್ ಹೀರೋ ಆಗಿ ಪರಿಚಯ ಮಾಡಿಸಿದ್ದರು. ನಾನು ಈ ಚಿತ್ರದಲ್ಲಿ ಅನಾಥ ಹುಡುಗನಾಗಿ ನಟಿಸಿದ್ದೇನೆ. ಇದೊಂದು ಕ್ರೈಮ್ ಆಕ್ಷನ್ ಥ್ರಿಲ್ಲರ್ ಚಿತ್ರ. ಎಲ್ಲರಿಗೂ ಈ ಚಿತ್ರ ಇಷ್ಟವಾಗಲಿದೆ ಎಂದು ನಟ ಕಿರಣ್ ರಾಜ್ ತಿಳಿಸಿದರು. . ನಿರ್ಮಾಪಕ ಡಾಕ್ಟರ್ ಸುದರ್ಶನ್ ಸುಂದರ ರಾಜ್ ಮಾತನಾಡಿ, ವೃತ್ತಿಯಲ್ಲಿ ನಾನು ವಕೀಲ. ನಾವು ನಾಲ್ಕು ಜನ ಅಣ್ಣ ತಮ್ಮಂದಿರು ಸೇರಿ ಮಗನಿಗಾಗಿ ಈ ಸಿನಿಮಾ ಮಾಡಿದ್ದೇವೆ. ಅವನಿಗಾಗಿ ಪ್ರೊಡಕ್ಷನ್ ಹೌಸ್ ಪ್ರಾರಂಭ ಮಾಡಿದೆವು. ಈಗ ಮೇ 15 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಕೆ.ಆರ್.ಜಿ. ಫಿಲಂಸ್ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ ಎಂದರು.
ನಾಯಕಿ ಸುರೇಖಾ ಮಾತನಾಡಿ ಇದು ಎರಡನೇ ಸಿನಿಮಾ. ಈ ಮೊದಲು "ಭರ್ಜರಿ ಗಂಡು" ಸಿನಿಮಾದಲ್ಲಿ ಅಭಿನಯಿಸಿದ್ದೆ. ಇದರಲ್ಲಿ ನನಗೆ ಎರಡು ಶೇಡ್ ಪಾತ್ರವಿದೆ ಎಂದರು.
ನಟಿ ತನಿಷಾ ಕುಪ್ಪಂಡ ಮಾತನಾಡಿ, ನಾನು ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿರುವ ಮೊದಲ ಚಿತ್ರವಿದು. ಆನಂತರ "ಪೆನ್ ಡ್ರೈವ್" ಚಿತ್ರದಲ್ಲಿ ಮಾಡಿದ್ದೆ ಎಂದರು.
ಕಾರ್ಯಕಾರಿ ನಿರ್ಮಾಪಕ ರಾಟೆ ಕುಮಾರ್, ಛಾಯಾಗ್ರಾಹಕ ಕಿಟ್ಟಿ ಕೌಶಿಕ್, ನಟ ಶೋಭನ್ ಚಿತ್ರದ ಕುರಿತಂತೆ ಮಾತನಾಡಿದರು. ವಿಜಯ್ ಗುಮ್ಮಿನೇನಿ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.
ಡಾಗ್ ಸತೀಶ್ , ಕಿರಣ್ ಕುಮಾರ್ (ಕಾಂಗ್ರೆಸ್ ಮುಖಂಡರು) ಹಾಗೂ ರಾಜೇಶ್ ಅತಿಥಿಗಳಾಗಿ ಆಗಮಿಸಿದ್ದರು.
3 weeks ago | [YT] | 28
View 0 replies
Load more