This creator name is Pattabhirama channel name was ABC NEWS KARNATAKA & now changed to sakkath suddi ,please encourage & support for our growth. please subscribe our channel
*ಬಾಲಿವುಡ್ ಗೆ ಅಡಿಯಿಟ್ಟ ಆರ್ ಚಂದ್ರು.* *ಆನಂದ್ ಪಂಡಿತ್ ಅವರ ಜೊತೆಗೂಡಿ ಅದ್ದೂರಿ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣ* .
*ಮುಂಬೈನಲ್ಲಿ ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಅನಾವರಣ* .
*ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಸೇರಿದಂತೆ ದೇಶದ ಸೂಪರ್ ಸ್ಟಾರ್ ಗಳು ನಟಿಸುತ್ತಿರುವ ಈ ಚಿತ್ರಕ್ಕೆ "ಒರಿಜಿನಲ್ ಮಾನ್ ಸ್ಟರ್"(OM) ಎಂದು ನಾಮಕರಣ* . .
ವಿನೂತನ ಪ್ರಯತ್ನಗಳಿಂದ ಹೆಸರಾಗಿರುವ ಕನ್ನಡದ ಸ್ಟಾರ್ ನಿರ್ದೇಶಕ ಹಾಗೂ ನಿರ್ಮಾಪಕ ಆರ್ ಚಂದ್ರು ಈಗ ಬಾಲಿವುಡ್ ಗೆ ನಿರ್ಮಾಪಕರಾಗಿ ಅಡಿಯಿಟ್ಟಿದ್ದಾರೆ. ಬಾಲಿವುಡ್ ನಲ್ಲಿ ಸಾಕಷ್ಟು ಹೆಸರು ಮಾಡಿರುವ ಆನಂದ್ ಪಂಡಿತ್ ಅವರೊಡಗೂಡಿ ಹಿಂದಿ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ. ಹಿಂದಿ ಮಾತ್ರವಲ್ಲದೆ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಕನ್ನಡದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮತ್ತು ತೆಲುಗಿನಲ್ಲಿ ಸುನೀಲ್ ಅವರು ನಾಯಕರಾಗಿ ನಟಿಸುತ್ತಿದ್ದು, ಹಿಂದಿ, ತಮಿಳು ಹಾಗೂ ಮಲಯಾಳಂ ನಲ್ಲೂ ಸುಪ್ರಸಿದ್ದ ಸ್ಟಾರ್ ನಟರು ನಾಯಕರಾಗಿ ನಟಿಸುತ್ತಿದ್ದಾರೆ. ಅವರು ಯಾರು ಎಂಬುದು ಸದ್ಯದಲ್ಲೇ ತಿಳಿಯಲಿದೆ.
ಎರಡೂವರೆ ವರ್ಷಗಳ ಹಿಂದೆ ಆರ್ ಚಂದ್ರು ನೂರಾರು ಕೋಟಿ ವೆಚ್ಚದಲ್ಲಿ ಆನಂದ್ ಪಂಡಿತ್ ಅವರೊಂದಿಗೆ " ಕಬ್ಜ" ಎಂಬ ಸೂಪರ್ ಹಿಟ್ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಆ ಚಿತ್ರ ಚಂದ್ರು ಅವರಿಗೆ ಹೆಸರು ಹಾಗೂ ಹಣ ಎರಡನ್ನು ತಂದುಕೊಟ್ಟಿತು. ಅದಲ್ಲದೆ ಪ್ರಪಂಚದಾದ್ಯಂತ ಈ ಚಿತ್ರ ಸುದ್ದಿ ಮಾಡಿತ್ತು. ಈ ಚಿತ್ರದ ನಂತರ ಆರ್ ಚಂದ್ರು ಏನು ಮಾಡುತ್ತಿದ್ದಾರೆ? ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಸಿನಿಮಾವನ್ನೇ ಉಸಿರಾಗಿಸಿಕೊಂಡಿರುವ ಆರ್ ಚಂದ್ರು ಅವರು "ಕಬ್ಜ" ನಂತರ ಈ ಅದ್ದೂರಿ ಚಿತ್ರದ ನಿರ್ಮಾಣಕ್ಕೆ ಸಿದ್ದತೆ ನಡೆಸಿಕೊಳ್ಳುತ್ತಿದ್ದರು. ಕನ್ನಡದ ಹೆಸರಾಂತ ನಿರ್ದೇಶಕ ಹಾಗೂ ನಿರ್ಮಾಪಕ ಆರ್ ಚಂದ್ರು, ಕನ್ನಡದ ಜನಪ್ರಿಯ ನಟರಾದ ಶಿವರಾಜಕುಮಾರ್ ಅವರು ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ಈ ನೂತನ ಪ್ಯಾನ್ ಇಂಡಿಯಾ ಚಿತ್ರದ ಆರಂಭೋತ್ಸವನ್ನು ಬಾಲಿವುಡ್ ನ ಕೇಂದ್ರಸ್ಥಳವಾದ ಮುಂಬೈನಲ್ಲಿ ಅದ್ದೂರಿಯಾಗಿ ಮಾಡಿದ್ದಾರೆ. ಈ ನೂತನ ಚಿತ್ರಕ್ಕೆ "ಒರಿಜಿನಲ್ ಮಾನ್ ಸ್ಟರ್" ಎಂಬ ಯುನಿವರ್ಸಲ್ ಟೈಟಲ್ ಇಡಲಾಗಿದ್ದು, ಎಲ್ಲಾ ಭಾಷೆಗೂ ಈ ಶೀರ್ಷಿಕೆ ಹೊಂದಿಕೆಯಾಗುತ್ತದೆ. ಇದನ್ನು ಕಿರಿದಾಗಿ "OM" ಎಂದು ಸಹ ಕರೆಯಬಹುದು. "OM" ಎಂದರೆ ಶಿವಣ್ಣ ಅಭಿನಯದ "ಓಂ" ಕೂಡ ನೆನಪಾಗುತ್ತದೆ. ಕನ್ನಡದಲ್ಲಿ ಶಿವರಾಜಕುಮಾರ್ ಹಾಗೂ ತೆಲುಗಿನಲ್ಲಿ ಸುನೀಲ್ ಅವರು ನಾಯಕರಾಗಿ ನಟಿಸುತ್ತಿರುವ "ಒರಿಜಿನಲ್ ಮಾನ್ ಸ್ಟರ್" ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸುತ್ತಿದೆ.
ಯಶ್, ರಿಷಭ್ ಶೆಟ್ಟಿ, ಪ್ರಶಾಂತ್ ನೀಲ್ ಹಾಗೂ ಆರ್ ಚಂದ್ರು ಅವರಂತಹ ಕನ್ನಡಿಗರು ಪ್ರಸ್ತುತ ಕನ್ನಡದ ಸಿನಿಮಾಗಳನ್ನು ಇಡೀ ವಿಶ್ವವೇ ತಿರುಗಿ ನೋಡುವ ಹಾಗೆ ಮಾಡುತ್ತಿದ್ದಾರೆ. ಇದು ನಿಜಕ್ಕೂ ಕನ್ನಡಿಗರು ಹೆಮ್ಮೆ ಪಡುವ ವಿಷಯ.
*‘ಫಾದರ್’ ಟೀಸರ್ಗೆ ಹೆಚ್ಚಿದ ನಿರೀಕ್ಷೆ – ಆರ್. ಚಂದ್ರು, ಡಾರ್ಲಿಂಗ್ ಕೃಷ್ಣ ಹಾಗೂ ಪ್ರಕಾಶ್ ರಾಜ್ ಕಾಂಬಿನೇಷನ್ಗೆ ಭಾರೀ ಕುತೂಹಲ*
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆಗಳು ಹಾಗೂ ಕ್ಲಾಸ್ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ನಿರ್ಮಾಪಕ ಆರ್. ಚಂದ್ರು ಅವರು ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣ ಮಾಡುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಫಾದರ್’.
‘ತಾಜ್ ಮಹಲ್’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಆರ್. ಚಂದ್ರು ಹಾಗೂ ‘ಲವ್ ಮಾಕ್ಟೇಲ್’ ಸರಣಿಯ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಡಾರ್ಲಿಂಗ್ ಕೃಷ್ಣ ಅವರ ಕಾಂಬಿನೇಷನ್ ಈಗಾಗಲೇ ಸಿನಿಪ್ರಿಯರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರವನ್ನು ರಾಜಮೋಹನ್ ನಿರ್ದೇಶಿಸುತ್ತಿದ್ದು, ಪ್ರತಿಭಾವಂತ ನಟ ಪ್ರಕಾಶ್ ರಾಜ್ ಅವರ ಪ್ರಮುಖ ಪಾತ್ರ ಮತ್ತಷ್ಟು ನಿರೀಕ್ಷೆ ಮೂಡಿಸಿದೆ.
ಆರ್. ಚಂದ್ರು ಅವರ ನಿರ್ಮಾಣ, ರಾಜಮೋಹನ್ ಅವರ ನಿರ್ದೇಶನ, ಡಾರ್ಲಿಂಗ್ ಕೃಷ್ಣ ಹಾಗೂ ಪ್ರಕಾಶ್ ರಾಜ್ ಅವರ ಕಾಂಬಿನೇಷನ್ನಿಂದ ‘ಫಾದರ್’ ಚಿತ್ರದ ಮೇಲೆ ಭಾರೀ ನಿರೀಕ್ಷೆಯಿದೆ. ಸಿನಿಮಾ ಈಗಾಗಲೇ ವೀಕ್ಷಿಸಿರುವವರ ವಲಯದಲ್ಲಿ ಇದು ಒಂದು ಭಾವನಾತ್ಮಕ ಹಾಗೂ ಕುಟುಂಬ ಸಮೇತವಾಗಿ ನೋಡಬಹುದಾದ ಉತ್ತಮ ಸಿನಿಮಾ ಎಂಬ ಪಾಸಿಟಿವ್ ಟಾಕ್ ಕೇಳಿಬರುತ್ತಿದೆ.
ಕುಟುಂಬ, ಭಾವನೆಗಳು ಮತ್ತು ಸಂಬಂಧಗಳ ಸುತ್ತ ಸಾಗುವ ಕಥಾಹಂದರ ಹೊಂದಿರುವ ‘ಫಾದರ್’, ಎಲ್ಲಾ ವರ್ಗದ ಪ್ರೇಕ್ಷಕರಿಗೂ ಕನೆಕ್ಟ್ ಆಗುವಂತಹ ಸಿನಿಮಾ ಆಗುವ ನಿರೀಕ್ಷೆ ಮೂಡಿಸಿದೆ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ಗಾಗಿ ಒಂದು ಅದ್ಭುತ ಎಮೋಷನಲ್ ಜರ್ನಿ ಆಗುವ ಎಲ್ಲಾ ಲಕ್ಷಣಗಳು ಚಿತ್ರದಲ್ಲಿವೆ.
ಇಂದಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲೂ ಚಿತ್ರವನ್ನು ವೀಕ್ಷಿಸಿ ಮೆಚ್ಚಿರುವ ಮ್ಯಾಕೀಸ್ ಸಂಸ್ಥೆ, ‘ಫಾದರ್’ ಚಿತ್ರದ ಡಿಸ್ಟ್ರಿಬ್ಯೂಷನ್ ರೈಟ್ಸ್ ಅನ್ನು ಪಡೆದುಕೊಂಡಿದೆ. ಸಿನಿಮಾ ನೋಡಿ ಮೆಚ್ಚಿ ಡಿಸ್ಟ್ರಿಬ್ಯೂಷನ್ಗೆ ಮುಂದಾಗಿರುವುದು, ಚಿತ್ರದ ಕಂಟೆಂಟ್ ಮೇಲಿರುವ ನಂಬಿಕೆಗೆ ಮತ್ತೊಂದು ಸಾಕ್ಷಿಯಾಗಿದೆ.
ಇದೀಗ ಈ ನಿರೀಕ್ಷೆಗೆ ಮತ್ತಷ್ಟು ಕುತೂಹಲ ಸೇರಿಸಲು ಚಿತ್ರದ ಟೀಸರ್ ಆಗಸ್ಟ್ 25ರಂದು ಸಂಜೆ 4 ಗಂಟೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಲಿದೆ.
ಚಿತ್ರದ ಟೀಸರ್ ಹೇಗಿರಲಿದೆ? ರಾಜಮೋಹನ್ ಅವರ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಅವರನ್ನು ಯಾವ ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ? ಪ್ರಕಾಶ್ ರಾಜ್ ಹಾಗೂ ಕೃಷ್ಣ ಅವರ ಕಾಂಬಿನೇಷನ್ ಹೇಗಿರಲಿದೆ? ಎಂಬ ಕುತೂಹಲ ಈಗಾಗಲೇ ಸಿನಿಪ್ರೇಕ್ಷಕರಲ್ಲಿ ಹೆಚ್ಚಾಗಿದೆ.
ಆಗಸ್ಟ್ 25ರಂದು ಸಂಜೆ 4 ಗಂಟೆಗೆ ಬಿಡುಗಡೆಯಾಗಲಿರುವ ‘ಫಾದರ್’ ಟೀಸರ್ ಪ್ರೇಕ್ಷಕರಲ್ಲಿ ಯಾವ ರೀತಿಯ ಪ್ರತಿಕ್ರಿಯೆ ಮೂಡಿಸಲಿದೆ ಎಂಬ ಕುತೂಹಲ ಇದೀಗ ಹೆಚ್ಚಾಗಿದೆ.
‘ಫಾದರ್’ – ಒಂದು ಸಿನಿಮಾ ಮಾತ್ರವಲ್ಲ, ಸಂಬಂಧಗಳೊಂದಿಗೆ ಪ್ರಯಾಣಿಸುವ ಒಂದು ಭಾವನಾತ್ಮಕ ಅನುಭವವಾಗುವ ನಿರೀಕ್ಷೆ ಮೂಡಿಸಿದೆ.
*"NH66" ನಲ್ಲಿ ಶೃತಿ ಹರಿಹರನ್ ಪಯಣ. ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ* .
ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸಿರುವ "NH 66" ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಪ್ರಮೋದ್ ಶೆಟ್ಟಿ ಅವರ ಫಸ್ಟ್ ಲಕ್ ಬಿಡುಗಡೆ ಮಾಡಿದ್ದ ಚಿತ್ರತಂಡ ಈಗ ಶೃತಿ ಹರಿಹರನ್ ಅವರ ಫಸ್ಟ್ ಲುಕ್ ಅನಾವರಣ ಮಾಡಿದೆ. "NH 66" , ಹೆಸರೆ ಹೇಳುವಂತೆ ಒಂದು ಸಂಚಾರಿ ಕಥೆಯಾಗಿದೆ. "One highway many secrets" ಎಂಬ ಅಡಿಬರಹ ಈ ಚಿತ್ರಕ್ಕಿದೆ. ಮೂರು ಮುಖ್ಯಪಾತ್ರಗಳ ಸುತ್ತ ನಿರ್ದೇಶಕರು ರೋಮಾಂಚನಕಾರಿ ಕಥೆ ಹೆಣೆದಿದ್ದಾರೆ. ಇದು ಮಂಗಳೂರಿನಿಂದ ಮುಂಬೈಗೆ ಸಾಗುವ ಮಾರ್ಗದಲ್ಲಿ ನಡೆಯುವ ಕಥೆಯಾಗಿರಲಿದೆ. ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಕ್ಯಾಬ್ ಚಾಲಕನಾಗಿ ಅಭಿನಯಿಸುತ್ತಿದ್ದಾರೆ. ಶೃತಿ ಹರಿಹರನ್ ಅವರದು ಪಯಣಿಗರ ಪಾತ್ರ. ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಶೃತಿ ಹರಿಹರನ್, "NH 66" ಚಿತ್ರದಲ್ಲಿ ಈವರೆಗೂ ಮಾಡಿರದ ಪಾತ್ರ ಮಾಡಿದ್ದಾರೆ. ಇತ್ತೀಚೆಗಷ್ಟೇ ಶೃತಿ ಹರಿಹರನ್ ಅವರ ಫಸ್ಟ್ ಲುಕ್ ಅನಾವರಣವಾಗಿದ್ದು, ಫಸ್ಟ್ ಲುಕ್ ಗೆ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದ ಕುರಿತು ಕೂಡ ನಿರೀಕ್ಷೆ ಹೆಚ್ಚಾಗಿದೆ. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣಗೊಂಡಿದ್ದು, ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ. ಆದಷ್ಟು ಬೇಗ ಚಿತ್ರ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.
ಗುರುರಾಯರ ಪರಮಭಕ್ತರಾದ ನಿರ್ಮಾಪಕ ಟಿ.ಆರ್.ಮಂಜುನಾಥ್ ರಾಯರ ಅನುಗ್ರಹದಿಂದ ಹಾಗೂ ಚಿತ್ರತಂಡದ ಸಹಕಾರದಿಂದ ನಾವು ಅಂದುಕೊಂಡ ಹಾಗೆ ಚಿತ್ರ ಮೂಡಿಬಂದಿದೆ ಎನ್ನುತ್ತಾರೆ. ಟಿ.ಆರ್.ಮಂಜುನಾಥ್ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸುನೀತ್ ಹಲಗೇರಿ ಅವರ ಛಾಯಾಗ್ರಹಣವಿರುವ "NH 66" ಚಿತ್ರಕ್ಕೆ ಸ್ವಾಮಿನಾಥನ್ ಅವರ ಸಂಗೀತ ನಿರ್ದೇಶನವಿದೆ. #nh66kannadamovie#ShruthiHariharan#abcnewskarnataka#kannada
*"ಟಾಕ್ಸಿಕ್" ಚಿತ್ರದ ಜೊತೆಗೆ "ಜಾಕಿ 42" ಚಿತ್ರದ ಥಿಯೇಟರಿಕಲ್ ಟ್ರೇಲರ್ ರಾಜ್ಯದಾದ್ಯಂತ ಬಿಡುಗಡೆ*
*"ಟಾಕ್ಸಿಕ್" ನಡುವೆ "ಜಾಕಿ42" ಟ್ರೇಲರ್ ಚಿತ್ರಮಂದಿರಗಳಲ್ಲಿ* .. *"ಟಾಕ್ಸಿಕ್" ಚಿತ್ರಮಂದಿರಗಳಲ್ಲಿ "ಜಾಕಿ 42" ಟ್ರೇಲರ್* . ಟಾಕ್ಸಿಕ್.. ಟಾಕ್ಸಿಕ್.. ಟಾಕ್ಸಿಕ್... ಎಲ್ಲೆಲ್ಲೂ ಟಾಕ್ಸಿಕ್ ಮಯ... ನಾಳೆಯಿಂದ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿರುವ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಜೊತೆಗೆ ಕರ್ನಾಟಕದಾದ್ಯಂತ ಕಿರಣ್ ರಾಜ್ ಅಭಿನಯದ ಜಾಕಿ 42 ಚಿತ್ರದ ಥಿಯೇಟರಿಕಲ್ ಟ್ರೇಲರ್ ಪ್ರದರ್ಶನವಾಗುತ್ತಿದೆ...
ಗೋಲ್ಡನ್ ಗೇಟ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ ನಿರ್ಮಿಸಿರುವ 'ಜಾಕಿ 42' ಚಿತ್ರಕ್ಕೆ ಗುರುತೇಜ್ ಶೆಟ್ಟಿ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು, ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದು ಕುದುರೆ ರೇಸ್ ಹಿನ್ನೆಲೆಯ ಕಥಾಹಂದರದ ಚಿತ್ರ. ನನಗೆ ತಿಳಿದ ಹಾಗೆ ಭಾರತೀಯ ಚಿತ್ರರಂಗದಲ್ಲೇ ಯಾವ ಚಿತ್ರದಲ್ಲೂ ಕುದುರೆ ರೇಸ್ ಕುರಿತು ಇಡೀ ಸಿನಿಮಾ ಬಂದಿಲ್ಲ. ನಮ್ಮ ಇಡೀ ಸಿನಿಮಾ ಕುದುರೆ ರೇಸ್ ಸುತ್ತ ಸಾಗುತ್ತದೆ. ಗುಣಮಟ್ಟದ ಮೇಕಿಂಗ್ ಹಾಗೂ ವಿಶಿಷ್ಟವಾದ ಚಿತ್ರಕಥೆಯಿರುವ ಚಿತ್ರವಿದು. ಟಾಕ್ಸಿಕ್ ನೋಡೋ ಪ್ರೇಕ್ಷಕರಿಗೆ ಕುತೂಹಲ ಹುಟ್ಟಿಸಲಿದೆ ಹಾಗೂ ಥಿಯೇಟರಲ್ಲೇ "ಜಾಕಿ 42" ಸಿನಿಮಾವನ್ನ ನೋಡಬೇಕು ಅಂತ ಪ್ರೇರಪಿಸಲಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ತಿಳಿಸಿದ್ದಾರೆ.
"ಜಾಕಿ 42 "ಚಿತ್ರದಲ್ಲಿ ಕಿರಣ್ ರಾಜ್, ಹೃತಿಕ್ ಶ್ರೀನಿವಾಸ್, ಯುಕ್ತಾ, ದೀಪಕ್ ರೈ, ರಾಜೇಂದ್ರ ಕಾರಂತ್, ಚೇತನ್ ರೈ ಮಣಿ, ಮಧುಸೂಧನ್ ರಾವ್, ಗಿರೀಶ್ ಹೆಗಡೆ, ಅರುಣ್ ಆಚಾರ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ "ಜಾಕಿ 42" ಚಿತ್ರದ ಎರಡು ಹಾಡುಗಳು ಗಮನ ಸೆಳೆದಿದ್ದು, ಟಾಕ್ಸಿಕ್ ಸಿನಿಮಾದ ಥಿಯೇಟರ್ ಗಳಲ್ಲಿ ಟ್ರೇಲರ್ ಪ್ರದರ್ಶಿಸುವ ಮೂಲಕ "ಜಾಕಿ 42" ಚಿತ್ರದ ಪ್ರಚಾರವನ್ನು ಆರಂಭಿಸಿದ್ದಾರೆ..
ಅಂದ ಹಾಗೆ ಸದ್ಯದಲ್ಲೇ ಚಿತ್ರದ ಮತ್ತೊಂದು ಹಾಡನ್ನು ಬಿಡುಗಡೆ ಅಣಿಯಾಗಿರುವ ಚಿತ್ರತಂಡ, ಸಿನಿಮಾ ಬಿಡುಗಡೆಯ ದಿನಾಂಕವನ್ನು ನಿಗದಿ ಮಾಡೋ ಯೋಜನೆಯಲ್ಲಿದೆ... ಅದೇನೆ ಇದ್ರೂ ಟಾಕ್ಸಿಕ್ ನೋಡೋ ಕನ್ನಡ ಪ್ರೇಕ್ಷಕರಿಗೆ ಥಿಯೇಟರ್ ಗಳಲ್ಲಿ "ಜಾಕಿ 42" ಅಚ್ಚರಿ ಕಾದಿದೆ. #jockey42#kannada#movie#toxic#yash#kiranraj#abcnewskarnataka
*ಕೋಮಲ್ ಕುಮಾರ್ - ಸೋನಾಲ್ ಮೊಂತೆರೊ ಜೋಡಿಯ ಹಾಗೂ ವಿನೋದ್ ಪ್ರಭಾಕರ್ ವಿಶೇಷಪಾತ್ರದಲ್ಲಿ ನಟಿಸಿರುವ "ರೋಲೆಕ್ಸ್" ಚಿತ್ರದ ಟೀಸರ್ ಬಿಡುಗಡೆ*
ನಟ ಕೋಮಲ್ ಕುಮಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ "ರೋಲೆಕ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ ಕೋಮಲ್ ಗೆ ನಾಯಕಿಯಾಗಿ ಸೋನಲ್ ಮಾಂತೆರೊ ಕಾಣಿಸಿಕೊಂಡಿದ್ದಾರೆ. ವಿಶೇಷಪಾತ್ರದಲ್ಲಿ ವಿನೋದ್ ಪ್ರಭಾಕರ್ ಕಾಣಿಸಿಕೊಂಡಿದ್ದಾರೆ. ಹಿರಿಯ ಕಲಾವಿದರಾದ ಅಚ್ಯುತ್ ಕುಮಾರ್, ಅರುಣಾ ಬಾಲರಾಜ್, ನವೀನ್ ಪಡೀಲ್, ರಾಣಾ ಸೇರಿದಂತೆ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಿರ್ಮಾಪಕ ಅಂಬಟಿ ಮಧು ಮೋಹನ್ ಕೃಷ್ಣ ಅವರೆ ಟೀಸರ್ ಬಿಡುಗಡೆ ಮಾಡಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ನಿರ್ದೇಶಕ ಶ್ರೀನಿವಾಸ್ ಮಂಡ್ಯ ಮಾತನಾಡಿ, ಇತ್ತೀಚೆಗೆ ಚಿತ್ರದ ಮೊದಲ ಕಾಪಿ ನೋಡಿ ನಿರ್ಮಾಪಕರು ಖುಷಿಪಟ್ಟರು. ನಿರ್ಮಾಪಕರು ಖುಷಿಯಾದಾಗ ನಿರ್ದೇಶಕರ ಶ್ರಮ ಸಾರ್ಥಕವಾದ ಹಾಗೆ. ನಟನೆಯ ಮೂಲಕ ಮೋಡಿ ಮಾಡಿರುವ ಕೋಮಲ್ ಕುಮಾರ್ ಅವರು ಇಡೀ ಚಿತ್ರವನ್ನು ಹೆಗಲ ಮೇಲೆ ಹಾಕಿಕೊಂಡು ಸಿನಿಮಾ ಮಾಡಿದ್ದಾರೆ. ನಗೆ ಹಬ್ಬದ ರಸದೌತಣ ಉಣ ಬಡಿಸಲು ಕೋಮಲ್ ಸಜ್ಜಾಗಿದ್ದಾರೆ. ಕಾಮಿಡಿ ಮತ್ತು ಪ್ರೀತಿಯ ಕಥೆ ಹೊಂದಿದೆ. ನಟ ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ, ಹಸನ್ಮುಖಿ ಚೆಲುವೆ ಸೋನಾಲ್ ಮೊಂತೆರೊ ಬಂದ ನಂತರ ಚಿತ್ರಕ್ಕೆ ಮತ್ತಷ್ಟು ಕಳೆ ಬಂದಿತ್ತು. ಜೊತೆಗೆ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ" ರೋಲೆಕ್ಸ್ "ಮುಗ್ದ ಭಾವನಾತ್ಮಕ ಕೌಟಂಬಿಕ ಚಿತ್ರ. ಕುಟುಂಬ ಸಮೇತ ನೋಡಬಹುದಾದ ಚಿತ್ರ ಎಂದು ಹೇಳಿದರು. . ನಟ ಕೋಮಲ್ ಮಾತನಾಡಿ, ವಿನೋದ್ ಪ್ರಭಾಕರ್ ಅವರ ಜೊತೆ ನಟಿಸಿದ್ದು ಖುಷಿ ಕೊಟ್ಟಿದೆ. ನಾಲ್ಕೈದು ಜನ ಬೇರೆ ಬೇರೆ ಚಿತ್ರ ಮಾಡುವ ಬದಲು ಒಂದೇ ಸಿನಿಮಾ ಮಾಡಿದರೆ ಚಿತ್ರರಂಗಕ್ಕೆ ಒಳ್ಳೆಯದಾಗಲಿದೆ. "ರೋಲೆಕ್ಸ್" ಚಿತ್ರ ಚೆನ್ನಾಗಿ ಮೂಡಿಬಂದಿದೆ. "ಮಿಸ್ಟರ್ ಗರಗಸ" ಚಿತ್ರದ ನಂತರ ಇಂತಹ ಕಥೆಗೆ ಹುಡುಕಾಟ ನಡೆಸುತ್ತಿದ್ದೆ. ಈಗ ಆ ರೀತಿಯ ಪಾತ್ರ ಸಿಕ್ಕಿದೆ. ನಿರ್ದೇಶಕ ಶ್ರೀನಿವಾಸ್ ಕಥೆಗೆ ಏನು ಬೇಕು ಅದನ್ನು ಮಾಡಿದ್ದಾರೆ ಎಂದರು.
ನಟಿ ಸೋನಾಲ್ ಮೊಂತೆರೊ ಮಾತನಾಡಿ, ನಿರ್ಮಾಪಕರು ಇಡೀ ಚಿತ್ರೀಕರಣದ ಸಮಯದಲ್ಲಿ ಮಗಳ ರೀತಿ ನೋಡಿಕೊಂಡಿದ್ದಾರೆ. ಇಡೀ ತಂಡ ಕುಟುಂಬದ ರೀತಿ ಇತ್ತು. ಇದೇ ಮೊದಲ ಬಾರಿಗೆ ಕೋಮಲ್ ಕುಮಾರ್ ಅವರ ಜೊತೆ ನಟನೆ ಮಾಡಿದ್ದೇನೆ. ಅವರ ಜೊತೆ ಕೆಲಸ ಮಾಡಿದ್ದು ಕಲಿಕೆಗೆ ಸಹಕಾರಿಯಾಗಿದೆ. ಮತ್ತೆ ಅವರ ಜೊತೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ. ವಿನೋದ್ ಪ್ರಭಾಕರ್ ನನ್ನ ಅತ್ಯುತ್ತಮ ಸ್ನೇಹಿತರು. ಅವರ ಪಾತ್ರವೂ ಚೆನ್ನಾಗಿ ಬಂದಿದೆ. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು
ನಟ ವಿನೋದ್ ಪ್ರಭಾಕರ್ ಮಾತನಾಡಿ, ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಪ್ರಮುಖ ಪಾತ್ರ. ನಾಯಕಿ ಸೋನಾಲ್ ಅವರ ಜೊತೆಗೆ ಮಾದೇವ ಚಿತ್ರದ ಆದ ನಂತರ "ರೋಲೆಕ್ಸ್" ಚಿತ್ರದಲ್ಲಿ ನಟಿಸಿದ್ದೇನೆ. ಈ ಚಿತ್ರದಲ್ಲಿ ಸೋನಾಲ್ ಮೊಂತೆರೊ ಅವರೆ ನನಗೆ ಅವಕಾಶ ಕೊಡಿಸಿದ್ದಾರೆ. ಇದು ಎಲ್ಲರನ್ನು ನೋಡಿಸಿಕೊಂಡು ಹೋಗುವ ಚಿತ್ರವಾಗಲಿದೆ. ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದು ಮಾಹಿತಿ ನೀಡಿದರು.
ನಿರ್ಮಾಪಕ ಅಂಬಟಿ ಮಧು ಮೋಹನ್ ಕೃಷ್ಣ ಮಾತನಾಡಿ , ಲೈಟ್ ಬಾಯ್ ಯಿಂದ ನಿರ್ದೇಶಕರ ತನಕ ಎಲ್ಲ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಸಿನಿಮಾಗೆ ಯಾವುದೇ ಭಾಷೆ, ಗಡಿ ಇಲ್ಲ. ತೆಲುಗಿನಿಂದ ಬಂದು ಕನ್ನಡ ಸಿನಿಮಾ ಮಾಡಿದ್ದೇನೆ. ಆಂದ್ರಪ್ರದೇಶದಲ್ಲಿ ಡಾ. ರಾಜ್ ಕುಮಾರ್ ಅವರ ಚಿತ್ರಗಳು ಈ ಹಿಂದೆ ಪ್ರದರ್ಶನ ಕಂಡು ಹೆಸರು ಪಡೆದಿವೆ. ಈಗ ಡಬ್ಬಿಂಗ್ ಚಿತ್ರಗಳು ಎಲ್ಲಾ ಭಾಷೆಯಲ್ಲಿ ಬಿಡುಗಡೆಯಾಗಿ ಯಶಸ್ಸು ಗಳಿಸುತ್ತಿವೆ. ನಾಯಕನಾಗಿ ಚಿತ್ರರಂಗಕ್ಕೆ ಬಂದು ನಿರ್ಮಾಪಕನಾಗಿದ್ದೇನೆ. ಕಲಾವಿದರಿಗೆ ಇರುವ ಜನಪ್ರಿಯತೆ ಬೇರೆ ಯಾರಿಗೂ ಇಲ್ಲ , ನಟ ಕೋಮಲ್ ಅವರ ಪಾತ್ರ ನೋಡಿ ಮೂಕ ವಿಸ್ಮಿತನಾಗಿದ್ದೇನೆ ಎಂದರು. ನಟಿ ಸೋನಲ್, ನನ್ನ ಮೂರನೇ ಮಗಳಿದ್ದಂತೆ. ಆಕೆಯೂ ಅಷ್ಟೇ ಪ್ರೀತಿ ತೋರುತ್ತಿದ್ದಾರೆ. ವಿನೋದ್ ಪ್ರಭಾಕರ್ ಅವರ ಪಾತ್ರವೂ ಚೆನ್ನಾಗಿದೆ. ಸಸ್ಪೆನ್ಸ್, ಕಾಮಿಡಿ ಚಿತ್ರದಲ್ಲಿದ್ದು ಎಲ್ಲರಿಗೂ ಮೆಚ್ಚುಗೆ ಆಗಲಿದೆ ಎಂದು ಹೇಳಿದರು
ಕಾರ್ಯಕಾರಿ ನಿರ್ಮಾಪಕ ಮುರುಳಿ ಕೃಷ್ಣ ಮಾತನಾಡಿ, ನಂಬಿ ಬಂಡವಾಳ ಹೂಡಿದ ನಿರ್ಮಾಪಕರಿಗೆ ಬೆನ್ಮೆಲುಬಾಗಿ ನಿಂತಿದ್ದೇನೆ. ಸಿನಿಮಾ ಚೆನ್ನಾಗಿ ಬರಲು ಕಲಾವಿದರು, ತಂತ್ರಜ್ಞರ ಸಹಕಾರ ಕಾರಣ ಎಂದರು
*ʻಹ್ಯಾಟ್ರಿಕ್ ಹೀರೋʼ ಶಿವರಾಜ್ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ 'ಕೂರ್ಮಾವತಾರ್' ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್*
ಕರುನಾಡ ಚಕ್ರವರ್ತಿ ಡಾ. ಶಿವರಾಜ್ಕುಮಾರ್ ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶ್ರೀ ಮಹಾವಿಷ್ಣುವಿನ ಎರಡನೇ ಅವತಾರವಾದ 'ಕೂರ್ಮಾವತಾರ'ದ ಕಥಾಹಂದರವನ್ನು ಆಧರಿಸಿ ಸಿದ್ಧವಾಗುತ್ತಿರುವ ಈ ಮಹತ್ವಾಕಾಂಕ್ಷೆಯ ಚಿತ್ರಕ್ಕೆ 'ಕೂರ್ಮಾವತಾರ್' ಎಂದು ನಾಮಕರಣ ಮಾಡಲಾಗಿದ್ದು, ಚಿತ್ರತಂಡ ಅಧಿಕೃತ ಟೈಟಲ್ ರಿವೀಲ್ ಟೀಸರ್ ಬಿಡುಗಡೆ ಮಾಡಿದೆ.
ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಕೂರ್ಮಾವತಾರದ ಹಿನ್ನೆಲೆಯನ್ನು ಒಳಗೊಂಡ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ನಿರ್ಮಾಣವಾಗುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಪ್ರೇಕ್ಷಕರಲ್ಲಿ ಮತ್ತು ಶಿವಣ್ಣನ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಶಿವರಾಜ್ಕುಮಾರ್ ಅವರ ಲುಕ್ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಈ ಚಿತ್ರವನ್ನು ಹರ್ಷ ವರ್ಧನ್ ಕಡಿಯಾಲ ನಿರ್ದೇಶಿಸುತ್ತಿದ್ದು, ಪಂಚವಕ್ತ್ರ ಪಿಕ್ಚರ್ಸ್ ಹಾಗೂ ರುಕ್ವಿನಾ ಸ್ಟುಡಿಯೋಸ್ ಜಂಟಿ ಬ್ಯಾನರ್ಗಳ ಅಡಿಯಲ್ಲಿ ಪೂಜಿತ ಕಡಿಯಾಲ ಮತ್ತು ನರೇಂದ್ರ ಕೊಂಡ ಬೃಹತ್ ಬಜೆಟ್ನಲ್ಲಿ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ಖ್ಯಾತ ನಟ-ನಟಿಯರ ದಂಡೇ ಇರಲಿದ್ದು, ಶಿವರಾಜ್ಕುಮಾರ್ ಅವರೊಂದಿಗೆ ತೆಲುಗು ನಟ ರಾಜ್ ತರುಣ್, ಶಿವಾಜಿ, ವರಲಕ್ಷ್ಮಿ ಶರತ್ಕುಮಾರ್, ಸಾಯಿ ಕುಮಾರ್, ರಾಜಾ ರವೀಂದ್ರ, ವಿಟಿವಿ ಗಣೇಶ್, ಸಪ್ತಗಿರಿ, ಗೆಟಪ್ ಶ್ರೀನು, ಶತ್ರು, ಮಹೇಶ್ ವಿಟ್ಟ ಮತ್ತು ಅತಿರಾ ರಾಜ್ ಮುಂತಾದ ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ತಾಂತ್ರಿಕವಾಗಿಯೂ ಚಿತ್ರ ಅತ್ಯುನ್ನತ ಮಟ್ಟದಲ್ಲಿ ಮೂಡಿಬರಲಿದ್ದು, ಬಿ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಜಗದೀಶ್ ಚೀಕಾಟಿ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನಕಾರ ಮಾರ್ತಾಂಡ್ ಕೆ. ವೆಂಕಟೇಶ್ ಎಡಿಟಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ಲೇಖಕ್ ರಾಮ್ ಹೆಚ್ಚುವರಿ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದು, ರಾಘವ ಕಲಾ ನಿರ್ದೇಶನ ಮಾಡುತ್ತಿದ್ದಾರೆ. ವಿಎಫ್ಎಕ್ಸ್ (VFX) ತಂತ್ರಜ್ಞಾನ ಹಾಗೂ ಅದ್ಧೂರಿ ಮೇಕಿಂಗ್ನೊಂದಿಗೆ ತಯಾರಾಗುತ್ತಿರುವ 'ಕೂರ್ಮಾವತಾರ್', ಭಾರತದ ಪ್ರಮುಖ ಭಾಷೆಗಳಲ್ಲಿ ಏಕಕಾಲದಲ್ಲಿ ತೆರೆಗೆ ಬರಲು ಸಜ್ಜಾಗುತ್ತಿದೆ. #shivarajkumar#kurmaavatar#kannada#movies#abcnewskarnataka
ABC NEWS KARNATAKA
*ಬಾಲಿವುಡ್ ಗೆ ಅಡಿಯಿಟ್ಟ ಆರ್ ಚಂದ್ರು.*
*ಆನಂದ್ ಪಂಡಿತ್ ಅವರ ಜೊತೆಗೂಡಿ ಅದ್ದೂರಿ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣ* .
*ಮುಂಬೈನಲ್ಲಿ ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಅನಾವರಣ* .
*ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಸೇರಿದಂತೆ ದೇಶದ ಸೂಪರ್ ಸ್ಟಾರ್ ಗಳು ನಟಿಸುತ್ತಿರುವ ಈ ಚಿತ್ರಕ್ಕೆ "ಒರಿಜಿನಲ್ ಮಾನ್ ಸ್ಟರ್"(OM) ಎಂದು ನಾಮಕರಣ* . .
ವಿನೂತನ ಪ್ರಯತ್ನಗಳಿಂದ ಹೆಸರಾಗಿರುವ ಕನ್ನಡದ ಸ್ಟಾರ್ ನಿರ್ದೇಶಕ ಹಾಗೂ ನಿರ್ಮಾಪಕ ಆರ್ ಚಂದ್ರು ಈಗ ಬಾಲಿವುಡ್ ಗೆ ನಿರ್ಮಾಪಕರಾಗಿ ಅಡಿಯಿಟ್ಟಿದ್ದಾರೆ. ಬಾಲಿವುಡ್ ನಲ್ಲಿ ಸಾಕಷ್ಟು ಹೆಸರು ಮಾಡಿರುವ ಆನಂದ್ ಪಂಡಿತ್ ಅವರೊಡಗೂಡಿ ಹಿಂದಿ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ. ಹಿಂದಿ ಮಾತ್ರವಲ್ಲದೆ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಕನ್ನಡದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮತ್ತು ತೆಲುಗಿನಲ್ಲಿ ಸುನೀಲ್ ಅವರು ನಾಯಕರಾಗಿ ನಟಿಸುತ್ತಿದ್ದು, ಹಿಂದಿ, ತಮಿಳು ಹಾಗೂ ಮಲಯಾಳಂ ನಲ್ಲೂ ಸುಪ್ರಸಿದ್ದ ಸ್ಟಾರ್ ನಟರು ನಾಯಕರಾಗಿ ನಟಿಸುತ್ತಿದ್ದಾರೆ. ಅವರು ಯಾರು ಎಂಬುದು ಸದ್ಯದಲ್ಲೇ ತಿಳಿಯಲಿದೆ.
ಎರಡೂವರೆ ವರ್ಷಗಳ ಹಿಂದೆ ಆರ್ ಚಂದ್ರು ನೂರಾರು ಕೋಟಿ ವೆಚ್ಚದಲ್ಲಿ ಆನಂದ್ ಪಂಡಿತ್ ಅವರೊಂದಿಗೆ " ಕಬ್ಜ" ಎಂಬ ಸೂಪರ್ ಹಿಟ್ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಆ ಚಿತ್ರ ಚಂದ್ರು ಅವರಿಗೆ ಹೆಸರು ಹಾಗೂ ಹಣ ಎರಡನ್ನು ತಂದುಕೊಟ್ಟಿತು. ಅದಲ್ಲದೆ ಪ್ರಪಂಚದಾದ್ಯಂತ ಈ ಚಿತ್ರ ಸುದ್ದಿ ಮಾಡಿತ್ತು. ಈ ಚಿತ್ರದ ನಂತರ ಆರ್ ಚಂದ್ರು ಏನು ಮಾಡುತ್ತಿದ್ದಾರೆ? ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಸಿನಿಮಾವನ್ನೇ ಉಸಿರಾಗಿಸಿಕೊಂಡಿರುವ ಆರ್ ಚಂದ್ರು ಅವರು "ಕಬ್ಜ" ನಂತರ ಈ ಅದ್ದೂರಿ ಚಿತ್ರದ ನಿರ್ಮಾಣಕ್ಕೆ ಸಿದ್ದತೆ ನಡೆಸಿಕೊಳ್ಳುತ್ತಿದ್ದರು. ಕನ್ನಡದ ಹೆಸರಾಂತ ನಿರ್ದೇಶಕ ಹಾಗೂ ನಿರ್ಮಾಪಕ ಆರ್ ಚಂದ್ರು, ಕನ್ನಡದ ಜನಪ್ರಿಯ ನಟರಾದ ಶಿವರಾಜಕುಮಾರ್ ಅವರು ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ಈ ನೂತನ ಪ್ಯಾನ್ ಇಂಡಿಯಾ ಚಿತ್ರದ ಆರಂಭೋತ್ಸವನ್ನು ಬಾಲಿವುಡ್ ನ ಕೇಂದ್ರಸ್ಥಳವಾದ ಮುಂಬೈನಲ್ಲಿ ಅದ್ದೂರಿಯಾಗಿ ಮಾಡಿದ್ದಾರೆ. ಈ ನೂತನ ಚಿತ್ರಕ್ಕೆ "ಒರಿಜಿನಲ್ ಮಾನ್ ಸ್ಟರ್" ಎಂಬ ಯುನಿವರ್ಸಲ್ ಟೈಟಲ್ ಇಡಲಾಗಿದ್ದು, ಎಲ್ಲಾ ಭಾಷೆಗೂ ಈ ಶೀರ್ಷಿಕೆ ಹೊಂದಿಕೆಯಾಗುತ್ತದೆ. ಇದನ್ನು ಕಿರಿದಾಗಿ "OM" ಎಂದು ಸಹ ಕರೆಯಬಹುದು. "OM" ಎಂದರೆ ಶಿವಣ್ಣ ಅಭಿನಯದ "ಓಂ" ಕೂಡ ನೆನಪಾಗುತ್ತದೆ. ಕನ್ನಡದಲ್ಲಿ ಶಿವರಾಜಕುಮಾರ್ ಹಾಗೂ ತೆಲುಗಿನಲ್ಲಿ ಸುನೀಲ್ ಅವರು ನಾಯಕರಾಗಿ ನಟಿಸುತ್ತಿರುವ "ಒರಿಜಿನಲ್ ಮಾನ್ ಸ್ಟರ್" ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸುತ್ತಿದೆ.
ಯಶ್, ರಿಷಭ್ ಶೆಟ್ಟಿ, ಪ್ರಶಾಂತ್ ನೀಲ್ ಹಾಗೂ ಆರ್ ಚಂದ್ರು ಅವರಂತಹ ಕನ್ನಡಿಗರು ಪ್ರಸ್ತುತ ಕನ್ನಡದ ಸಿನಿಮಾಗಳನ್ನು ಇಡೀ ವಿಶ್ವವೇ ತಿರುಗಿ ನೋಡುವ ಹಾಗೆ ಮಾಡುತ್ತಿದ್ದಾರೆ. ಇದು ನಿಜಕ್ಕೂ ಕನ್ನಡಿಗರು ಹೆಮ್ಮೆ ಪಡುವ ವಿಷಯ.
ಸದ್ಯ ಆರ್ ಚಂದ್ರು ನಿರ್ಮಾಣದ, ಡಾರ್ಲಿಂಗ್ ಕೃಷ್ಣ ಹಾಗೂ ಪ್ರಕಾಶ್ ರಾಜ್ ನಟನೆಯ "ಫಾದರ್" ಚಿತ್ರ ಸಹ ಬಿಡುಗಡೆ ಹಂತದಲ್ಲಿದ್ದು, ಇತ್ತೀಚೆಗೆ ಬಿಡುಗಡೆಯಾಗಿರುವ ಟೀಸರ್ ಗೆ ನಿರೀಕ್ಷೆಗೂ ಮೀರಿ ಮೆಚ್ಚುಗೆ ಸಿಗುತ್ತಿದೆ.#rchandru #shivarajkumar #suneel #kannada #movies #abcnewskarnataka
1 day ago | [YT] | 36
View 0 replies
ABC NEWS KARNATAKA
2 days ago | [YT] | 29
View 0 replies
ABC NEWS KARNATAKA
*‘ಫಾದರ್’ ಟೀಸರ್ಗೆ ಹೆಚ್ಚಿದ ನಿರೀಕ್ಷೆ – ಆರ್. ಚಂದ್ರು, ಡಾರ್ಲಿಂಗ್ ಕೃಷ್ಣ ಹಾಗೂ ಪ್ರಕಾಶ್ ರಾಜ್ ಕಾಂಬಿನೇಷನ್ಗೆ ಭಾರೀ ಕುತೂಹಲ*
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆಗಳು ಹಾಗೂ ಕ್ಲಾಸ್ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ನಿರ್ಮಾಪಕ ಆರ್. ಚಂದ್ರು ಅವರು ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣ ಮಾಡುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಫಾದರ್’.
‘ತಾಜ್ ಮಹಲ್’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಆರ್. ಚಂದ್ರು ಹಾಗೂ ‘ಲವ್ ಮಾಕ್ಟೇಲ್’ ಸರಣಿಯ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಡಾರ್ಲಿಂಗ್ ಕೃಷ್ಣ ಅವರ ಕಾಂಬಿನೇಷನ್ ಈಗಾಗಲೇ ಸಿನಿಪ್ರಿಯರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರವನ್ನು ರಾಜಮೋಹನ್ ನಿರ್ದೇಶಿಸುತ್ತಿದ್ದು, ಪ್ರತಿಭಾವಂತ ನಟ ಪ್ರಕಾಶ್ ರಾಜ್ ಅವರ ಪ್ರಮುಖ ಪಾತ್ರ ಮತ್ತಷ್ಟು ನಿರೀಕ್ಷೆ ಮೂಡಿಸಿದೆ.
ಆರ್. ಚಂದ್ರು ಅವರ ನಿರ್ಮಾಣ, ರಾಜಮೋಹನ್ ಅವರ ನಿರ್ದೇಶನ, ಡಾರ್ಲಿಂಗ್ ಕೃಷ್ಣ ಹಾಗೂ ಪ್ರಕಾಶ್ ರಾಜ್ ಅವರ ಕಾಂಬಿನೇಷನ್ನಿಂದ ‘ಫಾದರ್’ ಚಿತ್ರದ ಮೇಲೆ ಭಾರೀ ನಿರೀಕ್ಷೆಯಿದೆ. ಸಿನಿಮಾ ಈಗಾಗಲೇ ವೀಕ್ಷಿಸಿರುವವರ ವಲಯದಲ್ಲಿ ಇದು ಒಂದು ಭಾವನಾತ್ಮಕ ಹಾಗೂ ಕುಟುಂಬ ಸಮೇತವಾಗಿ ನೋಡಬಹುದಾದ ಉತ್ತಮ ಸಿನಿಮಾ ಎಂಬ ಪಾಸಿಟಿವ್ ಟಾಕ್ ಕೇಳಿಬರುತ್ತಿದೆ.
ಕುಟುಂಬ, ಭಾವನೆಗಳು ಮತ್ತು ಸಂಬಂಧಗಳ ಸುತ್ತ ಸಾಗುವ ಕಥಾಹಂದರ ಹೊಂದಿರುವ ‘ಫಾದರ್’, ಎಲ್ಲಾ ವರ್ಗದ ಪ್ರೇಕ್ಷಕರಿಗೂ ಕನೆಕ್ಟ್ ಆಗುವಂತಹ ಸಿನಿಮಾ ಆಗುವ ನಿರೀಕ್ಷೆ ಮೂಡಿಸಿದೆ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ಗಾಗಿ ಒಂದು ಅದ್ಭುತ ಎಮೋಷನಲ್ ಜರ್ನಿ ಆಗುವ ಎಲ್ಲಾ ಲಕ್ಷಣಗಳು ಚಿತ್ರದಲ್ಲಿವೆ.
ಇಂದಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲೂ ಚಿತ್ರವನ್ನು ವೀಕ್ಷಿಸಿ ಮೆಚ್ಚಿರುವ ಮ್ಯಾಕೀಸ್ ಸಂಸ್ಥೆ, ‘ಫಾದರ್’ ಚಿತ್ರದ ಡಿಸ್ಟ್ರಿಬ್ಯೂಷನ್ ರೈಟ್ಸ್ ಅನ್ನು ಪಡೆದುಕೊಂಡಿದೆ. ಸಿನಿಮಾ ನೋಡಿ ಮೆಚ್ಚಿ ಡಿಸ್ಟ್ರಿಬ್ಯೂಷನ್ಗೆ ಮುಂದಾಗಿರುವುದು, ಚಿತ್ರದ ಕಂಟೆಂಟ್ ಮೇಲಿರುವ ನಂಬಿಕೆಗೆ ಮತ್ತೊಂದು ಸಾಕ್ಷಿಯಾಗಿದೆ.
ಇದೀಗ ಈ ನಿರೀಕ್ಷೆಗೆ ಮತ್ತಷ್ಟು ಕುತೂಹಲ ಸೇರಿಸಲು ಚಿತ್ರದ ಟೀಸರ್ ಆಗಸ್ಟ್ 25ರಂದು ಸಂಜೆ 4 ಗಂಟೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಲಿದೆ.
ಚಿತ್ರದ ಟೀಸರ್ ಹೇಗಿರಲಿದೆ? ರಾಜಮೋಹನ್ ಅವರ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಅವರನ್ನು ಯಾವ ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ? ಪ್ರಕಾಶ್ ರಾಜ್ ಹಾಗೂ ಕೃಷ್ಣ ಅವರ ಕಾಂಬಿನೇಷನ್ ಹೇಗಿರಲಿದೆ? ಎಂಬ ಕುತೂಹಲ ಈಗಾಗಲೇ ಸಿನಿಪ್ರೇಕ್ಷಕರಲ್ಲಿ ಹೆಚ್ಚಾಗಿದೆ.
ಆಗಸ್ಟ್ 25ರಂದು ಸಂಜೆ 4 ಗಂಟೆಗೆ ಬಿಡುಗಡೆಯಾಗಲಿರುವ ‘ಫಾದರ್’ ಟೀಸರ್ ಪ್ರೇಕ್ಷಕರಲ್ಲಿ ಯಾವ ರೀತಿಯ ಪ್ರತಿಕ್ರಿಯೆ ಮೂಡಿಸಲಿದೆ ಎಂಬ ಕುತೂಹಲ ಇದೀಗ ಹೆಚ್ಚಾಗಿದೆ.
‘ಫಾದರ್’ – ಒಂದು ಸಿನಿಮಾ ಮಾತ್ರವಲ್ಲ, ಸಂಬಂಧಗಳೊಂದಿಗೆ ಪ್ರಯಾಣಿಸುವ ಒಂದು ಭಾವನಾತ್ಮಕ ಅನುಭವವಾಗುವ ನಿರೀಕ್ಷೆ ಮೂಡಿಸಿದೆ.
5 days ago | [YT] | 10
View 1 reply
ABC NEWS KARNATAKA
*"NH66" ನಲ್ಲಿ ಶೃತಿ ಹರಿಹರನ್ ಪಯಣ. ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ* .
ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸಿರುವ "NH 66" ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಪ್ರಮೋದ್ ಶೆಟ್ಟಿ ಅವರ ಫಸ್ಟ್ ಲಕ್ ಬಿಡುಗಡೆ ಮಾಡಿದ್ದ ಚಿತ್ರತಂಡ ಈಗ ಶೃತಿ ಹರಿಹರನ್ ಅವರ ಫಸ್ಟ್ ಲುಕ್ ಅನಾವರಣ ಮಾಡಿದೆ. "NH 66" , ಹೆಸರೆ ಹೇಳುವಂತೆ ಒಂದು ಸಂಚಾರಿ ಕಥೆಯಾಗಿದೆ. "One highway many secrets" ಎಂಬ ಅಡಿಬರಹ ಈ ಚಿತ್ರಕ್ಕಿದೆ. ಮೂರು ಮುಖ್ಯಪಾತ್ರಗಳ ಸುತ್ತ ನಿರ್ದೇಶಕರು ರೋಮಾಂಚನಕಾರಿ ಕಥೆ ಹೆಣೆದಿದ್ದಾರೆ. ಇದು ಮಂಗಳೂರಿನಿಂದ ಮುಂಬೈಗೆ ಸಾಗುವ ಮಾರ್ಗದಲ್ಲಿ ನಡೆಯುವ ಕಥೆಯಾಗಿರಲಿದೆ. ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಕ್ಯಾಬ್ ಚಾಲಕನಾಗಿ ಅಭಿನಯಿಸುತ್ತಿದ್ದಾರೆ. ಶೃತಿ ಹರಿಹರನ್ ಅವರದು ಪಯಣಿಗರ ಪಾತ್ರ. ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಶೃತಿ ಹರಿಹರನ್, "NH 66" ಚಿತ್ರದಲ್ಲಿ ಈವರೆಗೂ ಮಾಡಿರದ ಪಾತ್ರ ಮಾಡಿದ್ದಾರೆ. ಇತ್ತೀಚೆಗಷ್ಟೇ ಶೃತಿ ಹರಿಹರನ್ ಅವರ ಫಸ್ಟ್ ಲುಕ್ ಅನಾವರಣವಾಗಿದ್ದು, ಫಸ್ಟ್ ಲುಕ್ ಗೆ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದ ಕುರಿತು ಕೂಡ ನಿರೀಕ್ಷೆ ಹೆಚ್ಚಾಗಿದೆ. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣಗೊಂಡಿದ್ದು, ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ. ಆದಷ್ಟು ಬೇಗ ಚಿತ್ರ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.
ಗುರುರಾಯರ ಪರಮಭಕ್ತರಾದ ನಿರ್ಮಾಪಕ ಟಿ.ಆರ್.ಮಂಜುನಾಥ್ ರಾಯರ ಅನುಗ್ರಹದಿಂದ ಹಾಗೂ ಚಿತ್ರತಂಡದ ಸಹಕಾರದಿಂದ ನಾವು ಅಂದುಕೊಂಡ ಹಾಗೆ ಚಿತ್ರ ಮೂಡಿಬಂದಿದೆ ಎನ್ನುತ್ತಾರೆ. ಟಿ.ಆರ್.ಮಂಜುನಾಥ್ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸುನೀತ್ ಹಲಗೇರಿ ಅವರ ಛಾಯಾಗ್ರಹಣವಿರುವ "NH 66" ಚಿತ್ರಕ್ಕೆ ಸ್ವಾಮಿನಾಥನ್ ಅವರ ಸಂಗೀತ ನಿರ್ದೇಶನವಿದೆ.
#nh66kannadamovie #ShruthiHariharan #abcnewskarnataka #kannada
5 days ago | [YT] | 7
View 0 replies
ABC NEWS KARNATAKA
*"ಟಾಕ್ಸಿಕ್" ಚಿತ್ರದ ಜೊತೆಗೆ "ಜಾಕಿ 42" ಚಿತ್ರದ ಥಿಯೇಟರಿಕಲ್ ಟ್ರೇಲರ್ ರಾಜ್ಯದಾದ್ಯಂತ ಬಿಡುಗಡೆ*
*"ಟಾಕ್ಸಿಕ್" ನಡುವೆ "ಜಾಕಿ42" ಟ್ರೇಲರ್ ಚಿತ್ರಮಂದಿರಗಳಲ್ಲಿ* ..
*"ಟಾಕ್ಸಿಕ್" ಚಿತ್ರಮಂದಿರಗಳಲ್ಲಿ "ಜಾಕಿ 42" ಟ್ರೇಲರ್* .
ಟಾಕ್ಸಿಕ್.. ಟಾಕ್ಸಿಕ್.. ಟಾಕ್ಸಿಕ್...
ಎಲ್ಲೆಲ್ಲೂ ಟಾಕ್ಸಿಕ್ ಮಯ... ನಾಳೆಯಿಂದ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿರುವ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಜೊತೆಗೆ ಕರ್ನಾಟಕದಾದ್ಯಂತ ಕಿರಣ್ ರಾಜ್ ಅಭಿನಯದ ಜಾಕಿ 42 ಚಿತ್ರದ ಥಿಯೇಟರಿಕಲ್ ಟ್ರೇಲರ್ ಪ್ರದರ್ಶನವಾಗುತ್ತಿದೆ...
ಗೋಲ್ಡನ್ ಗೇಟ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ ನಿರ್ಮಿಸಿರುವ 'ಜಾಕಿ 42' ಚಿತ್ರಕ್ಕೆ ಗುರುತೇಜ್ ಶೆಟ್ಟಿ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು, ಆ್ಯಕ್ಷನ್ ಕಟ್ ಹೇಳಿದ್ದಾರೆ.
ಇದು ಕುದುರೆ ರೇಸ್ ಹಿನ್ನೆಲೆಯ ಕಥಾಹಂದರದ ಚಿತ್ರ. ನನಗೆ ತಿಳಿದ ಹಾಗೆ ಭಾರತೀಯ ಚಿತ್ರರಂಗದಲ್ಲೇ ಯಾವ ಚಿತ್ರದಲ್ಲೂ ಕುದುರೆ ರೇಸ್ ಕುರಿತು ಇಡೀ ಸಿನಿಮಾ ಬಂದಿಲ್ಲ. ನಮ್ಮ ಇಡೀ ಸಿನಿಮಾ ಕುದುರೆ ರೇಸ್ ಸುತ್ತ ಸಾಗುತ್ತದೆ. ಗುಣಮಟ್ಟದ ಮೇಕಿಂಗ್ ಹಾಗೂ ವಿಶಿಷ್ಟವಾದ ಚಿತ್ರಕಥೆಯಿರುವ ಚಿತ್ರವಿದು. ಟಾಕ್ಸಿಕ್ ನೋಡೋ ಪ್ರೇಕ್ಷಕರಿಗೆ ಕುತೂಹಲ ಹುಟ್ಟಿಸಲಿದೆ ಹಾಗೂ ಥಿಯೇಟರಲ್ಲೇ "ಜಾಕಿ 42" ಸಿನಿಮಾವನ್ನ ನೋಡಬೇಕು ಅಂತ ಪ್ರೇರಪಿಸಲಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ತಿಳಿಸಿದ್ದಾರೆ.
"ಜಾಕಿ 42 "ಚಿತ್ರದಲ್ಲಿ ಕಿರಣ್ ರಾಜ್, ಹೃತಿಕ್ ಶ್ರೀನಿವಾಸ್, ಯುಕ್ತಾ, ದೀಪಕ್ ರೈ, ರಾಜೇಂದ್ರ ಕಾರಂತ್, ಚೇತನ್ ರೈ ಮಣಿ, ಮಧುಸೂಧನ್ ರಾವ್, ಗಿರೀಶ್ ಹೆಗಡೆ, ಅರುಣ್ ಆಚಾರ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ "ಜಾಕಿ 42" ಚಿತ್ರದ ಎರಡು ಹಾಡುಗಳು ಗಮನ ಸೆಳೆದಿದ್ದು, ಟಾಕ್ಸಿಕ್ ಸಿನಿಮಾದ ಥಿಯೇಟರ್ ಗಳಲ್ಲಿ ಟ್ರೇಲರ್ ಪ್ರದರ್ಶಿಸುವ ಮೂಲಕ "ಜಾಕಿ 42" ಚಿತ್ರದ ಪ್ರಚಾರವನ್ನು ಆರಂಭಿಸಿದ್ದಾರೆ..
ಅಂದ ಹಾಗೆ ಸದ್ಯದಲ್ಲೇ ಚಿತ್ರದ ಮತ್ತೊಂದು ಹಾಡನ್ನು ಬಿಡುಗಡೆ ಅಣಿಯಾಗಿರುವ ಚಿತ್ರತಂಡ, ಸಿನಿಮಾ ಬಿಡುಗಡೆಯ ದಿನಾಂಕವನ್ನು ನಿಗದಿ ಮಾಡೋ ಯೋಜನೆಯಲ್ಲಿದೆ... ಅದೇನೆ ಇದ್ರೂ ಟಾಕ್ಸಿಕ್ ನೋಡೋ ಕನ್ನಡ ಪ್ರೇಕ್ಷಕರಿಗೆ ಥಿಯೇಟರ್ ಗಳಲ್ಲಿ "ಜಾಕಿ 42" ಅಚ್ಚರಿ ಕಾದಿದೆ.
#jockey42 #kannada #movie #toxic #yash #kiranraj #abcnewskarnataka
5 days ago | [YT] | 15
View 0 replies
ABC NEWS KARNATAKA
*ಕೋಮಲ್ ಕುಮಾರ್ - ಸೋನಾಲ್ ಮೊಂತೆರೊ ಜೋಡಿಯ ಹಾಗೂ ವಿನೋದ್ ಪ್ರಭಾಕರ್ ವಿಶೇಷಪಾತ್ರದಲ್ಲಿ ನಟಿಸಿರುವ "ರೋಲೆಕ್ಸ್" ಚಿತ್ರದ ಟೀಸರ್ ಬಿಡುಗಡೆ*
ನಟ ಕೋಮಲ್ ಕುಮಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ "ರೋಲೆಕ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ ಕೋಮಲ್ ಗೆ ನಾಯಕಿಯಾಗಿ ಸೋನಲ್ ಮಾಂತೆರೊ ಕಾಣಿಸಿಕೊಂಡಿದ್ದಾರೆ. ವಿಶೇಷಪಾತ್ರದಲ್ಲಿ ವಿನೋದ್ ಪ್ರಭಾಕರ್ ಕಾಣಿಸಿಕೊಂಡಿದ್ದಾರೆ. ಹಿರಿಯ ಕಲಾವಿದರಾದ ಅಚ್ಯುತ್ ಕುಮಾರ್, ಅರುಣಾ ಬಾಲರಾಜ್, ನವೀನ್ ಪಡೀಲ್, ರಾಣಾ ಸೇರಿದಂತೆ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಿರ್ಮಾಪಕ ಅಂಬಟಿ ಮಧು ಮೋಹನ್ ಕೃಷ್ಣ ಅವರೆ ಟೀಸರ್ ಬಿಡುಗಡೆ ಮಾಡಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ನಿರ್ದೇಶಕ ಶ್ರೀನಿವಾಸ್ ಮಂಡ್ಯ ಮಾತನಾಡಿ, ಇತ್ತೀಚೆಗೆ ಚಿತ್ರದ ಮೊದಲ ಕಾಪಿ ನೋಡಿ ನಿರ್ಮಾಪಕರು ಖುಷಿಪಟ್ಟರು. ನಿರ್ಮಾಪಕರು ಖುಷಿಯಾದಾಗ ನಿರ್ದೇಶಕರ ಶ್ರಮ ಸಾರ್ಥಕವಾದ ಹಾಗೆ. ನಟನೆಯ ಮೂಲಕ ಮೋಡಿ ಮಾಡಿರುವ ಕೋಮಲ್ ಕುಮಾರ್ ಅವರು ಇಡೀ ಚಿತ್ರವನ್ನು ಹೆಗಲ ಮೇಲೆ ಹಾಕಿಕೊಂಡು ಸಿನಿಮಾ ಮಾಡಿದ್ದಾರೆ.
ನಗೆ ಹಬ್ಬದ ರಸದೌತಣ ಉಣ ಬಡಿಸಲು ಕೋಮಲ್ ಸಜ್ಜಾಗಿದ್ದಾರೆ. ಕಾಮಿಡಿ ಮತ್ತು ಪ್ರೀತಿಯ ಕಥೆ ಹೊಂದಿದೆ. ನಟ ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ, ಹಸನ್ಮುಖಿ ಚೆಲುವೆ ಸೋನಾಲ್ ಮೊಂತೆರೊ ಬಂದ ನಂತರ ಚಿತ್ರಕ್ಕೆ ಮತ್ತಷ್ಟು ಕಳೆ ಬಂದಿತ್ತು. ಜೊತೆಗೆ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ" ರೋಲೆಕ್ಸ್ "ಮುಗ್ದ ಭಾವನಾತ್ಮಕ ಕೌಟಂಬಿಕ ಚಿತ್ರ. ಕುಟುಂಬ ಸಮೇತ ನೋಡಬಹುದಾದ ಚಿತ್ರ ಎಂದು ಹೇಳಿದರು.
.
ನಟ ಕೋಮಲ್ ಮಾತನಾಡಿ, ವಿನೋದ್ ಪ್ರಭಾಕರ್ ಅವರ ಜೊತೆ ನಟಿಸಿದ್ದು ಖುಷಿ ಕೊಟ್ಟಿದೆ. ನಾಲ್ಕೈದು ಜನ ಬೇರೆ ಬೇರೆ ಚಿತ್ರ ಮಾಡುವ ಬದಲು ಒಂದೇ ಸಿನಿಮಾ ಮಾಡಿದರೆ ಚಿತ್ರರಂಗಕ್ಕೆ ಒಳ್ಳೆಯದಾಗಲಿದೆ. "ರೋಲೆಕ್ಸ್" ಚಿತ್ರ ಚೆನ್ನಾಗಿ ಮೂಡಿಬಂದಿದೆ. "ಮಿಸ್ಟರ್ ಗರಗಸ" ಚಿತ್ರದ ನಂತರ ಇಂತಹ ಕಥೆಗೆ ಹುಡುಕಾಟ ನಡೆಸುತ್ತಿದ್ದೆ. ಈಗ ಆ ರೀತಿಯ ಪಾತ್ರ ಸಿಕ್ಕಿದೆ. ನಿರ್ದೇಶಕ ಶ್ರೀನಿವಾಸ್ ಕಥೆಗೆ ಏನು ಬೇಕು ಅದನ್ನು ಮಾಡಿದ್ದಾರೆ ಎಂದರು.
ನಟಿ ಸೋನಾಲ್ ಮೊಂತೆರೊ ಮಾತನಾಡಿ, ನಿರ್ಮಾಪಕರು ಇಡೀ ಚಿತ್ರೀಕರಣದ ಸಮಯದಲ್ಲಿ ಮಗಳ ರೀತಿ ನೋಡಿಕೊಂಡಿದ್ದಾರೆ. ಇಡೀ ತಂಡ ಕುಟುಂಬದ ರೀತಿ ಇತ್ತು. ಇದೇ ಮೊದಲ ಬಾರಿಗೆ ಕೋಮಲ್ ಕುಮಾರ್ ಅವರ ಜೊತೆ ನಟನೆ ಮಾಡಿದ್ದೇನೆ. ಅವರ ಜೊತೆ ಕೆಲಸ ಮಾಡಿದ್ದು ಕಲಿಕೆಗೆ ಸಹಕಾರಿಯಾಗಿದೆ. ಮತ್ತೆ ಅವರ ಜೊತೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ. ವಿನೋದ್ ಪ್ರಭಾಕರ್ ನನ್ನ ಅತ್ಯುತ್ತಮ ಸ್ನೇಹಿತರು. ಅವರ ಪಾತ್ರವೂ ಚೆನ್ನಾಗಿ ಬಂದಿದೆ. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು
ನಟ ವಿನೋದ್ ಪ್ರಭಾಕರ್ ಮಾತನಾಡಿ, ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಪ್ರಮುಖ ಪಾತ್ರ. ನಾಯಕಿ ಸೋನಾಲ್ ಅವರ ಜೊತೆಗೆ ಮಾದೇವ ಚಿತ್ರದ ಆದ ನಂತರ "ರೋಲೆಕ್ಸ್" ಚಿತ್ರದಲ್ಲಿ ನಟಿಸಿದ್ದೇನೆ. ಈ ಚಿತ್ರದಲ್ಲಿ ಸೋನಾಲ್ ಮೊಂತೆರೊ ಅವರೆ ನನಗೆ ಅವಕಾಶ ಕೊಡಿಸಿದ್ದಾರೆ. ಇದು ಎಲ್ಲರನ್ನು ನೋಡಿಸಿಕೊಂಡು ಹೋಗುವ ಚಿತ್ರವಾಗಲಿದೆ. ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದು ಮಾಹಿತಿ ನೀಡಿದರು.
ನಿರ್ಮಾಪಕ ಅಂಬಟಿ ಮಧು ಮೋಹನ್ ಕೃಷ್ಣ ಮಾತನಾಡಿ , ಲೈಟ್ ಬಾಯ್ ಯಿಂದ ನಿರ್ದೇಶಕರ ತನಕ ಎಲ್ಲ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಸಿನಿಮಾಗೆ ಯಾವುದೇ ಭಾಷೆ, ಗಡಿ ಇಲ್ಲ. ತೆಲುಗಿನಿಂದ ಬಂದು ಕನ್ನಡ ಸಿನಿಮಾ ಮಾಡಿದ್ದೇನೆ. ಆಂದ್ರಪ್ರದೇಶದಲ್ಲಿ ಡಾ. ರಾಜ್ ಕುಮಾರ್ ಅವರ ಚಿತ್ರಗಳು ಈ ಹಿಂದೆ ಪ್ರದರ್ಶನ ಕಂಡು ಹೆಸರು ಪಡೆದಿವೆ. ಈಗ ಡಬ್ಬಿಂಗ್ ಚಿತ್ರಗಳು ಎಲ್ಲಾ ಭಾಷೆಯಲ್ಲಿ ಬಿಡುಗಡೆಯಾಗಿ ಯಶಸ್ಸು ಗಳಿಸುತ್ತಿವೆ. ನಾಯಕನಾಗಿ ಚಿತ್ರರಂಗಕ್ಕೆ ಬಂದು ನಿರ್ಮಾಪಕನಾಗಿದ್ದೇನೆ. ಕಲಾವಿದರಿಗೆ ಇರುವ ಜನಪ್ರಿಯತೆ ಬೇರೆ ಯಾರಿಗೂ ಇಲ್ಲ , ನಟ ಕೋಮಲ್ ಅವರ ಪಾತ್ರ ನೋಡಿ ಮೂಕ ವಿಸ್ಮಿತನಾಗಿದ್ದೇನೆ ಎಂದರು. ನಟಿ ಸೋನಲ್, ನನ್ನ ಮೂರನೇ ಮಗಳಿದ್ದಂತೆ. ಆಕೆಯೂ ಅಷ್ಟೇ ಪ್ರೀತಿ ತೋರುತ್ತಿದ್ದಾರೆ. ವಿನೋದ್ ಪ್ರಭಾಕರ್ ಅವರ ಪಾತ್ರವೂ ಚೆನ್ನಾಗಿದೆ. ಸಸ್ಪೆನ್ಸ್, ಕಾಮಿಡಿ ಚಿತ್ರದಲ್ಲಿದ್ದು ಎಲ್ಲರಿಗೂ ಮೆಚ್ಚುಗೆ ಆಗಲಿದೆ ಎಂದು ಹೇಳಿದರು
ಕಾರ್ಯಕಾರಿ ನಿರ್ಮಾಪಕ ಮುರುಳಿ ಕೃಷ್ಣ ಮಾತನಾಡಿ, ನಂಬಿ ಬಂಡವಾಳ ಹೂಡಿದ ನಿರ್ಮಾಪಕರಿಗೆ ಬೆನ್ಮೆಲುಬಾಗಿ ನಿಂತಿದ್ದೇನೆ. ಸಿನಿಮಾ ಚೆನ್ನಾಗಿ ಬರಲು ಕಲಾವಿದರು, ತಂತ್ರಜ್ಞರ ಸಹಕಾರ ಕಾರಣ ಎಂದರು
ಕಲಾವಿದರಾದ ರಾಣಾ, ಸುನಂದ ಕಲಬುರಗಿ
ಛಾಯಾಗ್ರಾಹಕ ರಾಕೇಶ್ ತಿಲಕ್, ಸಂಕಲನಕಾರ ಅರವಿಂದ ರೆಡ್ಡಿ , ಕ್ರಿಯೇಟಿವ್ ಹೆಡ್ ರಾಜೇಶ್ ವರ್ಮ ಸೇರಿದಂತೆ ಮತ್ತಿತರು ಚಿತ್ರದ ಕುರಿತು ಮಾಹಿತಿ ಹಂಚಿಕೊಂಡರು
#rolex #sonalmonterio #komalkumar #vinodprabhakar #kannada #movies #abcnewskarnataka
5 days ago | [YT] | 27
View 1 reply
ABC NEWS KARNATAKA
ಗೋಲ್ ಮಾಲ್ Gang ಚಿತ್ರತಂಡದಿಂದ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು
#golmalgang #karthikruvary #aradhanabhat #ramithpro #shanthuuniversalpictures #abcnewskarnataka
1 week ago | [YT] | 7
View 0 replies
ABC NEWS KARNATAKA
ಇನ್ನು 30 ದಿನಗಳಲ್ಲಿ ನಿಮ್ಮ ನೆಚ್ಚಿನ ಚಿತ್ರಮಂದಿರದಲ್ಲಿ ಸಿಟಿಲೈಟ್ಸ್ ಸಿನಿಮಾ
#citylights #vinayrajkumar #monishavijaykumar #abcnewskarnataka
1 week ago | [YT] | 35
View 3 replies
ABC NEWS KARNATAKA
*ʻಹ್ಯಾಟ್ರಿಕ್ ಹೀರೋʼ ಶಿವರಾಜ್ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ 'ಕೂರ್ಮಾವತಾರ್' ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್*
ಕರುನಾಡ ಚಕ್ರವರ್ತಿ ಡಾ. ಶಿವರಾಜ್ಕುಮಾರ್ ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶ್ರೀ ಮಹಾವಿಷ್ಣುವಿನ ಎರಡನೇ ಅವತಾರವಾದ 'ಕೂರ್ಮಾವತಾರ'ದ ಕಥಾಹಂದರವನ್ನು ಆಧರಿಸಿ ಸಿದ್ಧವಾಗುತ್ತಿರುವ ಈ ಮಹತ್ವಾಕಾಂಕ್ಷೆಯ ಚಿತ್ರಕ್ಕೆ 'ಕೂರ್ಮಾವತಾರ್' ಎಂದು ನಾಮಕರಣ ಮಾಡಲಾಗಿದ್ದು, ಚಿತ್ರತಂಡ ಅಧಿಕೃತ ಟೈಟಲ್ ರಿವೀಲ್ ಟೀಸರ್ ಬಿಡುಗಡೆ ಮಾಡಿದೆ.
ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಕೂರ್ಮಾವತಾರದ ಹಿನ್ನೆಲೆಯನ್ನು ಒಳಗೊಂಡ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ನಿರ್ಮಾಣವಾಗುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಪ್ರೇಕ್ಷಕರಲ್ಲಿ ಮತ್ತು ಶಿವಣ್ಣನ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಶಿವರಾಜ್ಕುಮಾರ್ ಅವರ ಲುಕ್ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಈ ಚಿತ್ರವನ್ನು ಹರ್ಷ ವರ್ಧನ್ ಕಡಿಯಾಲ ನಿರ್ದೇಶಿಸುತ್ತಿದ್ದು, ಪಂಚವಕ್ತ್ರ ಪಿಕ್ಚರ್ಸ್ ಹಾಗೂ ರುಕ್ವಿನಾ ಸ್ಟುಡಿಯೋಸ್ ಜಂಟಿ ಬ್ಯಾನರ್ಗಳ ಅಡಿಯಲ್ಲಿ ಪೂಜಿತ ಕಡಿಯಾಲ ಮತ್ತು ನರೇಂದ್ರ ಕೊಂಡ ಬೃಹತ್ ಬಜೆಟ್ನಲ್ಲಿ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ಖ್ಯಾತ ನಟ-ನಟಿಯರ ದಂಡೇ ಇರಲಿದ್ದು, ಶಿವರಾಜ್ಕುಮಾರ್ ಅವರೊಂದಿಗೆ ತೆಲುಗು ನಟ ರಾಜ್ ತರುಣ್, ಶಿವಾಜಿ, ವರಲಕ್ಷ್ಮಿ ಶರತ್ಕುಮಾರ್, ಸಾಯಿ ಕುಮಾರ್, ರಾಜಾ ರವೀಂದ್ರ, ವಿಟಿವಿ ಗಣೇಶ್, ಸಪ್ತಗಿರಿ, ಗೆಟಪ್ ಶ್ರೀನು, ಶತ್ರು, ಮಹೇಶ್ ವಿಟ್ಟ ಮತ್ತು ಅತಿರಾ ರಾಜ್ ಮುಂತಾದ ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ತಾಂತ್ರಿಕವಾಗಿಯೂ ಚಿತ್ರ ಅತ್ಯುನ್ನತ ಮಟ್ಟದಲ್ಲಿ ಮೂಡಿಬರಲಿದ್ದು, ಬಿ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಜಗದೀಶ್ ಚೀಕಾಟಿ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನಕಾರ ಮಾರ್ತಾಂಡ್ ಕೆ. ವೆಂಕಟೇಶ್ ಎಡಿಟಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ಲೇಖಕ್ ರಾಮ್ ಹೆಚ್ಚುವರಿ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದು, ರಾಘವ ಕಲಾ ನಿರ್ದೇಶನ ಮಾಡುತ್ತಿದ್ದಾರೆ. ವಿಎಫ್ಎಕ್ಸ್ (VFX) ತಂತ್ರಜ್ಞಾನ ಹಾಗೂ ಅದ್ಧೂರಿ ಮೇಕಿಂಗ್ನೊಂದಿಗೆ ತಯಾರಾಗುತ್ತಿರುವ 'ಕೂರ್ಮಾವತಾರ್', ಭಾರತದ ಪ್ರಮುಖ ಭಾಷೆಗಳಲ್ಲಿ ಏಕಕಾಲದಲ್ಲಿ ತೆರೆಗೆ ಬರಲು ಸಜ್ಜಾಗುತ್ತಿದೆ. #shivarajkumar #kurmaavatar #kannada #movies #abcnewskarnataka
1 week ago | [YT] | 37
View 0 replies
ABC NEWS KARNATAKA
https://youtu.be/CmCAAluGW24
1 week ago | [YT] | 0
View 0 replies
Load more