News 24 Bharath

NEWS24BHARATH KANNADA | ಭಾರತೀಯ ಸೇನೆಗೆ ಯುವಕ ಆಯ್ಕೆ ; ಗ್ರಾಮಸ್ಥರಿಂದ ಅದ್ದೂರಿ ಮೆರವಣಿಗೆ
ಮಂಜಲಾಪುರಹಳ್ಳಿಯ ಗ್ರಾಮೀಣ ಪ್ರತಿಭೆ ದೇವಪ್ಪ ಅಬ್ಲಿ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಂಜಲಾಪುರಹಳ್ಳಿ ಗ್ರಾಮದ ಯುವಕ ದೇವಪ್ಪ ಅಬ್ಲಿ ಭಾರತೀಯ ಸೇನೆಗೆ ಆಯ್ಕೆಯಾಗಿ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾನೆ.

ಎದೆಗೆ ಬಿದ್ದ ಅಕ್ಷರ ಭೂಮಿಗೆ ಬಿದ್ದ ಬೀಜ ಇಂದಲ್ಲ ನಾಳೆ ಫಲ ಕೊಡುತ್ತದೆ, ಎಂಬ ನುಡಿಯಂತೆ ಬಡತನದಲ್ಲಿ ಹುಟ್ಟಿದ್ದೇವೆ ಎಂದು ಕೈ ಕಟ್ಟಿ ಸುಮ್ಮನೆ ಕುಳಿತುಕೊಳ್ಳುವ ಬದಲು ಜೀವನದಲ್ಲಿ ಏನಾದ್ರೂ ಸಾಧಿಸಬೇಕೆಂಬ ಛಲ ತೊಟ್ಟು ಗುರಿಯ ಕಡೆಗೆ ಸಾಗಬೇಕು ಎಂದು ತಾಲೂಕಿನ ಮಂಜಲಾಪುರಹಳ್ಳಿಯ ಗ್ರಾಮೀಣ ಯುವಕ ತೋರಿಸಿಕೊಟ್ಟಿದ್ದಾನೆ.

ಅಗ್ನಿವೀರ 6ನೇ Batch ನಂಬರ್ ನ ಇವರು AMC Center and college Lucknow ದಲ್ಲಿ ತಮ್ಮ ಟ್ರೈನಿಂಗ್ ಮುಗಿಸಿದ್ದಾರೆ.

ನಮ್ಮ ಹೆಮ್ಮೆಯ ಭಾರತೀಯ ಸೇನೆಗೆ ಆಯ್ಕೆಯಾಗಿ ಏಳು ತಿಂಗಳುಗಳ ಕಾಲ ತರಬೇತಿ ಮುಗಿಸಿ ಮರಳಿ ಸ್ವಗ್ರಾಮಕ್ಕೆ ತೆರಳಿದಾಗ ಗ್ರಾಮದಲ್ಲಿ ಸಂತಸದ ಜೊತೆಗೆ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ವೀರ ಯೋಧನನ್ನು ಅದ್ದೂರಿಯಾಗಿ ಬರಮಾಡಿಕೊಂಡ ಗ್ರಾಮಸ್ಥರು
ಹುಣಸಗಿ ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ, ಬಸವೇಶ್ವರ ವೃತ್ತದವರೆಗೆ ಬೈಕ್ ರ್ಯಾಲಿ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.

3 weeks ago (edited) | [YT] | 5

News 24 Bharath

NEWS24BHARATH KANNADA ಹಿಂದುಸ್ಥಾನದ ಇತಿಹಾಸದಲ್ಲಿ ಮುಂದೆಂದೂ ನಡೆಯದ ಐತಿಹಾಸಿಕ ಭಗವಾ ಧ್ವಜಾರೋಹಣಕ್ಕೆ ಸಿದ್ಧಗೊಂಡಿರುವ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರ 🚩🕉️

1 month ago | [YT] | 5